Connect with us

    BELTHANGADY

    ‘ಸ್ವಂತಕ್ಕಾಗಿ ಬದುಕದೆ ಸಮಾಜಕ್ಕಾಗಿ ಬದುಕಿದ ದಿ. ಡೀಕಯ್ಯ’ಗೆ ನುಡಿನಮನ

    Published

    on

    ಬೆಳ್ತಂಗಡಿ: ‘ಸ್ವಂತಕ್ಕಾಗಿ ಬದುಕದೆ ಸಮಾಜ ಹಿತಕ್ಕಾಗಿ ಬದುಕಿದವರು ಪಿ.ಡೀಕಯ್ಯರವರು. ಅವರು ಮನುಷ್ಯ ಮನುಷ್ಯರ ಮಧ್ಯೆ ಸಾಮರಸ್ಯದಿಂದ ಹೇಗೆ ಬದುಕಬೇಕು ಎಂದು ತೋರಿಸಿಕೊಟ್ಟವರು. ನಿಜವಾದ ಅರ್ಥದಲ್ಲಿ ಪರಿವರ್ತನೆಯ ಹರಿಕಾರರಾಗಿದ್ದು, ಎಲ್ಲಾ ವರ್ಗದ ಜನ ಗೌರವಿಸುವ ವ್ಯಕ್ತಿತ್ವ ಅವರದಾಗಿತ್ತು’ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದರು.

    ಅವರು ಭಾನುವಾರ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾಭವನದಲ್ಲಿ ಇತ್ತೀಚೆಗೆ ನಿಧನರಾದ ಪಿ. ಪಿ.ಡೀಕಯ್ಯರಿಗೆ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮತ್ತು ಬಹುಜನ ಪ್ರಗತಿಪರ ಸಂಘಟನೆಗಳ ಒಕ್ಕೂಟ ಕರ್ನಾಟಕ ಇದರ ವತಿಯಿಂದ ನಡೆದ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ಮಾಜಿ ಶಾಸಕ ಕೆ ವಸಂತ ಬಂಗೇರ ಮಾತನಾಡಿ, ‘ಪಿ.ಡೀಕಯ್ಯನವರು ಓರ್ವ ಮಹಾನ್ ಹೋರಾಟಗಾರ. ಅವರು ದಲಿತರ ಪರವಾಗಿ ಮಾತ್ರ ಹೋರಾಟ ಮಾಡದೆ, ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದವರ ಪರವಾಗಿಯೂ ಹೋರಾಟ ಮಾಡಿದ್ದಾರೆ.

    ನನ್ನ ಮತ್ತು ಅವರ ಮಧ್ಯೆ 35 ವರ್ಷಗಳ ಆತ್ಮೀಯತೆ ಇದ್ದು, ಅವರ ಚಿಂತನೆ ಸಮಾಜದ ಹಿತವೇ ಆಗಿತ್ತು. ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಘದ ವತಿಯಿಂದ ನಡೆದ ನಾರಾಯಣ ಗುರು ಪಠ್ಯವನ್ನು 10 ನೇ ತರಗತಿಯ ಸಮಾಜ ವಿಜ್ಞಾನದಲ್ಲಿ ಸೇರಿಸಬೇಕು ಎಂಬ ಹೋರಾಟ ಅವರ ಬದುಕಿನ ಕಡೆಯ ಹೋರಾಟವಾಗಿದೆ ಮತ್ತು ಅದಕ್ಕೆ ಫಲವೂ ಸಿಕ್ಕಿದೆ’ ಎಂದರು.

    ಅವರ ಪತ್ನಿ ಆತ್ರಾಡಿ ಅಮೃತ ಶೆಟ್ಟಿ ಮಾತನಾಡಿ, ‘ಡೀಕಯ್ಯರವರು ನನ್ನ ಸುತ್ತ ಭದ್ರವಾದ ಕೋಟೆಯನ್ನು ಕಟ್ಟಿ ಕೋಟೆಯ ಮಧ್ಯೆ ನನ್ನನ್ನು ಬಿಟ್ಟು ಹೋದರು.
    ಈ ಕೋಟೆ ನನ್ನನ್ನು ಕೊನೆವರೆಗೂ ಕಾಯುತ್ತೆ ಅಂತ ನಾನು ನಂಬಿದ್ದೇನೆ’ ಎಂದರು.

    ದಕ್ಷಿಣ ಕನ್ನಡ ಜಿಲ್ಲಾ ಸಮಾಜ ಪರಿವರ್ತನಾ ಮುಖಂಡ ಅಚ್ಚುತ ಸಂಪಿಗೆ ಅಧ್ಯಕ್ಷತೆ ವಹಿಸಿದ್ದರು.

    ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬಿಎಸ್ ಪಿ ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಉಪನ್ಯಾಸಕ ವಾಸುದೇವ ಬೆಳ್ಳೆ, ಬೆಂಗಳೂರು ಐಎಎಸ್ ಅಕಾಡೆಮಿಯ ಶಿವಕುಮಾರ್, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ರಾಜೀವ್ ಸಾಲಿಯಾನ್ ವೇದಿಕೆಯಲ್ಲಿ ಇದ್ದರು.

    ಬಿಎಸ್ ಪಿ ಜಿಲ್ಲಾಧ್ಯಕ್ಷ ದಾಸಪ್ಪ ಎಡಪದವು, ಸಿಪಿಐ(ಎಂ) ಬೆಳ್ತಂಗಡಿ ಸಮಿತಿ ಕಾರ್ಯದರ್ಶಿ ಶಿವಕುಮಾರ್ ಎಸ್.ಎಂ., ಡಿ ವೈ ಎಪ್ ಐ ರಾಜ್ಯ ಸಮಿತಿ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಬೆಳ್ತಂಗಡಿ ಆದಿ ದ್ರಾವಿಡ ಸಂಘದ ಅಧ್ಯಕ್ಷ ಶೇಖರ್ ಧರ್ಮಸ್ಥಳ, ಮುಖಂಡ ಅಮ್ಮು ಕುಮಾರ್, ದಲಿತ ಮುಖಂಡ ಚೆನ್ನಕೇಶವ, ಪ್ರಮುಖರಾದ ಚಂದು ಎಲ್, ಪ್ರಭಾಕರ ಶಾಂತಿಕೋಡಿ, ಹರಿಯಪ್ಪ ಮುತ್ತೂರು, ಶೈಲೇಶ್ ಕುಮಾರ್, ಶೇಖರ ಕುಕ್ಕೇಡಿ, ಜನಾರ್ದನ ಕೆಸರುಗದ್ದೆ, ನೇಮಿರಾಜ್ ಕೆ, ಪಿ.ಎಸ್.ಶ್ರೀನಿವಾಸ್, ಶೈಲೇಶ್ ಆರ್. ಜೆ, ಲಕ್ಷ್ಮಣ ಜಿ.ಎಸ್., ಶೇಖರ ಲಾಯಿಲ ವೆಂಕಣ್ಣ ಕೊಯ್ಯೂರು, ನಾದಮಣಿ ನಾಲ್ಕೂರು, ಪೇರೂರು ಜಾರು, ರಘು ಧರ್ಮಸೇನ, ಗೌರಿ, ಧಮ್ಮಾನಂದ ಬೆಳ್ತಂಗಡಿ ಮುಂತಾದವರು ಭಾಗವಹಿಸಿದ್ದರು.

    ಪಿ.ಡೀಕಯ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

    ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಮೈಸೂರು ವಿಭಾಗ ಸಂಚಾಲಕ ಬಿ.ಕೆ. ವಸಂತ್ ಸ್ವಾಗತಿಸಿದರು. ಸತೀಶ್ ಕಕ್ಕೆಪದವು ಪ್ರಸ್ತಾವಿಸಿದರು. ರಾಜೀವ್ ಕಾರ್ಯಕ್ರಮ ನಿರೂಪಿಸಿದರು.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending