Connect with us

DAKSHINA KANNADA

ಕತ್ತಲೆಯಿಂದ ಬೆಳಕಿನೆಡೆ: ಅಜ್ಞಾನದಿಂದ ಜ್ಞಾನದೆಡೆ ಸಾಗುವ ಬೆಳಕಿನ ಹಬ್ಬ ದೀಪಾವಳಿ ..

Published

on

ಕತ್ತಲೆಯಿಂದ ಬೆಳಕಿನೆಡೆ ಅಜ್ಞಾನದಿಂದ ಜ್ಞಾನದೆಡೆ ಸಾಗುವ ಬೆಳಕಿನ ಹಬ್ಬ ದೀಪಾವಳಿ 

ಮಂಗಳೂರು: ಚಾಂದ್ರಮಾನ  ಪಂಚಾಂಗದ ಪ್ರಕಾರ ಅಶ್ವಯುಜ ಮಾಸದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತದೆ. ಶ್ರೀ ರಾಮ ರಾವಣನನ್ನು ಜಯಿಸಿ ಸಹೋದರ ಲಕ್ಷ್ಮಣ ಹಾಗೂ ಪತ್ನಿ ಸೀತಾ ಮಾತೆಯೊಂದಿಗೆ ಅಯೋಧ್ಯೆಗೆ ಮರಳಿದ ಕಾಲವೆಂದು ಪರಿಗಣಿಸಲಾಗುತ್ತದೆ. ದೀಪಾವಳಿ ಹಬ್ಬದಂದು ನಾವು ಬೆಳಗುವ ದೀಪಗಳು, ಮನೆಯಲ್ಲಿ ಪ್ರೀತಿ ಮತ್ತು ಸಂತೋಷವನ್ನು ತರುತ್ತದೆ.

ಮನೆಯಲ್ಲಿ ಬಹುನಿರೀಕ್ಷಿತ ಭರವಸೆ ಮತ್ತು ಉತ್ಸಾಹವನ್ನು ಪೂರ್ಣಗೊಳಿಸುತ್ತದೆ. ಪ್ರತಿಯೊಬ್ಬರು ದೀಪಾವಳಿ ದಿನದಂದು ಮನೆಯನ್ನು ಶುದ್ಧಗೊಳಿಸಿ, ದೀಪಗಳನ್ನು ಬೆಳಗಿ, ಹೂಮಾಲೆಯಿಂದ ಮನೆಯನ್ನು ಅಲಂಕರಿಸಿ, ಸಿಹಿ ಖಾದ್ಯವನ್ನು ತಯಾರಿಸಿ, ಮನೆಯವರೆಲ್ಲಾ ಹೊಸ ಉಡುಪುಗಳನ್ನು ಧರಿಸಿ ಪಟಾಕಿಯನ್ನು ಸಿಡಿಸಿ ಹಬ್ಬದ ಉತ್ಸಾಹವನ್ನು ವ್ಯಕ್ತಪಡಿಸುತ್ತಾರೆ.

ದೀಪಾವಳಿ ಅತ್ಯಂತ ಜನಪ್ರಿಯ ಹಿಂದೂ ಹಬ್ಬಗಳಲ್ಲಿ ಒಂದು. ಕತ್ತಲೆಯ ವಿರುದ್ಧ ಬೆಳಕಿನ ಜಯ, ಕೆಟ್ಟದ್ದರ ವಿರುದ್ಧ ಉತ್ತಮದ ಮತ್ತು ಅಜ್ಞಾನದ ಮೇಲಿನ ಜ್ಞಾನದ ಜಯವನ್ನು ಇದು ಪ್ರತಿನಿಧಿಸುತ್ತದೆ.

ದೀಪಾವಳಿ ಮುನ್ನಾದಿನದಂದು ಜನರು ದೀಪಗಳನ್ನು ಬೆಳಗಿಸಿ ಲಕ್ಷ್ಮಿ ದೇವಿಯನ್ನು ಪೂಜಿಸುತ್ತಾರೆ. ದೀಪಾವಳಿಯ ಮಾರನೆ ದಿನ ಜನರು ಹೊಸ ಬಟ್ಟೆಗಳನ್ನು ಧರಿಸುತ್ತಾರೆ. ಸಿಹಿತಿಂಡಿಗಳನ್ನು ತಯಾರಿಸಲಾಗುತ್ತದೆ ಮತ್ತು ಉಡುಗೊರೆಗಳನ್ನು ನೀಡಲಾಗುತ್ತದೆ.ಕಾರ್ತಿಕ ಮಾಸದಲ್ಲಿ ಮೂರು ದಿನ ದೀಪಾವಳಿಯನ್ನು ಆಚರಿಸಲಾಗುತ್ತದೆ. ಈ ಬಾರಿ ಕೊರೊನಾ ಹಿನ್ನೆಲೆ ಎಲ್ಲೆಡೆ ದೀಪಾವಳಿಯು ಸಡಗರ ಸಂಭ್ರಮವಿಲ್ಲದೆ ಸರಳವಾಗಿ ಆಚರಿಸಲಾಗುತ್ತಿದೆ.ಕತ್ತಲೆಯ ವಿರುದ್ದ ಬೆಳಕಿನ ಸಮರವೆಂಬಂತೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತದೆ.

ದೀಪಾವಳಿ ಸಂದರ್ಭದಲ್ಲಿ ಜನರು ಐಶ್ವರ್ಯ ವೃದ್ಧಿಗಾಗಿ ಲಕ್ಷ್ಮೀ ಪೂಜೆ ನೆರವೇರಿಸುವುದು ವಾಡಿಕೆ. ಇಂದಿನಿಂದ ಕಾರ್ತಿಕ ಮಾಸ ಮುಗಿಯುವವರೆಗೆ ಮನೆ ಮುಂದೆ ಹಣತೆಗಳನ್ನಿರಿಸಿ ದೀಪಾವಳಿ ಆಚರಿಸಲಾಗುತ್ತದೆ. ಮನೆಯಂಗಳದಲ್ಲಿ ಹಣತೆಯನ್ನಿರಿಸಿ ಪೂಜಿಸಲಾಗುತ್ತದೆ. ದೀಪಾವಳಿ ಸಂದರ್ಭದಲ್ಲಿ ಗೋಪೂಜೆ, ಅಂಗಡಿ ಪೂಜೆಗಳನ್ನೂ ನೆರವೇರಿಸಲಾಗುತ್ತದೆ.

ಒಟ್ನಲ್ಲಿ ಒಂದು ತಿಂಗಳ ಕಾಲ ದೀಪಾವಳಿ ಹಬ್ಬದ ಆಚರಣೆಯಿರಲಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

Published

on

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

DAKSHINA KANNADA

ಉಪ್ಪಿನಂಗಡಿ:12 ಅಡಿ ಉದ್ದದ‌ ಕಾಳಿಂಗ ಸರ್ಪ ಹಿಡಿಯೋಕು ಮೀಟ್ರು ಬೇಕು

Published

on

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ‌ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು.

ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ. ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.

Continue Reading

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

LATEST NEWS

Trending