Connect with us

LATEST NEWS

ಪತಿ ಮಕ್ಕಳನ್ನು ತೊರೆದು ಪ್ರಿಯಕರನೊಂದಿಗೆ ಕುವೈತ್‌ಗೆ ಪರಾರಿಯಾದ ದೀಪಿಕಾ…!

Published

on

ಸೋಷಿಯಲ್ ಮೀಡಿಯಾ ಪ್ರಿಯಕರನ್ನು ಹುಡುಕಿಕೊಂಡು ರಾಜಸ್ಥಾನಿ ಮಹಿಳೆಯೊಬ್ಬರು ಪಾಕಿಸ್ತಾನಕ್ಕೆ ಪಲಾಯನ ಮಾಡಿದ ಬೆನ್ನಲ್ಲೇ ಅಂತಹುದೇ ಮತ್ತೊಂದು ಘಟನೆ ರಾಜಸ್ಥಾನದಿಂದ ವರದಿಯಾಗಿದೆ.

ಜೈಪುರ : ಸೋಷಿಯಲ್ ಮೀಡಿಯಾ ಪ್ರಿಯಕರನ್ನು ಹುಡುಕಿಕೊಂಡು ರಾಜಸ್ಥಾನಿ ಮಹಿಳೆಯೊಬ್ಬರು ಪಾಕಿಸ್ತಾನಕ್ಕೆ ಪಲಾಯನ ಮಾಡಿದ ಬೆನ್ನಲ್ಲೇ ಅಂತಹುದೇ ಮತ್ತೊಂದು ಘಟನೆ ರಾಜಸ್ಥಾನದಿಂದ ವರದಿಯಾಗಿದೆ.

35 ವರ್ಷದ ರಾಜಸ್ಥಾನಿ ಮಹಿಳೆ ತನ್ನ ಇಬ್ಬರು ಮಕ್ಕಳು ಮತ್ತು ಪತಿಯನ್ನು ಬಿಟ್ಟು ತನ್ನ ಗೆಳೆಯನೊಂದಿಗೆ ಕುವೈತ್‌ಗೆ ಪರಾರಿಯಾಗಿದ್ದಾಳೆ. ದುಂಗರಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ದೀಪಿಕಾ ಪಾಟಿದಾರ್ ಎಂಬ ಯುವತಿ ಪರಾರಿಯಾಗಿದ್ದಾಳೆ. ಪತಿ ದೂರಿನೊಂದಿಗೆ ಪೊಲೀಸರನ್ನು ಸಂಪರ್ಕಿಸಿದರು.

ಹಣ, ಚಿನ್ನಾಭರಣಗಳೊಂದಿಗೆ ಪತ್ನಿ ಬೇರೆಯವರೊಂದಿಗೆ ಪರಾರಿಯಾಗಿದ್ದಾಳೆ ಎಂದು ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ದೀಪಿಕಾ ಪಾಟಿದಾರ್ ತನ್ನ ಗೆಳೆಯ ಇರ್ಫಾನ್ ಹೈದರ್ ಜೊತೆ ಓಡಿ ಹೋಗಿದ್ದಾಳೆ ಎಂದು ದೂರಿನಲ್ಲಿ ಹೇಳಲಾಗಿದೆ.

ಯುವತಿ ಬುರ್ಖಾ ಧರಿಸಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಕುಟುಂಬಕ್ಕೆ ವಿಷಯ ತಿಳಿದಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಪತಿ ಮುಖೇಶ್ ಅವರು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದು, ಅವರ ಪತ್ನಿ ದೀಪಿಕಾ 11 ಮತ್ತು 7 ವರ್ಷದ ಇಬ್ಬರು ಮಕ್ಕಳೊಂದಿಗೆ ರಾಜಸ್ಥಾನದ ಮನೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದೀಪಿಕಾ ಆಗಾಗ್ಗೆ ಗುಜರಾತ್ ಅಥವಾ ಉದಯಪುರಕ್ಕೆ ಚಿಕಿತ್ಸೆಗಾಗಿ ಹೋಗುತ್ತಿದ್ದರು. ಜುಲೈ 10 ರಂದು ದೀಪಿಕಾ ಅನಾರೋಗ್ಯ ಎಂದು ಹೇಳಿ ಗುಜರಾತ್‌ಗೆ ಚಿಕಿತ್ಸೆಗಾಗಿ ತೆರಳಿದ್ದರು.

ಆದರೆ, ಜುಲೈ 13ರವರೆಗೆ ಆಕೆ ವಾಪಸ್ ಬಂದಿರಲಿಲ್ಲ. ಬದಲಾಗಿ ಗಂಡನೊಂದಿಗೆ ಬಾಳುವುದು ಕಷ್ಟ ಎಂದು ವಾಟ್ಸಾಪ್ ಸಂದೇಶ ಕಳುಹಿಸಿದ್ದರು.

ಮುಖೇಶ್ ರಾಜಸ್ಥಾನದಲ್ಲಿರುವ ತನ್ನ ಮನೆಗೆ ಬಂದಾಗ ಲಕ್ಷ ಮೌಲ್ಯದ ನಗದು ಮತ್ತು ಚಿನ್ನಾಭರಣ ಕಾಣೆಯಾಗಿದೆ. ಇರ್ಫಾನ್ ಹೈದರ್ ತನ್ನ ಪತ್ನಿಯನ್ನು ಇಸ್ಲಾಂ ಧರ್ಮಕ್ಕೆ ಬ್ರೈನ್ ವಾಶ್ ಮಾಡಿದ್ದಾನೆ ಎಂದು ಮುಖೇಶ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಹೈದರ್‌ನನ್ನು ಭೇಟಿಯಾಗಲು ದೀಪಿಕಾ ಆಗಾಗ್ಗೆ ಗುಜರಾತ್‌ನ ಸಬರ್ ಕಾಂತಾದಲ್ಲಿರುವ ಖೇಡ್ ಬ್ರಹ್ಮಕ್ಕೆ ಭೇಟಿ ನೀಡುತ್ತಿದ್ದರು. ಈತ ದೀಪಿಕಾಳನ್ನು ಕುವೈತ್‌ಗೆ ಕರೆದುಕೊಂಡು ಹೋಗಿರುವುದು ಪತ್ತೆಯಾಗಿದೆ. ಇಬ್ಬರಿಗೂ ವೀಸಾ ಸಿಕ್ಕಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

FILM

ಜೊತೆಯಾಗಿ ಕಾಣಿಸಿಕೊಂಡ ಸೂಪರ್ ಸ್ಟಾರ್ – ಬಿಗ್ ಬಿ; ಸ್ಟೈಲಿಶ್ ಫೋಟೋ ವೈರಲ್

Published

on

ಬೆಂಗಳೂರು : ಸೂಪರ್ ಸ್ಟಾರ್ ರಜನಿಕಾಂತ್ 170 ನೇ ಸಿನಿಮಾ ‘ವೆಟ್ಟೈಯಾನ್‘ ಈಗಾಗಲೇ ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ಟೀಸರ್ ಬಹಳ ಸದ್ದು ಮಾಡಿದೆ. ಅಲ್ಲದೇ ಈ ಚಿತ್ರದಲ್ಲಿ ಸೂಪರ್ ಸ್ಟಾರ್ – ಬಿಗ್ ಬಿ ಜೊತೆಯಾಗ್ತಿರೋದು ವಿಶೇಷ. ಅದೂ 33 ವರ್ಷಗಳ ಬಳಿಕ. ಹಾಗಾಗಿ ಸಹಜವಾಗಿಯೇ ಚಿತ್ರದ ಕುರಿತು ನಿರೀಕ್ಷೆ ಹೆಚ್ಚಿದೆ.

ವೈರಲ್ ಆಯ್ತು ಫೋಟೋ :


ಇಬ್ಬರು ಸಿನಿ ದಿಗ್ಗಜರು ಜೊತೆಯಾಗೋದು ಅಂದ್ರೆ ಕೇಳ್ಬೇಕಾ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಾಗುತ್ತದೆ. ಈ ಚಿತ್ರದ ಅಪ್ಡೇಟ್ಸ್ ಗಾಗಿ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಅಭಿಮಾನಿಗಳು ಕಾಯುತ್ತಿರೋದು ಸುಳ್ಳಲ್ಲ. ಇದೀಗಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿದೆ.


‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ ಎಂದು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ : ಬಾಲಿವುಡ್ ಜನಪ್ರಿಯ ನಿರೂಪಕಿ ಭಾರತಿ ಸಿಂಗ್ ಆಸ್ಪತ್ರೆ ದಾಖಲು..!

ಈ ಫೋಟೋಗಳಲ್ಲಿ ರಜನಿಕಾಂತ್ ಹಾಗೂ ಅಮಿತಾಭ್ ಇಬ್ಬರೂ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ನೆಟ್ಟಿಗರು ಈ ಫೋಟೋಗಳನ್ನು ನೆಚ್ಚಿಕೊಂಡಿದ್ದು, ಕಮೆಂಟ್ಸ್ ಹರಿದು ಬರುತ್ತಿದೆ.

Continue Reading

LATEST NEWS

ಮೊಸಳೆ ಇದ್ದ ನಾಲೆಗೆ ಕಂದಮ್ಮನನ್ನು ಎಸೆದ ಹೆತ್ತ ತಾಯಿ..! ಗಂಡ-ಹೆಡತಿ ಜಗಳದಲ್ಲಿ ಮೊಸಳೆ ಪಾಲಾದ ಮಗು..!

Published

on

ಉತ್ತರ ಕನ್ನಡ/ಮಂಗಳೂರು: ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ (Murder case ) ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.

child death

ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್‌ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾ(ಏ.5) ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್‌ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.

ಮುಂದೆ ಓದಿ..; ನಡುರಸ್ತೆಯಲ್ಲಿ ಗರ್ಭಿಣಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ದುಷ್ಕರ್ಮಿಗಳು..!

ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.

ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.

Continue Reading

LATEST NEWS

ನಡುರಸ್ತೆಯಲ್ಲಿ ಗರ್ಭಿಣಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ದುಷ್ಕರ್ಮಿಗಳು..!

Published

on

ಮಧ್ಯಪ್ರದೇಶ: ದರೋಡೆ ಮಾಡಲು ಬಂದವರು ನಡುರಸ್ತೆಯಲ್ಲಿ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್​ಪುರದಲ್ಲಿ ನಡೆದಿದೆ.

pregnant death

ಮೊದಲು ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ, ಬಳಿಕ ಗರ್ಭಿಣಿಯನ್ನು ಆಕೆಯ ಸೀರೆಯಿಂದಲೇ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಧೋಟಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಕಾಜರವಾರದ ನಿವಾಸಿ ಶುಭಂ ಚೌಧರಿ ಅವರು ಪತ್ನಿ ರೇಷ್ಮಾ ಹಾಗೂ ಒಂದೂವರೆ ವರ್ಷದ ಪುತ್ರನೊಂದಿಗೆ ವಾಕಿಂಗ್‌ಗೆ ತೆರಳಿದ್ದರು.

ಪಟ್ಬಾಬಾದಿಂದ ಹಿಂದಿರುಗಿದ ನಂತರ, ಮದರ್ ತೆರೆಸಾ ನಗರದಲ್ಲಿರುವ ತನ್ನ ಅತ್ತೆಯ ಮನೆಗೆ ಹೋಗಲು ಬೊಲೆರೋ ಕಾರಿನಲ್ಲಿ ಹೊರಟಿದ್ದಾಗ, ದಾರಿಯಲ್ಲಿ 3-4 ದುಷ್ಕರ್ಮಿಗಳು ಅಡ್ಡಗಟ್ಟಿದ್ದರು. ಆಗ ಪ್ರತಿಭಟಿಸಲು ಮುಂದಾದ ಮಹಿಳೆಯನ್ನು ಹತ್ಯೆ ಮಾಡಿ ಬಳಿಕ ಆಕೆಯ ಪತಿಯನ್ನೂ ಥಳಿಸಿದ್ದಾರೆ. ಶುಭಂ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಇನ್ನು ಶೂಭಂ ತಲೆಗೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ. ಪತ್ನಿಯ ಮಂಗಳಸೂತ್ರವನ್ನು ದೋಚಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಮಾಧೋಳ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮುಂದೆ ಓದಿ..; ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

ಶುಭಂ ಅವರ ಬೊಲೆರೋ ದುಷ್ಕರ್ಮಿಗಳಿಗೆ ಡಿಕ್ಕಿ ಹೊಡೆದಿದೆ. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ವಿವಾದಗಳುಂಟಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಈ ದುರಂತ ನಡೆದಿರಬಹುದೆಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಈ ಕುರಿತು ಪೊಲೀಸರು ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ರೇಷ್ಮಾ ಸಾವಿನ ಮರಣೋತ್ತರ ಪರೀಕ್ಷಾ ವರದಿ ಬಳಿಕ ಸಾವಿಗೆ ಕಾರಣ ತಿಳದು ಬರಬೇಕಿದೆ ಎಂದು ಮಧೋಳ ಠಾಣೆ ಪ್ರಭಾರಿ ವಿಪಿನ್ ತಾಮ್ರಕರ ಹೇಳಿದ್ದಾರೆ.

 

Continue Reading

LATEST NEWS

Trending