Connect with us

BANTWAL

ಮಂಗಳೂರು: ಸರ್ಕಾರಿ ಕೆಲಸಗಳಲ್ಲಿ ವಿಳಂಬ- ನೌಕರರ ವಿರುದ್ಧ ದೂರು ನೀಡಲು ಲೋಕಾಯುಕ್ತ ಮನವಿ

Published

on

ಮಂಗಳೂರು: ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಆಲಿಸಲು ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಮಾ.18 ರಿಂದ 28ರ ವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಭೆಗಳನ್ನು ಹಮ್ಮಿಕೊಂಡಿದ್ದಾರೆ.

ವಿವರ ಇಂತಿದೆ
ಮುಲ್ಕಿ ತಾಲೂಕಿನಲ್ಲಿ ಮಾ.18ರ ಶನಿವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಮುಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ, ಬಂಟ್ವಾಳದಲ್ಲಿ ಮಾ. 21ರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ, ಪುತ್ತೂರು ತಾಲೂಕಿನಲ್ಲಿ ಮಾ.27ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ವರೆಗೆ ಪುತ್ತೂರು ತಾಲೂಕು ಕಚೇರಿಯಲ್ಲಿ ಹಾಗೂ ಸುಳ್ಯ ತಾಲೂಕಿನಲ್ಲಿ ಮಾ.28ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಸುಳ್ಯ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ, ಅಹವಾಲುಗಳನ್ನು ಆಲಿಸುವರು.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿಗಳು, ನೌಕರರ ವಿರುದ್ಧ ಸಾರ್ವಜನಿಕರು ಈ ಸಂದರ್ಭದಲ್ಲಿ ದೂರು ನೀಡಬಹುದಾಗಿದೆ.
ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಕೂಡ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ಸಲ್ಲಿಸಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಅರ್ಜಿಗಳನ್ನು ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ
ಪೊಲೀಸ್ ಅಧೀಕ್ಷಕರ ಕಚೇರಿ-0824 – 2950997, 9448125325, ಪೊಲೀಸ್ ಉಪಾಧೀಕ್ಷಕರು-0824–2453420, 9448635348.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸಿ.ಎ. ಸೈಮನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ULLALA : ನೇಣಿಗೆ ಶರಣಾದ ಇಬ್ಬರು ಪುಟ್ಟ ಮಕ್ಕಳ ತಂದೆ

Published

on

ಉಳ್ಳಾಲ :   ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದ ಹನುಮಾನ್ ನಗರದಲ್ಲಿ ಸೋಮವಾರ(ಏ. 29) ಮುಂಜಾನೆ ನಡೆದಿದೆ. 44 ವರ್ಷ ಯೋಗೀಶ್ ಆತ್ಮಹ*ತ್ಯೆಗೈದ ವ್ಯಕ್ತಿ.

ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಸೋಮವಾರ ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾರೆ. ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು, ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ.

ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡನೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹ*ತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ.

ಇದನ್ನೂ ಓದಿ : ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!

ಉಳ್ಳಾಲ ಠಾಣಾ ಪೊಲೀಸರು ಮೃ*ತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.

ಯೋಗೀಶ್ ಪತ್ನಿಯೂ ಆತ್ಮಹತ್ಯೆಗೆ ಯತ್ನ:

ಯೋಗೀಶ್ ಸಾ*ವನ್ನಪ್ಪಿದನ್ನು ಕಂಡ ಪತ್ನಿಯೂ ನೇಣು ಬಿಗಿದು ಆತ್ಮ ಹ*ತ್ಯೆಗೈಯಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಸ್ಥಳೀಯರು ಆಕೆಯನ್ನ ತಡೆದು ಸಂತೈಸಿದ್ದಾರೆ. ಮೃ*ತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.

Continue Reading

BANTWAL

ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!

Published

on

ಬಂಟ್ವಾಳ : ಕಲ್ಲಡ್ಕ ಬಾಳ್ತಿಲ ಗ್ರಾಮದಲ್ಲಿದೆ ಕಾರಣಿಕದ ಕರ್ಲುರ್ಟಿ ಕ್ಷೇತ್ರ. ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ.  ಈ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವದ ಸಿದ್ಧತೆ ಭರದಿಂದ ಸಾಗುತ್ತಿದೆ.

ಪವಾಡ ತೋರಿದ್ದ ಕಲ್ಲುರ್ಟಿ :

ಈಗಾಗಲೇ ತಿಳಿಸಿದಂತೆ ಈ ದೈವಸ್ಥಾನ ಹಿಂದು -ಮುಸಲ್ಮಾನ ಭಾಂದವರ ಭಾವೈಕ್ಯತೆಯ ಸಾನಿಧ್ಯ. ಕುದ್ರೆಬೆಟ್ಟುವಿನ ಒಂದು ಮುಸನ್ಮಾನ ಕುಟುಂಬ ಕಲ್ಲುರ್ಟಿ ದೈವವನ್ನು ನಂಬುತ್ತಿದ್ದರು. ಐಸಮ್ಮ ಎಂಬ ಮಹಿಳೆಯ ಕುಟುಂಬ ಕಷ್ಟ ಕಾರ್ಪಣ್ಯಗಳನ್ನು ಅನುಭವಿಸುತ್ತಿದ್ದರು. ಇದರಿಂದ ಬೇಸತ್ತ ಕುಟುಂಬಕ್ಕೆ ಆ ಜಾಗದಲ್ಲಿ ಅಗೋಚರ ಶಕ್ತಿಯೊಂದು ಇರುವುದು ತಿಳಿಯುತ್ತದೆ. ನಂತರ ಅವರು ‘ಕಲ್ಲುರ್ಟಿ’ಯನ್ನು ಕಲ್ಲಿನ ರೂಪದಲ್ಲಿ ನಂಬಲು ಆರಂಭಿಸುತ್ತಾರೆ. ಕಷ್ಟ ಎಂದು ತನ್ನಲ್ಲಿಗೆ ಬಂದವರಿಗೆ ಐಸಮ್ಮ ಕಲ್ಲುರ್ಟಿಯ ಸ್ಮರಿಸಿ ಕಪ್ಪು ದಾರ ನೀಡುತ್ತಿದ್ದರು. ಇದರಿಂದ ಅವರ ತೊಂದರೆಗಳೆಲ್ಲ ನಿವಾರಣೆಯಾಗುತ್ತಿತ್ತು ಎಂಬ ನಂಬಿಕೆಯಿದೆ.

 

ಮನೆಯಲ್ಲಿ ವಿಶೇಷ ಅಡುಗೆ ಮಾಡಿದರೆ, ಆಕೆ ದೈವಕ್ಕೆ ಬಡಿಸದೇ ಸೇವಿಸುತ್ತಿರಲಿಲ್ಲ. ಒಂದುವೇಳೆ ತಪ್ಪಿದ್ದಲ್ಲಿ ಅಡುಗೆ ಮಾಡಿಟ್ಟಿದ್ದ ಪಾತ್ರೆಯೇ ದೈವದ ಕಲ್ಲಿನತ್ತ ಚಲಿಸುತ್ತಿತ್ತಂತೆ. ಆದರೆ, ಕಾಲಕ್ರಮೇಣ ಆ ಕುಟುಂಬ ಮನೆಯನ್ನು ಮಾರಿ ಬೇರೆ ಕಡೆ ಹೊರಟು ಹೋಗಿದ್ದರು.

ಮತ್ತೆ ಬೆಳಕಿಗೆ ಬಂದ ಕ್ಷೇತ್ರ :

ಆ ಮುಸಲ್ಮಾನ ಕುಟುಂಬವೇನೋ ಹೊರಟು ಹೋಯಿತು. ಶಕ್ತಿ ಅಲ್ಲೇ ಉಳಿಯಿತು. ಈ ಘಟನೆ ನಡೆದು ಹಲವು ದಶಕಗಳೇ ಕಳೆದಿವೆ. 15 ವರ್ಷಗಳಿಂದ ಇಲ್ಲಿ ಹಲವು ಘಟನೆಗಳು ನಡೆಯುತ್ತಿವೆ. ಇತ್ತೀಚೆಗೆ ಮಣಿಕಂಠ ಯುವಶಕ್ತಿ ಕೇಂದ್ರ ಭಜನಾ ಮಂದಿರವೊಂದನ್ನು ಸ್ಥಾಪಿಸುವ ಕೆಲಸ ಆರಂಭಿಸಿತ್ತು. ಆದರೆ, ಇದಕ್ಕೆ ತಡೆ ಬರಲಾರಂಭಿಸಿದಾಗ, ಮಂದಿರದಲ್ಲಿ ಪ್ರಶ್ನೆ ಇಟ್ಟಾಗ ‘ಯುವಶಕ್ತಿ’ ಯ ಯುವಕರು ತಾಯಿ ಕಲ್ಲುರ್ಟಿಯನ್ನು ನಂಬಬೇಕು ಎಂಬ ಅಪ್ಪಣೆಯಾಯಿತು.

ನಾವು ಬಿಟ್ಟೆವೆಂದು ದೈವ ಬಿಡುವುದೇ..? ಪೂ – ನೀರ್(ಹೂ-ನೀರು) ಸಲ್ಲದೇ ಹೋದಲ್ಲಿ ಹೇಗೆ? ಅಂತೆಯೇ, ಹಳೆಯ ದೈವಸ್ಥಾನ ಜೀರ್ಣೋದ್ಧಾರಗೊಂಡು ಹೊಸ ರೂಪ ಪಡೆದು ನಿಂತಿದೆ.

20 ದಿನಗಳಲ್ಲಿ ನಡೆಯಿತು ಜೀರ್ಣೋದ್ಧಾರ :

ದೈವದ ಅಭಯ ಯುವಕರ ಮೇಲಿತ್ತು. ಇಡೀ ಊರೇ ಅಚ್ಚರಿ ಪಡುವಂತೆ ತಾಯಿಯ ದೈವಸ್ಥಾನದ ಕಾರ್ಯ ನಡೆಯಿತು.  ಕೇವಲ 20 ದಿನಗಳಲ್ಲಿ ಅಪ್ಪೆ ಕಲ್ಲುರ್ಟಿಯ ಕ್ಷೇತ್ರ ತಲೆ ಎತ್ತಿ ನಿಂತಿತು ಅಂದರೆ ನೀವು ನಂಬಲೇ ಬೇಕು. ಕ್ಷೇತ್ರದ ಜೀರ್ಣೋದ್ಧಾರಕ್ಕಾಗಿ ಹಗಲಿರುಳು ಯುವಕರು ಶ್ರಮಿಸಿದ್ದಾರೆ. ಹುಬ್ಬೇರಿಸುವಂತಹ ಕೆಲಸ ಮಾಡಿದ ಶ್ರೀ ಮಣಿಕಂಠ ಯುವಶಕ್ತಿ ತಂಡದ ಈ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.

ಕಾರ್ಯಕ್ರಮಗಳ ವಿವರ :

ಕುದ್ರೆಬೆಟ್ಟು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮೇ.3 ರಂದು ಶ್ರೀ ಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ. ಮೇ.02 ರಂದು ಬೆಳಿಗ್ಗೆ ಶ್ರೀ ಮಣಿಕಂಠ ಸನ್ನಿಧಾನದಲ್ಲಿ ಗಣಹೋಮ, ಸಂಜೆ ಶಾಸ್ತ್ರ, ಕಲ್ಪೋಕ್ತ ಪೂಜೆ, ವಾಸ್ತು ಹೋಮಾದಿ ಅಧಿವಾಸ ನಡೆಯಲಿದೆ. ಸಂಜೆ 6.30 ರಿಂದ ‘ನಮ್ಮ ಕುಡ್ಲ’ ವಾಹಿನಿ ಖ್ಯಾತಿಯ ‘ಯಕ್ಷ ತೆಲಿಕೆ’ ಕಾರ್ಯಕ್ರಮ ನಡೆಯಲಿದೆ.

ಮೇ.03 ರಂದು ಬೆಳಿಗ್ಗೆ ಗಣಹೋಮ ಬಳಿಕ 10.00 ರಿಂದ 10.25ರ ಒಳಗೆ ಒದಗುವ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಶ್ರೀ ಸೂರ್ಯನಾರಾಯಣ ಭಟ್ ಕಶೆಕೋಡಿ ಇವರ ವೈದಿಕತ್ವದಲ್ಲಿ ಶ್ರೀ ಕಲ್ಲುರ್ಟಿ ದೈವದ ಪ್ರತಿಷ್ಠೆ, ಸಾನಿಧ್ಯ ನವಕ ಕಲಶಾಭಿಷೇಕ, ಪರ್ವ ಸೇವೆ ನಡೆಯಲಿದೆ.

ಇದನ್ನೂ ಓದಿ : ಪುತ್ತೂರು: ಮಳೆಗಾಗಿ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ; ಶಾಸಕರು ಭಾಗಿ

ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಹಾಗೂ ಅನ್ನಸಂತರ್ಪಣೆ ನಡೆದು, ರಾತ್ರಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ.

Continue Reading

LATEST NEWS

Trending