FILM
ಆರಾಧ್ಯ ಬಚ್ಚನ್ ಬಗ್ಗೆ ಸುಳ್ಳು ಪ್ರಕಟಿಸಿದ ಯುಟ್ಯೂಬ್ ಚಾನೆಲ್ಗೆ ನಿರ್ಬಂಧ; ವಿಡಿಯೊ ಡಿಲೀಟ್ಗೆ ಗೂಗಲ್ಗೆ ನಿರ್ದೇಶಿಸಿದ ದೆಹಲಿ ಹೈಕೋರ್ಟ್..!
ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ದಂಪತಿಯ ಪುತ್ರಿ ಆರಾಧ್ಯಳ ಆರೋಗ್ಯ ಕುರಿತು ಆಧಾರರಹಿತ ವದಂತಿ ಹಬ್ಬಿಸುತ್ತಿರುವ ಆಕ್ಷೇಪಾರ್ಹ ವಿಡಿಯೊಗಳನ್ನು ತಕ್ಷಣವೇ ಯೂಟ್ಯೂಬ್ನಿಂದ ತೆಗೆದುಹಾಕುವಂತೆ ಗೂಗಲ್ ಸಂಸ್ಥೆಗೆ ತಾಕೀತು ಮಾಡಿದೆ
ಮುಂಬೈ : ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಕುಟುಂಬದ ಕುಡಿ ಆರಾಧ್ಯ ಬಚ್ಚನ್ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಯೂಟ್ಯೂಬ್ ಚಾನೆಲ್ಗಳಿಗೆ ಗುರುವಾರ ನಿರ್ಬಂಧ ಹೇರಿರುವ ದೆಹಲಿ ಹೈಕೋರ್ಟ್, ‘ಇದು ಸಮಾಜದಲ್ಲಿ ಬೇರೂರುತ್ತಿರುವ ರೋಗಗ್ರಸ್ತ ವಿಕೃತ ಮನಸ್ಥಿತಿಗೆ ಹಿಡಿದ ಕೈಗನ್ನಡಿ’ ಎಂದು ವ್ಯಾಖ್ಯಾನಿಸಿದೆ.
ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ದಂಪತಿಯ ಪುತ್ರಿ ಆರಾಧ್ಯಳ ಆರೋಗ್ಯ ಕುರಿತು ಆಧಾರರಹಿತ ವದಂತಿ ಹಬ್ಬಿಸುತ್ತಿರುವ ಆಕ್ಷೇಪಾರ್ಹ ವಿಡಿಯೊಗಳನ್ನು ತಕ್ಷಣವೇ ಯೂಟ್ಯೂಬ್ನಿಂದ ತೆಗೆದುಹಾಕುವಂತೆ ಗೂಗಲ್ ಸಂಸ್ಥೆಗೆ ತಾಕೀತು ಮಾಡಿದೆ.
ವೀಕ್ಷಕರಿಂದ ಹೆಚ್ಚಿನ ವೀವ್ಸ್ ಪಡೆಯಲು ಪೈಪೋಟಿಗೆ ಬಿದ್ದಿರುವ ಕೆಲವು ಯೂಟ್ಯೂಬ್ ಚಾಲನೆಗಳು ಆರಾಧ್ಯಳ ಆರೋಗ್ಯ ತೀವ್ರ ಹದಗೆಟ್ಟಿದೆ. ಆಕೆ ಮೃತಪಟ್ಟಿದ್ದಾಳೆ ಎಂದು ಸುದ್ದಿ ಪ್ರಸಾರ ಮಾಡುತ್ತಿದ್ದವು.
ಇದರಿಂದ ಬಚ್ಚನ್ ಕುಟುಂಬ ಕಸಿವಿಸಿಗೊಂಡಿತ್ತು. ಇಂಥ ಚಾನೆಲ್ಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಕೋರಿ 11 ವರ್ಷದ ಆರಾಧ್ಯ ಹಾಗೂ ಅಭಿಷೇಕ್ ಬಚ್ಚನ್ ನ್ಯಾಯಾಲಯದ ಮೆಟ್ಟಿಲೇರಿದ್ದರು.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ. ಹರಿಶಂಕರ್, ‘ಪ್ರತಿ ಮಗುವನ್ನೂ ಗೌರವಿಸುವುದು ಎಲ್ಲರ ಜವಾಬ್ದಾರಿ.
ಮಗುವಿನ ಆರೋಗ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡುವುದು ಕಾನೂನುಬಾಹಿರ’ ಎಂದು ಅಭಿಪ್ರಾಯಪಟ್ಟರು.
‘ಆಕ್ಷೇಪಾರ್ಹ ವಿಡಿಯೊಗಳ ಬಗ್ಗೆ ದೂರುದಾರರಿಗೆ ಗೂಗಲ್ ಮಾಹಿತಿ ನೀಡಬೇಕು.
ಇಂತಹ ವಿಡಿಯೊಗಳು ಯಾವಾಗ ಅಪ್ಲೋಡ್ ಆಗಿವೆ. ಇದು ಕಂಪನಿಯ ಗಮನಕ್ಕೆ ಯಾವಾಗ ಬಂದಿದೆ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಮಧ್ಯಂತರ ಆದೇಶದಲ್ಲಿ ಸೂಚಿಸಿದೆ.
ಇನ್ನು ಮುಂದೆ ಆರಾಧ್ಯಳ ಆರೋಗ್ಯದ ಬಗ್ಗೆ ಯಾವುದೇ ಯೂಟ್ಯೂಬ್ ಚಾನೆಲ್ಗಳು ವಿಡಿಯೊ ಸಿದ್ಧಪಡಿಸಬಾರದು. ಅವುಗಳನ್ನು ಪ್ರಸಾರ ಮಾಡಬಾರದು.
ಮಗುವಿನ ಹಿತಾಸಕ್ತಿ ರಕ್ಷಣೆ ಸಂಬಂಧ ನಿರ್ಲಕ್ಷ್ಯವಹಿಸುವುದು ಸರಿಯಲ್ಲ ಎಂದು ಹೇಳಿದೆ.
ಯೂಟ್ಯೂಬ್ನಲ್ಲಿ ಆಕ್ಷೇಪಾರ್ಹ ವಿಡಿಯೊಗಳ ಪ್ರಸಾರ ತಡೆಗೆ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರತಿವಾದಿ ಗೂಗಲ್ ಕಂಪನಿ ಪರ ಹಾಜರಿದ್ದ ವಕೀಲರಿಗೆ ಪ್ರಶ್ನಿಸಿದ ನ್ಯಾಯಾಲಯವು, ಈ ಕುರಿತು ವರದಿ ಸಲ್ಲಿಸುವಂತೆ ಆದೇಶಿಸಿದೆ.
ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಣೆ ಬಗ್ಗೆ ಗೂಗಲ್ಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ
FILM
ಮತ್ತೆ ಬಾಯ್ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!
ಮಂಗಳೂರು : ಪ್ರೀತಿ ಎಂಬ ಎರಡಕ್ಷರವನ್ನ ಬಣ್ಣದ ಲೋಕದಲ್ಲಿರುವ ಅನೇಕರು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಹೀಗಾಗಿಯೇ ದಿನಕ್ಕೊಂದು ಸಂಬಂಧ ಇಲ್ಲಿ ಬದಲಾಗುತ್ತೆ. ಲವ್ ಬೆನ್ನಲ್ಲಿಯೇ ಬ್ರೇಕ್ಪ್ ಆಗುತ್ತೆ. ಇದಕ್ಕೆ ಮತ್ತೊಂದು ಉದಾಹರಣೆ ಶ್ರುತಿ ಹಾಸನ್ ಮತ್ತು ಶಾಂತನು ಹಜಾರಿಕಾ.
ಹೌದು, ನಿಮಗೆ ಗೊತ್ತಿರಲಿ.. ಮೂರ್ನಾಲ್ಕು ವರ್ಷಗಳ ಹಿಂದೆ, ಕಮಲ ಹಾಸನ್ ಅವರ ಮುದ್ದಿನ ಮಗಳು ಶ್ರುತಿ ಹಾಸನ್, ಬ್ರಿಟಿಷ್ ನಟ ಮೈಕಲ್ ಕೋರ್ಸೆಲ್ ಜೊತೆ ಪ್ರೇಮದ ಖಾತೆ ತೆರೆದಿದ್ದರು. ಜೊತೆ ಜೊತೆಯಲ್ಲಿ ಇಬ್ಬರು ಅನೇಕ ಕಡೆ ಕಾಣಿಸಿಕೊಂಡಿದ್ದರು. ಆದರೆ ಆ ನಂತರ ಏನಾಯಿತೋ ಗೊತ್ತಿಲ್ಲ. ಸಂಬಂಧ ಮುರಿದು ಬಿತ್ತು.
ಎರಡನೇ ಬಾಯ್ಫ್ರೆಂಡ್:
ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಾಂತನು ಹಜಾರಿಕಾ. ಶಾಂತನು ಜೊತೆ ಎರಡು ವರ್ಷ ಪ್ರೇಮದ ತಪಸ್ಸು ಮಾಡಿದ್ದ ಶ್ರುತಿ ಹಾಸನ್ ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು. ತನ್ನ ಮೇಲೆ ಶಾಂತನುಗೆ ಇರುವ ಕಾಳಜಿ ಪ್ರೀತಿಯನ್ನೂ ಮೆಚ್ಚಿ ಮಾತನಾಡಿದ್ದರು. ಇನ್ನು ಎರಡು ವರ್ಷದ ಹಿಂದೆ ಅಂದರೆ 2022ರ ಸಮಯದಲ್ಲಿ ತಮ್ಮ ಮದುವೆ ಆಗಿದೆ ಎಂಬ ವಿಚಾರವನ್ನ ಕದ್ದು ಶಾಂತನು ಹೇಳಿದ್ದರು.
ಮದುವೆ ಆದ ನಂತರದಿಂದ ನಮ್ಮ ಸಂಬಂಧ ಇನ್ನು ಗಟ್ಟಿಯಾಗಿದೆ ಹಾಗೂ ಉತ್ತಮವಾಗಿದೆ. ಒಬ್ಬರಿಗೊಬ್ಬರು ಪರಸ್ಪರ ಅರ್ಥ ಮಾಡಿಕೊಂಡು ಜೀವನ ನಡೆಸಲು ನಮ್ಮ ಮದುವೆ ನಮಗೆ ದಾರಿ ಮಾಡಿಕೊಟ್ಟಿದೆ. ಮುಂದೆಯೂ ಹೀಗೆ ಸಂತೋಷದಿಂದ ದಿನಗಳನ್ನು ಕಳೆಯಲು ತೀರ್ಮಾನಿಸಿದ್ದೇವೆ ಎಂದಿದ್ದರು.
ಇದನ್ನೂ ಓದಿ “ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
ಆದರೆ ಈಗ ಶ್ರುತಿ ಹಾಸನ್ ಮತ್ತು ಶಾಂತನು ನಡುವೆ ಇದ್ದ ಪ್ರೇಮ ಸೇತುವೆ ಮುರಿದು ಬಿದ್ದಿದೆ ಅನ್ನುವ ಎಂಬ ಸುದ್ದಿ ಎಲ್ಲೆಡೆ ಕೇಳಿ ಬರುತ್ತಿದೆ. ಇದಕ್ಕೆ ಪೂರಕವಾಗಿ ಶ್ರುತಿ ಹಾಸನ್ ಸಾಮಾಜಿಕ ಜಾಲತಾಣದಲ್ಲಿ ಶಾಂತನು ಜೊತೆ ಫೋಟೋಗಳೆಲ್ಲ ಮಾಯವಾಗಿವೆ. ಶಾಂತನು ಅವರನ್ನ ಶ್ರುತಿ ಹಾಸನ್ ಅನ್ ಫ್ರೆಂಡ್ ಮಾಡಿದ್ದಾರೆ. ಒಟ್ಟಿನಲ್ಲಿ
ಸದ್ಯಕ್ಕೆ ಶ್ರುತಿ ಹಾಸನ್ ಮತ್ತು ಶಾಂತನು ನಡುವೆ ಮೊಳಕೆಯೊಡೆದಿದ್ದ ಪ್ರೀತಿ ಈಗ ಕಮರಿಹೋಗಿದೆ ಅನ್ನುವ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. ಹರಿದಾಡುತ್ತಿರುವ ಈ ಸುದ್ದಿಯ ಬಗ್ಗೆ ಶ್ರುತಿ ಹಾಸನ್ ಸ್ಪಷ್ಟೀಕರಣ ಕೊಡ್ತಾರಾ ಅನ್ನುವುದನ್ನ ಕಾದು ನೋಡಬೇಕಿದೆ.
FILM
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು, ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.
ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.
FILM
ಹೊಸ ಅವತಾರದಲ್ಲಿ ZEE ಕನ್ನಡ ‘ಕಾಮಿಡಿ ಕಿಲಾಡಿಗಳು’… ಸ್ಟಾರ್ ನಿರೂಪಕರು ಈಗ ಜಡ್ಜಸ್? ಏನಿದು ಟ್ವಿಸ್ಟ್?
ಬೆಂಗಳೂರು: ಜೀ ಕನ್ನಡ ವಾಹಿನಿ ವಿಭಿನ್ನ ರೀತಿಯ ಕಥೆಗಳನ್ನೊಳಗೊಂಡ ಧಾರವಾಹಿಗಳ ಜೊತೆಗೆ ರಿಯಾಲಿಟಿ ಶೋಗಳೂ ಜನರ ಮನಸ್ಸು ಗೆದ್ದಿದೆ. ಜೀ ಕನ್ನಡ ವಾಹಿನಿಯ ಅಚ್ಚು ಮೆಚ್ಚಿನ ರಿಯಾಲಿಟಿ ಶೋ ಗಳಲ್ಲಿ ಜನರನ್ನು ನಕ್ಕು ನಗಿಸುವ ರಿಯಾಲಿಟಿ ಶೋ ಅಂದ್ರೆ ಅದು ಕಾಮಿಡಿ ಕಿಲಾಡಿಗಳು… ಹೌದು, ನಗುವಿನ ಅಲೆಯಲ್ಲಿ ತೇಲಿಸಿ ಮನೆಯವರೆಲ್ಲರೂ ಒಟ್ಟಾಗಿ ಕೂತು ನೋಡುವಂತಹ ಶೋ ‘ಕಾಮಿಡಿ ಕಿಲಾಡಿಗಳು’.
ಮಾಸ್ಟರ್ ಆನಂದ್ ನಿರೂಪಣೆಯಲ್ಲಿ ಮೂಡಿ ಬರುತ್ತಿದ್ದ ಕಾರ್ಯಕ್ರಮವನ್ನು ‘ಸೈಡ್ಗಿಡ್ರಿ ನಿಮ್ ಟೆನ್ಷನ್ಗಳು, ಮತ್ತೆ ಬಂದಿದ್ದಾರೆ ಕಾಮಿಡಿ ಕಿಲಾಡಿಗಳು’ ಎಂದು ಶೋ ಆರಂಭ ಮಾಡ್ತಾ ಇದ್ದು ಕರ್ನಾಟಕವನ್ನೇ ನಗುವಿನ ಕಡಲಲ್ಲಿ ತೇಲಿಸುವುದಿತ್ತು. ಇದೀಗ ಸೀಸನ್ 5 ಪ್ರೇಕ್ಷಕರ ಮುಂದೆ ಬರುತ್ತಿದೆ. ಈಗ ಜೀ ವಾಹಿನಿ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ʼಮೂಲಕ ನಿಮ್ಮನ್ನು ಮನರಂಜಿಸಲು ಸಿದ್ಧವಾಗಿದೆ.
ಮುಂದೆ ಓದಿ..; “ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
ಪ್ರೀಮಿಯರ್ ಲೀಗ್ನಲ್ಲಿ ಇರಲಿದ್ದಾರೆ 5 ಜಡ್ಜಸ್..!
ಈ ಕಾಮಿಡಿ ಪ್ರೀಮಿಯರ್ ಲೀಗ್ನಲ್ಲಿ ಈ ಬಾರಿ ಐವರು ನಿರೂಪಕರು ಇರಲಿದ್ದಾರೆ. ಸ್ಟೇಜ್ನಲ್ಲಿ ಕಂಟೆಂಸ್ಟೆಂಟ್ಗಳ ಕುರಿತು ಜಡ್ಜಸ್ ಗಳಲ್ಲಿ ಕಮೆಂಟ್ಸ್ ಕೆಳ್ತಾ ಇದ್ದ ನಿರೂಪಕರು ಈಗ ತಾವೇ ಜಡ್ಜ್ಮೆಂಟ್ ನೀಡಲು ಹೊರಟಿದ್ದಾರೆ. ಹೌದು, ನಿರೂಪಕರುಗಳಾದ ಅನುಶ್ರೀ, ಮಾಸ್ಟರ್ ಆನಂದ್, ಅಕುಲ್ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್ ಅವರು ಈ ಕಾರ್ಯಕ್ರಮದಲ್ಲಿ ಹೊಸ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರಂತೆ.
5 ತಂಡಗಳು.. 1 ಟ್ರೋಫಿಗಾಗಿ ಗುದ್ದಾಟ..!
ಮೂಲಗಳ ಪ್ರಕಾರ ಈ ಬಾರಿಯ ಶೋನಲ್ಲಿ ಟಿ-20 ರೀತಿಯಲ್ಲಿ ಹೇಗೆ ತಂಡಗಳು, ಮಾಲೀಕರು , ಕ್ಯಾಪ್ಟನ್ಗಳು ಇರುತ್ತಾರೋ ಅದೇ ರೀತಿ ಇಲ್ಲಿಯೂ ಇರಲಿದೆ. ಕರ್ನಾಟಕದ 31 ಜಿಲ್ಲೆಗಳಿಂದ ಆಯ್ಕೆ ಮಾಡಿ ತಂದ ಕಲಾವಿದರನ್ನು ಮೆಗಾ ಆಕ್ಷನ್ ಮೂಲಕ ತಮ್ಮ ತಂಡಗಳಿಗೆ ಸೇರಿಸಿಕೊಳ್ಳಲಾಗುವುದು. 5 ತಂಡಗಳು 1 ಟ್ರೋಫಿಗಾಗಿ ಗುದ್ದಾಟ ನಡೆಸಲಿದೆ. ಈ ಶೋ ವಾರಾಂತ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಕ್ಕೆ ಬರೋಬ್ಬರಿ 1 ಲಕ್ಷ ಬಹುಮಾನ ಪಡೆಯುವ ಅವಕಾಶವಿದೆ. ಈ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ʼಗೆ ಐವರು ನಿರೂಪಕರು ಹೊಸ ಜವಬ್ದಾರಿ ಹೊತ್ತಿದ್ದಾರೆ. ಹೀಗಾಗಿ ಹೊಸ ನಿರೂಪಕರನ್ನು ಈ ಶೋ ಮೂಲಕ ಕರೆ ತರಲಾಗುತ್ತಿದೆ ಎಂದು ವರದಿಯಾಗಿದೆ. ಆ ನಿರೂಪಕರು ಯಾರು ಎಂಬ ಕುತೂಹಲ ಎಲ್ಲರಲ್ಲೂ ಮೂಡಿತ್ತು ಇದಕ್ಕೆ ಇದೇ ಶನಿವಾರ ಹಾಗೂ ಭಾನುವಾರು ರಾತ್ರಿ 9ಗಂಟೆಗೆ ತೆರೆ ಬೀಳಲಿದೆ.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!