Connect with us

 ಕಡಲತಡಿಗೂ ಲಿಂಕ್ ಆಯ್ತು ದೆಹಲಿ ಮಸೀದಿಯ ಕೊರೋನಾ ನಂಟು : ಸಭೆಯಲ್ಲಿ ಪಾಲ್ಗೊಂಡ ತೊಕ್ಕೊಟ್ಟುವಿನ ಇಬ್ಬರು ಆಸ್ಪತ್ರೆಗೆ ದಾಖಲು..!  

Published

on

 ಕಡಲತಡಿಗೂ ಲಿಂಕ್ ಆಯ್ತು ದೆಹಲಿ ಮಸೀದಿಯ ಕೊರೋನಾ ನಂಟು : ಸಭೆಯಲ್ಲಿ ಪಾಲ್ಗೊಂಡ ತೊಕ್ಕೊಟ್ಟುವಿನ ಇಬ್ಬರು ಆಸ್ಪತ್ರೆಗೆ ದಾಖಲು..!  

ಮಂಗಳೂರು : ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರಲ್ಲಿ ಬಹುತೇಕರಿಗೆ ಕೊರೋನಾ ಸೋಂಕು ತಗಲಿರುವುದು ಇಡೀ ದೇಶವನ್ನು ತಲ್ಲಣಗೊಳಿಸಿದೆ.

ಇದರಲ್ಲಿ ರಾಜ್ಯದ 56 ಮಂದಿ ಭಾಗವಹಿಸಿದ್ದರು.ಇದರಲ್ಲಿ ಇದೀಗ ಮಂಗಳೂರಿನ ಉಳ್ಲಾಲ ತೊಕ್ಕೊಟ್ಟು ಮಸಿದಿಯ ಇಬ್ಬರು ವ್ಯಕ್ತಿಗಳು ಪಾಲ್ಗೊಂಡಿದ್ದರು ಎಂಬ ಆಘಾತಾಕಾರಿ ಅಂಶ ಬಯಲಾಗಿದೆ.

ನಿನ್ನೆ ತಡ ರಾತ್ರಿ ತಡರಾತ್ರಿ ಪೊಲೀಸ್ – ಆರೋಗ್ಯಾಧಿಕಾರಿಗಳು ಅವರನ್ನು ಪತ್ತೆ ಹಚ್ಚಿ ಮಂಗಳೂರಿನ ವೆನ್ಲಾಕ್‌ ಕೊರೋನಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇದಲ್ಲದೆ ದೆಹಲಿಯಿಂದ ಬಂದ ಇವರುಗಳು ತೊಕ್ಕೊಟ್ಟು ಪರಿಸರದಲ್ಲೆಲ್ಲಾ ಸುತ್ತಾಡಿದ್ದಾರೆ ಎಂಬ ಅಂಶ ಕೂಡ ಬಯಲಾಗಿದೆ.

ಇದು ತೊಕ್ಕೊಟ್ಟು- ಉಳ್ಳಾಲ ಪರಿಸರದ ಜನರಲ್ಲಿ ಆತಂಕ ಉಂಟು ಮಾಡಿದೆ.

Click to comment

Leave a Reply

Your email address will not be published. Required fields are marked *

FILM

ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Published

on

ಮಲಯಾಳಂನ ಮಂಜುಮ್ಮೆಲ್ ಬಾಯ್ಸ್ ಭಾರೀ ಯಶಸ್ಸನ್ನು ಗಳಿಸಿದ ಚಿತ್ರ. ಚಿತ್ರ ನೋಡಿ ಮತ್ತೆ ಮತ್ತೆ ವೀಕ್ಷಿಸಲು ಥಿಯೇಟರ್ ಗೆ ಜನ ಲಗ್ಗೆ ಇಡುತ್ತಿದ್ದಾರೆ. ಮಲಯಾಳಂ ಸಿನಿ ಪ್ರಿಯರು ಚಿತ್ರ ನೋಡಿ ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ಸಿನಿಮಾ ಬಂದ್ರೂ ಅದು ಓಟಿಟಿಯಲ್ಲಿ ಯಾವಾಗ ಬರುತ್ತೆ ಅಂತ ಕಾಯೋದು ಸಹಜ. ಇದೀಗ ‘ಮಂಜುಮ್ಮೆಲ್ ಬಾಯ್ಸ್’ ಸರದಿ.

ಅತಿ ಹೆಚ್ಚು ಗಳಿಕೆ :


‘ಮಂಜುಮ್ಮೆಲ್ ಬಾಯ್ಸ್’ ಸರಳ ಕಥಾಹಂದರ ಹೊಂದಿದ್ದರೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಚಿತ್ರವನ್ನು ಚಿದಂಬರಂ ಮನೋಜ್ಞವಾಗಿ ಚಿತ್ರಿಸಿದ್ದಾರೆ. ಫೆಬ್ರವರಿ 22 ರಂದು ಈ ಚಿತ್ರ ತೆರೆಕಂಡಿತ್ತು. ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಗ್ರಾಸ್ ಕಲೆಕ್ಷನ್ 200 ಕೋಟಿ ರೂಪಾಯಿ ದಾಟಿದೆ. ಮಲಯಾಳಂನಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾ ಎಂಬ ಹೆಗ್ಗಳಿಕೆ ಗಳಿಸಿದೆ.


ಶೌಬಿನ್ ಶಾಹಿರ್, ಶ್ರೀನಾಥ್ ಬಾಸಿ, ಬಾಲು ವರ್ಗೀಸ್, ಗಣಪತಿ ಸೇರಿದಂತೆ ಸಾಕಷ್ಟು ಜನ ಕಲಾವಿದರು ಚಿತ್ರದಲ್ಲಿ ಪಾತ್ರವಾಗಿದ್ದಾರೆ. ಅಂದಾಜು 20 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾಗಿದ್ದ ಸ್ಟಾರ್ ನಟರಿಲ್ಲದ ಈ ಸಿನಿಮಾ 200 ಕೋಟಿ ರೂ. ಕಲೆಕ್ಷನ್ ಮಾಡಿರೋದು ಆಶ್ಚರ್ಯ ಹುಟ್ಟು ಹಾಕಿದೆ.

ಓಟಿಟಿಯಲ್ಲಿ ಯಾವಾಗ ?

‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾವನ್ನು ಥಿಯೇಟರ್ ಅಂಗಳದಲ್ಲಿ ನೋಡಿ ಎಂಜಾಯ್ ಮಾಡಿದವರು ಅನೇಕ ಮಂದಿ ಇದ್ದಾರೆ. ಇದೀಗ ಸಿನಿಮಾ ಓಟಿಟಿಯಲ್ಲಿ ಯಾವಾಗ ಅನ್ನೋ ಪ್ರಶ್ನೆ ಹುಟ್ಟಿತ್ತು. ಇದಕ್ಕೆ ಉತ್ತರವೂ ಸಿಕ್ಕಿದೆ.

ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ನಲ್ಲಿ ಮೇ 3 ರಂದು ಸ್ಟ್ರೀಮಿಂಗ್ ಆಗುವುದು ಬಹುತೇಕ ಖಚಿತವಾಗಿದೆ. ಫೆಬ್ರವರಿ 22 ರಂದು ತೆರೆಗೆ ಬಂದಿದ್ದ ಸಿನಿಮಾ ಈಗಾಗಲೇ 50 ದಿನ ಪೂರೈಸಿದೆ. ಸದ್ಯ ತೆಲುಗು, ತಮಿಳು, ಕನ್ನಡಕ್ಕೂ ಸಿನಿಮಾ ಡಬ್ ಆಗಿದ್ದು, ಏಕಕಾಲಕ್ಕೆ ಓಟಿಟಿಯಲ್ಲಿ ಸ್ಕ್ರೀಮಿಂಗ್ ಆಗಲಿದೆಯಾ ಎಂಬುದು ತಿಳಿದು ಬಂದಿಲ್ಲ.

 

Continue Reading

BELTHANGADY

ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

Published

on

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ 8 ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ ನಂದನ್ (13) ಎಂಬಾತ ಆತ್ಮಹತ್ಯೆಗೆ ಶರಣಾದ ಬಾಲಕ.

Read More..; ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ

ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ಮಾವನ ಮನೆಯಲ್ಲಿದ್ದ. ಅಲ್ಲಿಂದಲೆ ಉಪ್ಪಿನಂಗಡಿಯ ಖಾಸಗಿ ಶಾಲೆಗೆ ಹೋಗುತ್ತಿದ್ದ. ಈತ ಈ ಬಾರಿ ಏಳನೇ ತರಗತಿ ಉತ್ತೀರ್ಣನಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ. ಏ.19ರಂದು ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ. ಮನೆಯ ಇನ್ವಾರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ಹೇಳಿದ್ದಾರೆ ಎನ್ನಲಾಗಿದೆ. ಇದೇ ನೆಪವನ್ನು ಇಟ್ಟುಕೊಂಡು ಮನನೊಂದ ಬಾಲಕ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಎಲ್ಲಾ ವಿಚಾರವನ್ನು ಮನೆಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Continue Reading

FILM

ನೇಹಾ ಹ*ತ್ಯೆ ಪ್ರಕರಣ : ಆಕ್ರೋಶ ಹೊರ ಹಾಕಿದ ಸಿನಿತಾರೆಯರು

Published

on

ಬೆಂಗಳೂರು : ಹುಬ್ಬಳ್ಳಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾ ಹ*ತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪೊಲೀಸರು ಈಗಾಗಲೇ ಆರೋಪಿ ಫಯಾಜ್ ನನ್ನು ಬಂಧಿಸಿದ್ದಾರೆ. ಈ ಘಟನೆಗೆ ರಾಜ್ಯವ್ಯಾಪಿ ಆಕ್ರೋಶ ಕೇಳಿ ಬಂದಿದೆ.
ಇದೀಗ ಸಿನಿ ತಾರೆಯರೂ ಕೂಡ ಘಟನೆಗೆ ಕಿಡಿಕಾರಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ.

 

ಅತ್ಯಂತ ಹೀನ ಕೃತ್ಯ

ನಟ ಧ್ರುವ ಸರ್ಜಾ ಅವರು ಟ್ವೀಟ್ ಮಾಡಿ, ಸಹೋದರಿ ನೇಹಾ ಹಿರೇಮಠ್ ರ ಹ*ತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್ ಲಿ ಹ*ತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ ಎಂದಿದ್ದಾರೆ.

ಮಹಿಳೆಯರಿಗೆ ಸುರಕ್ಷತೆ ಎಲ್ಲಿದೆ? 


ಘಟನೆ ಬಗ್ಗೆ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಆಕ್ರೋಶ ಹೊರ ಹಾಕಿದ್ದಾರೆ. ನೇಹಾ ಹಿರೇಮಠ್‌ಗೆ ನ್ಯಾಯ ಸಿಗಲೇಬೇಕು. ಮಹಿಳೆಯರಿಗೆ ಸುರಕ್ಷತೆ ಎಲ್ಲಿದೆ? ಕಾಲೇಜಿಗೆ ಹೋಗುವ ಯುವತಿಯರಿಗೂ ಕೂಡ ರಕ್ಷಣೆ ಇಲ್ಲ. ಶೇಮ್ ಶೇಮ್ ಎಂದಿದ್ದಾರೆ.


ಪ್ರೀತಿಸಬೇಕು ಅಂತ ಅದ್ಹೇಗೆ ಒತ್ತಾಯಿಸಲು ಸಾಧ್ಯ? ಪ್ರೀತಿಯನ್ನ ಒಪ್ಪಿಕೊಳ್ಳಲಿಲ್ಲ ಅಂತ ಬರ್ಬರವಾಗಿ ಹುಬ್ಬಳ್ಳಿ ಕಾಲೇಜ್ ಕ್ಯಾಂಪಸ್‌ನಲ್ಲೇ ಹ*ತ್ಯೆ ಮಾಡಿದ್ದಾನೆ. ಅದೆಂಥಾ ಮೈಂಡ್‌ ಸೆಟ್ ಹೊಂದಿದ್ದಾರೆ ಆ ವಯಸ್ಸಿನ ಹುಡುಗರು? ಪೋಷಕರಾಗಿ ನಮ್ಮ ಗಂಡು ಮಕ್ಕಳಿಗೆ ಕೆಲವು ಬೇಸಿಕ್ ಸಂಗತಿಗಳನ್ನ ನಾವು ಹೇಳಿಕೊಡಲೇಬೇಕು. ಅದನ್ನೆಲ್ಲಾ ಶಾಲಾ ಕಾಲೇಜುಗಳಲ್ಲಿ ಕಲಿಸುವುದಿಲ್ಲ. ಇದನ್ನ ಸಹಿಸಲು ಸಾಧ್ಯವೇ ಇಲ್ಲ. ಶೇಮ್ ಶೇಮ್. ಪೋಷಕರಾಗಿ ನನ್ನ ಹೃದಯ ಛಿದ್ರವಾಗುತ್ತಿದೆ ಎಂದು ರಕ್ಷಿತಾ ಪ್ರೇಮ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ

ಎನ್ಕೌಂಟರ್ ಮಾಡಬೇಕು :


ನಟಿ ಕಾವ್ಯಾ ಶಾಸ್ತ್ರಿಯೂ ತಮ್ಮ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಹಂ*ತಕ ಫಯಾಜ್‌ನನ್ನು ಎನ್ಕೌಂಟರ್ ಮಾಡಬೇಕು. ಅವನಿಗೆ ಯಾವುದೇ ಕರುಣೆ ಬೇಕಾಗಿಲ್ಲ. ನೇಹಾ ಹಿರೇಮಠ್ ಕೊ*ಲೆ ಖಂಡನೀಯ. ಕೊ*ಲೆಗಾರನಿಗೆ ಸಿಗುವ ಶಿಕ್ಷೆ ಎಲ್ಲರಿಗೂ ಪಾಠವಾಗಬೇಕು ಎಂದು ಬರೆದುಕೊಂಡಿದ್ದಾರೆ.

ಘಟನೆ ಏನು ?

ಹುಬ್ಬಳ್ಳಿ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಮಗಳು ನೇಹಾ ಹಿರೇಮಠಳನ್ನು ಫಯಾಜ್ ಎಂಬಾತ ಕಾಲೇಜ್ ಕ್ಯಾಂಪಸ್ ನಲ್ಲಿ ಚಾಕುವಿನಿಂದ ಇರಿದು ಎಪ್ರಿಲ್ 18 ರಂದು ಹ*ತ್ಯೆ  ಮಾಡಿದ್ದ. ಹುಬ್ಬಳ್ಳಿಯ ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಹಾ ಪ್ರಥಮ ವರ್ಷದ ಎಂಸಿಎ ಓದುತ್ತಿದ್ದಳು. ಸದ್ಯ ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ಕೇಳಿ ಬಂದಿದೆ. ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂಬ ಆಗ್ರಹ ಕೇಳಿ ಬಂದಿದೆ.

Continue Reading

LATEST NEWS

Trending