Connect with us

LATEST NEWS

ಕೇರಳದ ಯುವತಿ ದಿನಾ ಓಡಿಸುತ್ತಿದ್ದಾಳೆ 300 ಕಿ.ಮೀ ಫ್ಯೂಯೆಲ್ ಟ್ಯಾಂಕರ್..!

Published

on

ಕೇರಳ: ಬಳೆಗಳನ್ನು ಧರಿಸುವ ಕೈಯಲ್ಲಿ ಸ್ಟೇರಿಂಗ್, ಗೆಜ್ಜೆ ಧರಿಸುವ ಕಾಲು ಬ್ರೇಕ್​ ಮೇಲೆ. ಎಂತಹದ್ದೇ ದೊಡ್ಡ ವಾಹನವಿರಲಿ ಸಂಪೂರ್ಣ ಹಿಡಿತ ಸಾಧಿಸುವ ಕಲೆ ಇವರಿಗೆ ಕರಗತ. ಮಹಿಳೆಯರು ಬೈಕ್‌, ಆಟೊರಿಕ್ಷಾಗಳು, ರೈಲು ಮತ್ತು ವಿಮಾನ ನಡೆಸುವ ಅನೇಕ ಉದಾಹರಣೆಗಳಿವೆ.

ಆದರೆ ಕೇರಳದ ಟ್ಯಾಂಕರ್ ಲಾರಿ ಓಡಿಸುವ ಈ ನಾರಿಯ ಜೀವನಗಾಥೆ ಸ್ವಲ್ಪ ವಿಶೇಷವಾಗಿದೆ.ಕೇರಳದಲ್ಲಿ ಟ್ಯಾಂಕರ್ ಲಾರಿ ಓಡಿಸುವ  ನಾರಿ ಇವರು. 22 ವರ್ಷದ ಕೇರಳದ ತ್ರಿಶೂರ್ ಜಿಲ್ಲೆಯ ಡೆಲಿಸಿಯಾ ಎಂಬ ಯುವತಿ ದಿನಾ ಬರೋಬ್ಬರಿ 300 ಕಿಮೀ ಫ್ಯೂಯೆಲ್ ಟ್ಯಾಂಕರ್ ಓಡಿಸುತ್ತಿದ್ದಾಳೆ.

ಕೇರಳದ ಅನೇಕ ಮಹಿಳೆಯರು ಟ್ರಕ್ ಮತ್ತು ಬಸ್​ಗಳನ್ನು ಓಡಿಸಲು ಭಾರೀ ವಾಹನ ಚಾಲನಾ ಪರವಾನಗಿಗಳನ್ನು ಹೊಂದಿದ್ದಾರೆ. ಕಾರು, ದ್ವಿಚಕ್ರ ವಾಹನಗಳು ಮತ್ತು ಆಟೋರಿಕ್ಷಾಗಳನ್ನು ಚಾಲನೆ ಮಾಡುತ್ತಾರೆ.

ಆದರೆ, ಅಗ್ನಿಶಾಮಕ ಮತ್ತು ಸುರಕ್ಷತಾ ಪರವಾನಗಿಯೊಂದಿಗೆ ಅಪಾಯಕಾರಿ ವಸ್ತುಗಳನ್ನು ಸಾಗಿಸುವ ವಾಹನಗಳನ್ನು ಓಡಿಸಲು ಕೇರಳದಲ್ಲಿ ಪರವಾನಗಿ ಹೊಂದಿರುವ ಏಕೈಕ ಮಹಿಳೆ ಡೆಲಿಸಿಯಾ ಎಂಬುದು ವಿಶೇಷ.

ತ್ರಿಶೂರ್ ಜಿಲ್ಲೆಯ ಪೆಟ್ರೋಲ್ ಟ್ಯಾಂಕರ್ ಚಾಲಕ ಡೇವಿಸ್ ಅವರ ಮೂವರು ಪುತ್ರಿಯರಲ್ಲಿ ಡೆಲಿಸಿಯಾ ಎರಡನೇಯವರು. ಡೇವಿಸ್ ಕಳೆದ 40 ವರ್ಷಗಳಿಂದ ಪೆಟ್ರೋಲ್ ಟ್ಯಾಂಕರ್ ಲಾರಿಗಳನ್ನು ಓಡಿಸುತ್ತಿದ್ದಾರೆ.

ಚಿಕ್ಕ ವಯಸ್ಸಿನಲ್ಲಿಯೇ ಡೆಲಿಸಿಯಾ ಲಾರಿ ಚಾಲನೆ ಮಾಡುವ ಉತ್ಸಾಹ ಹೊಂದಿದ್ದರು.ಅವರ ತಂದೆ ಡೇವಿಸ್ ಡೆಲಿಸಿಯಾವನ್ನು ತಮ್ಮ ಜತೆ ಕರೆದೊಯ್ಯುತ್ತಿದ್ದರು.

ತನ್ನ ತಂದೆ ವಾಹನವನ್ನು ನಿರ್ವಹಿಸುತ್ತಿರುವ ರೀತಿ ನೋಡುತ್ತಲೇ ಡೆಲಿಸಿಯಾ ಬೆಳೆದರು. ತಂದೆ ಡೇವಿಸ್ ಸಹಾಯದಿಂದ​ ಮೊದಲ ಬಾರಿಗೆ ಡೆಲಿಸಿಯಾ ಎಂಟನೇ ತರಗತಿಯಲ್ಲಿದ್ದಾಗ ಕಾರು ಓಡಿಸಿದರು.ಕಾರುಗಳನ್ನು ಓಡಿಸುವ ಮೂಲಕ ಆರಂಭವಾದ ಡೆಲಿಸಿಯಾ ಡ್ರೈವಿಂಗ್​ ಆಸಕ್ತಿ ಈಗ ಭಾರೀ ವಾಹನಗಳನ್ನು ಓಡಿಸುವ ಹಂತಕ್ಕೆ ತಲುಪಿದೆ.ಡೆಲಿಸಿಯಾ ಎರ್ನಾಕುಲಂನ ಇರುಂಪಾನಂನಿಂದ ಮಲಪ್ಪುರಂನ ಪೆಟ್ರೋಲ್ ಪಂಪ್ ವರೆಗೆ ಪೆಟ್ರೋಲ್ ತುಂಬಿದ ಟ್ಯಾಂಕರ್ ಟ್ರಕ್ ಅನ್ನು ಓಡಿಸುತ್ತಾರೆ. ಕೆಲವೊಮ್ಮೆ, ಕಲ್ಲಿಕೋಟೆ, ಎಲಾಥೂರ್‌ ನಲ್ಲಿರುವ ದೂರ ದೂರದ ಪೆಟ್ರೋಲ್ ಡಿಪೋಗೆ ಸಹ ಹೋಗಬೇಕಾಗುತ್ತದೆ.

ಮಲ್ಟಿ-ಆಕ್ಸಲ್ ವಾಹನಗಳನ್ನು ಓಡಿಸುವುದು ಅವರ ಮುಂದಿನ ಗುರಿಯಂತೆ. ವೋಲ್ವೋದಂತಹ ಬೃಹತ್ ಮಲ್ಟಿ-ಆಕ್ಸಲ್ ವಾಹನಗಳನ್ನು ಓಡಿಸಲು ಬೆಂಗಳೂರಿನಲ್ಲಿ ತರಬೇತಿ ಪಡೆಯಬೇಕು ಎಂದು ನಿರ್ಧರಿಸಿದ್ದಾರೆ.

22 ವರ್ಷದ ಡೆಲಿಸಿಯಾ ತ್ರಿಶೂರ್ ಸೇಂಟ್ ಥಾಮಸ್ ಕಾಲೇಜಿನಲ್ಲಿ ಬಿ.ಕಾಮ್ ಪದವಿ ಪಡೆದಿದ್ದು, ಎಂ.ಕಾಮ್ ವಿದ್ಯಾಭ್ಯಾಸ ಮುಗಿಸಿದ್ದಾರೆ.

ತನ್ನ ಶೈಕ್ಷಣಿಕ ಅರ್ಹತೆಯ ಹೊರತಾಗಿಯೂ, ಡೆಲಿಸಿಯಾ ಸರ್ಕಾರಿ ಚಾಲಕರಾಗಿ ಕಾರ್ಯ ನಿರ್ವಹಿಸಲು ಬಯಸುತ್ತಾರೆ.ಡೆಲಿಸಿಯಾ ಈಗ ಪೂರ್ಣ ಸಮಯದ ಪೆಟ್ರೋಲ್ ಟ್ಯಾಂಕರ್ ಚಾಲಕಿ. ಈ ಹೆಣ್ಣುಮಗಳ ಕಥೆ ಜೀವನದ ಸಾಧಿಸುವ ಛಲವನ್ನು ಇಮ್ಮಡಿಗೊಳಿಸುತ್ತದೆ ಎಂದು ತಪ್ಪಿಲ್ಲ..

FILM

ಮೊದಲ ಬಾರಿ ಮದುವೆ ರಹಸ್ಯ ಬಿಚ್ಚಿಟ್ಟ ಹಳ್ಳಿಕಾರ್‌ ಒಡೆಯ ವರ್ತೂರು ಸಂತೋಷ್

Published

on

ಬೆಂಗಳೂರು : ಬಿಗ್‌ಬಾಸ್‌ ಕನ್ನಡ ಸೀಸನ್‌ 10ರಲ್ಲಿ ಹಲವು ಸ್ಪರ್ಧಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. ಇದರಲ್ಲಿ ಹುಲಿ ಉಗುರು ಧರಿಸಿದ ಕಾರಣಕ್ಕೆ ಪೊಲೀಸರಿಂದ ಹಳ್ಳಿಕಾರ್‌ ಒಡೆಯ ವರ್ತೂರು ಸಂತೋಷ್‌ ಅವರ ಬಂಧನವಾಗಿತ್ತು. ಈಗ ಮದುವೆ ವಿಚಾರ ಮತ್ತೆ ಮುನ್ನೆಲೆಗೆ ಬಂದು ನಿಂತಿದೆ.

ಬಿಗ್ ಬಾಸ್ ಮನೆಯಲ್ಲಿಯೇ ತಮ್ಮ ಮದುವೆ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ವರ್ತೂರು ಸಂತೋಷ್ ಅವರಿಗೆ ಮದುವೆ ಆಗಿದೆ. ಒಬ್ಬಳು ಹೆಣ್ಣು ಮಗು ಕೂಡ ಇದೆ. ಆದರೆ ಅವರು ಮದುವೆ ಆಗಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕೆಲದಿನಗಳ ಹಿಂದೆ ಸೋಷಿಯಲ್‌ಮೀಡಿಯಾದಲ್ಲಿ ಗುಲ್ಲೆದ್ದಿತ್ತು. ಈಗ ಬಿಗ್ ಬಾಸ್ ಮನೆಯಲ್ಲಿ ಸ್ವತಃ ವರ್ತೂರ್ ಅವರೇ ತಮ್ಮ ಮದುವೆ, ಪತ್ನಿ ಜೊತೆಗಿನ ಭಿನ್ನಾಭಿಪ್ರಾಯಗಳ ಕುರಿತು ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

ಬಿಗ್‌ಬಾಸ್ ಮನೆ ಸೇರಿದಾಗಿನಿಂದ ಈ ವರೆಗೂ ತನಗೆ ಮದುವೆ ಆಗಿದೆ ಎಂಬ ಒಂದೇ ಒಂದು ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿರಲಿಲ್ಲ ವರ್ತೂರು ಸಂತೋಷ್.  ಈಗ ಗುಟ್ಟು ರಟ್ಟಾಗಿದೆ.

‘ವರ್ತೂರ ಸಂತೋಷ್‌ ಒಳಗಡೇ ಏನೈತೆ ಅನ್ನೋದನ್ನು ಹೇಳ್ತಿದ್ದೇನೆ. ನೋಡು ದೊಡ್ಡಪ್ಪ ನೀನು ಹೀಗು ತಾಳಿಕಟ್ಟು ಅಂದ್ರೆ ಕಟ್ಟಿಬಿಡ್ತಿನಿ. ನಾನು ಅವರಿಗೆ ಮಾತು ಕೊಟ್ಟು ಒಪ್ಪಿಕೊಂಡು ಬಿಟ್ಟೆ. ಮದುವೆಯೂ ಆಯ್ತು, ದಿನ ಕಳೆದಂತೆ, ಅಮ್ಮನನ್ನು ಇಗ್ನೋರ್‌ ಮಾಡೋಕೆ ಶುರು ಮಾಡಿದ್ರು. ನಾನು ಸಂಪಾದನೆ ಮಾಡಿದ ಜನರನ್ನು ತೊರೆದು ಇವರ ಹಿಂದೆ ಹೋಗಬೇಕು ಎಂದರೆ ಅದು ಸಾಧ್ಯವಾಗದ ಮಾತು. ಆಗ ಹೆಂಡತಿ ಮನೆ ಹತ್ತಿರ ಹೋಗ್ತಿನಿ. ನನ್ನ ಮಾತಿನ ಪ್ರಕಾರ ಬಂದ್ರೆ, ನೀನು ರಾಣಿನೇ ಎಂದು ಕರೆದೆ. ಮೊದಲು ನೀನು ಗೇಟಿಂದ ಆಚೆ ಹೋಗು ಎನ್ನುತ್ತಾರೆ. ಆವತ್ತು ನಾನು ಮಾತು ಕೊಟ್ಟು ಬಂದಿದ್ದೀನಿ ಇವತ್ತು ಆ ಮಾತಿನ ಮೇಲೆ ನಿಂತಿದ್ದೀನಿ’ ಎಂದಿದ್ದಾರೆ ವರ್ತೂರು.

ಮುಂದೇನಾಗುತ್ತೆ ಅನ್ನುವುದನ್ನ ಇವತ್ತಿನ ಎಪಿಸೋಡ್ ನಲ್ಲಿ ನೋಡ್ಬೇಕಷ್ಟೆ..

Continue Reading

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

LATEST NEWS

Trending