LATEST NEWS
ಬೆಂಗಳೂರಲ್ಲಿ 268 ಮಂದಿಗೆ ಡೆಲ್ಟಾ ವೈರಸ್ ಸೋಂಕು ದೃಢ..!
ಬೆಂಗಳೂರು : ಕರ್ನಾಟಕದಲ್ಲಿ ಪರಿಸ್ಥಿತಿಯನ್ನು ಅಲ್ಲೋಲ ಕಲ್ಲೋಲಗೊಳಿಸಿದ್ದ ಕೊರೊನಾ ಸದ್ಯ ನಿಯಂತ್ರಣದಲ್ಲಿದ್ದಂತೆ ಅತ್ತ ಡೆಲ್ಟಾ ವೈರಸ್ ಬೆಂಗಳೂರಿಗರ ನಿದ್ದೆಗೆಡಿಸಿದೆ.
ಮಹಾನಗರದಲ್ಲಿ ಈವರೆಗೆ 268 ಜನರಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದ್ದು, ಈ ಪೈಕಿ ಇಬ್ಬರಲ್ಲಿ ಕಪ್ಪಾ ವೈರಸ್ 38 ಜನರಲ್ಲಿ ಡೆಲ್ಟಾ ವೈರಾಣುವಿನ ಮತ್ತೊಂದು ಪ್ರಭೇದ ಇರುವುದು ದೃಢಪಟ್ಟಿದೆ.
ಬಿಬಿಎಂಪಿಯಿಂದ ಮನೆ ಮನೆ ಆರೋಗ್ಯ ಸಮೀಕ್ಷೆ ನಡೆಸಲಾಗಿದ್ದು, ಸಮೀಕ್ಷೆಯಲ್ಲಿ 22,362 ಜನರಿಗೆ ಕೊರೊನಾ ಸೋಂಕು ತಗಲಿರುವುದು ಪತ್ತೆಯಾಗಿದೆ.
21 ದಿನಗಳಲ್ಲಿ 7,11,648 ಜನರನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 22,362 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆತಂಕಕಾರಿ ವಿಚಾರವೆಂದರೆ ಸದರಿ ಪರೀಕ್ಷೆಗೆ ಒಳಪಟ್ಟವರೆಲ್ಲರೂ ತಮಗೆ ಸೋಂಕಿಲ್ಲವೆಂದು ಭಾವಿಸಿ ಮನೆಯಲ್ಲೇ ಇದ್ದರು.
ಜೊತೆಗೆ ಯಾವುದೇ ಮೇಲ್ನೋಟದ ರೋಗ ಲಕ್ಷಣಗಳು ಇರಲಿಲ್ಲ. ಆದರೆ, ಬಿಬಿಎಂಪಿ ವೈದ್ಯರ ತಂಡ ಮನೆಗೆ ಬಂದು ತಪಾಸಣೆ ಮಾಡಿದಾಗಲೇ ಸೋಂಕು ಇರುವುದು ಧೃಡವಾಗಿದೆ.
ಇದು ಆಘಾತಕಾರಿ ಬೆಳವಣಿಗೆಯ ಮುನ್ಸೂಚನೆಯಾಗಿದ್ದು ಒಂದು ವೇಳೆ ಹೀಗೆ ಲಕ್ಷಣಗಳಿಲ್ಲದೇ ಸೋಂಕು ಹಬ್ಬುತ್ತಾ ಹೋಗಿ ಏಕಾಏಕಿ ಹೆಚ್ಚಳವಾದಲ್ಲಿ ಮೂರನೇ ಅಲೆ ಗಂಭೀರವಾಗಬಹುದು ಎಂದು ಆತಂಕ ವ್ಯಕ್ತವಾಗಿದೆ.
DAKSHINA KANNADA
ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
DAKSHINA KANNADA
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್ಗಳನ್ನು ದಾಟಿ, ಹಂಪ್ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್ನ ಆನಂದ್ ಜಿಲ್ಲೆಯ ರೇಖಾಬೆನ್ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.
ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.
ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.
FILM
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.
ಧನುಷ್ ಗೌಡ ಅವರು ಸಂಜನಾ ಎಂಬವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಸಂಜನಾ ಧನುಷ್ ಅತ್ತೆಯ ಮಗಳಾಗಿದ್ದು, ಇದು ಅರೆಂಜ್ಡ್ ಮ್ಯಾರೇಜ್ ಆಗಿದೆ.
ಇನ್ನು ಮದುವೆಯಲ್ಲಿ ಕುಟುಂಬದವರು, ಆಪ್ತರು, ಸ್ನೇಹಿತರು ಉಪಸ್ಥಿತರಿದ್ದರು.
ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ.
ಧನುಷ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!
ಭವ್ಯಾ ಗೌಡ, ಮೌನ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಸೇರಿ ಅನೇಕ ಕಿರುತೆರೆ ಹಿರಿತೆರೆ ತಾರೆಯರು ಆಗಮಿಸಿದ್ದರು.
ಮದುವೆ ಸಂಭ್ರಮದ ನಡುವೆಯೂ ಧನುಷ್ ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!