Connect with us

    LATEST NEWS

    ಮಸ್ಕತ್ ನಲ್ಲಿ ಮೇಳೈಸಿದ ದೇವೀ ಮಹಾತ್ಮೆ ಯಕ್ಷಗಾನ

    Published

    on

    ಮಸ್ಕತ್/ಮಂಗಳೂರು: 2016 ರಲ್ಲಿ ಸೇವಾ ಮನೋಭಾವದ ಸಮಾನಾಸಕ್ತದಿಂದ ಮೈದಳೆದ ಬಿರುವ ವಾಟ್ಸಾಪ್ ಗ್ರೂಪ್ ನ ಜವನೆರ್ ಸಂಘಟನೆ ಹಾಗೂ ಇವೆಂಟ್ ಸಂಸ್ಥೆ ಇನ್ಸ್ಪಿರೇಷನ್ ಡಿಸೈನ್ ನ ನೆರಳಲ್ಲಿ ಮಸ್ಕತ್ ನಲ್ಲಿ ಶ್ರೀ ಕಟೀಲು 6 ಮೇಳಗಳ ಆಯ್ದ ಕಲಾವಿದರಿಂದ ಮೇ. 31 ರಂದು ಪ್ರದರ್ಶನಗೊಂಡ ” ಶ್ರೀ ದೇವೀ ಮಹಾತ್ಮೆ” ಯಕ್ಷಗಾನವು ಅಪೂರ್ವ ಯಶಸ್ಸನ್ನು ಕಂಡಿತು.

    ಬಯಲಾಟದ ಸಂಪ್ರದಾಯಿಕ ರಂಗಸ್ಥಳ, ಸಂಘಟಕರೇ ಅಣಿಗೊಳಿಸಿದ ರಥ ಪೀಠ, ಉಯ್ಯಾಲೆ, ಪುಷ್ಪ ಅಲಂಕಾರ, ಬ್ಯಾಂಡ್ ಗರ್ನಲ್, ಹಗಲು ಬತ್ತಿ, ಸುಡುಮದ್ದು ಬಳಸದೆ ತಾಂತ್ರಿಕ ನೈಪುಣ್ಯತೆಯಿಂದ ಗೌಜಿಯ ಬಯಲಾಟ ಸಂಪನ್ನಗೊಂಡಿತು.

    ಮೂರು ದೀಪ ಬೆಳಗಿ ಉದ್ಘಾಟನೆ

    ಕಟೀಲು ಶ್ರೀ ದುರ್ಗಾ ಪರಮೇಶ್ವರಿಯ ಪುಷ್ಪ ಅಲಂಕಾರದ ಸುಂದರ ಚಿತ್ರವನ್ನು ಚೌಕಿ ಪೂಜೆಗೆ ಅಣಿಗೊಳಿಸಲಾಗಿತ್ತು. ಸಮಯಕ್ಕೆ ಸರಿಯಾಗಿ ” ಅಬ್ಬರ ತಾಳ ” ದೊಂದಿಗೆ ಸಭಾಂಗಣವನ್ನು ಮುಂಗಡ ಉಚಿತ ಪಾಸ್ ಪಡೆದು, ಪ್ರಸಾದ ಭೋಜನ ಸ್ವೀಕರಿಸಿ ಬರುವ ಯಕ್ಷಗಾನ ಆಸಕ್ತರಿಗೆ ಮುಕ್ತಗೊಳಿಸಲಾಯಿತು. ‘ಕೇಳಿ ಬಡಿಯುವ’ ಸಮಯದಲ್ಲಿ ಮುಕ್ಕಾಲು ಸಭಾಂಗಣ ತುಂಬಿತ್ತು.

    ಸಂಘಟಕ ಗುರುಪ್ರಸಾದ್ ರಾಮ ಅಮೀನ್ ನಾನಿಲ್ ಅವರು ಸ್ವಾಗತಿಸಿದರು. ಅಕ್ಷತಾ ರಿಷಿಕೇಶ್ ಪ್ರಸ್ತಾವನೆ ಗೈದರು. ಶಾಂತ ರಾಮ ಅಮೀನ್ ನಾನಿಲ್, ಲೀಲಾ ಶೇಖರ್ ಸಾಲಿಯಾನ್, ಸುಚೇತನಾ ಕೆ. ಅಂಚನ್ ಹಾಗೂ ಅತಿಥಿಗಳು ಮೂರು ದೀಪಗಳನ್ನು ಏಕಕಾಲದಲ್ಲಿ ಪ್ರಜ್ವಲಿಸಿದರು.

    ಬಿರುವ ಜವಾನೆರ್‌ನ ಎಂಟು ವರ್ಷ ಗಳ ಸೇವಾಯಾನ ಹಾಗೂ ಸಂಘಟಿಸಿದ ಕಲಾ ಕಾರ್ಯಕ್ರಮ ಗಳ ಮಾಹಿತಿಯನ್ನು ಒಳಗೊಂಡ ” ಮೆಮರೀಸ್ ” ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮಕ್ಕಾಗಿ ಭಾರತದಿಂದ ಬಂದ ಮುಂಬೈಯ ಸೂರ್ಯ ಪ್ರಕಾಶ್ ಜಯಸುವರ್ಣ, ಮಿತ್ರ ಹೆರಾಜೆ, ಗಂಗಾಧರ್ ಪೂಜಾರಿ, ಅನಂದ ಸನಿಲ್, ನಮ್ಮ ಕುಡ್ಲ ಲೀಲಾಕ್ಷ ಬಿ ಕರ್ಕೇರ ಇವರನ್ನು ಓಮಾನ್ ಲಾಂಛನ ಪ್ರತಿಕೃತಿ ನೀಡಿ ಗೌರವಿಸಲಾಯಿತು.

    ಮಂಗಳೂರು ಕುದ್ರೋಳಿ ದೇವಸ್ಥಾನ ದ ಸಮೀಪ ನಿರ್ಮಾಣ ಆಗಲಿರುವ ಶ್ರೀನಾಥ್ ಹೆಬ್ಬಾರ್ ಅವರ ಲ್ಯಾಂಡ್ ಟ್ರೇಡರ್ಸ್ ನ 33 ಮಹಡಿಗಳ ” ಮಹಾಲಕ್ಷ್ಮಿ” ವಸತಿ ಸಮುಚ್ಚಯದ ಬಗ್ಗೆ ಮೋಹನ್ ದಾಸ್ ಸಾಲಿಯಾನ್ ಪಚ್ಚನಾಡಿ ಮಾಹಿತಿ ನೀಡಿದರು. ಅರ್ಥ ಶಾಸ್ತ್ರಜ್ಞ ಡಾ. ಅಂಚನ್ ಉದ್ಯಮಿ ಗಳಾದ ಸಿ. ಕೆ, ಉಮೇಶ್ ಬಂಟ್ವಾಳ್, ನರೇಶ್ ಪೈ ಶುಭ ಹಾರೈಕೆ ಮಾಡಿದರು. ಸುರೇಶ ಭಟ್, ವಾಲ್ಟರ್ ಎಮ್ ಪಿರೇರಾ, ಅಚಲ್ ಮಹಾಬಲ ಶೆಟ್ಟಿ, ದಿನೇಶ್ ಲೋಕನಾಥ್ ಪೂಜಾರಿ, ಶಿವಪ್ರಕಾಶ್ ಕುಂಪಲ ಉಪಸ್ಥಿತರಿದ್ದರು.

    ಇನ್ಸ್ಪಿರೇಷನ್ ಡಿಸೈನ್ ನ ಉತ್ತಮ್ ಕೋಟ್ಯಾನ್ ಧನ್ಯವಾದ ಸಮಾರ್ಪಿಸಿದರು. ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿದರು.

    ಅಗರಿ ಶ್ರೀನಿವಾಸ ಭಾಗವತ ವಿರಚಿತ “ಶ್ರೀ ದೇವೀ ಮಹಾತ್ಮೆ” ಯಕ್ಷಗಾನ ಬಯಲಾಟವು ಬಲಿಪ ಪ್ರಸಾದ ಭಾಗವತ ಹಾಗೂ ದೇವೀ ಪ್ರಸಾದ ಆಳ್ವ ತಲಪಾಡಿ ಇವರು ಭಾಗವತಿಕೆಯಲ್ಲಿ ಜನರನ್ನು ಮನರಂಜಿಸಿದರು.

    ನಿತಿನ್ ಹುನ್ಸೆಕಟ್ಟೆ ಅವರು ಆಯ್ಕೆ ಮಾಡಿದ್ದ ಕಟೀಲು 6 ಮೇಳಗಳ 30 ಕಲಾವಿದರನ್ನು ಒಳಗೊಂಡ ತಂಡದ ಪ್ರಸ್ತುತಿ ಸರ್ವತ್ರ ಶ್ಲಾಘನೆಗೆ ಪಾತ್ರವಾಯಿತು. ಈ ವರ್ಷದ ತಿರುಗಾಟದಲ್ಲಿ ಶ್ರೀ ದೇವಿಯ ಪಾತ್ರ ನಿರ್ವಹಿಸಿದ್ದ ಮೂವರು, ನಾಲ್ವರು ರಕ್ತ ಬೀಜಾಸುರ ಮತ್ತು ಇಬ್ಬರು ಮಹಿಷಾಸುರ ಹಾಗೂ ಚಂಡ ಮುಂಡ ಪಾತ್ರ ನಿರ್ವಹಿಸುವ ನಾಲ್ವರು ಈ ಪ್ರಸಂಗದಲ್ಲಿ ವೇಷಧಾರಿಗಳಾಗಿ ಮಿಂಚಿದ್ದಾರೆ.

    ಉದ್ಯಮಿಗಳ ಮನದ ಮಾತು:

    ಒಮಾನ್ ನ ಪ್ರಸಿದ್ದ ಉದ್ಯಮಿಗಳಾದ ಶಶಿಧರ್ ಶೆಟ್ಟಿ ಮಲ್ಲಾರ್ ಹಾಗೂ ದಿವಾಕರ ಶೆಟ್ಟಿ ಇವರು ಸುಮಾರು 9 ಗಂಟೆಗಳ ಕಾಲ ಕಾರ್ಯಕ್ರಮ ವೀಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಮನದಾಳದ ಮಾತು ಹಂಚಿಕೊಂಡಿರುವ ಇವರು ಬಿರುವ ಜವನೆರ್ ಸಂಘಟನೆ ಮಸ್ಕತ್ ನಲ್ಲಿ ನಡೆಸಿದ್ದ ಎಲ್ಲಾ ಕಾರ್ಯಕ್ರಮಗಳೂ ಯಶಸ್ಸು ಕಂಡಿದೆ. ಇಂದು ಪ್ರದರ್ಶನಗೊಂಡ ಶ್ರೀ ದೇವೀ ಮಹಾತ್ಮೆ ಯಕ್ಷಗಾನ ಬಯಲಾಟ ಮಸ್ಕತ್ ನ ಸಾಂಸ್ಕೃತಿಕ ಚರಿತ್ರೆಯಲ್ಲಿ ಅಪೂರ್ವ ದಾಖಲೆ ನಿರ್ಮಿಸಿದೆ ಎಂದು ಹೇಳಿದ್ದಾರೆ.

    ಒಮಾನ್ ಮಸ್ಕತ್ ನ ರೂಯಿಯ ಆಫಲಾಜ್ ಹೋಟೆಲ್‌ನ ಸಭಾಂಗಣದಲ್ಲಿ ಕಿಕ್ಕಿರಿದು ನೆರೆದ ಪ್ರೇಕ್ಷಕರು ಮೂಕ ವಿಸ್ಮಿತ ರಾಗಿ ಕರುನಾಡಿನ ಹೆಮ್ಮೆಯ ತೆಂಕುತಿಟ್ಟು ಯಕ್ಷಗಾನದ ಸವಿಯನ್ನು ಸವಿದಿದ್ದಾರೆ. ಸಭಾ ಕಲಾಪದಿಂದ ತೊಡಗಿ ಮಂಗಳ ಪದ್ಯ ಆದ ನಂತರ ನಡೆದ ಕಲಾವಿದರ ಗೌರವ, ಸನ್ಮಾನವನ್ನೂ ಅಸ್ಥೆಯಿಂದ ವೀಕ್ಷಿಸಿದ ವಿದೇಶದಲ್ಲಿ ನೆಲೆಸಿರುವ ಬಂಧುಗಳ ಕಲಾಸಕ್ತಿ ಕಲಾವಿದರನ್ನೂ ಭಾವುಕರನ್ನಾಗಿಸಿತು.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending