DAKSHINA KANNADA
ಯಕ್ಷಗಾನ ಮುಂಜಾನೆಯವರೆಗೂ ನಡೆಸಲು ಆಗ್ರಹಿಸಿ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ನಡೆಸಿದ ಭಕ್ತರು
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಅಂದರೆ ಕಟೀಲು ಮೇಳದ ಹರಕೆ ಸೇವೆಯ ಬಯಲಾಟವನ್ನು ಕಾಲಮಿತಿಗೆ ಒಳಪಡಿಸುವುದನ್ನು ವಿರೋಧಿಸಿ ಶ್ರೀ ಕ್ಷೇತ್ರದ ಭಕ್ತಾದಿಗಳು ಇಂದು ಬಜಪೆಯಿಂದ ಕಟೀಲು ಕ್ಷೇತ್ರದವರೆಗೆ ಪಾದಯಾತ್ರೆ ನಡೆಸಿದರು.
ಶ್ರೀ ಕಟೀಲು ಯಕ್ಷಸೇವಾ ಸಮನ್ವಯ ಸಮಿತಿ ಮತ್ತು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಊರುಗಳ ಶ್ರೀ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳು ಹಾಗೂ ಕಾಯಂ ಸೇವಾದಾರರ ಒಕ್ಕೂಟದ ನೇತೃತ್ವದಲ್ಲಿ ನಡೆದ ‘ಶ್ರೀ ಕಟೀಲಮ್ಮನೆಡೆ ಭಕ್ತರ ನಡೆ’ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಹೆಜ್ಜೆ ಹಾಕಿದರು.
ಬೆಳಿಗ್ಗೆ 8:30 ಗಂಟೆಗೆ ಬಜಪೆಯ ಶ್ರೀ ಶಾರದ ಶಕ್ತಿ ಮಂಟಪದ ಬಳಿಯಿಂದ ಹೊರಟ ಪಾದಯಾತ್ರೆಯು ಶಿಬರೂರು, ಎಕ್ಕಾರು ಮಾರ್ಗವಾಗಿ ಸಾಗಿ 11 ಗಂಟೆಗೆ ಕಟೀಲು ಕ್ಷೇತ್ರವನ್ನು ತಲುಪಿತು. ಬಳಿಕ ಭಕ್ತರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಶ್ರೀ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳು ಮತ್ತು ಕಾಯಂ ಸೇವಾದಾರ ಒಕ್ಕೂಟದ ಸದಸ್ಯರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಸನತ್ ಕುಮಾರ್ ಶೆಟ್ಟಿ ಮತ್ತು ಕಟೀಲು ಕ್ಷೇತ್ರದ ಆನುವಂಶಿಕ ಮೊಕ್ತೇಸರ, ಅರ್ಚಕ ವಾಸುದೇವ ಆಸ್ರಣ್ಣ ಅವರಿಗೆ ಕಟೀಲು ಮೇಳದ ಯಕ್ಷಗಾನ ಸೇವೆಯನ್ನು ಪರಂಪರೆಯಂತೆ ರಾತ್ರಿಯಿಂದ ಬೆಳಗಿನವರೆಗೆ ನಡೆಸಬೇಕು.
ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಈ ವರ್ಷದ ತಿರುಗಾಟದಿಂದ ರಾತ್ರಿ 10.30ರೊಳಗೆ ಮುಕ್ತಾಯಗೊಳಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
ಸಮಿತಿಯ ಅಧ್ಯಕ್ಷ ಲೋಕನಾಥ ಶೆಟ್ಟಿ, ಕೃಷ್ಣಪ್ಪ ಪೂಜಾರಿ, ಸುಧಾಕರ ಕಾಮತ್, ಅಶೋಕ್ ಕೃಷ್ಣಾಪುರ, ಶರ್ಮಿಳಾ ಮೊದಲಾದವರು ಉಪಸ್ಥಿತರಿದ್ದರು.
DAKSHINA KANNADA
ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!
ಕಡಬ: ವ್ಯಕ್ತಿಯೊಬ್ಬರು ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ. ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.
ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!
ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಮಾರ್ಚ್1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮೇ 3 ರಂದು ಗಬ್ಬರ್ ಸಿಂಗ್ ತುಳು ಸಿನಿಮಾ ತೆರೆಗೆ
ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.
ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.
ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.
ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್ ಮಾಡಿದ್ದಾರೆ.
ಪ್ರೀಮಿಯರ್ ಶೋ
ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್, ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ ಇದ್ದರು.
DAKSHINA KANNADA
ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ನಿಧನದ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಮ್ಮ
ಸುಳ್ಯ : ಸಹೋದರರಿಬ್ಬರು ಸಾ*ವಿನಲ್ಲೂ ಒಂದಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಅರಂತೋಡು ಗ್ರಾಮದ 82 ವರ್ಷದ ಎಸ್. ಇ. ಅಬ್ದುಲ್ಲಾ ಹಾಗೂ ಮಹಮ್ಮದ್ ಎಸ್. ಇ ಮೃ*ತ ಸಹೋದರರು.
ಅಬ್ದುಲ್ಲಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧ*ನರಾಗಿದ್ದಾರೆ. ಈ ವಿಚಾರ ತಿಳಿದ ಅವರ ಸಹೋದರ ಮಹಮ್ಮದ್ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?
ಇಬ್ಬರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
- FILM6 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA6 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
- bangalore7 days ago
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ