LATEST NEWS
ಸಲ್ಮಾನ್ ಖಾನ್ ಜೊತೆ ಹುಟ್ಟುಹಬ್ಬ ಆಚರಿಸಿದ ಧೋನಿ..! ಪತಿಯ ಆಶೀರ್ವಾದ ಪಡೆದ ಸಾಕ್ಷಿ ಧೋನಿ
ಮುಂಬೈ/ಮಂಗಳೂರು: ಭಾರತದ ಕ್ಯಾಪ್ಟನ್ ಕೂಲ್ ಮಹಿ ತನ್ನ 43 ನೇ ಹುಟ್ಟುಹಬ್ಬವನ್ನು ಬಾಲಿವುಡ್ ಬಾದ್ಶಾ ಸಲ್ಮಾನ್ ಖಾನ್ ಜೊತೆ ಆಚರಿಸಿಕೊಂಡಿದ್ದಾರೆ. ಸತತ ಮೂರು ಬಾರಿ ಭಾರತಕ್ಕೆ ಮೂರು ಐಸಿಸಿ ಟ್ರೋಫಿಗಳನ್ನು ತಂದುಕೊಟ್ಟ ಮಹೇಂದ್ರ ಸಿಂಗ್ ಧೋನಿ ಎಲ್ಲರ ಫೇವರೆಟ್ ಕ್ರಿಕೆಟರ್. ಮೈದಾನದಲ್ಲಿ ಮಾತ್ರವಲ್ಲದೇ ತಮ್ಮ ದೈನಂದಿನ ಜೀವನದಲ್ಲೂ ತುಂಬಾನೇ ಕೂಲ್ ಆಗಿರ್ತಾರಂತೆ ದೋನಿ. ಇದೀಗ ತಮ್ಮ ಹುಟ್ಟುಹಬ್ಬವನ್ನು ಸಲ್ಮಾನ್ ಖಾನ್ ರವರ ಜೊತೆ ಆಚರಿಸಿಕೊಂಡಿದ್ದು ಇವರಿಬ್ಬರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಪೋಸ್ಟ್ ಹಾಕಿ ವಿಶ್ ಮಾಡಿದ ಸಲ್ಮಾನ್
ಸಲ್ಮಾನ್ ಖಾನ್ ತನ್ನ ಸೋಶಿಯಲ್ ಮೀಡಿಯಾ ಇನ್ಸ್ಟಾಗ್ರಾಂ ನಲ್ಲಿ ಧೋನಿ ಸಲ್ಮಾನ್ ಜೊತೆಗೆ ಕೇಕ್ ಕತ್ತರಿಸುವ ಫೊಟೋವನ್ನು ಪೋಸ್ಟ್ ಮಾಡಿದ್ದಾರೆ. ಜೊತೆಗೆ “ಹ್ಯಾಪಿ ಬರ್ತ್ಡೇ ಕ್ಯಾಪ್ಟನ್ ಸಾಹೇಬ್” ಎಂದು ಬರೆದು ಧೋನಿಯನ್ನು ಟ್ಯಾಗ್ ಮಾಡಿದ್ದಾರೆ.
ಪತಿಯ ಪಾದ ಮುಟ್ಟಿ ಆಶೀರ್ವಾದ ಪಡೆದ ಸಾಕ್ಷಿ ಧೋನಿ
ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಮದುವೆ ಪೂರ್ವ ಸಮಾರಂಭದ ಸಂಗೀತ ಕಾರ್ಯಕ್ರಮದಲ್ಲಿ ಧೋನಿ ಹಾಗೂ ಅವರ ಪತ್ನಿ ಪಾಲ್ಗೊಂಡಿದ್ದರು. ಬಾಲಿವುಡ್ ಸೆಲೆಬ್ರೆಟಿಗಳು ಸೇರಿದಂತೆ ನಟ, ನಟಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆ ದಿನ ರಾತ್ರಿ ಪತ್ನಿ ಸಾಕ್ಷಿರವರು ದೋನಿ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ್ದಾರೆ. ಈ ವೇಳೆ ಸಲ್ಮಾನ್ ಖಾನ್ ಕೂಡಾ ಜೊತೆಗಿದ್ದು ವಿಶ್ ಮಾಡಿದ್ದಾರೆ. ಕೇಕ್ ಕಟ್ ಮಾಡಿ ಮೊದಲು ಪತ್ನಿ ಸಾಕ್ಷಿ ತನ್ನಿಸಿದ್ದಾರೆ. ಬಳಿಕ ಸಲ್ಮಾನ್ ಖಾನ್ ಗೆ ಕೇಕ್ ತಿನ್ನಿಸಿದ್ದಾರೆ. ಈ ವೇಳೆ ಧೋನಿ ಪತ್ನಿ ಪತಿಯ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುವುದರ ಮೂಲಕ ಭಾರತೀಯ ಸಂಸ್ಕೃತಿ ಮೆರೆದಿದ್ದಾರೆ.
ತಾಯ್ನಾಡಿಗೆ ಬಂದ ಟೀಂ ಇಂಡಿಯಾಗೆ ಭರ್ಜರಿ ಸ್ವಾಗತ..! ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾದ ಮುಂಬೈ
ಅಭಿಮಾನಿಗಳಿಂದ ಕಟೌಟ್ ಹಾಕಿ ಸಂಭ್ರಮಾಚರಣೆ
ಇನ್ನೂ ಮಹೇಂದ್ರ ಸಿಂಗ್ ಧೋನಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಇವರಿಗೆ ಕ್ರಿಕೆಟ್ ಅಭಿಮಾನಿಗಳಿದ್ದಾರೆ. ಇವರನ್ನು ಕ್ರಿಕೆಟ್ ದೇವರೆಂದೂ ಪೂಜಿಸುವವರೂ ಕೂಡಾ ಇದ್ದಾರೆ. ಮಹೇಂದ್ರ ಸಿಂಗ್ ಧೋನಿ ಅವರು ಟೀಮ್ ಇಂಡಿಯಾದ ಬ್ಲೂ ಜೆರ್ಸಿಯಲ್ಲಿ ಬ್ಯಾಟ್ ಹಿಡಿದ ಬರೋಬ್ಬರಿ 52 ಅಡಿ ಎತ್ತರದ ಕಟೌಟ್ ನಿರ್ಮಿಸಿದ್ದಾರೆ. ಸದ್ಯ ಧೋನಿಯ ಈ ಕಟೌಟ್ ಫೋಟೋವನ್ನು ಅಂತರ್ಜಾಲದಲ್ಲಿ ಕೊಟ್ಯಾಂತರ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ. ಕಳೆದ ಬಾರಿಯೂ ಕೂಡ ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯಲ್ಲಿ ಅಭಿಮಾನಿಗಳು ಧೋನಿಯ 43ನೇ ಜನ್ಮದಿನದ ಗೌರವಾರ್ಥವಾಗಿ 43 ಅಡಿ ಎತ್ತರದ ಕಟೌಟ್ ನಿರ್ಮಿಸಿದ್ದರು. ಕೇರಳದಲ್ಲಿಯೂ 2018 ರಲ್ಲಿ 35 ಅಡಿ ಎತ್ತರದ ಕಟೌಟ್ ನಿರ್ಮಿಸಿದ್ದರು.
DAKSHINA KANNADA
ಅಡವಿಯಲ್ಲಿ ಮಾನವನನ್ನು ಹೋಲುವ ದೈತ್ಯ ಪ್ರಾಣಿ ಪತ್ತೆ..!?
ಮಂಗಳೂರು (ನ್ಯೂಯಾರ್ಕ್ ಪೋಸ್ಟ್ ವರದಿ ) : ಉತ್ತರ ಅಮೆರಿಕಾದ ಜಾನಪದ ಹಿನ್ನಲೆಯುಳ್ಳ ಮನುಷ್ಯನನ್ನು ಹೋಲುವ ದೊಡ್ಡ ಪಾದದ ಜೀವಿಯನ್ನು ಕಾಡಿನಲ್ಲಿ ನೋಡಿರುವುದಾಗಿ ಬಹಳಷ್ಟು ಜನ ಹೇಳಿಕೊಂಡಿದ್ದರು. ಆದ್ರೆ ಇದುವರೆಗೂ ಇದನ್ನು ಅಧಿಕೃತವಾಗಿ ಒಪ್ಪಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದ್ರೆ ಇದೀಗ ವ್ಯಕ್ತಿಯೊಬ್ಬರು ತಾನು ಓಕ್ಲಾಹಾಮಾದ ಲಾಟನ್ನಲ್ಲಿರುವ ಪ್ಯಾರಲಲ್ ಅಡವಿಯಲ್ಲಿ ಈ ಪ್ರಾಣಿಯನ್ನು ನೋಡಿದ್ದಾಗಿ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ಪೋಸ್ಟ್ ಮಾಡಿರುವ ವ್ಯಕ್ತಿ ಇದು ನನ್ನ ಜೀವನದ ಭಯಾನಕ ಕ್ಷಣ ಎಂದು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ನ್ಯೂಯಾರ್ಕ್ ಪೋಸ್ಟ್ ಈ ಕುರಿತಾದ ಒಂದು ವರದಿಯನ್ನು ಪ್ರಕಟಿಸಿದ್ದು, ಅದರಲ್ಲಿ ಈ ದೊಡ್ಡ ಪಾದದ ಪ್ರಾಣಿ ಕಂಡು ಬಂದ ಬಗ್ಗೆ ಬರೆಯಲಾಗಿದೆ. ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ದೈತ್ಯಾಕಾರದ ಮಾನವನನ್ನು ಹೋಲುವ ಪ್ರಾಣಿಯೊಂದು ಮರದ ಬುಡದಲ್ಲಿ ಕುಳಿತು ಅಲ್ಲಿನ ಹೂವನ್ನು ಕೀಳುತ್ತಿರುವ ದೃಶ್ಯ ಸೆರೆಯಾಗಿದೆ. ಕೇವಲ ಒಂಬತ್ತು ಸೆಕೆಂಡ್ ಮಾತ್ರ ಈ ದೃಶ್ಯ ಕಂಡು ಬಂದಿದೆ. ಇಷ್ಟೇ ಅಲ್ಲದೆ ನ್ಯೂಯಾರ್ಕ್ ಪೋಸ್ಟ್ ಈ ಹಿಂದೆ ಇಂತಹ ಪ್ರಾಣಿ ಕಂಡು ಬಂದ ಕ್ಷಣ ಹಾಗೂ ಅದರ 16 ಇಂಚಿನ ಪಾದದ ಹೆಜ್ಜೆ ಗುರುತಿನ ಚಿತ್ರವನ್ನು ಪೋಸ್ಟ್ ಮಾಡಿದೆ.
ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯನ್ನು ಹುಟ್ಟು ಹಾಕಿದ್ದು, ನಿಜವಾಗಿಯೂ ಇಂತಹ ಒಂದು ಜೀವಿ ಇದೆಯಾ ಎಂಬ ಗೊಂದಲ ಸೃಷ್ಟಿಸಿದೆ. ಅನೇಖರು ಅಮೆರಿಕಾದ ಪೌರಾಣಿಕ ಹಿನ್ನಲೆ ಉಳ್ಳ ಜನಪದಲ್ಲಿ ಸೇರಿಕೊಂಡಿರುವ ಈ ಜೀವಿ ಈಗಲೂ ಇದೆ ಎಂದು ವಾದ ಮಂಡಿಸಿದ್ದಾರೆ. ಇನ್ನೂ ಕೆಲವರು ಇದೊಂದು ಅಸ್ಪಷ್ಟ ವಿಡಿಯೋ ಆಗಿದ್ದು ಇದು ನಂಬಿಕೆಗೆ ಅರ್ಹವಾಗಿಲ್ಲ ಎಂದಿದ್ದಾರೆ. ಹಾಗೇ ಇನ್ನೂ ಕೆಲವರು ನಾವೂ ಇದನ್ನು ನೋಡಿದ್ದು, ದೃಶ್ಯ ಸೆರೆ ಹಿಡಿದಿಲ್ಲ ಎಂದಿದ್ದಾರೆ.
ಮನುಷ್ಯಂತೆ ದೇಹ ರಚನೆ ಹೊಂದಿರುವ ದೈತ್ಯಾಕಾರದ ಮೈಮೇಲೆ ರೋಮಗಳನ್ನು ಹೊಂದಿರುವ ಜೀವಿ ಇಂದಿಗೂ ಅರಣ್ಯ ಪ್ರದೇಶದಲ್ಲಿ ಇದೆ ಎಂದು ಅಮೆರಿಕಾದ ಜನರು ನಂಬಿಕೆ ಇಟ್ಟುಕೊಂಡಿದ್ದಾರೆ. ಈ ಜೀವಿಯ ಬಗ್ಗೆ ಅನೇಕ ಕಥೆಗಳಿದ್ದು, ಇದಕ್ಕೆ ವೈಜ್ಞಾನಿಕ ಪುರಾವೆಗಳೂ ಸಿಕ್ಕಿದೆ ಎಂದು ಹೇಳಾಗಿದೆ. ಆದ್ರೆ ಈಗ ಹರಿದಾಡುತ್ತಿರುವ ಈ ವಿಡಿಯೋದ ಸತ್ಯಾಸತ್ಯತೆ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ.
ವಿಡಿಯೋ ವೀಕ್ಷಿಸಲು ಕ್ಲಿಕ್ ಮಾಡಿ :
LATEST NEWS
VIRAL VIDEO: ತಾಯಿಯೊಂದಿಗೆ ಎಂಟು ತಿಂಗಳ ಕಂದಮ್ಮನ ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಣ
ಮಂಗಳೂರು: ಪುಟ್ಟ ಕಂದಮ್ಮಗಳ ಜೊತೆ ತುಸು ಘಳಿಗೆ ಇದ್ದರೂ ಸಿಗುವ ಖುಷಿಯೇ ಬೇರೆ. ಮುಗ್ಧ ಮನಸ್ಸುಗಳು ನಿಸ್ವಾರ್ಥದಿಂದ ಆಡುವ ಪ್ರತಿಯೊಂದು ತೊದಲು ಮಾತನ್ನು ಕೇಳುವಾಗ ಕಿವಿಗೆ ಇಂಪೆನಿಸುತ್ತದೆ. ಮಕ್ಕಳ ಮುದ್ದಾದ ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ತಾಯಿಯೊಂದಿಗೆ ಎಂಟು ತಿಂಗಳ ಮಗುವೊಂದು ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಿಸಿದ್ದು, ಸಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ.
ಅರ್ಜುನನ ಪುತ್ರ ಅಭಿಮನ್ಯು ತಾಯಿಯ ಗರ್ಭದಲ್ಲಿರುವಾಗಲೇ ಚಕ್ರವ್ಯೂಹವನ್ನು ಭೇದಿಸುವ ಕಲೆಯನ್ನು ತಂದೆಯಿಂದ ಕಲಿತಿರುತ್ತಾನೆ. ಅಂತೆಯೇ ಈ ಮಗು ತಾಯಿಯಿಂದ ಶ್ರೀ ಕೃಷ್ಣ ದಾಮೋದರಾಷ್ಟಕಂ ಅನ್ನು ಕಲಿತಿದೆ ಎನ್ನುವ ಸಾಲುಗಳೊಂದಿಗೆ ಈ ವಿಡಿಯೋವನ್ನು Vaidik Gyaan ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಶ್ರೀ ಕೃಷ್ಣ ದಾಮೋದರಾಷ್ಟಕಂ ಶ್ಲೋಕ ಪಠಿಸುತ್ತಿರುವಾಗ ಅದರ ಕೊನೆಯ ಪದವನ್ನು ಮಗುವು ಮುದ್ದಾಗಿ ಉಚ್ಚರಿಸುತ್ತಿದೆ.
ಸಮಾಜಿಕ ಜಾಲತಾಣದಲ್ಲಿ ಅಧಿಕ ವೀಕ್ಷಣೆ ಕಂಡಿದ್ದು. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಮಗುವಿನ ಈ ಆಧ್ಯಾತ್ಮಕ ಸಾಧನೆಯನ್ನು ಒಬ್ಬರು ಹೊಗಳಿದ್ದಾರೆ. ಮತ್ತೊಬ್ಬರು, ಜೈ ಸನಾತನ ಧರ್ಮ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ‘ಮಗುವಿನ ಬಾಯಿಂದ ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಣ ಕೇಳುವುದೇ ಕಿವಿಗೆ ಇಂಪು’ ಎಂದಿದ್ದಾರೆ.
watch this video :
LATEST NEWS
ಪ್ರೀತಿಸಿ ಮಂಗಳಮುಖಿಯನ್ನು ಮದುವೆಯಾದ ಯುವಕ
ಆಂಧ್ರಪ್ರದೇಶ: ಯುವಕನೊಬ್ಬ ಮಂಗಳಮುಖಿಯನ್ನು ಮೂರು ವರ್ಷಗಳಿಂದ ಪ್ರೀತಿಸಿ ಮದುವೆಯಾಗಿರುವ ಘಟನೆ ಆಂಧ್ರಪ್ರದೇಶದ ಎನ್.ಟಿಆರ್ ಜಿಲ್ಲೆಯಲ್ಲಿ ನಡೆದಿದೆ.
ವಿಸ್ಸನ್ನಪೇಟೆ ನಿವಾಸಿ ನಂದು ಮತ್ತು ಎಂಕೂರಿನ ತೃತೀಯಲಿಂಗಿ ನಕ್ಷತ್ರಾ ಮದುವೆಯಾದ ನವ ಜೋಡಿ. ಸದ್ಯ ಇವರಿಬ್ಬರ ಮದುವೆಯ ಫೋಟೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ತೃತೀಯಲಿಂಗಿ ಸಮುದಾಯದ ಪ್ರತಿನಿಧಿಗಳ ಸಮ್ಮುಖದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಇತ್ತೀಚಿಗಷ್ಟೇ ಮದುವೆ ನಡೆದಿದೆ. ನಾನು ಮಂಗಳಮುಖಿಯನ್ನು ಮದುವೆಯಾಗುವುದು ನನ್ನ ಕುಟುಂಬದವರಿಗೆ ಇಷ್ಟವಿಲ್ಲ. ಆದರೆ ನಾವಿಬ್ಬರು ಸುದೀರ್ಘ ಚರ್ಚೆ ನಡೆಸಿ ಮದುವೆಯಾಗಲು ನಿರ್ಧರಿಸಿದೆವು.
- BIG BOSS5 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!
- BIG BOSS5 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- LATEST NEWS4 days ago
Watch Video: ಕೋಚಿಂಗ್ ಸೆಂಟರ್ನಲ್ಲಿ ವಿದ್ಯಾರ್ಥಿನಿಯೊಂದಿಗೆ ಬಯಾಲಜಿ ಶಿಕ್ಷಕನ ರೊಮ್ಯಾನ್ಸ್
- BIG BOSS5 days ago
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್