bangalore
ದರ್ಶನ್ ಜೊತೆಗಿನ ಮನಸ್ತಾಪ ಒಪ್ಪಿಕೊಂಡ ಆ್ಯಕ್ಷನ್ ಪ್ರಿನ್ಸ್ ಧ್ರುವ
‘ದರ್ಶನ್ ಹಿರಿಯ ನಟ, ಸೀನಿಯರ್ಗೆ ಮರ್ಯಾದೆ ಕೊಡುತ್ತೇವೆ. ಉಪಸ್ಥಿತಿ, ಅನುಪಸ್ಥಿತಿಯಲ್ಲೂ ಅವರಿಗೆ ಮರ್ಯಾದೆ ಇರುತ್ತೆ.
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ದರ್ಶನ್ ಹಾಗೂ ಧ್ರುವ ಸರ್ಜಾ ಅವರ ನಡುವೆ ಮನಸ್ತಾಪ ಇದೆ ಎಂಬ ಮಾತುಗಳಿಗೆ ಇದೀಗ ಧ್ರುವ ಸರ್ಜಾ ಪ್ರತಿಕ್ರಿಯೆ ನೀಡಿದ್ದಾರೆ.
‘ದರ್ಶನ್ ಹಿರಿಯ ನಟ, ಸೀನಿಯರ್ಗೆ ಮರ್ಯಾದೆ ಕೊಡುತ್ತೇವೆ. ಉಪಸ್ಥಿತಿ, ಅನುಪಸ್ಥಿತಿಯಲ್ಲೂ ಅವರಿಗೆ ಮರ್ಯಾದೆ ಇರುತ್ತೆ.
ಆದ್ರೆ, ಅವರಿಗೆ ಕೇಳಲು ಎರಡು ಪ್ರಶ್ನೆಗಳಿವೆ.ಮನಸಲ್ಲೊಂದು ನಾಟಕೀಯವಾಗಿ ಹೊರಗೊಂದು ನನ್ನಲ್ಲಿ ಇಲ್ಲ, ನನಗೂ ಸ್ವಾಭಿಮಾನವಿದೆ, ನಾನು ಅವರೊಟ್ಟಿಗೆ ಮಾತಾಡುತ್ತೇನೆ.
ಅವುಗಳನ್ನ ಅವರ ಬಳಿಯೇ ಕೇಳಬೇಕು ಎಂದು ಹೇಳಿದ್ದಾರೆ.ದರ್ಶನ್ ಜೊತೆಗಿರುವ ಮನಸ್ತಾಪ ಬಗ್ಗೆ, ಕೆಲವರು ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಅಪಪ್ರಚಾರ ಮಾಡುತ್ತಿದ್ದಾರೆ.
ಆದರೆ ಹೀಗೆ ಮಾಡಲು ಹೋಗಬೇಡಿ. ಒಂದು ವೇಳೆ ಹೀಗೆ ಅಪಪ್ರಚಾರ ಮಾಡೋದಾದರೆ ನನ್ನ ಬಳಿ ಸಿಕ್ಕಿಹಾಕಿಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಧ್ರುವ ಸರ್ಜಾಹಾಗೂ ದರ್ಶನ್ ಮಧ್ಯೆ ಯಾವುದೂ ಸರಿ ಇಲ್ಲ ಅನ್ನೋದು ಇತ್ತೀಚೆಗೆ ಸ್ಪಷ್ಟವಾಗಿತ್ತು. ಕಾವೇರಿ ಬಂದ್ ದಿನ ನಡೆದ ಪ್ರತಿಭಟನೆಯಲ್ಲಿ ದರ್ಶನ್ ಹಾಗೂ ಧ್ರುವ ಸರ್ಜಾ ಒಟ್ಟಾಗಿ ಕಾಣಿಸಿಕೊಂಡರೂ ಪರಸ್ಪರ ಮಾತನಾಡಿಕೊಳ್ಳಲಿಲ್ಲ.
ಇದೇ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.
bangalore
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅಮ್ಮ ನಿಧನ..!
ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅಮ್ಮ ವಯೋಸಹಜದ ಕಾಯಿಲೆಯಿಂದ ಇಂದು ನಿಧನ ಹೊಂದಿದರು.
ಲೀಲಾವತಿ ಅವರು ಕೆಲವು ಸಮಯದ ಹಿಂದೆ ಆರೋಗ್ಯ ಸಮಸ್ಯೆಯಿಂದ ಬಳಳುತ್ತಿದ್ದರು. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.
ಲೀಲಾವತಿ ಅವರು ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಆರೋಗ್ಯ ಯೋಗ ಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು.
ಸಿನಿಮಾ ರಂಗಕ್ಕೆ ಕಾಲಿಟ್ಟ ಲೀಲಾವತಿ ಅಮ್ಮ ತಮಿಳು, ತೆಲುಗು, ಕನ್ನಡ, ಮಲೆಯಾಳಂ ಸೇರಿದಂತೆ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಹುಟ್ಟಿದ್ದ ಅವರು ಕಿರಿಯ ವಯಸ್ಸಿನಲ್ಲೇ ಸಿನಿಮಾ ರಂಗಕ್ಕೆ ಕಾಲಿಟ್ಟು ಸುಮಾರು ಸಾಧನೆ ಮಾಡಿದ್ದಾರೆ. ಅವರ ಸಾಧನೆಗೆ ಹಲವಾರು ಪುರಸ್ಕಾರಗಳೂ ಸಂದಿವೆ. ಕರ್ನಾಟಕ ಸರಕಾರ ಕೊಡಮಾಡುವ ಜೀವಮಾನ ಸಾಧನೆಗಾಗಿ ಡಾ. ರಾಜ್ ಕುಮಾರ್ ಪ್ರಶಸ್ತಿಯನ್ನು ಪಡೆದಿದ್ದಾರೆ. ತುಮಕೂರ ವಿಶ್ವವಿದ್ಯಾಲಯ ಇವರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
bangalore
ದೈವದ ರೀಲ್ಸ್ ಮಾಡಬೇಡಿ ಎಂದು ರಿಕ್ವೆಸ್ಟ್ ಮಾಡಿದ ಕಾಂತಾರ ರಿಷಬ್ ಶೆಟ್ಟಿ..!!
ಇತ್ತೀಚಿನ ದಿನಗಳಲ್ಲಿ ದೈವದ ಬಗ್ಗೆ ರೀಲ್ಸ್ ಮಾಡೋದು ಹೆಚ್ಚಾಗುತ್ತಿದೆ. ಅಲ್ಲದೆ ವೇದಿಕೆಗಳಲ್ಲೂ ದೈವದ ವೇಷ ಹಾಕಿ ನೃತ್ಯ ಮಾಡುತ್ತಿದ್ದಾರೆ. ಇಂತಹ ವೇಷಗಳು, ನೃತ್ಯಗಳು ಹಾಗೂ ರೀಲ್ಸ್ ಗಳನ್ನು ಮಾಡೋದರಿಂದ ದೈವಾರಾಧಕರಿಗೆ, ದೈವ ನರ್ತಕರಿಗೆ ಬೇಸರ ಆಗ್ತಾ ಇದೆ. ಇದರ ಬಗ್ಗೆ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.
ನಂದಿ ಅವಾರ್ಡ್ ಫಂಕ್ಷನ್ ನಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ‘ಕಾಂತಾರ ಚಿತ್ರ ಬಂದ್ಮೇಲೆ ಒಂದಷ್ಟು ಬೇಸರದ ಸಂಗತಿಗಳೂ ನಡೆದವು. ದೈವದ ರೀಲ್ಸ್ ಮಾಡೋರು ಹೆಚ್ಚಾಗಿದ್ದಾರೆ. ಅದರಿಂದ ದೈವವನ್ನ ನಂಬೋ ಜನರಿಗೆ, ದೈವವನ್ನ ಆರಾಧಿಸೋ ನರ್ತಕರಿಗೆ ಬೇಸರ ಕೂಡ ಆಗಿದೆ. ನನಗೆ ಇವರೆಲ್ಲ ಈ ಒಂದು ಸತ್ಯದ ಬಗ್ಗೆ ಹೇಳ್ತಾನೇ ಇದ್ದಾರೆ. ಹಾಗಾಗಿಯೇ ಈ ಒಂದು ವಿಚಾರವನ್ನು ಮಾಧ್ಯಮದ ಮೂಲಕ ತಿಳಿಸೋಕೆ ಇಷ್ಟಪಡುತ್ತೇನೆ. ಇದರಿಂದ ಇದು ಎಲ್ಲೋ ಒಂದು ಕಡೆಗೆ ಇಡೀ ಕಾಂತಾರ ಚಿತ್ರ ಉದ್ದೇಶಕ್ಕೆ ಕಪ್ಪು ಚುಕ್ಕಿ ಆಗುತ್ತಿದೆ ಅನಿಸುತ್ತಿದೆ. ಇದನ್ನ ಯಾರೂ ಮಾಡ್ಬೇಡಿ. ಇದರಿಂದ ಎಲ್ಲರಿಗೂ ಹರ್ಟ್ ಆಗುತ್ತದೆ’ ಎಂದು ರಿಷಬ್ ಶೆಟ್ಟಿ ಹೇಳಿಕೊಂಡಿದ್ದಾರೆ.
ರೀಲ್ಸ್ ಅನ್ನೋದು ಸದ್ಯದ ಅತಿ ದೊಡ್ಡ ಕಿಚ್ಚಾಗಿದೆ. ಇದರಿಂದ ಒಳ್ಳೆಯ ಎಂಜಾಯ್ ಮೆಂಟ್ ಸಿಗುತ್ತಿದೆ. ಆದರೆ ಇದರ ಎಫೆಕ್ಟ್ ಬೇರೆನೆ ಆಗ್ತಾ ಇದೆ. ಕಾಂತಾರ ದೈವದ ರೀಲ್ಸ್ ಮಾಡೋದರಿಂದಲೇ ತುಳುನಾಡ ದೈವಾರಾಧಕರಿಗೆ, ದೈವ ನರ್ತಕರಿಗೆ, ಬೇಸರ ಆಗುತ್ತದೆ. ನಾನು ಒಬ್ಬ ದೈವ ಭಕ್ತನೇ ಆಗಿದ್ದೇನೆ. ಇದು ನನಗೂ ಬೇಸರ ತರಿಸುತ್ತಿದೆ. ಚಿತ್ರದ ಮೂಲ ಉದ್ದೇಶ ದೈವದ ಶಕ್ತಿ ಮತ್ತು ಸಂಸ್ಕೃತಿಯನ್ನ ಎಲ್ಲೆಡೆ ಹೇಳೋದೇ ಆಗಿದೆ. ಆದರೆ ರೀಲ್ಸ್ ಅನ್ನೋದು ಎಲ್ಲೋ ಒಂದು ಕಡೆಗೆ ಕಪ್ಪು ಚುಕ್ಕೆ ಆಗುತ್ತದೆ ಎಂದು ನೊಂದು ಕೊಂಡು ಹೇಳಿದ್ದಾರೆ. ಕಾಂತಾರ ಚಿತ್ರದಲ್ಲಿ ದೈವಾರಾಧನೆ ಇದೆ. ಇದನ್ನ ಅಷ್ಟೆ ಗೌರವದಿಂದಲೇ ಮಾಡಿದ್ದೇವೆ. ದೈವ ನರ್ತಕರನ್ನ ಸಲಹೆ-ಸೂಚನೆಯಂತೆ ಚಿತ್ರೀರಿಸಿದ್ದೇವೆ. ಇಲ್ಲಿ ದೈವಕ್ಕೆ ಮಾಡಬೇಕಿರೋ ಎಲ್ಲ ಪಾವಿತ್ರ್ಯತೆಯನ್ನು ಅಚ್ಚುಕಟ್ಟಾಗಿಯೆ ಮಾಡಿದ್ದೇವೆ. ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಕಾಂತಾರ ಚಿತ್ರ ಮಾಡಿದ್ದೇವೆ ಎಂದಿದ್ದಾರೆ. ಚಿತ್ರಕ್ಕೆ ಬಂದ ಪ್ರಶಸ್ತಿಯನ್ನ ದೈವ ನರ್ತಕರಿಗೆ, ಕನ್ನಡಿಗರಿಗೆ, ಪವರ್ ಸ್ಟಾರ್ ಪುನೀತ್ ಅವರಿಗೆ ಅರ್ಪಿಸಿದ್ದಾರೆ ಎಂದರು. ಜೊತೆಗೆ ದೈವದ ರೀಲ್ಸ್ ಮಾಡ್ಬೇಡಿ ಅಂತಲೂ ರಿಕ್ವೆಸ್ಟ್ ಮಾಡಿದ್ದಾರೆ.
bangalore
Bigboss: ನಾಯಿ ಮರಿಯಾದ ಬಿಗ್ ಬಾಸ್ ಸಂಗೀತಾ
Bigboss: ಬಿಗ್ ಬಾಸ್ ನಲ್ಲಿ ಸಂಗೀತಾ ಅವರು ಕೆಲವೊಂದು ಟಾಸ್ಕ್ ನಲ್ಲಿ ತೆಗೆದುಕೊಂಡ ನಿರ್ಧಾರ ಫ್ಯಾನ್ಸ್ ಗಳಿಗೆ ಹಿಡಿಸಲಿಲ್ಲ. ಅಲ್ಲಿಂದ ಅವರ ಫ್ಯಾನ್ ಫಾಲೊವರ್ಸ್ ನ ಸಂಖ್ಯೆ ಸುಮಾರು 11 ಸಾವಿರಕ್ಕೂ ಅಧಿಕ ಇಳಿಕೆಯಾಗಿದೆ.
ಕಾರ್ತಿಕ್ ನ ಗುಂಪಿನಲ್ಲಿದ್ದ ಸಂಗೀತಾ ಬಳಿಕ ವಿನಯ್ ತಂಡಕ್ಕೆ ಸೇರಿದ್ದಳೂ. ಇದೀಗ ವಾಪಸು ಕಾರ್ತಿಕ್ ಗುಂಪಿಗೆ ಸೇರಿಕೊಂಡಿದ್ದಾಳೆ.
ಆದರೂ ಕೂಡ ಸಂಗೀತನ ಫ್ಯಾನ್ಸ್ ಗಳಿಗೆ ಈಗ ಸಂಗೀತನ ನಡೆತೆಗಳು ಇಷ್ಟ ಆಗುತ್ತಿಲ್ಲ.
ಇದೀಗ ಬಿಗ್ ಬಾಸ್ ನಲ್ಲಿ ನೀಡಿರುವ ಟಾಸ್ಕ್ ನಲ್ಲಿ ಎಲ್ಲ ಸ್ಪರ್ಧಿಗಳಿ ಒಂದೊಂದು ಟಾಸ್ಕ್ ಕೊಟ್ಟಿದ್ದಾರೆ. ಅದರಲ್ಲಿ ಸಂಗೀತಾಗೆ ಅಳುವ ನಾಯಿಮರಿಯಂತಹ ಟಾಸ್ಕ್ ಸಿಕ್ಕಿದ್ದು, ನಾಯಿಯಂತೆ ಅದರ ಧ್ವನಿಯಂತೆ ಅನುಕರಣೆ ಮಾಡಿದ್ದಾರೆ.
ಇದಕ್ಕೆ ತುಕಾಲಿ ಸಂತೋಷ್ ಸಾಥ್ ನೀಡಿದ್ದಾರೆ. ಅಲ್ಲದೇ ಬಿಗ್ಗ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಮತ್ತು ವರ್ತೂರ್ ಸಂತೋಷ್ಗೆ ಬಿಗ್ ಬಾಸ್ ಸಂಗೀತಾ ಮತ್ತು ಕಾರ್ತಿಕ್ ಅವರನ್ನು ಅನುಕರಿಸುವ ಟಾಸ್ಕ್ ನೀಡಿದ್ದರು. ಅದರಂತೆ ಇಬ್ಬರೂ ಕೂಡ ಆ ಪಾತ್ರವನ್ನು ಭಿನ್ನವಾಗಿ ಮಾಡಿ ಎಲ್ಲ ಸ್ಪರ್ಧಿಗಳನ್ನು ನಕ್ಕು ನಗಿಸಿದ್ದಾರೆ. ಅಲ್ಲದೆ ಸಂಗೀತಾ ಶೃಂಗೇರಿಗೆ ಕರೆಕ್ಟ್ ಆಗಿ ಟಾಂಗ್ ಕೊಟ್ಟಿದ್ದಾರೆ.
ತಮಾಷೆ ಹೋಗಿ ಅಮಾಸೆ ಆಗುತ್ತಾ ಈ ಟಾಸ್ಕ್?
ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9.30 | ಶನಿ-ಭಾನು ರಾತ್ರಿ 9#BBK10 #HappyBiggBoss #KichchaSudeep #ColorsKannada #ಬಣ್ಣಹೊಸದಾಗಿದೆ #ಬಂಧಬಿಗಿಯಾಗಿದೆ pic.twitter.com/jVo8daqbyw
— Colors Kannada (@ColorsKannada) December 4, 2023
- bangalore6 days ago
ಆಸ್ಟ್ರೇಲಿಯಾ ಬೀಚ್ ನಲ್ಲಿ ಮಂಗ್ಳೂರು ಬೆಡಗಿ ಅನುಶ್ರೀ…
- bangalore6 days ago
“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್
- LATEST NEWS7 days ago
ಪ್ರಿಯತಮೆಯ ಕೊಂದು ಆಕೆಯ ಮೃತದೇಹವನ್ನು ಸ್ಟೇಟಸ್ ಹಾಕಿದ ಕ್ರೂರಿ..!
- DAKSHINA KANNADA6 days ago
Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!