DAKSHINA KANNADA
ಅಂತಿಮಗೊಂಡ ಹೆಸರು ಘೋಷಣೆ ಮಾತ್ರ ಬಾಕಿ…! ದಕ್ಷಿಣ ಕನ್ನಡದ ಕೈ ಅಭ್ಯರ್ಥಿ ಆಗ್ತಾರಾ ಪದ್ಮರಾಜ್ …?
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಈಗಾಗಲೇ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿರುವ ಬಿಜೆಪಿ ಒಂದು ಹಂತದಲ್ಲಿ ಪ್ರಚಾರ ಕೂಡಾ ಆರಂಭಿಸಿದೆ. ಇನ್ನು ಜಿಲ್ಲೆಯಲ್ಲಿ ಕಳೆದ ಮೂವತ್ತು ವರ್ಷಗಳಿಂದ ಅಧಿಕಾರ ಹಿಡಿಯಲಾಗದೆ ಸೋತು ಸುಣ್ಣವಾಗಿರುವ ಕಾಂಗ್ರೆಸ್ ಈ ಬಾರಿ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸುವುದು ಪಕ್ಕಾ ಆಗಿದೆ. ಜಿಲ್ಲೆಗೆ ಮೂರು ಕೈ ಅಭ್ಯರ್ಥಿಗಳ ಪೈಕಿ ಯುವ ಬಿಲ್ಲವ ನಾಯಕ ಪದ್ಮರಾಜ್ ರಾಮಯ್ಯ ಅವರಿಗೆ ಟಿಕೇಟ್ ಸಿಗೋದು ಪಕ್ಕಾ ಅನ್ನೋ ಮಾತು ಕೇಳಿ ಬಂದಿದೆ.
ಯುವ ನಾಯಕರ ನಡುವೆ ಫೈಟ್ …!
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅಜೇಯ ಮೂವತ್ತು ವರ್ಷ ಪೂರೈಸಿರುವ ಬಿಜೆಪಿ ಈ ಬಾರಿಯೂ ಗೆಲುವಿನ ನಿರೀಕ್ಷೆಯಲ್ಲಿದೆ. ಮಾಜಿ ಕೇಂದ್ರ ಸಚಿವ ಧನಂಜಯ ಕುಮಾರ್ ಅವರ ಗೆಲುವಿನೊಂದಿಗೆ ಆರಂಭವಾಗಿದ್ದ ಬಿಜೆಪಿಯ ಗೆಲುವಿನ ಪರ್ವ, ಕಳೆದ ಮೂವತ್ತು ವರ್ಷಗಳಿಂದ ನಿರಂತರ ಬಿಜೆಪಿಗೆ ಜಯ ತಂದು ಕೊಟ್ಟಿದೆ. 2014 ರಲ್ಲಿ ಜನಾರ್ದನ ಪೂಜಾರಿ ಕೊನೆಯ ಚುನಾವಣೆ ಎಂದು ಸ್ಪರ್ಧೆ ಮಾಡಿದಾಗ ಗೆಲ್ಲುವ ಎಲ್ಲಾ ಲಕ್ಷಣಗಳಿದ್ರೂ ಮೋದಿ ಹವಾದಲ್ಲಿ ಪೂಜಾರಿಯವರು ಸೋತು ಹೋಗಿದ್ದರು.
2019 ರಲ್ಲೂ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಸ್ವಪಕ್ಷೀಯರಲ್ಲೇ ವಿರೋಧ ಇದ್ರೂ ಮತ್ತೆ ಮೋದಿ ಹವಾದಿಂದ ಗೆಲುವ ದಾಖಲಿಸಿದ್ರು. ಈ ಬಾರಿ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೇಟ್ ಕೈ ತಪ್ಪಿದೆ. ನಳಿನ್ ಬದಲಾಗಿ ಸಂಘದ ನಿಷ್ಠಾವಂತ, ವಿದ್ಯಾವಂತ, ಯುವಕ ಹಾಗೂ ಬಂಟ ಸಮುದಾಯದ ಪ್ರತಿಷ್ಠಿತ ಮನೆತನದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಕೈ ನಾಯಕರು ಈ ಬಾರಿ ಬ್ರಿಜೇಶ್ ಚೌಟಾಗೆ ಸರಿ ಸಮನಾಗಿ ಸ್ಪರ್ಧೆ ನೀಡಬಲ್ಲ ಯುವ ನಾಯಕನಿಗೆ ಮಣೆ ಹಾಕಲಿದ್ದು, ಅದು ಬಿಲ್ಲವ ಮುಖಂಡ ಪದ್ಮರಾಜ್ ರಾಮಯ್ಯ ಅನ್ನೋದು ಖಚಿತವಾಗಿದೆ. ವಿನಯ ಕುಮಾರ್ ಸೊರಕೆ ಹಾಗೂ ರಮಾನಾಥ ರೈ ಸ್ಪರ್ಧೆಯಲ್ಲಿ ಇದ್ರೂ ಸದ್ಯಕ್ಕೆ ಪದ್ಮರಾಜ್ ರಾಮಯ್ಯ ಅವರ ಹೆಸರು ಬಹುತೇಕ ಅಂತಿವಾಗಲಿದೆ.
ಪದ್ಮರಾಜ್ ಅವರಿಗೆ ಅವಕಾಶ ಯಾಕೆ..?
ಬಿಲ್ಲವರ ಸಂಘಟನೆಯಲ್ಲಿ ಪಾತ್ರ ನಿರ್ವಹಿಸಿರುವ ಪದ್ಮರಾಜ್ ರಾಮಯ್ಯ ಕುದ್ರೋಳಿ ಗೋರ್ಣನಾಥೇಶ್ವರ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನು ಪದ್ಮರಾಜ್ ಅವರೇ ಹುಟ್ಟುಹಾಕಿದ ಗುರು ಬೆಳದಿಂಗಳು ಫೌಂಡೇಶನ್, ಸಮಾಜದ ಬಡವರಿಗೆ ಸಾಕಷ್ಟು ಸಹಾಯ ಮಾಡಿದೆ. ಶಿಕ್ಷಣ , ಆರೋಗ್ಯ , ಆಸರೆ ಎಂಬ ಧ್ಯೇಯದೊಂದಿಗೆ ಬಡವರ ಕಣ್ಣೀರು ಒರೆಸುವ ಕೆಲಸವನ್ನೂ ಪದ್ಮರಾಜ್ ಅವರ ಗುರುಬೆಳದಿಂಗಳು ಮಾಡಿಕೊಂಡು ಬಂದಿದೆ. ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಹಾಯ, ಆಸ್ಪತ್ರೆಯಲ್ಲಿರೋ ರೋಗಿಗಳಿಗೆ ಸಹಕಾರ ಹೀಗೆ ಹಲವು ಸಾಮಾಜಿಕ ಕಾರ್ಯದಲ್ಲಿ ಪದ್ಮರಾಜ್ ಗುರುತಿಸಿಕೊಂಡಿದ್ದಾರೆ. ಯುವವಾಹಿನಿ ಸಂಘಟನೆಯನ್ನೂ ಬೆಳೆಸುವಲ್ಲಿ ಪದ್ಮರಾಜ್ ಮಹತ್ವದ ಪಾತ್ರ ವಹಿಸಿದ್ದಾರೆ. ವಕೀಲರಾಗಿರುವ ಇವರು ಧಾರ್ಮಿಕ ಕ್ಷೇತ್ರದಲ್ಲಿ ಸಾಕಷ್ಟು ಸೇವೆ ಸಲ್ಲಿಸಿದ್ದು, ಜನಾರ್ದನ ಪೂಜಾರಿ ಅವರ ಶಿಷ್ಯ ಅನ್ನೋದು ಕೂಡಾ ಅವರ ಆಯ್ಕೆಗೆ ಪ್ರಮುಖ ಕಾರಣವಾಗಿದೆ.
ಅಂತಿಮಗೊಂಡ ಹೆಸರು ಘೋಷಣೆ ಮಾತ್ರ ಬಾಕಿ…!
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪದ್ಮರಾಜ್ ಅವರ ಹೆಸರು ಅಂತಿವಾಗಿರುವ ಬಗ್ಗೆ ಕಾಂಗ್ರೆಸ್ ಮೂಲಗಳು ಸ್ಪಷ್ಟ ಪಡಿಸಿದೆ. ಯಾವುದೇ ಕ್ಷಣದಲ್ಲೂ ಅಭ್ಯರ್ಥಿಗಳ ಘೋಷಣೆ ಮಾಡಲಿರುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಗೆ ಪದ್ಮರಾಜ್ ಅವರನ್ನೇ ಅಂತಿಮಗೊಳಿಸಿದೆ ಎನ್ನಲಾಗಿದೆ. ಪದ್ಮರಾಜ್ ಅವರಿಗೆ ಟಿಕೇಟ್ ಸಿಗೋದು ಬಹುತೇಕ ಖಚಿತವಾಗಿರೋ ಕಾರಣ ಕೈ ಪಾಳೆಯದಲ್ಲೂ ಹೊಸ ಹುರುಪು ಮೂಡಿದೆ. ಈ ಬಾರಿಯಾದ್ರೂ ಬಿಜೆಪಿ ಕೈನಿಂದ ಕ್ಷೇತ್ರವನ್ನು ಕಿತ್ತುಕೊಳ್ಳಲೇ ಬೇಕು ಅನ್ನೋ ಚಾಲೆಂಜಿನಲ್ಲಿದ್ದಾರೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS4 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ