ಬೆಳ್ತಂಗಡಿ : ಅನ್ಯಕೋಮಿನ ಜೋಡಿಯನ್ನು ತಂಡವೊಂದು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಹೊರವಲಯದ ಕನ್ಯಾಡಿಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ದಾದಾಪೀರ್ ಎಂಬಾತ ವಿವಾಹಿತ ಹಿಂದೂ ಮಹಿಳೆಯ ಜತೆಯಾಗಿ ಧರ್ಮಸ್ಥಳಕ್ಕೆ ಬಂದಿದ್ದರು.
ಅವರು ಲಾಡ್ಜ್ನಲ್ಲಿ ರೂಂ ಪಡೆಯಲೆಂದು ಕನ್ಯಾಡಿಗೆ ಬಂದಿದ್ದರು. ಅನುಮಾನ ಬಂದ ಕಾರಣ ಆ ಜೋಡಿಗೆ ರೂಂ ಕೊಟ್ಟಿರಲಿಲ್ಲ.
ಮಾಹಿತಿ ಪಡೆದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಅವರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲೀಸರು ಇಬ್ಬರ ಪೋಷಕರಿಗೂ ಮಾಹಿತಿ ನೀಡಿ ಕರೆಸಿಕೊಂಡಿದ್ದಾರೆ ಎನ್ನಲಾಗಿದೆ.