DAKSHINA KANNADA
ಬ್ರೈನ್ ಸ್ಟ್ರೋಕ್ ನಿಂದ ಮೃತಪಟ್ಟ ದಿಲೀಪ್ ಮೃತದೇಹ ತಾಯ್ನಾಡಿಗೆ; ಮಾನವೀಯತೆ ಮೆರೆದ ಅನಿವಾಸಿ ಕನ್ನಡಿಗರು..!
ಬ್ರೈನ್ ಸ್ಟ್ರೋಕ್ ನಿಂದ ಮೃತಪಟ್ಟ ದಿಲೀಪ್ ಮೃತದೇಹ ತಾಯ್ನಾಡಿಗೆ; ಮಾನವೀಯತೆ ಮೆರೆದ ಅನಿವಾಸಿ ಕನ್ನಡಿಗರು..!
ಮಂಗಳೂರು: ಮಂಗಳೂರಿನ ಕಾವೂರು ನಿವಾಸಿ ಹಾಗೇ ಅನಿವಾಸಿ ಕನ್ನಡಿಗ ದಿಲೀಪ್ ದುಬೈಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು 55 ವರ್ಷ ವಯಸ್ಸಾಗಿದ್ದರೂ ಅವಿವಾಹಿತರಾಗಿದ್ದರು.
ತನ್ನ ತಾಯಿ ಮತ್ತು ಅವಿವಾಹಿತ ಸಹೋದರಿಯರನ್ನು ನೋಡಿಕೊಂಡು ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದರು. ಕಳೆದ 15 ವರ್ಷಗಳಿಂದ ದುಬೈನಲ್ಲಿ ದುಡಿಯುತ್ತಿದ್ದ ದಿಲೀಪ್ ಕಳೆದ ವರ್ಷ ಏಪ್ರಿಲ್ ತಿಂಗಳಿನಲ್ಲಿ ಬ್ರೈನ್ ಸ್ಟ್ರೋಕ್ ಗೆ ಗುರಿಯಾಗಿ ಕೋಮಾವಸ್ಥೆಗೆ ತಲುಪಿದ್ದರು.
ಸತತ ಎಂಟು ತಿಂಗಳಿಂದ ಕೋಮಾದಲ್ಲಿದ್ದ ದಿಲೀಪ್ ಕುಮಾರ್ ಕಳೆದ ಶುಕ್ರವಾರ ನಿಧನರಾಗಿದ್ದಾರೆ. ಇದೀಗ ಅವರ ಮೃತದೇಹವನ್ನು ಇಂಡಿಯನ್ ಕಾನ್ಸುಲೇಟ್ ದುಬೈ, ಕೆ.ಸಿ.ಎಫ್, ಕನ್ನಡಿಗಾಸ್ ಫೆಡರೇಷನ್, ಇಂಡಿಯನ್ ಅಸೋಸಿಯೇಷನ್ ಅಜ್ಮಾನ್ ನೆರವಿನಿಂದ ಕೋವಿಡ್ ಸಂದರ್ಭದಲ್ಲಿ ಪಡೆಯಬೇಕಾದ ಎಲ್ಲಾ ಅನುಮತಿ ಪತ್ರಗಳನ್ನು ಪಡೆದು ತಾಯ್ನಾಡಿಗೆ ಕಳುಹಿಸಲಾಗಿದೆ.
ಅಜ್ಮಾನ್ ಇಂಡಿಯನ್ ಅಸೋಸಿಯೇಷನ್ ನ ಛಾಯದೇವಿ ಕೃಷ್ಣಮೂರ್ತಿಯವರು ದಿಲೀಪ್ ವಿಸಾ, ಇಮಿಗ್ರೇಷನ್, ಡೆತ್ ಸರ್ಟಿಫಿಕೇಟ್ ಪಡೆಯಲು ವ್ಯವಸ್ಥೆ ಮಾಡಿ ಸಹಕರಿಸಿದ್ದಾರೆ.
ಈ ಕಾರಣದಿಂದಾಗಿ ದಿಲೀಪ್ ಮೃತದೇಹ ದುಬೈನಿಂದ ಮಂಗಳೂರಿಗೆ ತಲುಪಿದೆ. ಹಾಗೂ ಮಂಗಳೂರಿನಲ್ಲೂ ಕೆಸಿಎಫ್ ರವರ ಆಂಬ್ಯುಲೆನ್ಸ್ ಮೂಲಕ ದಿಲೀಪ್ ಮೃತದೇಹ ಮನೆಗೆ ತಲುಪಿಸುವ ವ್ಯವಸ್ಥೆಯೂ ನಡೆಯಿತು.ಇನ್ನೂ ‘ದಿಲೀಪ್ ರವರ ಒಬ್ಬ ಸಹೋದರಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಡಯಾಲಿಸಿಸ್ ಮಾಡಿಸುತ್ತಿದ್ದಾರೆ.
ದಿಲೀಪ್ ಆದಾಯವನ್ನೆ ನಂಬಿ ಬದುಕುತ್ತಿದ್ದ ಕುಟುಂಬ, ದಿಲೀಪ್ ಆಸ್ಪತ್ರೆಗೆ ದಾಖಲಾದ ನಂತರ ಹಣದ ಕೊರತೆಯಿಂದ ಕಿಡ್ನಿ ಡಯಾಲಿಸಿಸ್ ಮಾಡಿಸಲಾಗದೆ ಸಹೋದರಿ ಮೃತಪಟ್ಟಿದ್ದಾರೆ. ಇದೀಗ ತಾಯಿ ಮತ್ತು ಇನ್ನೋರ್ವ ಮದುವೆ ವಯಸ್ಸು ಮೀರಿದ ಸಹೋದರಿಗೆ ಆಸರೆ ಇಲ್ಲದಾಗಿದೆ.
ಕೆಸಿಎಫ್ ತಂಡ ಈ ಬಡ ಕುಟುಂಬಕ್ಕೆ ಹಲವು ಬಾರಿ ರೇಷನ್ ವ್ಯವಸ್ಥೆ ಮಾಡಿತ್ತು, ಈಗಲೂ ತಮ್ಮಿಂದಾದ ಸಹಾಯ ಮಾಡುವ ಭರವಸೆ ನೀಡಿದ್ದಾರೆ.
DAKSHINA KANNADA
ಡಿ. 14ರಿಂದ 17 ರವರೆಗೆ “ಆಳ್ವಾಸ್ ವಿರಾಸತ್”
ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಡಿ.14ರಿಂದ 17ರವರೆಗೆ ಮೂಡಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದೊಂದಿಗೆ ನಡೆಯುವ ವಿರಾಸತ್ ಅನ್ನು ದೇಶಕ್ಕಾಗಿ ದೇಹತ್ಯಾಗ ಮಾಡಿದ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ ಮಾಡಲಾಗಿದೆ ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಡಿ.14ರಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ವಿರಾಸತ್ ಉದ್ಘಾಟಿಸಲಿದ್ದು,ಈ ಬಾರಿಯ ವಿರಾಸತ್ ನಲ್ಲಿ ಬೆನ್ನಿದಯಾಲ್, ವಿಜಯಪ್ರಕಾಶ್, ಶ್ರೇಯಾ ಘೋಷಾಲ್ ಸ್ವರ ಮಾಧುರ್ಯ, ಪ್ರತಿನಿತ್ಯ 13 ಗಂಟೆಗಳ ಕಾಲ 750 ಮಳಿಗೆಗಳಲ್ಲಿ ಪ್ರದರ್ಶನ ಹಾಗೂ ಮಾರಾಟಗಳು ನಡೆಯಲಿವೆ. ಭವ್ಯ ಸಾಂಸ್ಕೃತಿಕ ಮೆರವಣಿಗೆ ಬಳಿಕ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ, ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪದರ್ಶನ ಮೇಳ, ಚಿತ್ರಕಲಾ ಮೇಳಗಳು ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಸ್ಕೌಟ್ಸ್ ಗೈಡ್ಸ್ ಸಾಹಸಮಯ ಚಟುವಟಿಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪತ್ರಿಕಾ ಗೋಷ್ಠಿಯಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
BELTHANGADY
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ, ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿಯಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ, ಉಪಾಧ್ಯಕ್ಷರುಗಳಾಗಿ ನಿತಿನ್ ಕಲ್ಮಂಜ ಮತ್ತು ಪ್ರಶಾಂತ್ ಅಂತರ ಕಡಿರುದ್ಯಾವರ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೋದ್ ದಿಡುಪೆ, ಕಾನೂನು ಸಲಹೆಗಾರರಾಗಿ ನವೀನ್ ಬಿ.ಕೆ.ಕಲ್ಮಂಜ, ಯಶವಂತ್ ಬನಂದೂರು ಮತ್ತು ಜಯಾನಂದ ಗೌಡ ಬೆಳ್ತಂಗಡಿ ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಯಶವಂತ ಗೌಡ ಪುದುವೆಟ್ಟು, ಮಂಜುನಾಥ ಗೌಡ ಚಾರ್ಮಾಡಿ, ವಿಕ್ರಮ್ ಧರ್ಮಸ್ಥಳ, ಸತೀಶ್ ಬೆಳಾಲು, ಪ್ರಸಾದ್ ಅಡಿಮಾರ್ ಚಾರ್ಮಾಡಿ, ಹೇಮಂತ್ ಕಳಿಯ, ದಿನೇಶ್ ದೇಂತ್ಯಾರು ಕೊಯ್ಯೂರು, ಪ್ರದೀಪ್ ನಾಗಾಜೆ ನಾವೂರು, ಭರತ್ ಗೌಡ ಪುದುವೆಟ್ಟು, ನಿತೇಶ್ ಬೆಳ್ತಂಗಡಿ, ಅಕ್ಷಯ್ ಕುಮಾರ್ ಮಾಚಾರ್, ಕರುಣಾಕರ ಗೌಡ ಉಜಿರೆ, ಗಿರೀಶ್ ನಿಡ್ಲೆ ಮತ್ತು ಕಿಶಾನ್ ಗೌಡ ಸವಣಾಲು ಇವರನ್ನು ಆಯ್ಕೆ ಮಾಡಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು. ಯಶವಂತ್ ಬನಂದೂರು ಸ್ವಾಗತಿಸಿದರು.ಕಾರ್ಯದರ್ಶಿ ಸುರೇಶ್ ಕೌಡಂಗೆ ವಂದಿಸಿದರು.
BELTHANGADY
ಖೋಟ ನೋಟು ಪ್ರಕರಣ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ..!
ಧರ್ಮಸ್ಥಳ: ಖೋಟ ನೋಟು ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ ಕುಮಾರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಳಿ ಬಸ್ಸು ತಂಗುದಾಣದ ಬಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಘಟನೆ ನಡೆದಿದೆ.
ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಆರೋಪಿ ಕೆಂಪೆರಾಜ್ ಎಂಬಾತನನ್ನು ಚಿಕ್ಕನಾಯಕನಹಳ್ಳಿ ತಾಲೂಕು ಮುಳಬಾಗಿಲು ಬಸ್ಸು ತಂಗುದಾಣದ ಬಳಿಯಿಂದ ಧರ್ಮಸ್ಥಳ ಠಾಣಾ ಪಿ.ಎಸ್.ಐ ಸಮರ್ಥ ಆರ್ ಗಾಣಿಗೇರ್, ಹೆಚ್ ಸಿ 607 ರಾಜೇಶ್ ಎನ್, ಪಿ.ಸಿ 2406 ವಿನಯ ಕುಮಾರ್ ರವರುಗಳ ತಂಡ ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ.
- bangalore6 days ago
ಆಸ್ಟ್ರೇಲಿಯಾ ಬೀಚ್ ನಲ್ಲಿ ಮಂಗ್ಳೂರು ಬೆಡಗಿ ಅನುಶ್ರೀ…
- bangalore6 days ago
“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್
- LATEST NEWS7 days ago
ಪ್ರಿಯತಮೆಯ ಕೊಂದು ಆಕೆಯ ಮೃತದೇಹವನ್ನು ಸ್ಟೇಟಸ್ ಹಾಕಿದ ಕ್ರೂರಿ..!
- DAKSHINA KANNADA7 days ago
Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!