LATEST NEWS
ಐಪಿಎಲ್ಗೆ ಗುಡ್ ಬೈ ಹೇಳಿದ ದಿನೇಶ ಕಾರ್ತಿಕ್..! ಭಾವುಕರಾದ ಡಿ.ಕೆ ಗೆ ವಿರಾಟ್ ಕೊಹ್ಲಿ ಅಪ್ಪುಗೆಯ ಸಾಂತ್ವಾನ
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ನ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ತಂಡ ರಾಜಸ್ಥಾನ್ ರಾಯಲ್ಸ್ ತಂಡದ ಜೊತೆ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 172 ರನ್ ಕಲೆಹಾಕಿತ್ತು. ಆದರೆ ಆರ್ಆರ್ ಈ ಗುರಿಯನ್ನು 19 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್ಗಳ ಜಯ ಸಾಧಿಸಿದೆ.
ಆರ್ಸಿಬಿ ಸೋಲಿನ ಬಳಿಕ ವಿದಾಯ ಘೋಷಣೆ:
ಇನ್ನು ನಿನ್ನೆ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ಸೋಲು ಅನುಭವಿಸಿದ್ದು, ಫೈನಲ್ ಗೆ ಲಗ್ಗೆ ಇಡುವ ಆಸೆ ನುಚ್ಚು ನೂರಾಗಿದೆ. ಪ್ಲೇ ಆಫ್ ನಲ್ಲಿ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ರೋಚಕ ಗೆಲುವಿನ ಬಳಿಕ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿತ್ತು. ಆರ್ಸಿಬಿ ಸೋಲಿನ ಬಳಿಕ ದಿನೇಶ್ ಕಾರ್ತಿಕ್ ಇಂಡಿಯನ್ ಪ್ರೀಮಿಯರ್ ಲೀಗ್ಗೆ ವಿದಾಯ ಹೇಳಿದ್ದಾರೆ. ಸೀಸನ್ 17 ರ ಎಲಿಮಿನೇಟರ್ ಪಂದ್ಯದ ಬಳಿಕ ಆರ್ಸಿಬಿ ತಂಡದ ವಿಕೆಟ್ ಕೀಪರ್ ಡಿ.ಕೆ ಗುಡ್ ಬೈ ಹೇಳಿದ್ದಾರೆ. ಇನ್ನು ರಾಜಸ್ಥಾನ್ ಗೆಲುವಿನ ಬಳಿಕ ಮೈದಾನದಲ್ಲಿ ದಿನೇಶ್ ಕಾರ್ತಿಕ್ ಭಾವುಕರಾಗಿ ಕೊಹ್ಲಿಯನ್ನು ಅಪ್ಪಿಕೊಳ್ಳುತ್ತಾರೆ. ಮೈದಾನದಲ್ಲಿ ಎಲ್ಲರೂ ಚಪ್ಪಾಳೆ ಮೂಲಕ ದಿನೇಶ್ರವರಿಗೆ ವಿದಾಯ ಹೇಳಿದ್ದಾರೆ. ಇನ್ನು ದಿನೇಶ್ ಐಪಿಎಲ್ ನ ಕೊನೆಯ ಪಂದ್ಯದ ಇನ್ನಿಂಗ್ಸ್ ಕನಸು ಕಮರಿ ಹೋಗಿದೆ.
ಮುಂದಿನ ನಡೆ?
ದಿನೇಶ್ ಕಾರ್ತಿಕ್ ಈ ಹಿಂದೆ ಕ್ರಿಕೆಟ್ ಕಾಮೆಂಟೇಟರ್ ಆಗಿದದ್ದರು. ಇದೀಗ ಐಪಿಎಲ್ ನಿಂದ ಹೊರಗುಳಿಯುತ್ತಿರುವ ಡಿ.ಕೆ ಮುಂದೆ ಸ್ಟಾರ್ ಸ್ಪೋರ್ಟ್ಸ್ ಜೊತೆ ಕೈ ಜೋಡಿಸಲಿದ್ದಾರೆ ಎಂದು ಹೇಳಲಾಗಿದೆ. ಇನ್ನು ಐಪಿಎಲ್ ಬಳಿಕ ಟಿ20 ವಿಶ್ವಕಪ್ ಆರಂಭಗೊಳ್ಳಲಿದ್ದು, ಈ ವೇಳೆ ಕಾಮೆಂಟರಿ ಪ್ಯಾನಲ್ನಲ್ಲಿ ಕಾಣಿಸುವ ನಿರೀಕ್ಷೆ ಇದೆ.
Read More..; ನಟಿಗೆ ದುಬಾರಿ IPL ಟಿಕೆಟ್ ಖರೀದಿ ಮಾಡಿದ ‘ದಳಪತಿ ವಿಜಯ್’.! ಆ ನಟಿ ಯಾರು ಗೊತ್ತಾ?
ಐಪಿಎಲ್ ನಲ್ಲಿ ಡಿ.ಕೆ ಸಾಧನೆ:
ಐಪಿಎಲ್ ನಲ್ಲಿ ಒಟ್ಟು 2577 ಪಂದ್ಯಗಳನ್ನಾಡಿದ್ದ ಇವರು 22 ಅರ್ಧ ಶತಕಗಳೊಂದಿಗೆ ಒಟ್ಟು 4842 ರನ್ ಗಳಿಸಿದ್ದಾರೆ. ಅಲ್ಲದೆ ಮಹೇಂದ್ರ ಸಿಂಗ್ ಧೋನಿ ಬಳಿಕ ವಿಕೆಟ್ ಕೀಪರ್ ಆಗಿ ಅತೀ ಹೆಚ್ಚು ಪಂದ್ಯವನ್ನಾಡಿದ ಹೆಗ್ಗಳಿಕೆ ದಿನೇಶ್ ಕಾರ್ತಿಕ್ ಅವರದ್ದು. ಇದೀಗ ಎಲ್ಲಾ ದಾಖಲೆ ಹಾಗೂ ಐಪಿಎಲ್ ಗೆ ದಿನೇಶ್ ಕಾರ್ತಿಕ್ ವಿದಾಯ ಹೇಳುತ್ತಿದ್ದಾರೆ.
dehali
ಸ್ಪೀಕರ್ ಹುದ್ದೆಗೆ ಚುನಾವಣೆ..! ಇತಿಹಾಸದಲ್ಲೇ ಮೊದಲು..!
ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ವಿರೋಧ ಪಕ್ಷಗಳಿಗೆ ಬಿಟ್ಟುಕೊಡಲು ಎನ್ಡಿಎ ಹಿಂದೇಟು ಹಾಕಿದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ.
ಹದಿನೆಂಟನೇ ಲೋಕಸಭೆಯಲ್ಲಿ ಹತ್ತು ವರ್ಷಗಳ ಬಳಿಕ ಇಂಡಿಯಾ ಮೈತ್ರಿಕೂಟ ಪ್ರಬಲ ವಿರೋಧ ಪಕ್ಷವಾಗಿ ಮೂಡಿಬಂದಿದೆ. ಇದೇ ಕಾರಣದಿಂದ ಮೊದಲ ಅಧಿವೇಶನ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಸರ್ಕಾರದ ಪ್ರತಿಯೊಂದು ನಡೆಯನ್ನು ಪ್ರಶ್ನೆ ಮಾಡಲು ಆರಂಭಿಸಿವೆ. ಅಧಿವೇಶನದ ಆರಂಭದಲ್ಲಿ ಹಂಗಾಮಿ ಸ್ಪೀಕರ್ ಆಯ್ಕೆಯಲ್ಲಿ ಹಿರಿಯ ಕಾಂಗ್ರೆಸ್ ಸಂಸದರನ್ನು ಕಡೆಗಣಿಸಿ ಭರ್ತೃಹರಿ ಅವರನ್ನು ನೇಮಿಸಲಾಗಿತ್ತು. ಇದೀಗ 18 ನೇ ಲೋಕಸಭೆಯ ಸ್ಪೀಕರ್ ಆಗಿ ಎನ್ಡಿಎ ನಿಂದ ಓಂ ಬಿರ್ಲಾ ಅವರ ಹೆಸರು ಮತ್ತೆ ಮುಂದಿಡಲಾಗಿದೆ. ಒಮ್ಮತದ ಸ್ಪೀಕರ್ ಆಯ್ಕೆಯ ವಿಚಾರವಾಗಿ ಆಡಳಿತ ಪಕ್ಷ ಮತ್ತು ವಿರೊಧ ಪಕ್ಷದ ನಡುವೆ ನಡೆದ ಮಾತುಕತೆ ವಿಫಲವಾಗಿದೆ.
ಇದನ್ನು ಓದಿ: ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಂಸದ ಬ್ರಿಜೇಶ್ ಚೌಟ
ಓಂ ಬಿರ್ಲಾ ಅವರನ್ನು ಒಮ್ಮತದ ಆಯ್ಕೆಯಾಗಿ ಪರಿಗಣಿಸಲು ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ಕಾನೂನುಬದ್ಧವಾಗಿ ವಿರೋಧ ಪಕ್ಷಕ್ಕೆ ಬಿಟ್ಟು ಕೊಡಲು ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟ ಮನವಿ ಮಾಡಿತ್ತು. ಇದೇ ವಿಚಾರವಾಗಿ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಅವರ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ಕೂಡ ನಡೆದಿತ್ತು. ಆದರೆ ವಿರೋಧ ಪಕ್ಷದ ಮನವಿಗೆ ಎನ್ಡಿಎನಿಂದ ಸಕಾರಾತ್ಮಕ ಉತ್ತರ ಬಾರದ ಹಿನ್ನೆಲೆಯಲ್ಲಿ ವಿರೋಧ ಪಕ್ಷದಿಂದ ಹಿರಿಯ ಕಾಂಗ್ರೆಸ್ ನಾಯಕ ಕೆ. ಸುರೇಶ್ ಅವರನ್ನು ಸ್ಪೀಕರ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ಹೀಗಾಗಿ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಸುವುದು ಅನಿವಾರ್ಯವಾಗಿದೆ.
ಎನ್ಡಿಎ ಒಕ್ಕೂಟಕ್ಕೆ ಸ್ಪಷ್ಟ ಬಹುಮತ ಇರುವ ಕಾರಣ ಓ ಬಿರ್ಲಾ ಅವರು ಸ್ಪೀಕರ್ ಆಗಿ ಆಯ್ಕೆಯಾಗಲು ಯಾವುದೇ ತೊಂದರೆ ಇಲ್ಲ. ಆದ್ರೆ ಸರ್ಕಾರಕ್ಕೆ ಸಹಕರಿಸುವಂತೆ ಮನವಿ ಮಾಡಿದ್ದ ಪ್ರಧಾನಿ ಮೋದಿ ಅವರು ವಿರೋಧ ಪಕ್ಷದ ಜೊತೆ ಸರಿಯಾಗಿ ವರ್ತಿಸುತ್ತಿಲ್ಲ . ಹೀಗಾಗಿ ಅಸಹಕಾರದ ಹೆಜ್ಜೆಯನ್ನು ವಿರೋಧ ಪಕ್ಷ ಇಡಲು ಅವರೇ ಪ್ರೇರೇಪಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
LATEST NEWS
ದಕ್ಷಿಣ ಭಾರತದ ಜೈನ ಮುಖಂಡ, ಬೆಳಗಾವಿಯ ಖ್ಯಾತ ಉದ್ಯಮಿ ರಾವಸಾಹೇಬ ಪಾಟೀಲ ಇನ್ನಿ*ಲ್ಲ
ಬೆಳಗಾವಿ: ದಕ್ಷಿಣ ಭಾರತ ಜೈನ ಸಮಾಜದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ರಾವಸಾಹೇಬ ಪಾಟೀಲ ಅವರು ನಿಧ*ನರಾಗಿದ್ದಾರೆ. ರಾವಸಾಹೇಬ ಪಾಟೀಲರು ಜೈನ ಮುಖಂಡರು, ಖ್ಯಾತ ಉದ್ಯಮಿಯೂ ಆಗಿದ್ದರು.
ಖ್ಯಾತ ಉದ್ಯಮಿ ರಾವಸಾಹೇಬ ಪಾಟೀಲರಿಗೆ 80 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹಿರಿಯ ಸಹಕಾರಿ ಧುರೀಣರು, ಸಾಮಾಜಿಕ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಇವರು ಇಂದು ಬೆಳಗ್ಗೆ ಇ*ಹಲೋಕವನ್ನು ತ್ಯ*ಜಿಸಿದ್ದಾರೆ.
ರಾವಸಾಹೇಬ ಪಾಟೀಲರ ನಿ*ಧನದ ಹಿನ್ನೆಲೆಯಲ್ಲಿ ಕುಟುಂಬಸ್ಥರು, ಅಭಿಮಾನಿಗಳ ಆಂ*ಕ್ರದನ ಮುಗಿಲು ಮುಟ್ಟಿದೆ. ಮೃ*ತರ ಹುಟ್ಟೂರಾದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೊರಗಾಂವ ಪಟ್ಟಣದಲ್ಲಿ ಇಂದು ಸಂಜೆ ಅಂ*ತ್ಯಸಂ*ಸ್ಕಾರ ನಡೆಯಲಿದೆ.
ರಾವಸಾಹೇಬ ಪಾಟೀಲರು ಅರಿಹಂತ ಉದ್ಯೋಗ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾಗಿದ್ದರು. ಹಲವಾರು ಉದ್ಯಮ ಜೊತೆಗೆ ಅರಿಹಂತ ಬ್ಯಾಂಕ್ ಶಾಖೆಗಳನ್ನ ಹೊಂದಿದ್ದರು. ಸದ್ಯ ದಕ್ಷಿಣ ಭಾರತ ಜೈನ ಸಮಾಜದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
LATEST NEWS
ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಮನೆಯಲ್ಲಿ ಅ*ಗ್ನಿ ಅವಘಡ
ಮಂಗಳೂರು/ಶಿರಸಿ : ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಮನೆಯಲ್ಲಿ ಮಂಗಳವಾರ(ಜೂ.25) ಅ*ಗ್ನಿ ಅವಘ*ಡ ಸಂಭವಿಸಿದೆ.
ಶಿರಸಿಯ ಕೆ.ಎಚ್.ಬಿ. ಕಾಲೋನಿಯಲ್ಲಿರುವ ಅನಂತಕುಮಾರ್ ಹೆಗಡೆಯವರ ಮನೆಯೊಳಗಿನ ಜಿಮ್ನಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂ*ಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ.
ಬೆಂ*ಕಿಯಿಂದ ಜಿಮ್ನಲ್ಲಿ ಇದ್ದ ಹಲವು ಉಪಕರಣಗಳಿಗೆ ಹಾನಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮಾಜಿ ಸಂಸದ ಮತ್ತು ಅವರ ಕುಟುಂಬದವರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಘಟನೆ ನಡೆದಿದೆ.
Pingback: ಟೀಂ ಇಂಡಿಯಾ ಕೋಚ್ ಹುದ್ದೆಗೆ ಮೋದಿ, ಶಾ, ಶಾರುಖ್, ಧೋನಿ, ಸಚಿನ್ ಅರ್ಜಿ..! ಅಸಲಿಯತ್ತೇನು? - NAMMAKUDLA NEWS - ನಮ್ಮಕುಡ್ಲ ನ್ಯ