ಮಂಗಳೂರು ನಗರ ಉತ್ತರದಲ್ಲಿ ಫಲಾನುಭವಿಗಳಿಗೆ 400 ಕಿಟ್ ವಿತರಣೆ..
ಮಂಗಳೂರು ನಗರ ಉತ್ತರದಲ್ಲಿ ಫಲಾನುಭವಿಗಳಿಗೆ 400 ಕಿಟ್ ವಿತರಣೆ..
ಮಂಗಳೂರು: ದೇಶವೇ ಕೊರೊನಾ ಎಂಬ ಮಹಾಮಾರಿಯಿಂದ ಲಾಕ್ಡೌನ್ ಆಗಿರುವಾಗ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಇದರಿಂದ ತೊಂದರೆಯಾದ ಕಾರಣ ಅವರಿಗೆ ಆಸರೆ ಆಗುವ ನಿಟ್ಟಿನಲ್ಲಿ,
ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ 15ನೇ ವಾರ್ಡಿನ ವತಿಯಿಂದ 400 ದಿನನಿತ್ಯದ ಸಾಮಗ್ರಿಗಳ ಕಿಟ್ ಗಳನ್ನು ಶಾಸಕರಾದ ಡಾ.ಭರತ್ ಶೆಟ್ಟಿ ಹಾಗೂ 15ನೇ ವಾರ್ಡಿನ ಮ.ನ.ಪ ಸದಸ್ಯೆ ಶ್ರೀಮತಿ ಸುಮಂಗಲಾ ರಾವ್ ಅವರ ನೇತೃತ್ವದಲ್ಲಿ ವಿತರಿಸಲಾಯಿತು.
ಈ ಕಷ್ಟಕರ ಪರಿಸ್ಥಿತಿಯಲ್ಲಿ ದಿನನಿತ್ಯದ ಸಾಮಗ್ರಿಗಳ ದಾನಕ್ಕೆ ಮುಂದಾದ ಹರೀಶ್ ಶೆಟ್ಟಿ ಬೋಂದೆಲ್, ಗೋಲ್ಡನ್ ಪ್ರಾಪರ್ಟಿಯ ಮಾಲಕರಾದ ಅನಿಲ್ ಕುಮಾರ್ ಹಾಗೂ
ಬಿಜೆಪಿ ಉತ್ತರ ಮಂಡಲದ ಅಲ್ಪಸಂಖ್ಯಾತರ ಮೋರ್ಚಾದ ಅಧ್ಯಕ್ಷರಾದ ಶಾನವಾಜ್ ಕೂಳೂರು ಅವರನ್ನು ಶಾಸಕರಾದ ಭರತ್ ಶೆಟ್ಟಿಯವರು ಶ್ಲಾಘಿಸಿ, ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮ.ನ.ಪ ಸದಸ್ಯರಾದ ಶರತ್ ಕುಮಾರ್, ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕರಾದ ರಂದೀಪ್ ಕಾಂಚನ್, ಉತ್ತರ ಮಂಡಲ ಯುವ ಮೋರ್ಚಾದ ಕಾರ್ಯದರ್ಶಿಯಾದ ಸೀತೇಶ್ ಕೊಂಡೆ,
ವಾರ್ಡ್ ಅಧ್ಯಕ್ಷರಾದ ಜಗದೀಶ್ ಶೆಟ್ಟಿ, ರಮೇಶ್ ಕೋಟ್ಯಾನ್, ಜಗದೀಶ್, ಬಿನ್ನು, ಸತೀಶ್ ಆಳ್ವ ಮುಡೇರ್, ಶಿವರಾಜ್, ಪ್ರಕಾಶ್, ರಮೇಶ್ ಕೂಳೂರು, ಪ್ರಕಾಶ್ ರಾವ್, ಸೋಮಶೇಖರ್, ಬಾಲಕೃಷ್ಣ, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
DAKSHINA KANNADA
ಹಳ್ಳ ಹಿಡಿದ ಸ್ಮಾರ್ಟ್ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್
ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್ ಪಾಸ್ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.
ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.
ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ; ಓರ್ವ ಬಂಧನ
ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.
LATEST NEWS
11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ
ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.
ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
FILM
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.
ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.
ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!
ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್ಮೆಂಟ್ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್ಮೆಂಟ್ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.