Connect with us

    LATEST NEWS

    ಪದ್ಮಶ್ರೀ ತುಳಸಿ ಗೌಡ ದೆಹಲಿ ಪ್ರಯಾಣಕ್ಕೆ ಆರ್ಥಿಕ ಸಹಾಯ ಮಾಡದ ಜಿಲ್ಲಾಡಳಿತ; ವ್ಯಾಪಕ ಟೀಕೆ

    Published

    on

    ಕಾರವಾರ: ಈ ವಾರದ ಆರಂಭದಲ್ಲಿ ಭಾರತ ಸರ್ಕಾರ ದೇಶದ ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ನೀಡಿತು.

    ರಾಜ್ಯದ ಐವರು ಸಾಧಕರು ಪದ್ಮ ಪ್ರಶಸ್ತಿಗಳಿಗೆ ಭಾಜನರಾದರು. ಹಾಲಕ್ಕಿ ಸಮುದಾಯದ ತುಳಸಿ ಗೌಡ ಅವರಿಗೆ ಪದ್ಮಶ್ರೀ ನೀಡಿ ಗೌರವಿಸಲಾಯಿತು.


    ಯಾವುದೇ ಆಡಂಬರ ಇಲ್ಲದೆ, ಬರಿಗಾಲಲ್ಲಿ ನಡೆದು ಹೋಗಿ ಪ್ರಶಸ್ತಿ ಪಡೆದ ವೃಕ್ಷಮಾತೆ ಇಡೀ ದೇಶದ ಗಮನ ಸೆಳೆದರು.

    ರಾಷ್ಟ್ರಪತಿ ಅವರಿಂದ ಪ್ರಶಸ್ತಿ ಪಡೆಯುವ ಮುನ್ನ ಪ್ರಧಾನಿ ಮೋದಿ ಅವರಿಗೆ ತುಳಸಿಗೌಡ ಅವರು ವಂದಿಸಿದ ವಿಡಿಯೋ ವೈರಲ್​ ಸಹ ಆಗಿತ್ತು.

    ಇದರ ಬೆನ್ನಲ್ಲೇ ಸಾಧಕಿ ತುಳಸಿಗೌಡ ವಿಚಾರದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ನಿರ್ಲಕ್ಷ್ಯವಹಿಸಿರುವ ಆರೋಪ ಕೇಳಿ ಬಂದಿದೆ.

    ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಅವರಿಗೆ ಪ್ರಶಸ್ತಿ ಸ್ವೀಕಾರಕ್ಕೆ ತೆರಳಲು ಉತ್ತರ ಕನ್ನಡ ಜಿಲ್ಲಾಡಳಿತ ವ್ಯವಸ್ಥೆ ಮಾಡದ್ದಕ್ಕೆ ಇದೀಗ ಜಿಲ್ಲೆಯಲ್ಲಿ ಅಸಮಾಧಾನ ವ್ಯಕ್ತವಾಗಿದೆ.

    ಸಮಾರಂಭಕ್ಕೆ ತೆರಳುವ ಮುನ್ನ ಗೌರವ ನೀಡಿ, ಆರ್ಥಿಕ ನೆರವು ನೀಡಬೇಕಾಗಿತ್ತು ಎಂಬ ಕೂಗು ಹೇಳಿ ಬಂದಿದೆ.


    ವರ್ಷಕ್ಕೆ 30 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟು, ಅವುಗಳನ್ನು ಪೋಷಿಸಿದ ತುಳಸಿ ಗೌಡರ

    ಪರಿಸರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಿತ್ತು. ಅಕ್ಟೋಬರ್ ತಿಂಗಳಿನಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಹಾಜರಾಗಲು ಆಹ್ವಾನಿಸಲಾಗಿತ್ತು.

    ಆದರೆ ಜಿಲ್ಲಾಡಳಿತ ಅವರಿಗೆ ನವದೆಹಲಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತೆರಳಲು ಯಾವುದೇ ವ್ಯವಸ್ಥೆ ಮಾಡಿಕೊಟ್ಟಿರಲಿಲ್ಲ.

    ತಮ್ಮದೆ ಸ್ವಂತ ಖರ್ಚು ಮತ್ತು ಆದಿ ಚುಂಚನಗಿರಿ ಮಠದ ಸಹಾಯಹಸ್ತದಿಂದ ದೆಹಲಿಗೆ ತೆರಳಿ ತುಳಸಿ ಗೌಡ ಪ್ರಶಸ್ತಿ ಪಡೆದು ಬಂದಿದ್ದಾರೆ.

    ಹೋಗುವ ಮುನ್ಸೂಚನೆ ಜಿಲ್ಲಾಡಳಿತಕ್ಕೆ ಗೊತ್ತಿದ್ದರು ಕೂಡಾ ಜಿಲ್ಲಾಡಳಿತ ತುಳಸಿ ಗೌಡರನ್ನ ನಿರ್ಲಕ್ಷ್ಯ ಮಾಡಿದ್ದು ತಪ್ಪು ಎಂದು ಜಿಲ್ಲೆಯ ಜನ ಮತ್ತು ಹಾಲಕ್ಕಿ ಸಮುದಾಯದವರು ಜಿಲ್ಲಾಡಳಿತ ವಿರುದ್ದ ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.

    ಕನಿಷ್ಟ ಪಕ್ಷ ಜಿಲ್ಲಾಡಳಿತ ಅಧಿಕಾರಿಗಳು ತುಳಸಿಗೌಡರನ್ನ ಮಾತನಾಡಿಸಿ ಕಳಿಸಬಹುದಿತ್ತು ಎನ್ನುತ್ತಿದ್ದಾರೆ.
    ತುಳಸಿ ಗೌಡ ದೆಹಲಿಗೆ ತೆರಳಲು ಹಾಲಕ್ಕಿ ಸಮುದಾಯದ ಮುಖಂಡರು, ಜಿಲ್ಲೆಯ ಪ್ರಮುಖರು ಒಂದಷ್ಟು ಹಣ ಕೂಡಿಸಿ ದೆಹಲಿ ಪ್ರಯಾಣಕ್ಕೆ ತೆರಳಲು ವ್ಯವಸ್ಥೆ ಮಾಡಿಕೊಟ್ಟಿದ್ದರು.

    ಅಲ್ಲದೇ ಅಂಕೋಲಾದ ಮನೆಯಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ತೆರಳಲು ಕಾರು ಹಾಗೂ ಅಲ್ಲಿಂದ ದೆಹಲಿಗೆ ತೆರಳಲು ವಿಮಾನದ ಟಿಕೆಟ್ ವ್ಯವಸ್ಥೆಯನ್ನೂ ಆದಿಚುಂಚನಗಿರಿ ಮಠದವರು ಮಾಡಿಕೊಟ್ಟಿದ್ದರು.

    ಆದರೆ ಜಿಲ್ಲಾಡಳಿತವಾಗಲಿ, ತಾಲೂಕಾಡಳಿತವಾಗಲಿ ಅವರನ್ನು ಸಂಪರ್ಕ ಕೂಡ ಮಾಡಿರಲಿಲ್ಲ ಎನ್ನಲಾಗಿದೆ.

    ಆದರೆ ದೆಹಲಿಗೆ ಹೊರಡುವ ದಿನ ರಾತ್ರಿ ಮಾತ್ರ ಕಾಟಾಚಾರಕ್ಕೆ ತಾಲೂಕಾಡಳಿತದ ಅಧಿಕಾರಿಗಳು ಭೇಟಿ ಮಾಡಿದ್ದರೆನ್ನಲಾಗಿದೆ.

    ಕೊನೆ ಕ್ಷಣದಲ್ಲಿ ಬಂದು ಮುಖ‌ ತೋರಿಸಿದ ಅಧಿಕಾರಿಗಳ ವಿರುದ್ದ ಕೂಡಾ ಅಸಮಧಾನ ವ್ಯಕ್ತವಾಗಿದೆ.
    ಅರಣ್ಯ ಸೇವೆ ವಿಭಾಗದಲ್ಲಿ ತುಳಸಿ ಗೌಡರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಿದ್ದರೂ,

    ಬೀಳ್ಕೊಡುವ ಸಮಾರಂಭದಲ್ಲಿ ಅರಣ್ಯ ಇಲಾಖೆಯ ಯಾವ ಅಧಿಕಾರಿಗಳೂ ಪಾಲ್ಗೊಂಡಿರಲಿಲ್ಲ. ಹೀಗಾಗಿ ಅಂದು ಕೂಡ ಸ್ಥಳೀಯರು ಅಸಮಾಧಾನ ಹೊರಹಾಕಿದ್ದರು.

    ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ನಾವು ತುಳಸಿ ಗೌಡರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ.

    ಆದರೆ ತಕ್ಷಣ ಸಮಾರಂಭ ಘೋಷಣೆಯಾಗಿ ಹೋಗುವಾಗ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ.

    ಅವರು ಬೆಂಗಳೂರಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಜಿಲ್ಲೆಗೆ ಬರುವಾಗ ಅವರನ್ನು ಗೌರವಪೂರ್ವಕವಾಗಿ ಸ್ವಾಗತಿಸಿ ಜಿಲ್ಲಾಡಳಿತದಿಂದ ಅದ್ಧೂರಿಯಾಗಿ ಗೌರವಿಸುವುದು ನಮ್ಮ ಕರ್ತವ್ಯ ಹಾಗೂ ವೈಯಕ್ತಿಕ ಅಭಿಪ್ರಾಯ ಕೂಡ ಎಂದಿದ್ದಾರೆ.

    ಹೋಗುವಾಗ ಇಲ್ಲದ ವ್ಯವಸ್ಥೆ ಗೌರವ ಬಂದ ಮೇಲೆ ಯಾಕೆ ಎಂಬ ಕೂಗು ಜನರಿಂದ ಕೇಳಿ ಬಂದಿದೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending