Connect with us

    ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್- ಉಪಮೇಯರ್ ವೇದಾವತಿ ಆಯ್ಕೆ

    Published

    on

    ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್, ಉಪಮೇಯರ್ ವೇದಾವತಿ ಆಯ್ಕೆ

    ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 21 ನೇ ಅವಧಿಗೆ ಮೇಯರ್-ಉಪಮೇಯರ್ ಚುನಾವಣೆ ನಡೆದಿದ್ದು, ಕಂಟೋನ್ಮೆಂಟ್ ವಾರ್ಡ್ ನ ದಿವಾಕರ್ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇನ್ನು ಉಪಮೇಯರ್ ಆಗಿ ಕುಳಾಯಿ ವಾರ್ಡ್ ಸದಸ್ಯೆ ವೇದಾವತಿ ಆಯ್ಕೆಯಾದರು.

    60 ವಾರ್ಡ್ ಗಳಲ್ಲಿ 44 ಸಂಖ್ಯಾಬಲ ಹೊಂದಿದ್ದ ಬಿಜೆಪಿಗೆ ಕಾಂಗ್ರೆಸ್ ಎಲ್ಲೂ ಸವಾಲಾಗಲಿಲ್ಲ. ಹಿಂದುಳಿದ ವರ್ಗ ಎ ಮೀಸಲಾತಿ ಹೊಂದಿದ್ದ ಮೇಯರ್ ಸ್ಥಾನಕ್ಕೆ ಮೂರು ಬಾರಿ ಕಾರ್ಪೊರೇಟರ್ ಆಗಿ ಆಯ್ಕೆಯಾದ ದಿವಾಕರ್ ಪಾಂಡೇಶ್ವರ್ ಆಯ್ಕೆಯಾದ್ರೆ, ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಮೇಯರ್ ಸ್ಥಾನಕ್ಕೆ ವೇದಾವತಿ ಆಯ್ಕೆಯಾದರು.

     

    ಇನ್ನು ಬಿಜೆಪಿಗೆ ಶಾಸಕದ್ವಯರಾದ ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ಹಾಜರಿದ್ದು ಬಲ ತುಂಬಿದ್ರು.. ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಉಪಸ್ಥಿತರಿದ್ದರು. 14 ಸದಸ್ಯ ಬಲ ಹೊಂದಿರೋ ಕಾಂಗ್ರೆಸ್ ನಿಂದ ಕೇಶವ ಮರೋಳಿ ಮೇಯರ್ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಇನ್ನು ಎರಡು ಸದಸ್ಯ ಬಲ ಹೊಂದಿರೋ ಎಸ್ಡಿಪಿಐ ಅಭ್ಯರ್ಥಿಗಳು ತಟಸ್ಥರಾದರು.

    ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ವಿ. ಯಶವಂತ್ ಚುನಾವಣೆ ಪ್ರಕ್ರಿಯೆಯನ್ನ ನಡೆಸಿದ್ರು. ಕೈ ಎತ್ತುವ ಮೂಲಕ ಸದಸ್ಯರು ತಮ್ಮ ಅಭ್ಯರ್ಥಿಗಳ ಪರ ಮತಚಲಾಯಿಸಿದ್ರು. ಮೇಯರ್-ಉಪಮೇಯರ್ ಚುನಾವಣೆ ಹಿನ್ನೆಲೆ ಪಾಲಿಕೆ ಕಚೇರಿಗೆ ಮಧ್ಯಾಹ್ನದವರೆಗೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿತ್ತು.

    ಇನ್ನು ನೂತನ ಮೇಯರ್ ಆಗಿ ಅಧಿಕಾರ ವಹಿಸಿಕೊಂಡಿರುವ ದಿವಾಕರ್‌ ಅವರು ಪ್ರಥಮ ಹೇಳಿಕೆಯಲ್ಲೇ, ಸಂಸದರು, ಶಾಸಕರು ಹಾಗೂ ಪಾಲಿಕೆಯ ಹಿರಿಯ ಸದಸ್ಯರ ಜತೆ ಚರ್ಚಿಸಿ ಮುಂದಿನ ಸಭೆಯಲ್ಲೇ ನೀರಿನ ದರ ಏರಿಕೆ ಕುರಿತಂತೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿದ್ದೆ. ಆದರೆ ಇಂದು ಪಕ್ಷ ತನ್ನನ್ನು ಈ ಮಟ್ಟಕ್ಕೆ ಬೆಳೆಸಿದೆ ಆದ್ದರಿಂದ ಪಕ್ಷಕ್ಕೆ ಚಿರಋಣಿ. ವಿಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಪ್ಪುಚುಕ್ಕೆ ಬರದಂತೆ ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ. ವ್ಯಾಪಾರ ಪರವಾನಿಗೆಯಲ್ಲಿ ತ್ಯಾಜ್ಯ ಶುಲ್ಕ ಹೆಚ್ಚಿರುವ ಬಗ್ಗೆಯೂ ದೂರು ಇದ್ದು, ಈ ಬಗ್ಗೆಯೂ ಸಹ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

     

    Click to comment

    Leave a Reply

    Your email address will not be published. Required fields are marked *

    BIG BOSS

    ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?

    Published

    on

    ಬಿಗ್ ಬಾಸ್ ಫಿನಾಲೆಗೆ ಇನ್ನೊಂದು ವಾರವಷ್ಟೇ ಬಾಕಿ ಉಳಿದಿದೆ. ಬಿಗ್ ಬಾಸ್ ಮನೆಯಲೀಗ ಮಿಡ್ ವೀಕ್ ಎಲಿಮಿನೇಷನ್ ಟೆನ್ಶನ್ ಶುರುವಾಗಿದೆ.

    ಇದೇ ಹೊತ್ತಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದಾರೆ. ಹೀಗಾಗಿ 7 ಸ್ಪರ್ಧಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ನಾಮಿನೇಷನ್ ನಿಂದ ಪಾರಾಗಲು ಬಿಗ್ ಬಾಸ್ ಸ್ಪರ್ಧಿಗಳಿಗೆ ಕಾಲ ಕಾಲಕ್ಕೆ ಟಾಸ್ಕ್ ನೀಡಲಿದ್ದಾರೆ.

    ಇದನ್ನೂ ಓದಿ: ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?

    ಬಿಗ್ ಬಾಸ್ ಕೊಟ್ಟ ಟಾಸ್ಕ್ ಯಾರು ಗೆಲ್ಲುತ್ತಾರೋ ಅವರು ಈ ವಾರದ ನಾಮಿನೇಷನ್ ನಿಂದ ಪಾರಾಗಲಿದ್ದಾರೆ.

    ಬಿಗ್ ಬಾಸ್ ಮನೆಯಲ್ಲಿ ಒಟ್ಟು 8 ಸ್ಪರ್ಧಿಗಳು ಉಳಿದುಕೊಂಡಿದ್ದು, ಈ ಪೈಕಿ ಒಬ್ಬರು ಮಿಡ್ ವೀಕ್ ಎಲಿಮಿನೇಟ್ ಆಗಲಿದ್ದಾರೆ. ಇನ್ನು ಇಬ್ಬರು ವಾರಾಂತ್ಯಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರೆ. ಕೊನೆಗೆ ವಾರಾಂತ್ಯದಲ್ಲಿ ಮೂರು ಜನ ಬಿಗ್ ಬಾಸ್ ಮನೆಯಿಂದ ಹೊರಬರಲಿದ್ದಾರೆ.

    ಹೀಗಾಗಿ ಎಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಕೊಟ್ಟ ಟಾಸ್ಕ್ ಗಳನ್ನು ಕಷ್ಟಪಟ್ಟು ಆಡುತ್ತಿದ್ದಾರೆ. ಅದರಲ್ಲೂ ರಿಲೀಸ್ ಆದ ಪ್ರೋಮೋದಲ್ಲಿ, ಇದು ಮಿಡ್ ವೀಕ್ ಎಲಿಮಿನೇಷನ್ ನಿಂದ ತಮ್ಮನ್ನು ತಾವು ಉಳಿಸಿಕೊಳ್ಳಲು ಇರುವ ಕೊನೆಯ ಟಾಸ್ಕ್ ಎಂದು ಭಯ ಹುಟ್ಟಿಸಿದ್ದಾರೆ.

     

    Continue Reading

    LATEST NEWS

    ಮ*ರಣದ ನಂತರ ಏನು ಎಂದು ಹುಡುಕಿದಾತ ಸಾ*ವಿಗೆ ಶರಣಾದ!

    Published

    on

    ಮಂಗಳೂರು/ಲಖನೌ: ಇತ್ತೀಚಿನ ದಿನಗಳಲ್ಲಿ ಆ*ತ್ಮಹ*ತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಅದರಲ್ಲೂ ಮಕ್ಕಳು ಸಾ*ವಿಗೆ ಶರಣಾಗುತ್ತಿರೋದು ವಿಪರ್ಯಾಸ. ಸಣ್ಣ ಪುಟ್ಟ ವಿಚಾರಗಳಿಗೆ ಸಾ*ವಿನ ದಾರಿ ಹಿಡಿಯುತ್ತಿರೋರು ಅಧಿಕ.  ಉತ್ತರಪ್ರದೇಶದ ಮೀರತ್‌ನಲ್ಲಿ ಬಾಲಕನೋರ್ವ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಆತ ಗೂಗಲ್‌ ಹಾಗೂ ಯೂಟ್ಯೂಬ್‌ನಲ್ಲಿ ಹುಡುಕಾಡಿರುವ ವಿಚಾರ ಶಾ*ಕ್ ಕೊಟ್ಟಿದೆ.

    9ನೇ ತರಗತಿಯಲ್ಲಿ ಓದುತ್ತಿದ್ದ ಯುವರಾಜ್ ಮೃ*ತ ಬಾಲಕ. ಈತ ಪಿಸ್ತೂಲ್‌ನಿಂದ ಗುಂ*ಡು ಹಾ*ರಿಸಿಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೂ ಮುಂಚೆ ಆತ ‘ಗರುಡ ಪುರಾಣ’ದ ಬಗ್ಗೆ ಹುಡುಕಾಟ ನಡೆಸಿದ್ದಾನೆ ಎನ್ನಲಾಗಿದೆ. ಯೂಟ್ಯೂಬ್, ಗೂಗಲ್‌ಗಳಲ್ಲಿ ಗರುಡ ಪುರಾಣದ ಬಗ್ಗೆ ಹುಡುಕಿದ್ದಾನಂತೆ.  ಸಾ*ವಿನ ರೀತಿ, ಸಾ*ವಿನ ನಂತರ ಆತ್ಮ ಎಲ್ಲಿಗೆ ಹೋಗುತ್ತದೆ ಎಂಬ ಬಗ್ಗೆ ಕುತೂಹಲ ಹೊಂದಿದ್ದ ಎಂಬುದು ಆತನ ಸರ್ಚ್ ಇಂಜಿನ್‌ನಿಂದ ತಿಳಿದುಬಂದಿದೆ. ಆದರೆ, ಯಾವುದೇ ಡೆ*ತ್ ನೋಟ್ ಪತ್ತೆಯಾಗಿಲ್ಲ.

    ಇದನ್ನೂ ಓದಿ : ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?

    ಬುದ್ದಿ ಮಾತು…ಬೈಕ್ ಮಾರಾಟ :

    ಓದಿನತ್ತ ಬಾಲಕ ಗಮನ ಕೊಡುತ್ತಿರಲಿಲ್ಲ. ಹೀಗಾಗಿ ಆತನ ತಾಯಿ ಗದರಿದ್ದರಂತೆ. ಅಲ್ಲದೇ, ಆತ ತನ್ನ ಬಳಿಯಿದ್ದ ದ್ವಿಚಕ್ರವಾಹನದ ಬಗ್ಗೆ ಅತಿಯಾದ ವ್ಯಾಮೋಹ ಹೊಂದಿದ್ದನಂತೆ. ಇದು ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ ಎಂದರಿತು ಪೋಷಕರು ಆ ದ್ವಿಚಕ್ರ ವಾಹನವನ್ನು ಮಾರಾಟ ಮಾಡಿದ್ದರು. ಇದೂ ಕೂಡ ಬಾಲಕ ಆ*ತ್ಮಹ*ತ್ಯೆಯ ನಿರ್ಧಾರ ತಳೆಯಲು ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

    ಸದ್ಯ ಮ*ರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.

     

     

    Continue Reading

    BIG BOSS

    ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?

    Published

    on

    ‘ಬಿಗ್ ಬಾಸ್ ಕನ್ನಡ ಸೀಸನ್ 11’ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಆದ್ರೆ ಕಳೆದ ವಾರ ಅಚ್ಚರಿ ಎಂಬಂತೆ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಆಚೆ ಬಂದಿದ್ದಾರೆ. ಅವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದು, ಯಾರು ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಹೇಳಿದ್ದಾರೆ.

    ಚೈತ್ರಾ ಕುಂದಾಪುರ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆಗೂ ಮೊದಲೇ ಔಟ್ ಆಗಿದ್ದಾರೆ. 105ಕ್ಕೂ ಹೆಚ್ಚು ದಿನಗಳ ಕಾಲ ದೊಡ್ಮನೆಯಲ್ಲಿ ಇದ್ದ ಅವರು ಈಗ ಆಟದಿಂದ ಹೊರ ಹೋಗಿದ್ದಾರೆ. ಅವರು ಆಟವನ್ನು ಹತ್ತಿರದಿಂದ ನೋಡಿದವರು. ಯಾರು ದೊಡ್ಮನೆಯಿಂದ ಹೊರ ಹೋಗುತ್ತಾರೆ ಹಾಗೂ ಯಾರೂ ಗೆಲ್ಲಬಹುದು ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಬಿಗ್‌ ಬಾಸ್‌ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?

    ಬಿಗ್ ಬಾಸ್ ಕನ್ನಡ ಸೀಸನ್ 11ರ, ಟಾಪ್ 5 ಫೈನಲಿಸ್ಟ್ ಜಾಗದಲ್ಲಿ ತ್ರಿವಿಕ್ರಮ್, ಹನುಮಂತ, ರಜತ್, ಭವ್ಯಾ ಗೌಡ ಹಾಗೂ ಉಗ್ರಂ ಮಂಜು ಇರಲಿದ್ದಾರೆ ಎಂದು ಹೇಳಿದ್ದಾರೆ. ಮುಂದಿನ ವಾರ ಮೋಕ್ಷಿತಾ ಅಥವಾ ಧನರಾಜ್ ಅವರು ಆಚೆ ಬರಬಹುದು ಎಂದು ಹೇಳಿದ್ದಾರೆ.

    ಅಲ್ಲದೇ ಬಿಗ್ ಬಾಸ್ ಸೀಸನ್ 11 ಫಿನಾಲೆ ಟ್ರೋಫಿ ಗೆಲ್ಲೋದು ಯಾರು ಅಂತ ಕೂಡ ಹೇಳಿದ್ದಾರೆ. ಹನುಮಂತ ತುಂಬಾ ಚೆನ್ನಾಗಿ ಆಟ ಆಡುತ್ತಿದ್ದಾರೆ. ಹನುಮಂತ ಟಾಪ್ 2ನಲ್ಲಿ ಇರುತ್ತಾರೆ ಅಥವಾ ಗೆಲ್ಲಲುಬಹುದು. ಆದ್ರೆ ನನಗೆ ತ್ರಿವಿಕ್ರಮ್ ಅವರು ಗೆಲ್ಲಬೇಕು. ಅವ್ರು ಜೀವನದಲ್ಲಿ ತುಂಬಾ ಕಷ್ಟಗಳನ್ನು ಅನುಭವಿಸಿದ್ದಾರೆ. ಈ ಬಿಗ್ ಬಾಸ್ ಗೆಲುವು ಅವರಿಗೆ ತುಂಬಾನೇ ಮುಖ್ಯ ಎಂದು ಹೇಳಿದ್ದಾರೆ.

    Continue Reading

    LATEST NEWS

    Trending