Connect with us

BELTHANGADY

ಬೆಳ್ತಂಗಡಿ: ರಸ್ತೆ ಅವ್ಯವಸ್ಥೆ-ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ

Published

on

ಬೆಳ್ತಂಗಡಿ: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನ ಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆಯಿತು.


ಬುಧವಾರ ಸಂಜೆ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ , ಸಿಪಿಐ(ಎಂ) ನಾಯಕ ಶೇಖರ್ ಲಾಯಿಲ ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಹೆದ್ದಾರಿಯಲ್ಲಿರುವ ಗುಂಡಿಗಳಲ್ಲಿ ದಿನನಿತ್ಯ ಪ್ರಯಾಣಿಸುವ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಕಣ್ಣು ಕಾಣದಿದ್ದು ದೀಪ ಹಚ್ಚಿ ಗುಂಡಿ ಕಾಣುವಂತೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದರು.


ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ನಾಯಕ ಸಂದೀಪ್ ಎಸ್ ಅಳದಂಗಡಿ ಮಾತನಾಡಿ ನಮ್ಮ ತಾಲೂಕಿನ ಅವ್ಯವಸ್ಥೆ ಇಡೀ ರಾಜ್ಯದಲ್ಲಿಯೇ ಕುಖ್ಯಾತಿ ಪಡೆದಿದೆ.

ರಾಜ್ಯ ಸಂಪುಟ ಸಚಿವ ಸುನೀಲ್ ಕುಮಾರ್ ಇತ್ತೀಚಿಗೆ ರಸ್ತೆ ಬದಲಿಸಿ ಪ್ರಯಾಣಿಸುವ ಮೂಲಕ ಮತ್ತೊಮ್ಮೆ ನಾಚಿಕೆಗೀಡಾದರು’ ಎಂದು ಹೇಳಿದರು.


ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ , ಜಿಲ್ಲಾ ಯುವ ಕಾಂಗ್ರೆಸ್ ಕಾಂಗ್ರೆಸ್ ಕಾರ್ಯದರ್ಶಿ ಪ್ರಜ್ವಲ್ ಜೈನ್ , ಯುವ ಇಂಟೆಕ್ ಅಧ್ಯಕ್ಷ ನವೀನ್ ಗೌಡ ಸವಣಾಲು , ಗಣೇಶ್ ಕಣಿಯೂರು , ಸಾಮಾಜಿಕ ಕಾರ್ಯಕರ್ತರಾದ ಅಲ್ತಪ್ , ಅಲ್ವಿನ್ , ನೌಷದ್ ಕೈಕಂಬ ಮತ್ತು ಇತರರು ಉಪಸ್ಥಿತರಿದ್ದರು.

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending