Connect with us

BANTWAL

ಗಡಿ ಮಣ್ಣು ತೆರವುಗೊಳಿಸಿದ ದ.ಕ. ಜಿಲ್ಲಾಡಳಿತ : ಓಡಾಟ ನಿರ್ಬಂಧ ತೆರವಿಗೆ ಮನಸ್ಸು ಮಾಡುತ್ತಿಲ್ಲ ಕೇರಳ ..!

Published

on

ಗಡಿ ಮಣ್ಣು ತೆರವುಗೊಳಿಸಿದ ದ.ಕ. ಜಿಲ್ಲಾಡಳಿತ : ಓಡಾಟ ನಿರ್ಬಂಧ ತೆರವಿಗೆ ಮನಸ್ಸು ಮಾಡುತ್ತಿಲ್ಲ ಕೇರಳ ..!

ಬಂಟ್ವಾಳ : ಕೊರೊನಾ ಮಿತಿಮೀರಿದ್ದ ವೇಳೆ ಕೇರಳ-ಕರ್ನಾಟಕ ಗಡಿಭಾಗದ ಕರೋಪಾಡಿ ಗ್ರಾಮದಲ್ಲಿ ಹಾಕಲಾಗಿದ್ದ ಮಣ್ಣನ್ನು ಜಿಲ್ಲಾಡಳಿತದ ಸೂಚನೆ ಮೇರೆಗೆ ಕರೋಪಾಡಿ ಗ್ರಾಮ ಪಂಚಾಯತ್ ವತಿಯಿಂದ ತೆರವು ಮಾಡಿ ಸಂಚಾರಕ್ಕೆ ಮುಕ್ತ ಮಾಡಲಾಗಿದೆ.

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದ ವೇಳೆ ಮುಂಜಾಗ್ರತಾ ಕ್ರಮವಾಗಿ ಕೇರಳ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡುವಂತೆ ಆಗಿನ ಜಿಲ್ಲಾಧಿಕಾರಿ ಸಿಂದೂ ರೂಪೇಶ್ ಅವರು ಆದೇಶ ನೀಡಿದ್ದರು.

ಅದರಂತೆ ಕರೋಪಾಡಿ ಗ್ರಾಮದ ಪೆರೋಡಿ ಕ್ರಾಸ್, ಮುಗುಳಿ, ಬೇತಾ, ಕೋಡ್ಲಾ, ಸೇರಿದಂತೆ ಆರು ಕಡೆಗಳಲ್ಲಿ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಲಾಗಿತ್ತು.

ಇನ್ನೂ ಕೆಲವೆಡೆ ಬ್ಯಾರಿಕೇಡ್ ಅಳವಡಿಸಿ, ಮುಚ್ಚಲಾಗಿತ್ತು. ಸಾರಡ್ಕ ಚೆಕ್ ಪೋಸ್ಟ್ ಅನ್ನು ಬಂದ್ ಮಾಡಲಾಗಿತ್ತು. ಆದರೆ ಸದ್ಯ ಕರೋಪಾಡಿ ಗ್ರಾಮದ ಎಲ್ಲಾ ರಸ್ತೆಗಳಲ್ಲಿ ಹಾಕಲಾದ ಮಣ್ಣು ತೆರವುಗೊಳಿಸಲಾಗಿದೆ.

ಸಾರಡ್ಕ ಚೆಕ್ ಪೋಸ್ಟ್ ಇನ್ನೂ ತೆರದಿಲ್ಲ. ಕೆಲವು ತಿಂಗಳುಗಳ ಹಿಂದೆ ಕೇರಳ ಸರ್ಕಾರವು ತಮ್ಮ ಗಡಿ ಭಾಗದ ರಸ್ತೆಗಳಿಗೆ ಮಣ್ಣು ಹಾಕಿ ಬಂದ್ ಮಾಡಿತ್ತು.

ಕೇರಳ ಸರ್ಕಾರ ತೆರವುಗೊಳಿಸಲು ಇನ್ನೂ ಆದೇಶ ನೀಡಿಲ್ಲ. ಈ ಬಗ್ಗೆ ಕೇರಳ ಜಿಲ್ಲಾಡಳಿತಕ್ಕೆ ಗಡಿಭಾಗದ ಜನರು ಮನವಿ ಸಲ್ಲಿಸಿದ್ದಾರೆ.

ಲಾಕ್ದೌನ್ ಪ್ರಾರಂಭದಲ್ಲಿ ಗಡಿ ಮುಚ್ಚಿಸುವ ಬಗ್ಗೆಯೂ ಪ್ರಸ್ತಾಪ ಮಾಡಿದ್ದು, ಅದರಂತೆ ಬಂದ್ ಮಾಡಲಾಗಿತ್ತು.

ಆದರೆ ಈಗ ರಸ್ತೆ ಬಂದ್ ಮಾಡಿರುವುದನ್ನು ತೆರವುಗೊಳಿಸುವ ಬಗ್ಗೆ ಬಹಳ ದಿನದಿಂದ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮತ್ತು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಲ್ಲಿ ವಿನಂತಿಸಿದ್ದು, ಅದರಂತೆ ತೆರವುಗೊಳಿಸಲಾಗಿದೆ ಎಂದು ವಿನೋದ್ ಶೆಟ್ಟಿ ಪಟ್ಲ ತಿಳಿಸಿದ್ದಾರೆ.

ಆದರೆ ಕೇರಳ ಸರ್ಕಾರ ಮಾತ್ರ ಗಡಿಯಲ್ಲಿ ಓಡಾಟ ನಡೆಸಲು ಯಾವಿದೇ ಮನಸ್ಸು ಮಾಡುತ್ತಿಲ್ಲ, ಕರ್ನಾಟಕ ಲಾಕ್‌ ಡೌನ್ ಸಂದರ್ಭದಲ್ಲಿ ರಾಜ್ಯದ ಗಡಿಗಳನ್ನು ಬಂದ್ ಮಾಡಿ ಕೇರಳದ ಎಲ್ಲಾ ಪ್ರಯಾಣಿಕರು ಮತ್ತು ರೋಗಿಗಳ ಪ್ರವೇಶವನ್ನು ನಿರ್ಬಂಧಿಸಿತ್ತು.

ಇದಕ್ಕೆ ಪ್ರತಿಯಾಗಿ ಕೇರಳ ಸರ್ಕಾರ ಹಗೆ ಸಾಧಿಸಲು ಹೊರಟಿದೆ ಎಂಬ ಗುಮಾನಿ ಕಾಣುತ್ತಿದೆ. ಇದರಿಂದ ಕೇರಳ- ಕರ್ನಾಟಕ ಗಡಿಯ ಜನತೆ ಸಂಕಷ್ಟ ಅನುಭವಿಸುವಂತಾಗಿದೆ.

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

LATEST NEWS

Trending