DAKSHINA KANNADA
ದಕ್ಷಿಣ ಕನ್ನಡದಲ್ಲಿಂದು ಕೊರೊನಾಗೆ 6 ಮಂದಿ ಬಲಿ… ಸಾವಿನ ಸಂಖ್ಯೆ 316ಕ್ಕೆ ಏರಿಕೆ
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 201 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 201 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10531 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 241 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2297 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಕೂಡ ಜಿಲ್ಲೆಯಲ್ಲಿ 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 316 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -144, ಬಂಟ್ವಾಳ – 22, ಸುಳ್ಯ -5, ಬೆಳ್ತಂಗಡಿ – 7, ಪುತ್ತೂರು – 5, ಹೊರ ಜಿಲ್ಲೆಯವರು – 18 ಪ್ರಕರಣಗಳಿವೆ.
ಉಡುಪಿ ಕೊರೊನಾ ಅಪ್ಡೇಟ್
ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 103 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 10236 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಐದು ಜನ ಸಾವನಪ್ಪಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 7557 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2590 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1034 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1556 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ.
ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ ಐದು ಮಂದಿ ಸಾವನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 89 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 50, ಕುಂದಾಪುರ -19 , ಕಾರ್ಕಳ -26, ಜಿಲ್ಲೆಯ ಹೊರಗಿನ – 8 ಪ್ರಕರಣಗಳಿವೆ.
DAKSHINA KANNADA
ಅಡುಗೆ ಮಾಡುವಾಗ ಕೈ ಸುಟ್ಟುಕೊಂಡರೆ ಮನೆಯಲ್ಲಿ ಹೀಗೆ ಮಾಡಿ..!
ಮಂಗಳೂರು: ಅಡುಗೆ ಮಾಡುವಾಗ ಗಡಿ ಬಿಡಿಯಲ್ಲಿ ಮಹಿಳೆಯರು ಗಾಯಗಳನ್ನು ಮಾಡಿಕೊಳ್ಳುತ್ತಾರೆ. ಕೆಲವೊಮ್ಮೆ ಸಣ್ಣ ಪುಟ್ಟ ತಪ್ಪುಗಳಿಂದ ಬಿಸಿ ಎಣ್ಣೆ, ಬಿಸಿ ನೀರೋ ಕೈ ಅಥವಾ ಮೈ ಮೇಲೆ ಚೆಲ್ಲುತ್ತದೆ. ಇಲ್ಲದಿದ್ದರೆ ಬಿಸಿ ಪಾತ್ರೆಯನ್ನು ಮುಟ್ಟುವುದರಿಂದ ಕೈ ಚರ್ಮ ಸುಡುತ್ತದೆ. ಇದರಿಂದ ಉಂಟಾಗುವ ಉರಿ ಹಾಗೂ ನೋವು ತೀವ್ರವಾಗಿರುತ್ತದೆ. ಹೀಗಾಗಿ ಗ್ಯಾಸ್ ಅಥವಾ ಒಲೆಯ ಮುಂದೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲುವುದಿಲ್ಲ.
ಹೆಚ್ಚಿನವರು ಬಿಸಿ ತಾಗಿದ ತಕ್ಷಣವೇ ಕೈಯನ್ನು ನೀರಿನಲ್ಲಿ ಅದ್ದಿ ಬಿಡುತ್ತಾರೆ, ಹೀಗೆ ಮಾಡಿದ್ದಲ್ಲಿ ಸುಟ್ಟ ಗಾಯವು ಗುಣಮುಖವಾಗಲು ಸಮಯ ತೆಗೆದುಕೊಳ್ಳುತ್ತದೆ. ಸಣ್ಣಪುಟ್ಟ ಗಾಯಗಳಾದರೆ ತೊಂದರೆಯಿಲ್ಲ, ಆದರೆ ತೀವ್ರವಾಗಿದ್ದರೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವುದು ಒಳ್ಳೆಯದು.
1. ಗಾಯವು ಚಿಕ್ಕದಾಗಿರಲಿ ಅಥವಾ ದೊಡ್ಡದಾಗಿರಲಿ, ಐಸ್ ಅನ್ನು ಅನ್ವಯಿಸುವುದರಿಂದ ಉರಿಯೂತ ಕಡಿಮೆಯಾಗುತ್ತದೆ. ಗುಳ್ಳೆಗಳೂ ಬರುವುದಿಲ್ಲ. ಇದು ಚರ್ಮದ ಮೇಲೆ ಕಪ್ಪು ಕಲೆಗಳು ಬರದಂತೆ ತಡೆಯುತ್ತದೆ.
2. ಸುಟ್ಟ ಜಾಗಕ್ಕೆ ಸಾಸಿವೆ ಎಣ್ಣೆ ಮತ್ತು ಉಪ್ಪನ್ನು ಹಚ್ಚುವುದು ಪರಿಣಾಮಕಾರಿಯಾಗಿದೆ. ಪ್ರಾರಂಭದಲ್ಲಿ ಸ್ವಲ್ಪ ಉರಿ ಉಂಟಾದರೂ ನಂತರದಲ್ಲಿ ಕಡಿಮೆಯಾಗುತ್ತದೆ, ಗುಳ್ಳೆಗಳು ಬರುವುದಿಲ್ಲ.
3. ಅಲೋವೆರಾ ಸಹ ಸುಟ್ಟಗಾಯವನ್ನು ಗುಣಪಡಿಸುವಲ್ಲಿ ಪರಿಣಾಮಕಾರಿಯಾಗಿದೆ. ಗಾಯದ ಮೇಲೆ ತಕ್ಷಣವೇ ಅಲೋವೆರಾವನ್ನು ಹಚ್ಚಿದರೆ ಉರಿಯೂತವು ಕಡಿಮೆಯಾಗಿ, ಯಾವುದೇ ಗುಳ್ಳೆಗಳು ಕಾಣಿಸಿಕೊಳ್ಳುವುದಿಲ್ಲ.
4. ಜೇನುತುಪ್ಪವು ಆಂಟಿ-ಸೆಪ್ಟಿಕ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಸುಟ್ಟ ಗಾಯದ ಮೇಲೆ ತಕ್ಷಣ ಜೇನುತುಪ್ಪವನ್ನು ಹಚ್ಚುವುದರಿಂದ ಉರಿಯೂತ ಶಮನವಾಗಿ, ಗುಳ್ಳೆಗಳು ಮೂಡದಂತೆ ತಡೆಯುತ್ತದೆ. ಜೇನು ತುಪ್ಪ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡುವುದರಿಂದ ಸುಟ್ಟಗಾಯಗಳು ತ್ವರಿತವಾಗಿ ಗುಣವಾಗುತ್ತವೆ.
DAKSHINA KANNADA
ಯಕ್ಷಗಾನದ ಖ್ಯಾತ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಅವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ
ಮಂಗಳೂರು : ಯಕ್ಷಗಾನದ ಖ್ಯಾತ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಅವರಿಗೆ ಅಂತಾರಾಷ್ಟ್ರೀಯ ಮಟ್ಟದ ಆರ್ಯಭಟ ಪ್ರಶಸ್ತಿಯನ್ನು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಯಕ್ಷಗಾನ ಕ್ಷೇತ್ರದಲ್ಲಿ ತಮ್ಮದೇ ಛಾಪನ್ನು ಹಬ್ಬಿರುವ ದಿನೇಶ್ ಕೋಡಪದವು ಅವರು ಕುಸಾಲ್ದ ಗುರಿಕ್ಕಾರೆ ಎನ್ನುವ ಬಿರುದನ್ನು ಕೂಡ ಪಡೆದುಕೊಂಡಿದ್ದಾರೆ.
ದಿನೇಶ್ ಕೋಡಪದವು ಕುರಿತು :
ಈಶ್ವರ ಶೆಟ್ಟಿಗಾರ್ ಮತ್ತು ಲೀಲಾವತಿ ದಂಪತಿಯ ಸುಪುತ್ರರಾದ ದಿನೇಶ್ ಶೆಟ್ಟಿಗಾರ್, ಕೋಡಪದವು ಹುಟ್ಟಿದ್ದು ಒಕ್ಕೆತ್ತೂರುವಿನಲ್ಲಿಯಾದರೂ, ಪ್ರಸ್ತುತ ವಾಸ ಕೋಡಪದವಿನಲ್ಲಿ. ಪ್ರಾಥಮಿಕ ವಿದ್ಯಾಭ್ಯಾಸ ಪಡೆಯುತ್ತಿದ್ದಂತೆ ಯಕ್ಷಗಾನ ಕೈಬೀಸಿ ಕರೆಯಿತು.
ರತ್ನಾಕರ್ ಹೆಗ್ಡೆ ಪುತ್ತೂರು, ಸಬ್ಬಣ್ಣಕೋಡಿ ಕೃಷ್ಣ ಭಟ್ ಅಂತಹ ಮಹಾನ್ ಯಕ್ಷಗಾನ ಗುರುಗಳಿಂದ ಯಕ್ಷಗಾನ ಕಲೆಯನ್ನು ಕಲಿತು ಮಂಗಳಾದೇವಿ ಮೇಳದಲ್ಲಿ 5 ವರ್ಷ, ಸುಂಕದಕಟ್ಟೆ ಮತ್ತು ಸಸಿಹಿತ್ಲು ಮೇಳದಲ್ಲಿ 4 ವರ್ಷ, ಬಾಚಕೆರೆ ಮೇಳದಲ್ಲಿ 3 ವರ್ಷ, ಕರ್ನಾಟಕ ಮೇಳ ಹಾಗೂ ಕದ್ರಿ ಮೇಳದಲ್ಲಿ 1 ವರ್ಷ , ಪ್ರಸ್ತುತ ಬಪ್ಪನಾಡು ಮೇಳದಲ್ಲಿ 8 ವರುಷಗಳಿಂದ ಯಕ್ಷಗಾನ ತಿರುಗಾಟ ನಡೆಸುತ್ತಾ ಬಂದಿದ್ದಾರೆ.
ಕನ್ನಡ ಭಾಷೆಯ ಯಕ್ಷಗಾನಗಳಲ್ಲಿ ಅಭಿಮನ್ಯು ಚಂಡ-ಮುಂಡ, ಸುಧನ್ವ ಬಬ್ರುವಾಹನ, ಕಮಲಧ್ವಜ, ಕೃಷ್ಣ ಬಲರಾಮ, ಪ್ರಹ್ಲಾದ, ಲೋಹಿತಾಶ್ವದಂತಹ ಪುಂಡು ವೇಷಧಾರಿಯಾಗಿಯೂ ಮಾಲಿನಿಧೂತ, ವಿದ್ಯುನ್ಮಾಲಿದೂತ, ಚಿಕ್ಕ, ದಾರುಕ, ಮಕರಂದ, ಪ್ರಾತಿಕಾಮಿಯಂತದ ಹಾಸ್ಯ ಪಾತ್ರಧಾರಿಯಾಗಿಯೂ, ನಾರದ ಮುಂತಾದ ಪುರಾಣ ಪಾತ್ರಗಳ ಮೂಲಕ ಪ್ರತಿಭೆ ಮೆರೆದಿದ್ದಾರೆ.
ತುಳು ಭಾಷೆಯ ಯಕ್ಷಗಾನ ಪ್ರಸಂಗಗಳಾದ ಬನತ ಬಂಗಾರ್, ಬನತ ಬಬ್ಬರ್ಯೆ, ನಿಧಿ ನಿರ್ಮಲ, ಬಾಲೆ ಭಗವಂತದಂತಹ ಪ್ರಸಂಗಗಳಲ್ಲಿ ಕ್ರಮವಾಗಿ ನರಸಿಂಹ, ಪೈಕುಲ, ಚಾವುಂಡರಾಯ, ಗುಡ್ಡಪ್ಪ ಪಾತ್ರಗಳಲ್ಲಿ ಅಭಿನಯಿಸಿ ಮೆಚ್ಚುಗೆ ಪಡೆದಿದ್ದಾರೆ. ಹಲವಾರು ಹೊಸಹೊಸ ಪ್ರಸಂಗಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತಾ ಹೆಸರುವಾಸಿಯಾಗಿದ್ದಾರೆ.
ಸಂಘಟಕನಾಗಿ…ಸಮಾಜ ಸೇವಕನಾಗಿ…
ಯಕ್ಷಗಾನದಲ್ಲಿ ಮಾತ್ರವಲ್ಲದೇ ”ತೆಲಿಕೆದ ತೇಟ್ಲ” ಎಂಬ ತಂಡ ಕಟ್ಟಿ ಹಲವಾರು ಕಡೆಗಳಲ್ಲಿ “ಯಕ್ಷ ಹಾಸ್ಯ ವೈಭವ” , ”ಯಕ್ಷಗಾನ ಹಾಸ್ಯ ಕಲಾವಿದರ ಒಕ್ಕೂಟ” ಎಂಬ ತಂಡ ಕಟ್ಟಿ “ಆಟದ ಆಯನ” ಕಾರ್ಯಕ್ರಮ ನೀಡಿರುವುದಲ್ಲದೇ ಕೊರೊನಾ ಸಮಯದಲ್ಲಿ 25ಕ್ಕೂ ಹೆಚ್ಚು ಕಲಾವಿದರಿಗೆ ಆಹಾರ ಕಿಟ್ ಗಳನ್ನು ವಿತರಿಸಿ ಸಮಾಜ ಸೇವೆಯಲ್ಲಿಯೂ ತೊಡಗಿಕೊಂಡಿದ್ದಾರೆ.
ಈ ಮೆರು ಕಲಾವಿದ “ಕುಸಲ್ದ ಗುರಿಕಾರೆ”, “ಯಕ್ಷಮಾಣಿಕ್ಯ”, ”ಹಾಸ್ಯದರಸು” ಇತ್ಯಾದಿ ಬಿರುದುಗಳಿಂದ ಮೇಳೈಸಿಕೊಂಡವರು ಯಕ್ಷಲೋಕದಲ್ಲಿ ತನ್ನದೇ ವ್ಯಕ್ತಿತ್ವದಲ್ಲಿ ಜನಮಾನದಲ್ಲಿ ಗುರುತಿಸಿಕೊಂಡವರು.
ಇಂತಹ ಅದ್ಭುತ ಯಕ್ಷಲೋಕದಲ್ಲಿ ಮಿಂಚುತ್ತಿರುವ ಯಕ್ಷಾಭಿಮಾನಿಗಳಲ್ಲಿ ಸಂಚಲನವನ್ನುಂಟು ಮಾಡುತ್ತಿರುವ “ಯಕ್ಷಧ್ರುವತಾರೆ”ಯನ್ನು ಗುರುತಿಸಿ, ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ 317ಡಿ ಕಂದಾಯ ಜಿಲ್ಲೆಗಳಾದ ದಕ್ಷಿಣಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರಿನ ಹಲವಾರು ಉನ್ನತಮಟ್ಟದ ಲಯನ್ಸ್ ಕಾರ್ಯಕ್ರಮಗಳಲ್ಲಿ ಶ್ರೀಯುತರನ್ನು ಗೌರವಿಸಿ ಸನ್ಮಾನಿಸಿದ್ದು ಅವರ ಸಾಧನೆಗೆ ಸಂದ ಗೌರವ.
‘ನಮ್ಮ ಕುಡ್ಲ’ದ ‘ಯಕ್ಷ ತೆಲಿಕೆ’ಯ ಹೆಮ್ಮೆಯ ಕಲಾವಿದ :
ಕರಾವಳಿ ಕರ್ನಾಟಕದ ಪ್ರಪ್ರಥಮ ತುಳು ವಾರ್ತಾವಾಹಿನಿ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿರುವ ನಮ್ಮಕುಡ್ಲ ವಾಹಿನಿಯಲ್ಲಿ ಕೋಡಪದವು ಸಾರಥ್ಯದಲ್ಲಿ “ಯಕ್ಷ ಹಾಸ್ಯ ಕಾರ್ಯಕ್ರಮ “ಯಕ್ಷ ತೆಲಿಕೆ” ಕಾರ್ಯಕ್ರಮವನ್ನು ಆರಂಭಿಸಿದರು. ಇಂದು ಯಕ್ಷತೆಲಿಕೆ ಕಾರ್ಯಕ್ರಮ ಕರಾವಳಿ ಮಾತ್ರವಲ್ಲದೇ ದೇಶವಿದೇಶಗಳಲ್ಲಿ ಖ್ಯಾತಿಯನ್ನು ಪಡೆದುಕೊಂಡಿದೆ.
ಇದನ್ನೂ ಓದಿ : ಟೀಸರ್ ಮೂಲಕ ಭಾರಿ ಸದ್ದು ಮಾಡುತ್ತಿದೆ ‘ಸಾಂಕೇತ್’
ಯಕ್ಷತೆಲಿಕೆ ಕಾರ್ಯಕ್ರಮವು ಹಾಸ್ಯದ ಜೊತೆಗೆ ಉತ್ತಮ ಸಂದೇಶವನ್ನು ನೀಡುವ ಕಾರ್ಯಕ್ರಮವಾಗಿದೆ. ಕೋಡಪದವು ಬೊಬ್ಬಿರಿದು ಗೋಗರೆಯುವ ಅಬ್ಬರದ ಗಾಂಭೀರ್ಯ ವೇಷಕ್ಕೂ ಸೈ, ವೀಕ್ಷಕರನ್ನು ನಕ್ಕುನಗಿಸುವ ಹಾಸ್ಯ ಪಾತ್ರಕ್ಕೂ ಸೈ…ಹಾಸ್ಯ ಅಂದರೆ ಕೋಡಪದವು, ಕೋಡಪದವು ಅಂದರೆ ಹಾಸ್ಯ ಎನ್ನುವಷ್ಟರ ಮಟ್ಟಿಗೆ ಈ ಕಾರ್ಯಕ್ರಮ ಯಶಸ್ವಿಯಾಗಿದೆ.
DAKSHINA KANNADA
ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ
ಸುಬ್ರಹ್ಮಣ್ಯ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು.
ದೇವಾಲಯದ ಅರ್ಚಕರಾದ ಸತ್ಯನಾರಾಯಣ ನೂರಿತಾಯ ಅವರು ತುಲಾಭಾರ ಸೇವೆಯನ್ನು ನೆರವೇರಿಸಿದರು.
ಬೆಳ್ಳಿಗ್ಗೆ ದೇವಾಲಯಕ್ಕೆ ಬಂದ ಯಡಿಯೂರಪ್ಪ ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಮಾಜಿ ಸಚಿವ ಅಂಗಾರ, ಮೋಹನ್ ರಾಮ ಸುಳ್ಳಿ ಹಾಗೂ ದೇವಳ ಸಮಿತಿಯವರು ಇದ್ದರು.
ಮಧ್ಯಾಹ್ನ ಸುಳ್ಯಕ್ಕೆ ತೆರಳುವ ಯಡಿಯೂರಪ್ಪ, ಸುಳ್ಯದ ಬಿಜೆಪಿ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.