Connect with us

FILM

“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?

Published

on

ನಿತ್ಯಾಮೆನನ್.. ದಕ್ಷಿಣ ಚಿತ್ರರಂಗದಲ್ಲಿ ತನ್ನ ಅಮೋಘ ಅಭಿನಯದ ಮೂಲಕ ಚಿತ್ರರಂಗದಲ್ಲಿ ಕೀರ್ತಿಯ ಪತಾಕೆಯನ್ನ ಹಾರಿಸಿರುವ  ನಟಿ. ತನ್ನ ಮೋಹಕ ನೋಟ, ಹಾಗೆನೆ ನೋಡೋಕೆ ತುಂಬಾನೆ ಸಿಂಪಲ್ ಆಗಿರೋ ಇವರು ಒಂದಲ್ಲ ಒಂದು ಕಾಂಟ್ರವರ್ಸಿಗಳಿಗೆ ಒಳಗಾಗಿದ್ದರು.

nithya menon

ಕನ್ನಡದ ಸೆವೆನ್ ಓ ಕ್ಲಾಕ್ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟವರು. ಆ ನಂತರ ಕನ್ನಡ ಸೇರಿದಂತೆ ಮಲಯಾಳಂ, ತೆಲುಗು, ತಮಿಳು ಭಾಷೆಗಳಲ್ಲಿ ನಟಿಸಿದ್ದ ನಿತ್ಯಾ, ಮಿಷನ್ ಮಂಗಲ್ ಚಿತ್ರದ ಮೂಲಕ ಹಿಂದಿಗೂ ಪದಾರ್ಪಣೆ ಮಾಡಿದ್ದರು.

ತುಂಬಾನೇ ಬೋಲ್ಡ್ ಹುಡುಗಿ ..

ತಮ್ಮ ನೇರ ದಿಟ್ಟ ನಡವಳಿಕೆಗೆ ನಿತ್ಯಾ ಮೆನನ್ ನಂಬರ್ ವನ್ ಪ್ಲೇಸ್ ಅಂದ್ರೆ ತಪ್ಪಾಗಲ್ಲ. ಯಾಕಂದ್ರೆ ಅದೆಷ್ಟೋ ಬಾರಿ ತಮ್ಮ ನೇರ ನಡವಳಿಕೆಯಿಂದ ಹಲವರ ಕೆಂಗಣ್ಣಿಗೆ ಗುರಿಯಾಗುತ್ತಿದ್ರು ನಿತ್ಯಾ. ಇದಕ್ಕೆ ಸಾಕ್ಷಿ ಅನ್ನುವಂತೆ ನಿತ್ಯಾ ಮೆನನ್ ಅವರನ್ನ ಹಿಂದೊಮ್ಮೆ ಮಲಯಾಳಂ ಚಿತ್ರರಂಗ ಒಂದಲ್ಲ…ಎರಡು ಬಾರಿ ಬ್ಯಾನ್ ಮಾಡಲು ಮುಂದಾಗಿತ್ತು.

ಚಿತ್ರರಂಗದಿಂದ ಬ್ಯಾನ್‌ ಆಗಲು ಕಾರಣವೇನು..?

ಹೌದು.. 2012ರಲ್ಲಿ ನಿತ್ಯಾ ವಿರುದ್ದ ಮಲಯಾಳಂ ಚಿತ್ರರಂಗದ ಅನೇಕ ನಿರ್ಮಾಪಕರು ಮುನಿಸಿಕೊಂಡಿದ್ದರು. ಯಾಕೆಂದರೆ ಖ್ಯಾತ ಮಲಯಾಳಂನ ನಿರ್ಮಾಪಕರೊಬ್ಬರು ಆಗ ನಿತ್ಯಾ ಅವರ ಕಾಲ್ ಶೀಟ್ ಕೇಳಿಕೊಂಡು ಅವರ ಮನೆಗೆ ಹೋಗಿದ್ದರು. ಆದರೆ ನಿತ್ಯಾ ಮಾತ್ರ ನಿರ್ಮಾಪಕರ ಮುಖ ನೋಡಲು ಕೂಡ ಮನೆಯಾಚೆ ಬರಲಿಲ್ಲ. ಬದಲಿಗೆ ಮನೆಯಲ್ಲಿಯೇ ಇದ್ದರೂ ಕೂಡ ಮ್ಯಾನೇಜರ್ ನ ಕಳಿಸಿದ್ದರು. ಕೇವಲ ಇವರೊಬ್ಬರಷ್ಟೇ ಅಲ್ಲ ಅನೇಕ ನಿರ್ಮಾಪಕರನ್ನ ನಿತ್ಯಾ ಇದೇ ರೀತಿ ನಡೆಸಿಕೊಂಡಿದ್ದಾರೆ ಎಂಬ ಮಾತು ಆಗ ಕೇಳಿ ಬಂದಿತ್ತು. ಈ ಕಾರಣಕ್ಕೆ ನಿತ್ಯಾ ಅವರ ಮೇಲೆ ನಿಷೇಧ ಹೇರುವ ಚಿಂತನೆ ನಡೆದಿತ್ತು. ಆದರೆ ಈ ಎಲ್ಲ ಬೆಳವಣಿಗೆಯ ನಂತರವೂ 2012ರಲ್ಲಿ ಅರ್ಧ ಡಜನ್ ಮಲಯಾಳಂ ಸಿನಿಮಾಗಳಲ್ಲಿ ನಿತ್ಯಾ ಕಾಣಿಸಿಕೊಂಡರು. ಅದರಲ್ಲಿ ಆ ಕಾಲಕ್ಕೆ ಎಲ್ಲರ ಗಮನ ಸೆಳದು ಸಿಕ್ಕಾಪಟ್ಟೆ ಪ್ರಶಂಸೆಯನ್ನ ಪಡೆದಿದ್ದ ಉಸ್ತಾದ್ ಹೊಟೇಲ್ ಕೂಡ ಒಂದು.

ತಮ್ಮ ನೇರನುಡಿಯ ಮಾತೇ ತನಗೆ ಮುಳುವಾಯಿತಾ…?

ಇನ್ನೂ 2019ರಲ್ಲಿಯೂ ಕೂಡ ಇಂಥಹದ್ದೇ ಬೆಳವಣಿಗೆ ನಡೆದಿತ್ತು. 2019ರಲ್ಲಿ ಮಲಯಾಳಂ ಸಿನಿಮಾದಲ್ಲಿ ನಟಿಸುವ ಸಂದರ್ಭದಲ್ಲಿ ನಿತ್ಯಾ ಮೆನನ್ ರವರ ತಾಯಿಗೆ ಕ್ಯಾನ್ಸರ್ ಇರುವುದಾಗಿ ಸುದ್ದಿ ಬಂದಿತ್ತು. ಅದು ಮೂರನೇ ಹಂತದಲ್ಲಿಯೂ ಇತ್ತು. ಇನ್ನು ನಿತ್ಯಾರವರು ಬಹುಕಾಲದ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದ ನಿತ್ಯಾ ಮನೆಯಲ್ಲಿಯೇ ಉಳಿದರು. ತಾಯಿ ಕ್ಯಾನ್ಸರ್ ನಿಂದ ಬಳಲುತ್ತಿದ್ದರೆ ನಿತ್ಯಾ ಅರೆತಲೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು.

ಮುಂದೆ ನೋಡಿ..; ಶೋಬಿತಾ ಜೊತೆ ಕಾಡಿನಲ್ಲಿ ಕಾಣಿಸಿಕೊಂಡ್ರ ನಾಗಚೈತನ್ಯ..! ಫ್ಯಾನ್ಸ್ ಏನಂದ್ರು..?

ಆಗ ಮಲೆಯಾಳಂ ನಿರ್ಮಾಪಕರು ನಿತ್ಯಾ ಮೆನನ್ ಅನುಮತಿಯಿಲ್ಲದೇ ದಿಢೀರನೇ ಮನೆಗೆ ಧಾವಿಸಿ ಅಪ್ ಕಮಿಂಗ್ ಸಿನಿಮಾದಲ್ಲಿ ಮಾತನಾಡುವುದಕ್ಕೆ ಮುಂದಾಗಿದ್ದರು. ಆಗ ನಿತ್ಯಾ ಈಗ ಸದ್ಯಕ್ಕೆ ನನ್ನ ಆರೋಗ್ಯ ಸರಿ ಇಲ್ಲ. ನನ್ನ ಆರೋಗ್ಯ ಸುಧಾರಿಸಿದ ಮೇಲೆ ಮಾತನಾಡೋಣ ಎಂದಿದ್ದರು. ಇಷ್ಟಕ್ಕೇ ಸಿಟ್ಟಾದ ನಿರ್ಮಾಪಕರು ಕೂಡಲೇ ಮಲಯಾಳಂನ ಹಿರಿಯ ನಿರ್ಮಾಪಕ ಜಿ.ಸುರೇಶ್ ಕುಮಾರ್ ನೇತೃತ್ವದಲ್ಲಿ ಸಭೆ ಕರೆದರು. ನಿತ್ಯಾ ಮೆನನ್ ಗೆ ಅಹಂಕಾರ ಜಾಸ್ತಿ ಈ ಕ್ಷಣದಿಂದನೇ ಅವರನ್ನ ಬ್ಯಾನ್ ಮಾಡಬೇಕೆಂದು ಆಗ್ರಹಿಸಿದರು. ಇನ್ನೂ ಇದೇ ವಿಚಾರಕ್ಕೆ ಅವತ್ತು ಪ್ರತಿಕ್ರಿಯೆ ನೀಡಿದ್ದ ನಿತ್ಯಾ ಮೆನನ್, ನನಗೆ ಅಹಂಕಾರವಿಲ್ಲ. ಅಂತಹ ಅಹಂಕಾರವಿರುವ ನಿರ್ಮಾಪಕರ ಜತೆಗೆ ನಾನು ಮಾತನಾಡಲು ಇಚ್ಛಿಸುವುದಿಲ್ಲ ಎಂದು ಖಡಕ್‌ ಆಗಿ ಹೇಳಿದ್ರು.

ಆದ್ರೆ ಮಳಯಾಲಂ ಚಿತ್ರದಲ್ಲಿ ಮುಂಚೂಣಿ ನಾಯಕಿಯರ ಪಟ್ಟಿಯಲ್ಲಿದ್ದ ಈಕೆ 2019 ರಿಂದ ಇಲ್ಲಿಯವರೆಗೆ ಅವರು ನಟಿಸಿರುವುದು ಕೇವಲ ಬೆರಳೆಣಿಕೆಯ ಸಿನೆಮಾ. ಹೌದು ಇವರ ನೇರ ನುಡಿ ಖಡಕ್ ಮಾತು ಇವರ ವೃತ್ತಿ ಜೀವನಕ್ಕೆ ಪೆಟ್ಟು ಬಿದ್ದಿದೆ ಅಂದ್ರೆ ತಪ್ಪಾಗಲ್ಲ.

FILM

ಟಿ ಆರ್ ಪಿ ಪಟ್ಟಿಯಲ್ಲಿ ಯಾವ ಧಾರಾವಾಹಿಗೆ ಸಿಕ್ಕಿದೆ ಮೊದಲ ಸ್ಥಾನ?

Published

on

ಬೆಂಗಳೂರು : ‘ಕಿರುತೆರೆ’ ಜನರ ನೆಚ್ಚಿನ ಮನರಂಜನಾ ತಾಣ. ಇಲ್ಲಿ ಸಾವಿರಾರು ಧಾರಾವಾಹಿಗಳು, ರಿಯಾಲಿಟಿ ಶೋ ಗಳದೇ ದರ್ಬಾರು. ಮನೆಮಂದಿಯೆಲ್ಲಾ ಕಿರುತೆರೆಯನ್ನು ನೆಚ್ಚಿಕೊಂಡಿದ್ದಾರೆ. ದೈನಂದಿನ ದಿನಚರಿಯಲ್ಲಿ ಧಾರಾವಾಹಿಗಳೂ ಸೇರಿಕೊಂಡಿವೆ. ತಮ್ಮ ನೆಚ್ಚಿನ ಧಾರಾವಾಹಿಗಳನ್ನು ನೋಡಲು ಕಾಯುತ್ತಿರುತ್ತಾರೆ.

ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರೂ ಧಾರಾವಾಹಿ ಪ್ರಿಯರು. ಮಧ್ಯಾಹ್ನ, ರಾತ್ರಿ ಪ್ರಸಾರವಾಗುವ ಧಾರಾವಾಹಿಗಳನ್ನು ಬಿಡದೆ ನೋಡುವ ವರ್ಗವಿದೆ. ಆಯಾ ಧಾರಾವಾಹಿಗೆ ಆಯಾ ವೀಕ್ಷಕ ವರ್ಗವಿದೆ. ಹೀಗಿರುವ ಯಾವ ಧಾರಾವಾಹಿ ಎಷ್ಟು ಟಿ ಆರ್ ಪಿ ಹೊಂದಿದೆ ಅನ್ನೋ ಡಿಟೇಲ್ಸ್ ಇಲ್ಲಿದೆ.

ಟಾಪ್ 5 ಧಾರಾವಾಹಿಗಳು :

ಪುಟ್ಟಕ್ಕನ ಮಕ್ಕಳು


ಮೂವರು ಹೆಣ್ಣುಮಕ್ಕಳ ತಾಯಿಯಾಗಿ ಕಷ್ಟ ಕಾರ್ಪಣ್ಯಗಳಿಂದ ಬೆಂದಿರುವ ಮಹಿಳೆಯ ಪ್ರಧಾನ ಕಥೆ ಒಳಗೊಂಡಿರುವ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’. ಹಿರಿಯ ನಟಿ ಉಮಾಶ್ರೀ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿ 17ನೇ ವಾರದ ಟಿಆರ್​ಪಿ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ವೀಕ್ಷಕರ ಅಚ್ಚುಮೆಚ್ಚಿನ ಧಾರಾವಾಹಿಯಾಗಿ ಹೊರಹೊಮ್ಮಿದೆ. ಹಿರಿಯ ನಟಿ ಉಮಾಶ್ರೀ, ಹಿರಿಯ ನಟ ರಮೇಶ್‌ ಪಂಡಿತ್‌, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಪಾತ್ರವಾಗಿದೆ.

ಲಕ್ಷ್ಮೀ ನಿವಾಸ

ಇತ್ತೀಚೆಗೆ ಆರಂಭಗೊಂಡ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದೀಗ ಟಿಆರ್‌ಪಿ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮೊದ ಮೊದಲು ಮೊದಲ ಸ್ಥಾನದಲ್ಲಿದ್ದ ಲಕ್ಷ್ಮೀ ನಿವಾಸ ಧಾರಾವಾಹಿ ಈ ವಾರ ಕೆಲವೇ ಕೆಲವು ಪಾಯಿಂಟ್‌ ಅಂತರದಲ್ಲಿ ಎರಡನೇ ಸ್ಥಾನದದಲ್ಲಿದೆ. ಕೌಟುಂಬಿಕ ಕಥಾಹಂದರವುಳ್ಳ ಈ ಧಾರಾವಾಹಿ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ನವಿರಾದ ಪ್ರೇಮಕಥೆ, ಸಂಸಾರದ ತಲ್ಲಣಗಳಿವೆ.

ಸೀತಾ ರಾಮ


ನವಿರಾದ ಪ್ರೇಮಕಥೆ ಇರುವ ಸೀತಾ ರಾಮ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಜನಮನ ಗೆದ್ದಿರುವ ಈ ಧಾರಾವಾಹಿಯಲ್ಲಿ ಪುಟಾಣಿ ಸಿಹಿ ಎಲ್ಲರಿಗೂ ಅಚ್ಚುಮೆಚ್ಚು. ದಿನದಿಂದ ದಿನಕ್ಕೆ ಸೀತಾ ರಾಮ ಧಾರಾವಾಹಿ ಕುತೂಹಲ ಪೂರ್ಣವಾಗಿ ಸಾಗುತ್ತಿದೆ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್ ಮೊದಲಾದವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ : ಅಭಿಮಾನಿಗಳಿಗೆ ಹೊಸ ಸಿನಿಮಾದ ಗುಡ್ ನ್ಯೂಸ್ ಕೊಟ್ಟ ಶಾರುಖ್

ಶ್ರಾವಣಿ ಸುಬ್ರಮಣ್ಯ


ಇತ್ತೀಚೆಗೆ ಆರಂಭಗೊಂಡ ವಿಭಿನ್ನ ಕಥಾ ಹಂದರ ಹೊಂದಿರುವ ಶ್ರಾವಣಿ ಸುಬ್ರಮಣ್ಯ ಧಾರಾವಾಹಿ ಟಿಆರ್​ಪಿ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮಿನಿಸ್ಟರ್‌ ಮಗಳು ಶ್ರಾವಣಿಯ ತರಲೆ, ಮಿನಿಸ್ಟರ್‌ ಬಲಗೈ ಬಂಟ ಸುಬ್ರಮಣ್ಯನ ಕಥೆ ಧಾರಾವಾಹಿಯಲ್ಲಿದೆ. ಮಗಳನ್ನು ದ್ವೇಷಿಸುವ ತಂದೆ, ತಂದೆಯನ್ನು ಪ್ರೀತಿಸುವ ಮಗಳು, ಒಂದಷ್ಟು ಸಸ್ಪೆನ್ಸ್ ಧಾರಾವಾಹಿಯ ಜೀವಾಳ.

ರಾಮಾಚಾರಿ :


ವಿಭಿನ್ನ ಕತೆಯನ್ನೊಳಗೊಂಡ ರಾಮಾಚಾರಿ ಆರಂಭದಿಂದಲೂ ಜನಮನ ಗೆದ್ದಿತ್ತು. ಟಿಆರ್​ಪಿ ಪಟ್ಟಿಯಲ್ಲಿ ರಾಮಾಚಾರಿ ಐದನೇ ಸ್ಥಾನದಲ್ಲಿದೆ. ಸದ್ಯ ಧಾರಾವಾಹಿ ಬೇರೆಯೇ ಆದ ಆಯಾಮಕ್ಕೆ ಹೊರಳಿದೆ. ರಾಮಾಚಾರಿಗೊಬ್ಬ ತಮ್ಮನೂ ಎಂಟ್ರಿ ಕೊಟ್ಟಾಗಿದೆ. ಅಣ್ಣ-ತಮ್ಮ ಹಾಗೂ ಚಾರು ಒಂದಾಗಿ ಶತ್ರುಗಳ ವಿರುದ್ಧ ಗೆಲ್ಲುವ ಹೋರಾಟಕ್ಕೆ ಇಳಿದಿದ್ದಾರೆ.

Continue Reading

FILM

ಅಭಿಮಾನಿಗಳಿಗೆ ಹೊಸ ಸಿನಿಮಾದ ಗುಡ್ ನ್ಯೂಸ್ ಕೊಟ್ಟ ಶಾರುಖ್

Published

on

ಮುಂಬೈ : ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಪಠಾಣ್, ಜವಾನ್, ಡಂಕಿ ಸಿನಿಮಾದ ನಂತರ ಹೊಸ ಸಿನಿಮಾ ಘೋಷಣೆ ಮಾಡದೇ ಉಳಿದಿದ್ದ ಅವರು, ಅಭಿಮಾನಿಗಳಿಗೆ ಹೊಸ ಚಿತ್ರದ ಅಪ್ ಡೇಟ್ ನೀಡಿದ್ದಾರೆ. ತಮ್ಮ ಹೊಸ ಸಿನಿಮಾ ಜುಲೈ ಅಥವಾ ಆಗಸ್ಟ್ ನಿಂದ ಶುರುವಾಗಲಿದೆ ಎಂದಿದ್ದಾರೆ. ಉಳಿದಂತೆ ಅವರು ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

 

ಈ ನಡುವೆ ಶಾರುಖ್ ಖಾನ್ ಕುರಿತಾಗಿ ದಕ್ಷಿಣದ ಹೆಸರಾಂತ ನಟ ಕಮಲ್ ಹಾಸನ್ ಅಚ್ಚರಿಯ ಮಾತುಗಳನ್ನು ಆಡಿದ್ದಾರೆ.  ಪುತ್ರಿ ಶ್ರುತಿ ಹಾಸನ್ ಜೊತೆಗಿನ ಮಾತುಕತೆಯಲ್ಲಿ ಶಾರುಕ್ ಆಸೆಗಳನ್ನು ಅವರು ರಿವೀಲ್ ಮಾಡಿದ್ದಾರೆ.

ತಂದೆಗೆ ಇನ್ನೂ ಏನಾದರೂ ಆಸೆಗಳು ಉಳಿದಿದ್ದವಾ? ಎಂದು ಶ್ರುತಿ ಕೇಳ್ತಾರೆ. ಆಗ ಯಾವುದೇ ಆಸೆಗಳು ಇಲ್ಲ ಎಂದು ಹೇಳುವ ಕಮಲ್ ಹಾಸನ್, ಈ ಸಮಯದಲ್ಲಿ ಶಾರುಖ್ ಆಸೆಯನ್ನು ಹೊರ ಹಾಕುತ್ತಾರೆ. ಮಣಿರತ್ನಂ ಜೊತೆ ಸಿನಿಮಾ ಮಾಡಬೇಕು ಎನ್ನುವುದು ಶಾರುಖ್ ಆಸೆ. ಅದಕ್ಕಾಗಿ ಅವರು ಪ್ರೈವೆಟ್ ಜೆಟ್ ತಗೆದುಕೊಳ್ಳೊ ಕನಸು ಕಂಡಿದ್ದಾರೆ ಎಂದಿದ್ದಾರೆ ಕಮಲ್.

ಶಾರುಖ್ ಅವರಿಗೆ ವಿಮಾನ ಖರೀದಿಸುವ ಮತ್ತು ಮಣಿರತ್ನಂ ಸಿನಿಮಾದಲ್ಲಿ ನಟಿಸುವ ಆಸೆಯನ್ನು ವ್ಯಕ್ತ ಪಡಿಸಿರುವ ವಿಚಾರ ಅವರ ಅಭಿಮಾನಿಗಳಲ್ಲಿ ಸಹಜವಾಗಿಯೇ ಅಚ್ಚರಿ ತರಿಸಿದೆ. ವಿಮಾನ ಏನೋ ಖರೀದಿಸಬಹುದು. ಆದರೆ, ಮಣಿರತ್ನಂ ಅವರನ್ನು ಖರೀದಿಸೋಕೆ ಆಗಲ್ಲ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

Continue Reading

FILM

ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

Published

on

ದೆಹಲಿ: ಆಗ್ರಾದ ಶಾಲೆಯೊಂದರಲ್ಲಿ ಪ್ರಾಂಶುಪಾಲೆ ಹಾಗೂ ಶಿಕ್ಷಕಿ ನಡುವೆ ಮಾತಿನ ಚಕಾಮಕಿ ನಡೆದು ಬಳಿಕ ದೈಹಿಕವಾಗಿ ಹೊಡೆದಾಡಿಕೊಂಡಿರುವ ಘಟನೆ ಮೇ.3ರಂದು ನಡೆದಿದೆ.

fight

ಮುಂದೆ ಓದಿ..; ಮಹಿಳೆಯರ ಸುರಕ್ಷತೆಗೆ ಬಂತು ‘ವುಮೆನ್ ಸೇಫ್ಟೀ’ ಅಪ್ಲಿಕೇಷನ್‌..!

ಪ್ರಾಂಶುಪಾಲರು ಶಿಕ್ಷಕಿ ಶಾಲೆಗೆ ತಡವಾಗಿ ಬರುವುದನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಶಿಕ್ಷಕಿ ಪ್ರಾಂಶುಪಾಲೆಗೆ ನೀವು ಕೂಡ ನಾಲ್ಕು  ದಿನಗಳಿಂದ ತಡವಾಗಿ ಬರುತ್ತಿದ್ದೀರಲ್ವಾ ಎಂದು ಮರುತ್ತರಿಸಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಹೆಚ್‌ಎಮ್ ಶಿಕ್ಷಕಿ ಜೊತೆ ವಾಗ್ವಾದಕ್ಕಿಳಿದು ಕೊನೆಗೆ ಹೊಡೆದಾಡಿಕೊಂಡಿದ್ದಾರೆ. ಶಿಕ್ಷಕಿ ಗುಂಜಾ ಚೌಧರಿ ಹಾಗೂ ಪ್ರಾಂಶುಪಾಲೆ ಇಬ್ಬರೂ  ಹಿಡಿದು ಎಳೆದಾಡಿದ್ದಾರೆ.  ಈ ವೇಳೆ ಶಿಕ್ಷಕಿಯ ಕಣ್ಣಿಗೆ ಗಾಯಗಳಾಗಿದೆ. ಇನ್ನು ಶಿಕ್ಷಕಿ ಪ್ರಾಂಶುಪಾಲರ ಬಟ್ಟೆಯನ್ನು ಹರಿದು ಹಾಕಿದ್ದಾರೆ. ಈ ಮಧ್ಯೆ ಅಲ್ಲೇ ಇದ್ದ ಸಿಬಂದಿಗಳು ಗಲಾಟೆಯನ್ನು ಬಿಡಿಸಲು ಪ್ರಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗಲಿಲ್ಲ. ಇನ್ನು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಭಾರೀ ಚರ್ಚೆ ಒಳಗಾಗಿದೆ.

Continue Reading

LATEST NEWS

Trending