Connect with us

    LATEST NEWS

    ಹೆಂಗಸರ ಬಾಯಲ್ಲಿ ಗುಟ್ಟು ಯಾಕೆ ನಿಲ್ಲೋದಿಲ್ಲ ಗೊತ್ತಾ!?

    Published

    on

    ಓ ದೇವರೇ ಈ ಹೆಂಗಸರು ಯಾಕೆ ಹೀಗೆ, ಎಲ್ಲಾ ವಿಷಯನ್ನು ಬೇಗನೇ ಯಾರಲ್ಲಾದರೂ ಹೇಳಿ ಬಿಡುತ್ತಾರೆ. ಯಾರ ಬಳಿ ಬೇಕಾದರೂ ಗುಟ್ಟಿನ ವಿಚಾರವನ್ನು ಹೇಳಿಕೊಳ್ಳಬಹುದು ಆದರೆ ಈ ಹೆಂಗಸರ ಬಳಿ ಮಾತ್ರ ಯಾವುದೇ ಸೀಕ್ರೆಟ್ ವಿಷಯವನ್ನು ಹಂಚಿಕೊಳ್ಳಬಾರದು. ಅವರು ಗುಟ್ಟಿನ ವಿಚಾರಗಳನ್ನೆಲ್ಲಾ ಊರಿಡಿ ಪ್ರಚಾರ ಮಾಡಿ ಬಿಡುತ್ತಾರೆ ಎಂದು ಹೇಳುವ ಮಾತನ್ನು ನಾವೆಲ್ಲರೂ ಕೇಳಿರಬಹುದು. ಒಂದು ಲೆಕ್ಕದಲ್ಲಿ ಅದು ನಿಜಾನೇ ಅಲ್ವಾ…?

    ಅಷ್ಟಕ್ಕೂ ಈ ಮಹಿಳೆಯರ ಬಾಯಲ್ಲಿ ಗುಟ್ಟುಗಳು ಯಾಕೆ ನಿಲ್ಲೋದಿಲ್ಲ ಎಂದು ನಿಮಗೆ ಗೊತ್ತಾ? ಇದರ ಹಿಂದೆಯೂ ಒಂದು ಕಾರಣವಿದೆ. ಈ ಕುರಿತ ಕುತೂಹಲಕಾರಿಯಾದ ಕಥೆಯೊಂದಿದೆ. ಹೆಂಗಸರ ಬಾಯಲ್ಲಿ ಗುಟ್ಟು ನಿಲ್ಲದೇ ಇರೋದಕ್ಕೂ ಮಹಾಭಾರತಕ್ಕೂ ಸಂಬಂಧವಿದೆಯಂತೆ. ಈ ರಹಸ್ಯ ಏನು ಎಂಬುದನ್ನು ನೋಡೋಣ.

    ಯುಧಿಷ್ಟಿರನ ಶಾಪ!

    ಹೆಂಗಸರ ಬಾಯಲ್ಲಿ ಗುಟ್ಟು ಯಾಕೆ ನಿಲ್ಲಲ್ಲ ಎಂದರೆ ಇದು ಮಹಿಳೆಯರಿಗೆ ಯುಧಿಷ್ಟಿರ ಕೊಟ್ಟಂತಹ ಶಾಪವಂತೆ. ಈ ಶಾಪದ ಕಾರಣವೆಂದರೆ ಮಹಾಭಾರತ ಯುದ್ಧ ಕೊನೆಗೊಂಡ ನಂತರ ಪಾಂಡವರು ಧೃತರಾಷ್ಟನ ಬಳಿ ಬರುತ್ತಾರೆ. ಬಳಿಕ ಯುಧಿಷ್ಟಿರ ಯುದ್ಧದಲ್ಲಿ ಮಡಿದವರ ಮತ್ತು ಕಾಣೆಯಾದವರ ಸಂಖ್ಯೆಯನ್ನು ಪಡೆದುಕೊಂಡು ಯುದ್ಧದಲ್ಲಿ ಸಾವನ್ನಪ್ಪಿದವರನ್ನೆಲ್ಲಾ ಶಾಸ್ತ್ರ ಸಂಪ್ರದಾಯದ ಪ್ರಕಾರ ಸುಟ್ಟು, ಗಂಗೆಯಲ್ಲಿ ಅವರ ಶ್ರಾದ್ಧ ಕಾರ್ಯ ಮಾಡಿ ತರ್ಪಣ ಬಿಡುತ್ತಾನೆ.

    ಆ ಸಂದರ್ಭದಲ್ಲಿ ಕೌರವ ಸ್ತ್ರೀಯರು ತಮ್ಮ ತಮ್ಮ ಪತಿಯರಿಗೆ ಕೊನೆಯ ಬಾರಿ ಬಾಯಿಗೆ ನೀರು ಬಿಡುತ್ತಾರೆ. ಆದರೆ ಕರ್ಣನಿಗೆ ಯಾರು ತರ್ಪಣ ಬಿಡದಂತಾದಾಗ ಕುಂತಿ ಪಾಂಡವರಿಗೆ ಮೆಲ್ಲನೆ ಹೇಳುತ್ತಾಳೆ, ʼಕರ್ಣ ನಿಮ್ಮ ಜೇಷ್ಠ ಸಹೋದರ. ಅವನಿಗೂ ಒಂದು ತರ್ಪಣ ಬಿಡಿ ಎಂದು. ಮೊದಲೇ ಪುತ್ರರು ಮತ್ತು ಹಿತೈಷಿಗಳನ್ನು ಕಳೆದುಕೊಂಡು ದುಃಖದಲ್ಲಿದ್ದ ಪಾಂಡವರಿಗೆ ಕುಂತಿಯ ಈ ಮಾತು ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಕರ್ಣ ನಮ್ಮ ಸಹೋದರ ಹೇಗಾಗುತ್ತಾನೆ ಎಂದು ಪಾಂಡವರು ಕುಂತಿಯ ಬಳಿ ಪ್ರಶ್ನೆ ಮಾಡುತ್ತಾರೆ. ಆಗ ಕುಂತಿ ತನ್ನ ಹಿಂದಿನ ಕಥೆಯನ್ನು ಹೇಳುತ್ತಾಳೆ. ಈ ಕಥೆಯನ್ನು ಕೇಳಿ ತೀವ್ರ ಆಘಾತಕ್ಕೊಳಗಾದ ಯುಧಿಷ್ಠಿರ, ಅಮ್ಮ ನೀವು ಈ ಸತ್ಯವನ್ನು ಮೊದಲೇ ಹೇಳಿದ್ದರೆ, ಈ ಮಹಾನ್ ಯುದ್ಧ ನಡೆಯುವುದೇ ತಪ್ಪಿ ಹೋಗುತ್ತಿತ್ತು. ಇದನ್ನು ಏಕೆ ಮುಚ್ಚಿಟ್ಟೆ ಎಂದು ತಾಯಿಯ ಬಳಿ ಯುಧಿಷ್ಠಿರ ದುಃಖದಿಂದ ಹೇಳುತ್ತಾನೆ.

    ಹೀಗೆ ಕೊನೆಯಲ್ಲಿ ಯುಧಿಷ್ಠಿರ ಸೋದರ ತರ್ಪಣ ಬಿಟ್ಟ ಮೇಲೆ ‘ಇನ್ನು ಮುಂದೆ ಹೆಂಗಸರ ಬಾಯಲ್ಲಿ ಯಾವುದೇ ಗುಟ್ಟುಗಳು ನಿಲ್ಲೋದು ಬೇಡʼ ಎಂದು ಕೋಪದಿಂದ ಹೆಣ್ಣು ಕುಲಕ್ಕೆ ಶಾಪ ನೀಡುತ್ತಾನೆ. ಈ ಕಾರಣದಿಂದಲೇ ಮಹಿಳೆಯರ ಬಾಯಲ್ಲಿ ಯಾವುದೇ ಗುಟ್ಟುಗಳು ನಿಲ್ಲುವುದಿಲ್ಲವಂತೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending