LATEST NEWS
ರಾತ್ರಿ ಮಲಗಿದಾಗ ತುಂಬಾ ಬೆವರುತ್ತಿದೆಯಾ ? ಯಾಕೆ ಗೊತ್ತಾ ?
ಮಂಗಳೂರು: ರಾತ್ರಿ ನಿದ್ರಿಸುತ್ತಿರುವಾಗ ಬೆವರುವುದು ಸಾಮಾನ್ಯ ಸಮಸ್ಯೆ ಆದರೂ, ಇದಕ್ಕೆ ಒಂದಲ್ಲ ಹಲವು ಕಾರಣಗಳಿರುತ್ತದೆ. ಅತಿಯಾದ ಬೆವರುವಿಕೆ ಇದ್ದರೆ ಜಾಗರೂಕರಾಗಿರಬೇಕು, ಏಕೆಂದರೆ ಇದು ಅನಾರೋಗ್ಯದ ಸಂಕೇತವಾಗಿದೆ. ರಾತ್ರಿಯಲ್ಲಿ ಅತಿಯಾದ ಬೆವರುವಿಕೆಗೆ ಕಾರಣಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.
ರಾತ್ರಿಯಲ್ಲಿ ಬೆವರಿಕೆಯ ಮುಖ್ಯ ಕಾರಣಗಳು:
1. ಹಾರ್ಮೋನ್ ಬದಲಾವಣೆ:
ದೇಹದಲ್ಲಿನ ಹಾರ್ಮೋನುಗಳ ಬದಲಾವಣೆಯಿಂದಾಗಿ, ರಾತ್ರಿಯಲ್ಲಿ ಅತಿಯಾದ ಬೆವರುವಿಕೆ ಸಂಭವಿಸಬಹುದು. ಇದು 45-55 ವರ್ಷ ವಯಸ್ಸಿನ ಮಹಿಳೆಯರಲ್ಲಿ ಋತುಬಂಧದ ಚಿಹ್ನೆಯಾಗಿರಬಹುದು. ಇದಲ್ಲದೆ, ಥೈರಾಯ್ಡ್ನಂತಹ ಸಮಸ್ಯೆಗಳು ಬೆವರುವಿಕೆಗೆ ಕಾರಣವಾಗಬಹುದು.
2. ಒತ್ತಡ ಮತ್ತು ಆತಂಕ:
ಅತಿಯಾದ ಒತ್ತಡ ಮತ್ತು ಆತಂಕದಿಂದಾಗಿ, ದೇಹದಲ್ಲಿ ಅಡ್ರಿನಾಲಿನ್ ಹಾರ್ಮೋನ್ ಮಟ್ಟವು ಹೆಚ್ಚಾಗುತ್ತದೆ, ಇದು ಬೆವರುವಿಕೆಯ ಸಮಸ್ಯೆಯನ್ನು ಉಂಟುಮಾಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಒತ್ತಡವನ್ನು ಕಡಿಮೆ ಮಾಡುವ ಅವಶ್ಯಕತೆಯಿದೆ.
3. ನಿದ್ರೆಯ ಕೊರತೆ:
ನೀವು ರಾತ್ರಿಯಿಡೀ ಎಚ್ಚರವಾಗಿದ್ದರೆ ಅಥವಾ ಕೆಲವು ಕಾರಣಗಳಿಂದ ನಿದ್ರೆ ಮಾಡಲು ಸಾಧ್ಯವಾಗದಿದ್ದರೆ, ಅತಿಯಾಗಿ ಬೆವರು ಬರಬಹುದು. ವಾಸ್ತವವಾಗಿ, ನಿದ್ರೆಯ ಕೊರತೆಯಿಂದಾಗಿ ದೇಹದ ಉಷ್ಣತೆಯು ಹೆಚ್ಚಾಗುತ್ತದೆ, ಇದು ಬೆವರುವಿಕೆಯ ಸಮಸ್ಯೆಯನ್ನು ಉಂಟುಮಾಡುತ್ತದೆ.
4. ಕಡಿಮೆ ರಕ್ತದ ಸಕ್ಕರೆ:
ಹೈಪೊಗ್ಲಿಸಿಮಿಯಾ , ಕಡಿಮೆ ರಕ್ತದ ಸಕ್ಕರೆ ಅಥವಾ ಕಡಿಮೆ ರಕ್ತದ ಗ್ಲೂಕೋಸ್ ಎಂದೂ ಕರೆಯಲ್ಪಡುತ್ತದೆ. ಕಡಿಮೆ ರಕ್ತದ ಸಕ್ಕರೆಯ ಸಂದರ್ಭದಲ್ಲಿ ಸಹ, ಬಹಳಷ್ಟು ಬೆವರು ಸಾಮಾನ್ಯ. ಕಡಿಮೆ ರಕ್ತದ ಸಕ್ಕರೆಯ ಮಟ್ಟದಿಂದಾಗಿ, ಅಡ್ರಿನಾಲಿನ್ ಹಾರ್ಮೋನ್ ಬಿಡುಗಡೆಯಾಗುವುದರಿಂದ ದೇಹವು ರಾತ್ರಿಯಲ್ಲಿ ಹೆಚ್ಚು ಬೆವರುತ್ತದೆ, ಏಕೆಂದರೆ ಈ ಕಾರಣದಿಂದಾಗಿ ಬೆವರು ಗ್ರಂಥಿಗಳು ತುಂಬಾ ಸಕ್ರಿಯವಾಗುತ್ತವೆ.
5. ಕ್ಯಾನ್ಸರ್ ನಂತಹ ರೋಗದ ಲಕ್ಷಣ:
ಕೆಲವು ವಿಧದ ಕ್ಯಾನ್ಸರ್ಗಳಲ್ಲಿ ರಾತ್ರಿ ಬೆವರುವಿಕೆ ಸಂಭವಿಸಬಹುದು. ಇದು ಹೆಚ್ಚಾಗಿ ಲಿಂಫೋಮಾ ಅಂದರೆ ರಕ್ತದ ಕ್ಯಾನ್ಸರ್ ನಲ್ಲಿ ಸಂಭವಿಸುತ್ತದೆ. ಇದಲ್ಲದೇ ಮಧುಮೇಹ, ಹೃದ್ರೋಗದಂತಹ ಗಂಭೀರ ಕಾಯಿಲೆಗಳಲ್ಲಿ ರಾತ್ರಿ ವೇಳೆ ದೇಹ ಹೆಚ್ಚು ಬೆವರುತ್ತದೆ.
DAKSHINA KANNADA
ಕಡಬ: ಅಲಂಕಾರಿನಲ್ಲಿ ಹುಲಿ ಹೆಜ್ಜೆ
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಪರಿಸರದಲ್ಲಿ ಮಂಗಳವಾರ (ಅ.22) ಬೆಳಗ್ಗೆ ಹುಲಿಯೊಂದು ಕಂಡುಬಂದಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ.
ಅಲಂಕಾರು ಗ್ರಾಮದ ನೆಕ್ಕಿಲಾಡಿ ಬೈಲು ನೈಯಲ್ಗ ನಿವಾಸಿ ಜನಾರ್ದನ ಬಂಗೇರ ಎಂಬವರ ಮನೆಯ ಸಮೀಪ ಹುಲಿ ಕಂಡುಬಂದಿದೆ ಎನ್ನಲಾಗಿದೆ.
ಕೂಡಲೇ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಜಯಕುಮಾರ್, ಗಸ್ತು ಅರಣ್ಯ ಪಾಲಕ ರವಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸ್ಥಳ ಪರಿಶೀಲನೆ ವೇಳೆ ಸ್ಥಳದಲ್ಲಿ ಕಾಡುಪ್ರಾಣಿಯ ಹೆಜ್ಜೆ ಗುರುತು ಕಂಡುಬಂದಿದ್ದು ಅದು ಚಿರತೆಯದ್ದೋ ಅಥವಾ ಹುಲಿಯದ್ದೋ ಅನ್ನುವುದು ಪರಿಶೀಲನೆಯ ಬಳಿಕ ತಿಳಿದು ಬರಬೇಕಿದೆ ಎಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
LATEST NEWS
ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ
ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಈ ಪರಿಣಾಮ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದಂತ 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಬೆಂಗಳೂರು ನಗರದಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಮಲ್ಲೇಶ್ವರಂ ಸುತ್ತಾಮುತ್ತ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಮಳೆಯಿಂದಾಗಿ ಮರವೊಂದು ಮುರಿದು ಬಿದ್ದ ಪರಿಣಾಮ ಆಟೋ, ಬೈಕ್ ಜಖಂಗೊಂಡಿದ್ದಾವೆ. ರಸ್ತೆಗಳು ಜಲಾವೃತಗೊಂಡು ಎಲ್ಲೆಲ್ಲೂ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುತ್ತಿದ್ದಾರೆ.
ಮತ್ತೊಂದೆಡೆ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಮೊದಲ ಮಹಡಿಯವರೆಗೆ ನಿರ್ಮಿಸಿದ್ದಂತ ಕಟ್ಟದ ಕುಸಿದು ಬಿದ್ದ ಪರಿಣಾಮ, ಅವಶೇಷಗಳ ಅಡಿಯಲ್ಲಿ ಕೆಲ ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕುಸಿದು ಬಿದ್ದಿರುವಂತ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಿ, ಅದರಡಿಯಲ್ಲಿ ಸಿಲುಕಿರುವಂತ ಕಾರ್ಮಿಕರನ್ನು ರಕ್ಷಣೆ ಮಾಡುವಂತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BIG BOSS
‘ಮೆಟ್ಟು ತಗೊಂಡು ಹೊಡಿತೀನಿ’: ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ
ಜಾಸ್ತಿ ಮಾತನಾಡುತ್ತಾರೆ ಎಂಬ ಕಾರಣದಿಂದಲೇ ಚೈತ್ರಾ ಕುಂದಾಪುರ ಅವರು ಹೈಲೈಟ್ ಆಗುತ್ತಾರೆ. ಆದರೆ ಆ ಮಾತೇ ಅವರಿಗೆ ಮುಳುವಾಗುತ್ತಿದೆ. ಕಳೆದ ವಾರ ಅವರು ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್ಗೆ ಹೇಳಿದ್ದರು. ಆ ಮಾತನ್ನು ಕಿಚ್ಚ ಸುದೀಪ್ ಅವರು ಕಟುವಾಗಿ ಖಂಡಿಸಿದ್ದರು. ಹಾಗಂತ ಚೈತ್ರಾ ಅವರು ತಮ್ಮ ಮಾತಿನ ವರಸೆಯನ್ನು ಬದಲಿಸಿಕೊಂಡಿದ್ದಾರಾ? ಖಂಡಿತಾ ಇಲ್ಲ. ಸೋಮವಾರದ (ಅಕ್ಟೋಬರ್ 21) ಸಂಚಿಕೆಯಲ್ಲಿ ಅವರು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಚಪ್ಪಲಿಯಲ್ಲಿ ಹೊಡೆಯುವ ಬಗ್ಗೆ ಅವರು ಮಾತನಾಡಿದ್ದಾರೆ.
ಕಳೆದ ವಾರ ಜಗದೀಶ್ ಅವರಿಗೆ ಉಗ್ರಂ ಮಂಜು ಅವರು ಚಪ್ಪಲಿ ತೋರಿಸಿದ್ದರು. ಅದು ಸರಿಯಲ್ಲ ಎಂದು ಸುದೀಪ್ ಅವರು ಹೇಳಿದ್ದರು. ಇಂಥ ಹಲವು ಕಾರಣಗಳಿಂದಾಗಿ ಮನೆಯ ಸದಸ್ಯರಿಗೆ ಕಿಚ್ಚ ಕ್ಲಾಸ್ ತೆಗೆದುಕೊಂಡಿದ್ದರು. ಅಷ್ಟಾದರೂ ಕೂಡ ಚೈತ್ರಾ ಅವರು ಮಾತಿನ ವರಸೆ ಬದಲಾಯಿಸಿಕೊಂಡಿಲ್ಲ. ಸಂದರ್ಭ ಬಂದರೆ ತಾವು ಮೆಟ್ಟಿನಲ್ಲಿ ಹೊಡೆಯುವುದಾಗಿ ಚೈತ್ರಾ ಹೇಳಿದ್ದಾರೆ.
ಈ ಮೊದಲು ಹಂಸಾ ಅವರ ಬಗ್ಗೆ ಗೋಲ್ಡ್ ಸುರೇಶ್ ಏನೇನೋ ಕಮೆಂಟ್ ಮಾಡಿದ್ದರು. ಹಂಸಾ ಅವರದ್ದು ಲವ್ ಸ್ಟೋರಿ ನಡೆಯುತ್ತಿತ್ತು ಎಂದು ಅವರು ಹೇಳಿದ್ದರು. ಅದರಿಂದ ಹಂಸಾಗೆ ಬೇಸರ ಆಯಿತು. ಹಾಗಾಗಿ ಅವರು ಈ ವಿಚಾರವನ್ನು ಚೈತ್ರಾ ಕುಂದಾಪುರ ಜೊತೆ ಚರ್ಚೆ ಮಾಡುತ್ತಿದ್ದರು. ಆಗ ಚೈತ್ರಾ ಅವರ ಮಾತುಗಳು ಮೆಟ್ಟಿನ ತನಕ ಹೋಯಿತು.
‘ನನ್ನ ಕ್ಯಾರೆಕ್ಟರ್ ಬಗ್ಗೆ ಯಾರಾದರೂ ಮಾತಾಡಿದರೆ ಮೆಟ್ಟು ತಗೊಂಡು ಹೊಡಿತೀನಿ. ಅದರಿಂದ ನಾನು ಹೊರಗೆ ಹೋದ್ರೂ ಚಿಂತೆ ಇಲ್ಲ. ನಾನು ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೇನೆ. ನನಗೆ ಯಾರ ಹತ್ತಿರವೂ ಸಂಬಂಧ ಕಟ್ಟಬೇಡಿ’ ಎಂದು ಚೈತ್ರಾ ಕುಂದಾಪುರ ಅವರ ಹೇಳಿದ್ದಾರೆ. ಇಂಥ ಮಾತುಗಳನ್ನು ಆಡಿದ್ದಕ್ಕೆ ಸುದೀಪ್ ಅವರು ವೀಕೆಂಡ್ ಸಂಚಿಕೆಯಲ್ಲಿ ಯಾವ ರೀತಿ ಪಂಚಾಯ್ತಿ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.
- BIG BOSS6 days ago
ಲಾಯರ್ ಜಗದೀಶ್ ಹೊರಗೆ, ಪತ್ನಿ ಒಳಗೆ: ಕಲರ್ಸ್ ಶೋನಲ್ಲಿ ಜಗದೀಶ್ ಪತ್ನಿ
- BIG BOSS4 days ago
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
- BIG BOSS5 days ago
ಕೊನೆಗೂ ಸುದೀಪ್ ಹೇಳಿದ ಬದಲಾವಣೆಯನ್ನು ಜಾರಿಗೆ ತಂದ ಬಿಗ್ ಬಾಸ್; ಏನದು ?
- LATEST NEWS5 days ago
ಕೀಬೋರ್ಡ್ನಲ್ಲಿ ಎಫ್ ಮತ್ತು ಜೆ ಅಕ್ಷರಗಳ ಕೆಳಗೆ ಗೆರೆ ಏಕೆ ಇರುತ್ತದೆ ಗೊತ್ತಾ?