LATEST NEWS
ಪ್ರೀತಿಸಿದ ಹುಡುಗ ಬೇಡ; ಯಾವ ಹೀರೋಗೂ ಕಮ್ಮಿ ಇರದವನು ಸಿಗಲಿ; ಬನಶಂಕರಿ ದೇವಿಗೆ ಬಂದಿವೆ ವಿಚಿತ್ರ ಬೇಡಿಕೆಯ ಪತ್ರಗಳು!
ಬೆಂಗಳೂರು : ದೇವಾಲಯಗಳ ಹುಂಡಿಗಳಲ್ಲಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ನೋಟಿನಲ್ಲೋ ಅಥವಾ ಚೀಟಿಯಲ್ಲಿ ಬರೆದೋ ಹಾಕಿರುವುದು ಸಿಗುತ್ತದೆ. ಪರೀಕ್ಷೆಯಲ್ಲಿ ನನ್ನನ್ನು ಪಾಸ್ ಮಾಡು ದೇವರೇ ಎಂಬ ಕೋರಿಕೆ ಅಥವಾ ಪ್ರೀತಿಸಿದ ಹುಡುಗ/ ಹುಡುಗಿ ಸಿಗಲಿ ಎಂಬ ನಿವೇದನೆಯೂ ಇರುತ್ತದೆ. ಪ್ರಸಿದ್ಧ ದೇವಾಲಯಗಳ ಹುಂಡಿಗಳಲ್ಲಿ ಸಾಮಾನ್ಯವಾಗಿ ಪತ್ರ ಸಿಗುತ್ತಿರುತ್ತದೆ.
ಬೆಂಗಳೂರಿನ ಬನಶಂಕರಿ ದೇವಸ್ಥಾನದ ಹುಂಡಿಯಲ್ಲಿ ಈ ಬಾರಿ ವಿಭಿನ್ನ ಬೇಡಿಕೆಗಳ ಪತ್ರ ಸಿಕ್ಕಿವೆ. ಇಲ್ಲಿ ಸಿಕ್ಕಿರುವ ಪತ್ರಗಳಲ್ಲಿ ಒಂದೊಂದು, ಒಂದೊಂದು ತೆರನಾದ ನಿವೇದನೆಯುಳ್ಳ ಪತ್ರಗಳು.
ಈಗ ಅವನು ಬೇಡ, ಯಾವ ಹೀರೋಗೂ ಕಮ್ಮಿ ಇರದವನು ಸಿಗಲಿ :
ಈ ಬಾರಿ ಸಿಕ್ಕಿರುವ ಪತ್ರದಲ್ಲಿ ವಿಭಿನ್ನ ಬೇಡಿಕೆಯಿದೆ. ಈ ಪತ್ರಗಳನ್ನು ನೋಡಿ ಆಡಳಿತ ಮಂಡಳಿಯವರು ಶಾಕ್ ಆಗಿದ್ದಾರೆ. “ಅಮ್ಮ ನಾನು ತಪ್ಪು ಮಾಡಿದ್ದೇನೆ ಕ್ಷಮಿಸಿ, ಹಿಂದೆ ಪತ್ರ ಬರೆದಾಗ ನಾನು ಗೋಪಿನಾಥ್ ಬಿಟ್ಟರೇ ಯಾರನ್ನು ಮದುವೆ ಆಗದಂತೆ ಬಯಸಿದ್ದೆ. ಈಗ ಅವನು ನನಗೆ ಬೇಡ. ಆದಷ್ಟು ಬೇಗ ಮುಂದಿನ ವರ್ಷ ನನ್ನ ಮದುವೆಯನ್ನು, ಒಳ್ಳೆಯ ಹೆಸರು, ಕೀರ್ತಿ, ಹೃದಯವಂತ, ಗುಣವಂತ, ಸಿರಿವಂತ, ಐಶ್ವರ್ಯವಂತ ಯಾವ ಹೀರೋಗೂ ಕಡಿಮೆ ಇರಬಾರದು. ಅಷ್ಟು ಚೆನ್ನಾಗಿರುವ ಒಳ್ಳೆಯ ಐಎಎಸ್ ಅಧಿಕಾರಿ ಜೊತೆ ಮಾಡಿಸು” ಎಂದು ಪತ್ರವೊಂದರಲ್ಲಿ ಬರೆಯಲಾಗಿದೆ.
ಅಲ್ಲದೇ, “ನನ್ನ ಗಂಡ ಬೇರೆ ಯಾವ ಹೆಂಗಸರನ್ನು, ಹುಡುಗಿಯರನ್ನು ಕೆಟ್ಟ ದೃಷ್ಟಿಯಿಂದ ನೋಡಬಾರದು. ನನ್ನನ್ನು ಹೆಚ್ಚಾಗಿ ಪ್ರೀತಿ ಮಾಡಬೇಕು. ನಾನೆಂದರೇ ಅವರಿಗೆ ಜೀವ ಆಗಿರಬೇಕು. ನನಗೆ ಮಕ್ಕಳು, ಮೊಮ್ಮಕ್ಕಳ ಜೊತೆ ಜೀವನ ಮಾಡಬೇಕು, ಇಷ್ಟು ವರ್ಷ ಕಾದಿದ್ದಕ್ಕೆ ಒಳ್ಳೆ ಹುಡುಗ ಸಿಕ್ಕಾ ಅಂತ ಆಡಿಕೊಳ್ಳುವವರ ಬಾಯಿ ಮುಚ್ಚಿಸಬೇಕು ಅಂತ ಹುಡುಗನ ಜೊತೆ ಮದುವೆ ಮಾಡಿಸು” ಎಂದು ಯುವತಿಯೊಬ್ಬಳು ದೇವರಿಗೆ ಪತ್ರ ಬರೆದಿದ್ದಾಳೆ.
ರಮ್ಯ ಮತ್ತು ಉಮೇಶ್ ದೂರವಾಗಲಿ…ತಾಯಿ ಆಸ್ತಿ ನನಗೇ ಸಿಗಲಿ…
ಸಿಕ್ಕಿರುವ ಪತ್ರವೊಂದರಲ್ಲಿ ಆಸ್ತಿಯ ಬಗ್ಗೆ ಬರೆಯಾಗಲಿ. ‘ನನ್ನ ತಾಯಿ ಮನೆಯಿಂದ ನನಗೆ ಬರಬೇಕಾಗಿರುವ ಆಸ್ತಿ ನನಗೆ ಯಾವುದೇ ಅಡ್ಡಿಯಾಗದೆ ಬರುವಂತೆ ಮಾಡು. ಯಾವುದೇ ಅಡ್ಡಿ ಇಲ್ಲದೇ ನನಗೆ ಸಿಗೋಥರ ಮಾಡು ತಾಯಿ ಎಂದು ಬರೆಯಾಗಲಿದೆ.
ಮತ್ತೊಂದು ಪತ್ರದಲ್ಲಿ ಅಮ್ಮ ತಾಯಿ, ರಮ್ಯ ಮತ್ತು ಉಮೇಶ್ ಇಬ್ಬರು ದೂರ ಆಗುವಂತೆ ಮಾಡು. ಇವರಿಂದ ಒಂದು ಸಂಸಾರ ದೂರ ಆಗುತ್ತದೆ. ಅವರ ತಪ್ಪಿಗೆ ಶಿಕ್ಷೆ ಕೊಡು ತಾಯಿ ಎಂದು ಪತ್ರ ಬರೆದಿದ್ದಾರೆ.
ಇದನ್ನೂ ಓದಿ : ಕಾರು ಪಲ್ಟಿ; ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ನಾಲ್ವರು ಸಾ*ವು
ಇನ್ನೊಂದು ಪತ್ರದಲ್ಲಿ ತಾಯಿ ಮಗನ ಬಗ್ಗೆ ಆತನ ಸಾಂಸಾರಿಕ ಬದುಕಿನ ಬಗ್ಗೆ ಪ್ರಾರ್ಥಿಸಿದ್ದಾಳೆ. ಅಮ್ಮ ತಾಯಿ ನಿನ್ನಲ್ಲಿ ನನ್ನದು ಒಂದು ಕೋರಿಕೆ, ನನ್ನ ಮಗ ಶಶಾಂಕ್ನ ನಿಶ್ಚಿತಾರ್ಥ ಆಗಿದೆ. ನನ್ನ ಮಗನನ್ನು ಮದುವೆ ಆಗುತ್ತಿರುವ ಹುಡುಗಿ ರಮ್ಯ ನನ್ನ ಮಗನ ಜೊತೆ ಚೆನ್ನಾಗಿದೆ ಇರುವಂತೆ ಮಾಡು. ನನ್ನ ಜೊತೆ, ನಮ್ಮ ಮನೆಯವರ ಜೊತೆ ಸಂತೋಷದಿಂದ ಇರುವಂತೆ ಮಾಡು ಯಾವುದೇ ಬೇಜಾರು ಇಲ್ಲದೆ ಸಂಸಾರ ನಡೆಸಿಕೊಂಡು ಹೋಗುವಂತೆ ಮಾಡು ತಾಯಿ ಎಂದು ಬರೆಯಲಾಗಿದೆ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
LATEST NEWS
WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.
ಸೀಟ್ ಗಾಗಿ ಎಡವಟ್ಟು :
ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.
ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್ಗೆ 60 ರೂ., ಹಾಲ್ಫ್ಗೆ 40 ರೂ.
ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.
ರೋಹಿತ್ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ
Pingback: ಮದುವೆ ಗೌನ್ ನಲ್ಲಿ ಮಿಂಚಬೇಕಿದ್ದ ಯುವತಿ ಗ್ಯಾಸ್ಟ್ರಿಕ್ ಬಲೂನ್ ಸರ್ಜರಿಯಿಂದ ಸಾ*ವು! - NAMMAKUDLA NEWS - ನಮ್ಮಕುಡ್ಲ ನ್ಯೂ