Connect with us

    DAKSHINA KANNADA

    ಊಟದ ಬಳಿಕ ಟೀ ಕುಡಿಯೋರೇ ಎಚ್ಚರ! ಈ ಸ್ಟೋರಿ ಓದಿ

    Published

    on

    ಮಂಗಳೂರು: ಕಾಫಿ ಹಾಗೂ ಟೀ ಎಂದರೇ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಬೆಳಗ್ಗೆ ಎದ್ದು, ಹಾಲು, ಕಾಫಿ, ಟೀ ಇಲ್ಲದೇ ಇದ್ದರೆ ಲೈಫ್ ಬೋರು ಅಂತಾರೇ ಜನರು. ಅದರಲ್ಲೂ ಕೆಲವರಂತೂ ಟೀ ಹಾಗೂ ಕಾಫಿಯಿಂದಲೇ ದಿನವನ್ನು ಶುರು ಮಾಡುತ್ತಾರೆ. ಬೆಳಗ್ಗೆ ಎದ್ದಾಗ ಒಂದು ಟೀ, ಟಿಫನ್​ ಬಳಿಕ ಒಂದು ಟೀ, ಮಧ್ಯಾಹ್ನ ಊಟದ ಬಳಿಕ ಒಂದು ಟೀ, ಸಂಜೆಯ ಹೊತ್ತಲ್ಲಿ ಹೀಗೆ ದಿನದಲ್ಲಿ ಐದಾರು ಭಾರೀ ಟೀ ಅಥವಾ ಕಾಫಿ ಕುಡಿಯೋ ಜನರು ಇದ್ದಾರೆ. ಆದರೆ ಈ ಟೀ ಮತ್ತು ಕಾಫಿಯನ್ನು ಪದೇ ಪದೇ ಕುಡಿಯೋ ಲವರ್ಸ್‌ ಈ ಸ್ಟೋರಿ ಓದಲೇಬೇಕು.

    ಊಟದ ಬಳಿಕ ಟೀ ಕುಡಿಯೋ ಅಭ್ಯಾಸ ಬಿಟ್ಟುಬಿಡಿ

    ನೀವೇನಾದರೂ ಊಟವಾದ ಬಳಿಕ ಅಥವಾ ಮೊದಲು ಟೀ, ಕಾಫಿ ಸೇವಿಸುತ್ತಿದ್ದರೆ ಈ ಕೂಡಲೇ ಆ ಅಭ್ಯಾಸವನ್ನು ಬಿಟ್ಟುಬಿಡಿ. ಹೀಗೆಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಆಘಾತಕಾರಿ ಮಾಹಿತಿಯೊಂದನ್ನು ಬಿಡುಗಡೆ ಮಾಡಿದೆ.  ಏಕೆಂದರೆ ಈ ಪಾನೀಯಗಳು ಆಹಾರದಲ್ಲಿನ ಕಬ್ಬಿಣಾಂಶವನ್ನು ಹೀರಿಕೊಳ್ಳುವ ಸಾಮರ್ಥ್ಯವನ್ನು ಹೊಂದಿವೆ. ರಕ್ತ ಉತ್ಪಾದನೆಗೆ ಕಬ್ಬಿಣಾಂಶ ಅತ್ಯಗತ್ಯ. ದೇಹದ ಶೇ.70ರಷ್ಟು ಕಬ್ಬಿಣಾಂಶವು ಹೀಮೊಗ್ಲೋಬಿನ್ ಕೆಂಪು ರಕ್ತಕಣಗಳಲ್ಲಿ ಇರುತ್ತದೆ. ಹೀಗಾಗಿ ಟೀ ಅಥವಾ ಕಾಫಿ ಕುಡಿಯುವುದರಿಂದ ಕಬ್ಬಿಣಾಂಶ ಕೊರತೆಯಾಗಿ ರಕ್ತಹೀನತೆಗೆ ಕಾರಣವಾಗುತ್ತದೆ ಎಂದು ಐಸಿಎಂಆರ್ ತಿಳಿಸಿದೆ.

    ಟೀ ಮತ್ತು ಕಾಫಿಗಳಲ್ಲಿ ಕೆಫೀನ್ ಇರುತ್ತದೆ. ಇದು ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಶಾರೀರಿಕ ಅವಲಂಬನೆಯನ್ನು ಪ್ರೇರೇಪಿಸುತ್ತದೆ ಎಂದು ಸಂಶೋಧಕರು ಮಾಹಿತಿ ನೀಡಿದ್ದಾರೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಇತ್ತೀಚೆಗೆ ಭಾರತೀಯರಿಗೆ 17 ಆಹಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತ್ತು. ಆ ಮಾರ್ಗಸೂಚಿಯಲ್ಲಿ ರಾಷ್ಟ್ರೀಯ ಪೋಷಣೆಯ ಸಂಸ್ಥೆ ಅದರ ಸಂಶೋಧನಾ ವಿಭಾಗದೊಂದಿಗೆ ವೈದ್ಯಕೀಯ ಸಮಿತಿಯು ಚಹಾ ಮತ್ತು ಕಾಫಿಯ ಸೇವನೆಯನ್ನು ಮಿತವಾಗಿ ಸೇವನೆ ಮಾಡಬೇಕು ಅಂತ ವಿವರಿಸಿದೆ.

    ಚಹಾ ಅಥವಾ ಕಾಫಿಯನ್ನು ಸಂಪೂರ್ಣವಾಗಿ ತ್ಯಜಿಸಿ ಎಂದರೆ ಯಾರು ಕೇಳುವುದಿಲ್ಲ. ಹೀಗಾಗಿ ಇದನ್ನು ಮಿತವಾಗಿ ಸೇವನೆ ಮಾಡಿ. ಏಕೆಂದರೆ ಪಾನೀಯಗಳಲ್ಲಿನ ಕೆಫೀನ್ ಅಂಶದ ಬಗ್ಗೆ ಎಚ್ಚರದಿಂದಿರಿ ಎಂದು ಅವರು ಭಾರತೀಯರಿಗೆ ಎಚ್ಚರಿಕೆ ನೀಡಿದ್ದಾರೆ. ಅದರಲ್ಲೂ ಊಟಕ್ಕೆ ಕನಿಷ್ಠ ಒಂದು ಗಂಟೆ ಮೊದಲು ಅಥವಾ ನಂತರ ಕಾಫಿ ಮತ್ತು ಚಹಾವನ್ನು ಸೇವಿಸಬೇಕು. ಊಟವಾದ ಕೂಡಲೇ ಕಾಫಿ ಮತ್ತು ಚಹಾ ಸೇವಿಸಿದರೆ ಟ್ಯಾನಿನ್‌ಗಳು ದೇಹದಲ್ಲಿ ಕಬ್ಬಿಣದ ಹೀರಿಕೊಳ್ಳುವಿಕೆಯನ್ನು ಅಡ್ಡಿಪಡಿಸಬಹುದು.

    ಹಾಲು ಇಲ್ಲದೆ ಚಹಾ ದೇಹಕ್ಕೆ ಒಳ್ಳೆಯದು

    ಆಗಾಗ ದಣಿವು ಅಥವಾ ಶಕ್ತಿಯ ಕೊರತೆ ಉಂಟಾಗುತ್ತದೆ. ಉಸಿರಾಟದ ತೊಂದರೆ, ತಲೆನೋವು, ತ್ವರಿತ ಹೃದಯ ಬಡಿತ, ಉಗುರುಗಳು ಸೀಳುವುದು ಅಥವಾ ಕೂದಲು ಉದುರುವಿಕೆ. ಇದಲ್ಲದೆ  ಸಂಶೋಧಕರು ಹಾಲು ಇಲ್ಲದೆ ಚಹಾವನ್ನು ಸೇವಿಸುವುದರಿಂದ ರಕ್ತ ಪರಿಚಲನೆಯನ್ನು ಉತ್ತೇಜಿಸಬಹುದು. ಜೊತೆಗೆ ಹೊಟ್ಟೆಯ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending