Connect with us

    DAKSHINA KANNADA

    ಬೋಳಿಯಾರು ಪ್ರಕರಣದಲ್ಲಿ ಹೊರಗಿನವರು ಮೂಗು ತೂರಿಸಬೇಡಿ : ಸ್ಪೀಕರ್ ಯು.ಟಿ.ಖಾದರ್

    Published

    on

    ಮಂಗಳೂರು : ಬೋಳಿಯಾರ್‌ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಹಾಗೂ ಸ್ಥಳೀಯರಲ್ಲದವರು ಮೂಗು ತೂರಿಸಬೇಡಿ. ಬೋಳಿಯಾರು ಅನ್ನೋದು ಸಹೋದರತೆಯಿಂದ ಇರುವ ಊರಾಗಿದ್ದು, ಸಮಸ್ಯೆಯನ್ನು ಊರಿನವರೇ ಬಗೆಹರಿಸಿಕೊಳ್ಳುತ್ತಾರೆ ಎಂದು ಮಂಗಳೂರು ವಿಧಾನಭಾ ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.


    ಬೋಳಿಯಾರಿನ ವಿಚಾರಕ್ಕೆ ಸಂಬಂಧಿಸಿದಂತೆ ಹೊರಗಿನವರು ಬಾಯಿ ಮುಚ್ಚಿ ಕೂತರೆ ಅದೇ ದೇಶ ಪ್ರೇಮ ಎಂದು ಅವರು ಹೇಳಿದ್ದಾರೆ.

    ಭಾರತ ಮಾತಾ ಕೀ ಜೈ ಅಂತ ಯಾರು ಎಲ್ಲಿ ಬೇಕಾದ್ರೂ ಹೇಳಬಹುದು. ಆದರೆ, ಬೋಳಿಯಾರಿನಲ್ಲಿ ಬೇರೆಯೇ ಘೋಷಣೆ ಆಗಿದೆ ಅನ್ನೋದು ಯಾರಿಗೂ ಗೊತ್ತಿಲ್ಲ. ಇದರಲ್ಲಿ ರಾಜಕೀಯ ಮಾಡಿದ್ರೆ ಯಾರಿಗೂ ಒಂದು ಓಟ್ ಕೂಡಾ ಹೆಚ್ಚು ಬರೋದಿಲ್ಲ. ನಾನೀಗ ಸ್ಪೀಕರ್ ಆಗಿರುವ ಕಾರಣ ಯಾವುದೇ ಪಕ್ಷಗಳ ಹೆಸರನ್ನು ಉಲ್ಲೇಖಿಸೋದಿಲ್ಲ. ಆದರೆ, ಅವರು ಯಾರು ಅನ್ನೋದು ಎಲ್ಲರಿಗೂ ಗೊತ್ತಿದೆ ಎಂದು ಪ್ರಕರಣವನ್ನು ರಾಜಕೀಯ ಮಾಡಲು ಹೊರಟ ಪಕ್ಷಕ್ಕೆ ತಿರುಗೇಟು ನೀಡಿದ್ದಾರೆ.

    ಈ ವಿಚಾರವನ್ನು ದೊಡ್ಡದು ಮಾಡುವವರೇ ದೊಡ್ಡ ದೇಶದ್ರೋಹಿಗಳಾಗಿದ್ದು, ಪೊಲೀಸರಿಗೆ ಅವರ ಕೆಲಸ ಮಾಡಲು ಬಿಡಿ ಎಂದು ಹೇಳಿದ್ದಾರೆ.

    ಇದನ್ನೂ ಓದಿ  : ತಂದೆಯ ಬಂಧನದ ಬಗ್ಗೆ ವಿನೀಶ್ ಭಾವುಕ ಪೋಸ್ಟ್; ನಿಂದಿಸಿದವರಿಗೆ ಧನ್ಯವಾದ ಎಂದ ದರ್ಶನ್ ಪುತ್ರ

    99 ಜನ ಒಳ್ಳೆಯವರ ನಡುವೆ ಒಬ್ಬರು ಹಾಳು ಮಾಡುವವರು ಇರ್ತಾರೆ. ಅವರನ್ನು ಪೊಲೀಸರು ನೋಡಿಕೊಳ್ಳುತ್ತಾರೆ. ಅದು ಬಿಟ್ಟು ತಪ್ಪು ಮಾಡಿದವರನ್ನು ವಿಚಾರಣೆ ಮಾಡಬಾರದು, ಅವರ ಮನೆಗೆ ಹೋಗಬಾರದು ಅಂತ ಪೊಲೀಸರಿಗೆ ಒತ್ತಡ ಹಾಕುವುದು ಸರಿ ಅಲ್ಲ ಎಂದು ಸ್ಪೀಕರ್ ಖಾದರ್ ಹೇಳಿದ್ದಾರೆ.

    DAKSHINA KANNADA

    ಇನ್ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

    Published

    on

    ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಅಂದ್ರೆ ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.

    ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳನ್ನು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳಿಗೆ ಅವರ ಹುಟ್ಟು ಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವಲ್ಲ ಅಂತ ಬೇಜಾರು ಮಾಡಿಕೊಳ್ಳುತ್ತವೆ. ಇದರಿಂದ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ತೊಳೆದ್ರು ಬಿಳಿ ಬಟ್ಟೆ ಮೇಲಿನ ಕಲೆ ಹೋಗ್ತಿಲ್ವಾ? ಹೀಗೆ ಮಾಡಿ

    Published

    on

    ಮಂಗಳೂರು: ಬಿಳಿ ಬಟ್ಟೆಯನ್ನು ಕಲೆಯಾಗದಂತೆ ನೋಡಿಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ಕೈ ತಪ್ಪಿ ಟೀ ಕಾಫಿ ಚೆಲ್ಲಿಯೋ, ಪೆನ್ನಿನ ಇಂಕ್ ತಾಗಿಯೋ ಬಿಳಿ ಬಟ್ಟೆಯ ಅಂದವನ್ನು ಹಾಳು ಮಾಡುತ್ತದೆ. ಈ ವೇಳೆ ಯಾವುದೇ ಡಿಟರ್ಜೆಂಟ್, ಸೋಪ್ ಬಳಸಿ ತಿಕ್ಕಿ ತೊಳೆದರೂ ಪ್ರಯೋಜನವಂತೂ ಆಗುವುದೇ ಇಲ್ಲ. ಬಟ್ಟೆಯನ್ನು ಜಾಸ್ತಿ ಉಜ್ಜಿದರೆ, ಆ ಬಟ್ಟೆಗಳು ಹಾಳಾಗುವ ಸಾಧ್ಯತೆ ಇರುತ್ತದೆ. ನಿಮಗೂ ಈ ರೀತಿ ಅನುಭವವಾಗಿದ್ದರೆ ಟೆನ್ಶನ್ ಮಾಡಿಕೊಳ್ಬೇಡಿ, ಈ ವಸ್ತುಗಳನ್ನು ಬಳಸಿ ಕಲೆಯನ್ನು ನಿವಾರಿಸಿಕೊಳ್ಳಬಹುದು.

    • ಅರ್ಧ ಕಪ್ ನೀರಿಗೆ ಅರ್ಧ ಕಪ್ ವಿನೆಗರ್ ಮಿಶ್ರಣ ಮಾಡಿ ಬಿಳಿ ಬಟ್ಟೆಯ ಮೇಲೆ ಇರುವ ಕಲೆಗೆ ಸ್ಪ್ರೇ ಮಾಡಿ, ಸ್ವಲ್ಪ ಸಮಯ ಹಾಗೆ ಬಿಡಬೇಕು. ತದನಂತರದಲ್ಲಿ ಅದೇ ನೀರಿನಿಂದ ತಿಕ್ಕಿ ತೊಳೆದರೆ ಕಲೆ ಬಿಡುತ್ತದೆ.
    • ಬಿಳಿ ಬಟ್ಟೆ ಮೇಲಿನ ಕಲೆಯನ್ನು ತೆಗೆದು ಹಾಕಲು ಅಡುಗೆ ಸೋಡಾ ಬೆಸ್ಟ್ ಎನ್ನಬಹುದು. ನೀರಿಗೆ ಅಡುಗೆ ಸೋಡಾ ಸೇರಿಸಿ, ಕಲೆಯಾದ ಬಟ್ಟೆಯನ್ನು ಆ ನೀರಿನಲ್ಲಿ ನೆನೆಸಿಡಬೇಕು. ಸ್ವಲ್ಪ ಸಮಯದ ಬಳಿಕ ಬಟ್ಟೆಯನ್ನು ತೊಳೆದರೆ ಕಲೆಯೂ ಹೋಗುತ್ತದೆ.
    • ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಆ ಜಾಗಕ್ಕೆ ನಿಂಬೆರಸ ಹಾಕಿ ಉಪ್ಪು ಮತ್ತು ಸೋಪಿನಿಂದ ಚೆನ್ನಾಗಿ ತೊಳೆದರೆ ಕಲೆಯೂ ಇಲ್ಲದಂತಾಗುತ್ತದೆ.
      ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಸೇರಿಸಿ ಉಜ್ಜುವುದರಿಂದ ಬಿಳಿ ಬಟ್ಟೆ ಮೇಲಿನ ಕಲೆಯೂ ನಿವಾರಣೆಯಾಗುತ್ತದೆ.
    • ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಸ್ವಲ್ಪ ಬಿಸಿ ನೀರನ್ನು ಆ ಜಾಗಕ್ಕೆ ಹಾಕಿ, ಡಿರ್ಟಜೆಂಟ್‌ ನಿಂದ ಉಜ್ಜಿ ಕಲೆಯನ್ನು ತೆಗೆದು ಹಾಕಬಹುದು.
    • ಬಿಳಿ ಬಟ್ಟೆ ಮೇಲಿನ ಕಲೆ ನಿವಾರಣೆಗೆ ಟೂತ್ ಪೇಸ್ಟ್ ಬಳಸುವುದು ಪರಿಣಾಮಕಾರಿಯಾಗಿದೆ. ಕಲೆ ಮೇಲೆ ಟೂತ್ಪೇಸ್ಟ್ ಅನ್ವಯಿಸಿ, ಹತ್ತರಿಂದ ಹದಿನೈದು ನಿಮಿಷಗಳ ಕಾಲ ಹಾಗೆ ಬಿಡಬೇಕು. ಆ ಬಳಿಕ ಡಿಟೆರ್ಜಂಟ್ ಬಳಸಿ ಸ್ವಚ್ಛಗೊಳಿಸಿದರೆ ಕಲೆ ಉಳಿಯುವುದಿಲ್ಲ.
    Continue Reading

    DAKSHINA KANNADA

    ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಸ್ವರ್ಣಪಾದುಕೆ ಸಮರ್ಪಣೆ

    Published

    on

    ಮಂಗಳೂರು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣಮಹೋತ್ಸವದ ಸ್ಮರಣಾರ್ಥ ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಶೃಂಗೇರಿ ಶಾರದಾಪೀಠದ ವತಿಯಿಂದ 40 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಸಮರ್ಪಿಸಲಾಗಿದೆ.

    ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರು 1974 ರಲ್ಲಿ ಸನ್ಯಾಸ ಸ್ವೀಕರಿಸಿದ್ದು, 2024 ಕ್ಕೆ 50 ವರ್ಷಗಳಾಗುತ್ತಿವೆ. ಶೃಂಗೇರಿಯಲ್ಲಿ ಉಭಯ ಜಗದ್ಗುರುಗಳು ಈ ಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದೇವಳದ ಆನುವಂಶಿಕ ಅರ್ಚಕ ಶ್ರೀಹರಿನಾರಾಯಣದಾಸ ಅಸ್ರಣ್ಣ ಅವರಿಗೆ ಹಸ್ತಾಂತರಿಸಿದರು. ಇದನ್ನು ಜೂ.19 ರಂದು ಶ್ರೀದೇವಿಗೆ ತೊಡಿಸಿ ಅಲಂಕಾರ ಮಾಡಲಾಯಿತು. ಈ ಸೇವೆಯನ್ನು ಶೃಂಗೇರಿ ಶ್ರೀಮಠದ ಶಿಷ್ಯರಾದ ಆಂಧ್ರಪ್ರದೇಶದ ಶ್ರೀಪೋಲಿಸೆಟ್ಟಿ ಶ್ಯಾಮ್ ಸುಂದರ್ ಅವರು ನೀಡಿರುತ್ತಾರೆ.

    Read More..; ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕ್ರಿಕೆಟಿಗ ಮಯಂಕ್ ಅಗರವಾಲ್ ಭೇಟಿ

    Continue Reading

    LATEST NEWS

    Trending