Connect with us

DAKSHINA KANNADA

ಪವಿತ್ರವಾಗಿರುವ ದೇವಸ್ಥಾನದ ವೇದಿಕೆಯನ್ನು ರಾಜಕಾರಣಕ್ಕೆ ಬಳಸಬೇಡಿ -ರಮಾನಾಥ ರೈ

Published

on

ಮಂಗಳೂರು: ದೇವಸ್ಥಾನದ ವೇದಿಕೆಯಲ್ಲಿ ರಾಜಕಾರಣವನ್ನು ಬಳಸಿಕೊಂಡು ಕೆಟ್ಟ ಭಾಷೆಯಲ್ಲಿ ಮತ್ತೊಂದು ಧರ್ಮಕ್ಕೆ ನೇರವಾಗಿ ಬಯ್ಯುವವರಿಗೆ ದೇವಸ್ಥಾನ ಎಂಬುವುದು ಪವಿತ್ರ ಸ್ಥಳ ಎಂಬುವುದು ಮನವರಿಕೆ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ನಗರದ ಕಾಂಗ್ರೆಸ್‌ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಇಂಧನ, ಗ್ಯಾಸ್‌, ವಿದ್ಯುತ್‌ ಬೆಲೆ ಏರಿಕೆ ಆಗಿದೆ. ಇದರ ಪರಿಣಾಮ ಎಲ್ಲಾ ವಸ್ತುಗಳ ಬೆಲೆ ಏರಿಕೆ ಆಗಿದೆ.

ಇದನ್ನು ಮರೆಮಾಚಲು ಬಿಜೆಪಿಯ ಸಂಘಟನೆಗಳು ನೀಚ ರಾಜಕೀಯ ಮಾಡುತ್ತಿದೆ. ಬಿಜೆಪಿಯವರಿಗೆ ಸಾಧನೆ ತೋರಿಸಿ ಓಟು ಕೇಳಲು ಸಾಧ್ಯವಾಗದೆ ಧರ್ಮಸಂಸತ್ ನಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ.


ಇದು ಪರಾಕಾಷ್ಠೆಗೆ ತಲುಪಿದೆ. ದ.ಕ ಜಿಲ್ಲೆಯನ್ನು ಕೋಮುವಾದದ ಪ್ರಯೋಗ ಶಾಲೆ ಅನ್ನುತ್ತಾರೆ. ಯಾಕೆ ಅದನ್ನು ನಾವೆಲ್ಲ ಒಟ್ಟು ಸೇರಿ ಬದಲಾವಣೆ ಮಾಡಲು ಆಗುವುದಿಲ್ಲ.

ಜಾತ್ರೆಯಲ್ಲಿ ಒಂದು ಸಮುದಾಯದವರು ಸಂತೆ ಇಡಬಾರದು ಎಂದು ಬ್ಯಾನರ್‌ ಹಾಕ್ತಾರೆ ಅಂದರೆ ಇದಕ್ಕಿಂತ ದೊಡ್ಡ ತಪ್ಪು ಯಾವುದೂ ಇಲ್ಲ.

ಧರ್ಮದ ಹೆಸರಿನಲ್ಲಿ ನಡೆದ ಹತ್ಯೆಯಲ್ಲಿ ನಡೆದ ಎಫ್‌ಐಆರ್‌ನಲ್ಲಿ ಎರಡು ಮತೀಯ ಸಂಘಟನೆಗಳ ಜನರ ಹೆಸರಿರುತ್ತದೆ. ಆದರೆ ಒಬ್ಬನೇ ಒಬ್ಬ ಕಾಂಗ್ರೆಸ್‌ನ ಹಿಂದೂ ಅಥವಾ ಮುಸಲ್ಮಾನ ಕಾರ್ಯಕರ್ತನ ಹೆಸರು ಎಫ್‌ಐಆರ್‌ನಲ್ಲಿ ಇಲ್ಲ. ಹಿಂಸೆಗೆ ಹಿಂಸೆ, ದ್ವೇಷಕ್ಕೆ ದ್ವೇಷ ಉತ್ತರ ಅಲ್ಲ. ಮನುಷ್ಯನನ್ನು ದ್ವೇಷ ಮಾಡುವ ವ್ಯಕ್ತಿಯನ್ನು ದೇವರು ಕೂಡ ಪ್ರೀತಿ ಮಾಡುವುದಿಲ್ಲ.

ಕೆಲವರು ಹೇಳುತ್ತಾರೆ ಆ್ಯಕ್ಷನ್‌ಗೆ ರಿಯಾಕ್ಷನ್‌ ಅದು ಸರಿಯಲ್ಲ. ಮತೀಯ ಸಂಘರ್ಷ ಅದು ಸಣ್ಣ ವಿಚಾರವಲ್ಲ. ಹಿಜಾಬ್ ಬಂದ ಮೇಲೆ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ್ದಲ್ಲ.

ಅದಕ್ಕಿಂತ ಮೊದಲೇ ಬಂದಿತ್ತು. ಜಟಿಲ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಹೋಗುವ ಬದಲು ನಾವು ನೈಜ ಸಂಗತಿಯ ಮೇಲೆ ದೃಷ್ಠಿ ಹರಿಸೋಣ.

ಜನಾಂಗೀಯ ಘರ್ಷಣೆ ನಡೆಸಿದ ದೇಶಗಳು ದೇಶಗಳಾಗಿ ಉಳಿಯಲಿಲ್ಲ. ಇದು ಮುಂದುವರೆದರೆ ಸಮಾಜ ಎಲ್ಲಿ ಹೋಗಬಹುದು ಎಂದು ಪ್ರಶ್ನಿಸಿದರು. ನೀವು ಕಪ್ಪುಹಣ, ಉದ್ಯೋಗ ಕೊಡುತ್ತೇವೆ, ಇಂಧನ ದರ ಇಳಿಸುತ್ತೇವೆ ಎಂದು ಓಟು ಪಡೆದು ಅಧಿಕಾರಕ್ಕೆ ಬಂದವರು ಈಗ ಏನು ಮಾಡುತ್ತಿದ್ದೀರಿ?.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಲ್ಲಾ ನಾಗರಿಕರನ್ನು ಕರೆದು ಶಾಂತಿ ಸಭೆ ನಡೆಸಬೇಕು. ಮುಂದಕ್ಕೆ ಆಗದ ಹಾಗೆ ನೋಡಿಕೊಳ್ಳಬೇಕು. ಸರ್ಕಾರ ನಮ್ಮಿಂದಲೇ ರೂಪಿತವಾಗಿರುವುದು.

ಹಾಗಿರುವಾಗ ಸರ್ಕಾರದ ಯಾವುದೇ ಸಂಸ್ಥೆ ತಪ್ಪು ಮಾಡಿದರೆ ನಾವೂ ಭಯವಿಲ್ಲದೆ ಪ್ರಶ್ನೆ ಮಾಡಬಹುದು ಎಂದು ಹೇಳಿದರು.

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending