Connect with us

DAKSHINA KANNADA

ನವಮಂಗಳೂರು ಬಂದರಿಗೆ 47 ನೇ ವರ್ಷದ ಸಂಭ್ರಮ : ಬಂದರು ಪ್ರವೇಶಿಸಿದ ಮೊದಲ ಹಡಗಿನ ಚಿತ್ರವನ್ನು ಹಂಚಿಕೊಂಡ NMPT..

Published

on

ಮಂಗಳೂರು :  ಕರ್ನಾಟಕದ ಹೆಬ್ಬಾಗಿಲು ಮಂಗಳೂರಿನ ನವಮಂಗಳೂರು ಬಂದರಿಗೆ ಮೊದಲ ಹಡಗು ಆಗಮಿಸಿ ಜೂನ್ 10 ಕ್ಕೆ 47 ವರ್ಷಗಳು ಸಂದಿವೆ.

47 ವರ್ಷಗಳ ಹಿಂದೆ ಅಂದರೆ ಜೂನ್ 10, 1974 ನೇ ಇಸವಿಯಲ್ಲಿ ಎಂ ವಿ ಸತ್ಸು ಮರು ( MV satsu maru ) ಎಂಬ ಹಡಗು ಮೊದಲಾಗಿ ನವ ಮಂಗಳೂರು ಬಂದರು ಪ್ರವೇಶಿಸಿತ್ತು.

ಈ ಐತಿಹಾಸಿಕ ದಿನವನ್ನು ಹಡಗನ್ನು ಚಿತ್ರ ಸಮೇತ ಎನ್ ಎಂ ಪಿ ಟಿ ನೆನಪಿಸಿ ಶೇರ್ ಮಾಡಿಕೊಂಡಿದೆ.

ಈ ಐತಿಹಾಸಿಕ ಬಂದರಿನ ನಿರ್ಮಾಣದ ರೂವಾರಿ ಈ ಭಾಗದ ಸಂಸದರಾದ ಸತತ ಮೂರು ಬಾರಿ ಗೆಲುವು ಸಾಧಿಸಿದ್ದ ದಿವಂಗತ ಶ್ರೀವಾಸ್ ಮಲ್ಯರವರು.

1962 ರಲ್ಲಿ ಬಂದರಿನ ನಿರ್ಮಾಣ ಕಾರ್ಯ ಆರಂಭವಾಗಿ 1974 ರಲ್ಲಿ ಮುಕ್ತಾಯವಾಯಿತು. ಮೇ 4, 1974 ರಂದು ಆಗಿನ ಪ್ರಧಾನಿ ಇಂದಿರಾ ಗಾಂಧಿಯವರು ಬಂದರನ್ನು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದ್ದರು.

ನವ ಮಂಗಳೂರು ಬಂದರು ರಾಜ್ಯದ ಏಕೈಕ ಪ್ರಮುಖ ಸರ್ವ ಋತು ಬಂದರಾಗಿದೆ.ಮತ್ತು ಇದು ಪಶ್ಚಿಮ ಕರಾವಳಿಯಲ್ಲಿ ಆಳವಾದ ಒಳ ಬಂದರಾಗಿದೆ.

ಜೊತೆಗೆ ಭಾರತದ ಏಳನೇ ಅತಿ ದೊಡ್ಡ ಬಂದರಾಗಿದೆ. ಕರ್ನಾಟಕ ರಾಜ್ಯ ಮತ್ತು ಕೇರಳದ ಕೆಲವು ರಾಜ್ಯಗಳ ಒಳನಾಡಿಗೆ ಗಣನೀಯ ಸೇವೆ ಸಲ್ಲಿಸುತ್ತಿದ್ದು. ಕಬ್ಬಿಣದ ಅದಿರು , ಮ್ಯಾಂಗನೀಸ್, ಗ್ರಾನೈಟ್ ಕಲ್ಲುಗಳು, ಕಾಫಿ, ಗೋಡಂಬಿ ಮತ್ತು ಕಂಟೇನರ್ ಸೇವೆ ಹಾಗೂ ವಿಶ್ವ ದ ಆನೇಕ ಪ್ರವಾಸಿಗರ ಹಡಗುಗಳಿಗೆ ಪ್ರಮುಖ ಬಂದಾರಾಗಿದೆ. ಜೊತೆಗೆ ಕಚ್ಚಾ ಮತ್ತು ಪೆಟ್ರೋಲಿಯಂ ಉತ್ಪನ್ನಗಳು, ಎಲ್ಪಿಜಿ, ಮರದ ತಿರುಳು, ಮರದ ಲಾಗ್ , ಸಿದ್ಧಪಡಿಸಿದ ರಸಗೊಬ್ಬರಗಳು, ದ್ರವ ಅಮೋನಿಯಾ, ಫಾಸ್ಪರಿಕ್ ಆಸಿಡ್, ಇತರ ದ್ರವ ರಾಸಾಯನಿಕಗಳನ್ನು ಇಲ್ಲಿಂದ ನಿರ್ವಹಿಸಲಾಗುತ್ತಿದೆ.

 

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending