LATEST NEWS
ಡಾ.ಡಿ. ಶ್ರೀಕಾಂತ್ ರಾವ್ ಉಡುಪಿ ಹಾಗೂ ತೀರ್ಥಹಳ್ಳಿಯ ಎಂ.ಐ.ಒ ಕಾನ್ಸರ್ ಸ್ಪೆಷಾಲಿಟಿ ಆಸ್ಪತ್ರೆಗೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ನೇಮಕ
ಡಾ.ಡಿ. ಶ್ರೀಕಾಂತ್ ರಾವ್ ರವರು ಉಡುಪಿ ಹಾಗೂ ತೀರ್ಥಹಳ್ಳಿಯ ಎಂ.ಐ.ಒ ಕಾನ್ಸರ್ ಸ್ಪೆಷಾಲಿಟಿ ಆಸ್ಪತ್ರೆ ಇದರ ಎಂ.ಐ.ಒಗೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ನೇಮಕಗೊಂಡರು.
ಮಂಗಳೂರು: ಡಾ.ಡಿ. ಶ್ರೀಕಾಂತ್ ರಾವ್ ರವರು ಉಡುಪಿ ಹಾಗೂ ತೀರ್ಥಹಳ್ಳಿಯ ಎಂ.ಐ.ಒ ಕಾನ್ಸರ್ ಸ್ಪೆಷಾಲಿಟಿ ಆಸ್ಪತ್ರೆ ಇದರ ಎಂ.ಐ. ಒ ಗೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ನೇಮಕಗೊಂಡರು.
ಡಾ.ರಾವ್ ಇವರು ಮಣಿಪಾಲದ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿ ಮಣಿಪಾಲ್ ಇದರ ಮಾಜಿ ನಿರ್ದೇಶಕರಾಗಿದ್ದರು.
ಎಂ.ಐ.ಒ ಆಡಳಿತ ಮತ್ತು ಸಿಬ್ಬಂದಿ ವರ್ಗ ವತಿಯಿಂದ ಡಾ. ರಾವ್ ಅವರನ್ನು ಎಂ.ಐ.ಒ ದ ನಿರ್ದೇಶಕರು (ಔಟ್ರೀಚ್ ಕ್ಲಿನಿಕ್ ), ರೇಡಿಯೇಷನ್ ಆಂಕಲಾಜಿಸ್ಟ್, ಡಾ. ಸನತ್ ಹೆಗ್ಡೆ ಇವರು ಆತ್ಮೀಯವಾಗಿ ಸ್ವಾಗತಿಸಿದರು.
ಬಳಿಕ ಮಾತನಾಡಿದ ಡಾ.ಹೆಗ್ಡೆ ಅವರು ಕ್ಯಾನ್ಸರ್ ಭಾಧಿತರು ಹಾಗೂ ಆರೈಕೆದಾರರಿಗೆ ರೋಗವನ್ನು ನಿಭಾಯಿಸುವಲ್ಲಿ ಎಂ.ಐ.ಒ ಕಳೆದ ಒಂದು ವರ್ಷದಿಂದ ದಣಿವರಿಯದೆ ನೀಡುತ್ತಿರುವ ಅತ್ಯುತ್ತಮ ಸೇವೆಗೆ ತಮ್ಮ ಸೇವಾವಧಿಯಲ್ಲಿ ಇನ್ನಷ್ಟು ಸೇವೆ ಸಿಗಲಿ ಎಂದು ಆಶಿಸಿದರು.
ಅಂತರಾಷ್ಟ್ರೀಯ ಮಾರ್ಗಸೂಚಿಗಳ ಆಧಾರದ ಮೇಲೆ ಉನ್ನತ ಮಟ್ಟದ ನೈತಿಕತೆ ಮತ್ತು ಸಹಾನೂಭುತಿಯೊಂದಿಗೆ ಆರಂಭಿಕ ಪತ್ತೆ ಮತ್ತು ಕ್ಯಾನ್ಸರ್ ಚಿಕಿತ್ಸೆಗಾಗಿ ಕೈಗೆಟಕುವ ಉತ್ತಮ ಗುಣಮಟ್ಟದ ಸೇವೆ ನೀಡುವುದನ್ನು ಎಂ.ಐ.ಒ ಮುಂದುವರಿಸುತ್ತದೆ ಎಂದು ತಿಳಿಸಿದರು.
DAKSHINA KANNADA
ಉಳ್ಳಾಲ : ಕಾರು ಡಿ*ಕ್ಕಿ; ಇಹಲೋಕ ಇಹಲೋಕ ತ್ಯಜಿಸಿದ ಬಿಜೆಪಿ ಕಾರ್ಯಕರ್ತ
ಉಳ್ಳಾಲ : ಕಾರು ಡಿ*ಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃ*ತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ. ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46)ಮೃ*ತಪಟ್ಟವರು. ಶ್ರೀಕಾಂತ್ ಆಟೋ ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದರು.
ಶುಕ್ರವಾರ ಮಧ್ಯಾಹ್ನ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಶ್ರೀಕಾಂತ್ ಗೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಶ್ರೀಕಾಂತ್ ರನ್ನು ಅಪಘಾ*ತ ನಡೆಸಿದ ಕಾರು ಚಾಲಕನೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕೊಡದೆ ಮೃ*ತಪಟ್ಟಿದ್ದಾರೆ.
ಇದನ್ನೂ ಓದಿ : ಮಂಗಳೂರು : ನಾಳೆಯಿಂದ ರೇಶನಿಂಗ್ ಆರಂಭ; ಎಲ್ಲೆಲ್ಲಿ ನೀರಿಲ್ಲ?
ಮೃ*ತ ಶ್ರೀಕಾಂತ್ ತುಳುನಾಡು ಫ್ರೆಂಡ್ಸ್ ಕೋಟೆಕಾರುವಿನ ಸಕ್ರಿಯ ಸದಸ್ಯರಾಗಿದ್ದು, ಬಿಜೆಪಿಯ ಕಾರ್ಯಕರ್ತರಾಗಿದ್ದರು. ಶ್ರೀಕಾಂತ್ ಅವಿವಾಹಿತರಾಗಿದ್ದು ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮಂಗಳೂರು : ನಾಳೆಯಿಂದ ರೇಶನಿಂಗ್ ಆರಂಭ; ಎಲ್ಲೆಲ್ಲಿ ನೀರಿಲ್ಲ?
ಮಂಗಳೂರು: ಕರಾವಳಿಗೆ ಬಿರುಬೇಸಿಗೆಯ ಬಿಸಿ ಭಾರೀ ತಟ್ಟಿದ್ದು, ನೀರಿನ ಅಭಾವ ಎದುರಾಗಿದೆ. ಮಂಗಳೂರು ಮಹಾ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಹೀಗಾಗಿ ಮಂಗಳೂರು ನಗರ ಪಾಲಿಕೆ ಆಯುಕ್ತರು ಮೇ 5 ರಿಂದ ನೀರಿನ ರೇಶನಿಂಗ್ ಆರಂಭಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಭ್ಯವಿರುವ ನೀರನ್ನು ಮಂಗಳೂರು ನಗರ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ (ಮಂಗಳೂರು ನಗರ ಉತ್ತರ ಭಾಗಕ್ಕೆ) ಪರ್ಯಾಯ ದಿನಗಳಲ್ಲಿ ನೀರು ಬಿಡಲು ಕ್ರಮ ವಹಿಸಲಾಗಿದೆ.
ಬೆಂದೂರು ಸ್ಥಾವರದಿಂದ ನೀರು ಪೂರೈಕೆ :
ಮೇ 5ರಿಂದ ಬೆಸ ದಿನಗಳಲ್ಲಿ ಬೆಂದೂರು ಸ್ಥಾವರದಿಂದ ಕೋರ್ಟ್ ಪ್ರದೇಶ, ಕಾರ್ಸ್ಟ್ರೀಟ್, ಬಾವುಟಗುಡ್ಡ, ಆಕಾಶವಾಣಿ, ಪದವು, ಗೋರಿಗುಡ್ಡ, ಸೂಟರ್ಪೇಟೆ, ಶಿವಬಾಗ್, ಕದ್ರಿ, ವಾಸ್ಲೇನ್, ಬೆಂದೂರು, ಲೋವರ್ ಬೆಂದೂರು, ಕುದ್ರೋಳಿ, ಕೋಡಿಯಾಲ್ ಬೈಲ್ ಮತ್ತು ಪಡೀಲ್ ಸ್ಥಾವರದಿಂದ ಮಂಗಳಾದೇವಿ, ಅತ್ತಾವರ, ಬಾಬುಗುಡ್ಡ, ವೆಲೆನ್ಸಿಯಾ, ಜಪ್ಪಿನಮೊಗರು, ಬಿಕರ್ನಕಟ್ಟೆ, ಉಲ್ಲಾಸ್ನಗರ, ಬಜಾಲ್, ತಿರುವೈಲು, ವಾಮಂಜೂರು ಹಾಗೂ ಶಕ್ತಿನಗ ಟ್ಯಾಂಕ್ನಿಂದ ಕುಂಜತ್ತಬೈಲ್, ಮೊಗ್ರೊಡಿ, ಶಕ್ತಿನಗರ, ಸಂಜಯನಗರ, ಪ್ರೀತಿನಗರ, ಮಂಜಡ್ಕ, ರಾಜೀವ ನಗರ, ಬೋಂದೆಲ್, ಗಾಂಧಿ ನಗರ, ಶಾಂತಿನಗರ, ಕಾವೂರು ಮತ್ತು ತುಂಬೆ – ಪಣಂಬೂರು ನೇರ ಲೈನ್ನಿಂದ ಕಂಕನಾಡಿ, ನಾಗುರಿ, ಪಂಪ್ವೆಲ್, ಬಳ್ಳೂರುಗುಡ್ಡೆ, ಪಡೀಲ್ಗೆ ನೀರು ಪೂರೈಕೆ ಮಾಡಲಾಗುವುದು.
ಪಣಂಬೂರು ಸ್ಥಾವರದಿಂದ ನೀರು ಪೂರೈಕೆ :
ಮೇ 6 ರಿಂದ ಪಣಂಬೂರು ಸ್ಥಾವರದಿಂದ ಸುರತ್ಕಲ್, ಎನ್ಐಟಿಕೆ, ಮುಕ್ಕ, ಹೊಸಬೆಟ್ಟು, ಕುಳಾಯಿ, ಜನತಾ ಕಾಲನಿ, ಬೈಕಂಪಾಡಿ, ಪಣಂಬೂರು, ಮೀನಕಳಿಯ ಮತ್ತು ಪಡೀಲ್ ಸ್ಥಾವರದಿಂದ ಬಜಾಲ್, ಜಲ್ಲಿಗುಡ್ಡ, ಮುಗೇರ್, ಎಕ್ಕೂರು, ಸದಾಶಿವ ನಗರ, ಅಳಪೆ, ಮೇಘ ನಗರ, ಮಂಜಳಿಕೆ, ಕಂಕನಾಡಿ ರೈಲ್ವೆ ಸ್ಟೇಷನ್, ಕುಡುಪು, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಗೂಡ್ಸ್ಶೆಡ್, ಬಂದರ್ ದಕ್ಕೆ,ಕಣ್ಣೂರು, ನಿಡ್ಡೆಲ್, ಶಿವನಗರ. ಕೊಡಕ್ಕಲ್, ನೂಜಿ, ಸರಿಪಳ್ಳ, ಉಲ್ಲಾಸ್ ನಗರ, ವೀರನಗದ ಹಾಗೂ ಶಕ್ತಿನಗರ ಟ್ಯಾಂಕ್ನಿಂದ ಕಂಡೆಟ್ಟು, ಕುಲಶೇಖರ, ಮರೋಳಿ, ಕಕ್ಕೆಬೆಟ್ಟು, ಸಿಲ್ವರ್ ಗೇಟ್, ಕೊಂಗೂರು ಮಠ, ಪ್ರಶಾಂತ್ ನಗರ ಮತ್ತು ತುಂಬೆ-ಪಣಂಬೂರು ನೇರ ಲೈನ್ನಿಂದ ಮುಡಾ ಪಂಪ್ ಹೌಸ್, ಕೊಟ್ಟಾರ ಚೌಕಿ ಪಂಪ್ಹೌಸ್, ಕೂಳೂರು ಪಂಪ್ಹೌಸ್, ಕಾಪಿಕ್ಕಾಡ್, ದಡ್ಡಲ್ಕಾಡ್, ಬಂಗ್ರ ಕೂಳೂರುಗೆ ನೀರು ಸರಬರಾಜು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪೋಲು ಮಾಡಿದಲ್ಲಿ ನೀರು ಕಡಿತ :
ಕಟ್ಟಡ ರಚನೆ ಮತ್ತಿತರ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್ಗಳ ಜೋಡಣೆ ಯನ್ನು ಮುಂದಿನ ಸೂಚನೆಯವರೆಗೆ ಕಡಿತಗೊಳಿಸುವುದು. ಸಾರ್ವಜನಿಕರು ನೀರನ್ನು ಅನವಶ್ಯಕವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ಯಾವುದೇ ಸೂಚನೆ ನೀಡದೆ ಜೋಡಣೆ ಕಡಿತಗೊಳಿಸುವುದು ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ :
ಸಂಪರ್ಕ ಸಂಖ್ಯೆ :
ಕುಡಿಯುವ ನೀರಿನ ಸಮಸ್ಯೆಯಾದರೆ ದೂ.ಸಂ: ಪಡೀಲ್ ರೇಚಕ ಸ್ಥಾವರ-0824-2220364 ಹಾಗೂ ಮನಪಾ ವಾಟ್ಸ್ಆ್ಯಪ್ ಸಂಖ್ಯೆ 9449007722/ಮನಪಾ ಕಂಟ್ರೋಲ್ ರೂಮ್- 0824-2220319/2220306ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
FILM
ಬಾಲಿವುಡ್ ಜನಪ್ರಿಯ ನಿರೂಪಕಿ ಭಾರತಿ ಸಿಂಗ್ ಆಸ್ಪತ್ರೆ ದಾಖಲು..!
ಮುಂಬೈ: ಬಾಲಿವುಡ್ ನಿರೂಪಕಿ, ಹಾಸ್ಯ ನಟಿ ಭಾರತಿ ಸಿಂಗ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಡ್ಯಾನ್ಸ್ ದೀವಾನೆ ಸೀಸನ್ 4 ಅನ್ನು ಹೋಸ್ಟ್ ಮಾಡುತ್ತಿರುವ ಖ್ಯಾತ ನಿರೂಪಕಿ ಭಾರತಿ ಸಿಂಗ್ ತೀವ್ರ ಹೊಟ್ಟೆ ನೋವಿನಿಂದ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
‘ಕಳೆದ ಮೂರು ದಿನಗಳಿಂದ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದೇನೆ’ ಎಂದು ತನ್ನ ವ್ಲಾಗ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಆರಂಭದಲ್ಲಿ ಅದನ್ನು ಗ್ಯಾಸ್ಟ್ರೊನಲ್ ಅಥವಾ ಆಮ್ಲೀಯ ಅಸ್ವಸ್ಥತೆ ಆಗಿರಬಹುದೆಂದು ಭಾವಿಸಿ ನಿರ್ಲಕ್ಷ ಮಾಡಿದ್ದರಂತೆ. ಆದರೆ, ನೋವು ತಡೆದುಕೊಳ್ಳಲಾಗದೆ ವೈದ್ಯಕೀಯ ಚಿಕಿತ್ಸೆ ಪಡೆಯಲು ನಿರ್ಧರಿಸಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವ್ಲಾಗ್ನಲ್ಲಿ ಹೇಳಿದ್ದಾರೆ. ಇನ್ನು ವೈದ್ಯಕೀಯ ಪರೀಕ್ಷೆ ಬಳಿಕ ಭಾರತಿಗೆ ಪಿತ್ತಕೋಶದಲ್ಲಿ ಕಲ್ಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಏನೂ ತಿನ್ನಲು ಆಗುತ್ತಿಲ್ಲ ತಿಂದರೂ ವಾಂತಿ ಆಗುತ್ತಿದೆ ಎಂದ ಹೇಳಿದ ಅವರು ಭಾವುಕರಾದರು.
ಮುಂದೆ ಓದಿ..;‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?
ಈ ನಡುವೆ ಭಾರತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಬೇಗ ಚೇತರಿಸಿಕೊಳ್ಳುವಂತೆ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಕಮೆಂಟ್ಗಳನ್ನು ಹಾಕಿದ್ದಾರೆ.
- FILM7 days ago
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
- DAKSHINA KANNADA7 days ago
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
- FILM7 days ago
ರಾಮ-ಸೀತೆಯಂತೆ ಕಾಣಿಸಿಕೊಂಡ ರಣ್ಬೀರ್, ಸಾಯಿ ಪಲ್ಲವಿ.. ರಾಮಾಯಣ ಸಿನಿಮಾ ಸೆಟ್ಟಿನ ಫೋಟೋ ಲೀಕ್
- DAKSHINA KANNADA7 days ago
ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ