Connect with us

    ಡಾಕ್ಟರೇಟ್‌ ಪದವಿಗೆ ಭಾಜನರಾದ ಕೆ.ಸಿ. ನಾಯಕ್‌ಗೆ ಶಕ್ತಿ ಶಿಕ್ಷಣ ಸಂಸ್ಥೆಗಳಿಂದ ಅಭಿನಂದನೆ, ಸನ್ಮಾನ

    Published

    on

    ಡಾಕ್ಟರೇಟ್‌ ಪದವಿಗೆ ಭಾಜನರಾದ ಕೆ.ಸಿ. ನಾಯಕ್‌ಗೆ ಶಕ್ತಿ ಶಿಕ್ಷಣ ಸಂಸ್ಥೆಗಳಿಂದ ಅಭಿನಂದನೆ, ಸನ್ಮಾನ

    ಮಂಗಳೂರು: ಶಕ್ತಿ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಕೆ.ಸಿ. ನಾಯಕ್‌ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಲಭಿಸಿದೆ. ಈ ಹಿನ್ನೆಲೆ ಶಕ್ತಿನಗರದ ಶಕ್ತಿ ಪಿ.ಯು ಕಾಲೇಜು, ಶಕ್ತಿ ವಸತಿ ಶಾಲೆ, ಶ್ರೀ ಗೋಪಾಲಕೃಷ್ಣ ಪೂ. ಪ್ರಾ ಶಾಲೆ ಹಾಗೂ ಶ್ರೀ ಮಹಾಬಲೇಶ್ವರ ಪ್ರಮೋಟರ್ಸ್ ಮತ್ತು ಬಿಲ್ಡರ್ಸ್ ಮೊದಲಾದ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ತಮ್ಮ ಸಂಸ್ಥೆಯ ಸ್ಥಾಪಕನಿಗೆ ಅಭಿನಂದಿಸಿ, ಸನ್ಮಾನಿಸಿದರು.

    ಶಿಕ್ಷಣ, ಸಂಸ್ಕೃತಿ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕೆ.ಸಿ ನಾಯಕ್ ಅವರ ಸೇವೆಯನ್ನು ಗುರುತಿಸಿ ವಿಶ್ವವಿದ್ಯಾನಿಲಯವು ತನ್ನ 38ನೆಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‍ನ್ನು ಪ್ರದಾನ ಮಾಡಿದೆ.

    ಇನ್ನು ಅಭಿನಂದನಾ ಕಾರ್ಯಕ್ರಮದಲ್ಲಿ, ಸಂಸ್ಥೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಮಾತನಾಡಿ, ನಾಯಕ್ರವರ ಉದ್ಯಮಶೀಲತೆ, ಕ್ರಿಯಾಶೀಲತೆ ಹಾಗೂ ಶ್ರದ್ಧಾ ಭಕ್ತಿಗಳ ಸಮಾಜ ಸೇವೆಯ ಪರಿಚಯ ಮಾಡಿಕೊಟ್ಟರು. ನಂತರ ಶಾಲು ಹೊದಿಸಿ, ಹಣ್ಣು ಹಂಪಲುಗಳನ್ನು ಹಾಗೂ ಬೆಳ್ಳಿಯ ಜೋಡಿ ದೀಪಗಳನ್ನು ನೀಡಿ ಸನ್ಮಾನಿಸಲಾಯಿತು.

    ಈ ವೇಳೆ ಮಾತನಾಡಿದ ಕೆ.ಸಿ. ನಾಯಕ್‌, ತನ್ನನ್ನು ಕೈ ಹಿಡಿದು ಮುನ್ನೆಡೆಸಿದ ಸಮಾಜಕ್ಕೆ ತಾನು ಸದಾ ಆಭಾರಿ ಎಂದು ನುಡಿದರು. ದೇವಾಲಯ ಮತ್ತು ವಿದ್ಯಾಲಯಗಳನ್ನು ಕಟ್ಟುವ ನನ್ನ ಕನಸು ನನಸಾಗಿ ಜೀವನ ಸಾರ್ಥಕವಾಗಿದೆ. ಇದೀಗ ಮಂಗಳೂರು ವಿಶ್ವವಿದ್ಯಾನಿಲಯದವರು ನೀಡಿದ ಗೌರವ ಡಾಕ್ಟರೇಟ್ ನನ್ನ ಜವಾಬ್ದಾರಿಯನ್ನು ಇನ್ನೂ ಹೆಚ್ಚಿಸಿದೆ ಎಂದರು.

    ವೇದಿಕೆಯಲ್ಲಿ ಶಕ್ತಿ ಎಜ್ಯುಕೇಶನ್ ಟ್ರಸ್ಟಿನ ಪ್ರಧಾನ ಸಲಹೆಗಾರ ರಮೇಶ ಕೆ, ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ನೀಮಾ ಸಕ್ಸೇನಾ, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಕ್ಯಾತ್ ರೈ ಉಪಸ್ಥಿತರಿದ್ದರು. ಶಿಕ್ಷಕಿ ಸ್ವಾತಿ ಭರತ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು ತಾವೇ ತಯಾರಿಸಿದ ಹೂಗುಚ್ಛಗಳನ್ನು ಶಾಲಾ ಸಂಸ್ಥಾಪಕರಿಗೆ ನೀಡಿ ಸಂಭ್ರಮ ಪಟ್ಟರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ

    Published

    on

    ಮಂಗಳೂರು : ಉದ್ಯಮಿ ಐಕಳ ಹರೀಶ್‌ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್‌ ಹಾಗೂ ಕಾಸರಗೋಡು ನಿವಾಸಿ ಕಲಾಮ್‌  ಬಂಧಿತರು.  ಈ ಪೈಕಿ ಸುಹೈಲ್ ಹಾಗೂ ಝುಬೈರ್‌ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಮ್‌ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್‌ ಪೋರ್ಟ್‌ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

    ಬಂಧಿತರಿಂದ ನಕಲಿ ಪಾಸ್‌ ಪೋರ್ಟ್‌, ಮೊಬೈಲ್‌ ಫೋನ್‌, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 2023ರಲ್ಲಿ ಉದ್ಯಮಿ ಹರೀಶ್‌ ಶೆಟ್ಟಿ ಐಕಳ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಕಾಸರಗೋಡು ನಿವಾಸಿ ಕಲಾಮ್‌ನ ಸಹಕಾರದಲ್ಲಿ ನಕಲಿ ಪಾಸ್‌ ಪೋರ್ಟ್‌ ಮಾಡಿಸಿಕೊಂಡು  ವಿದೇಶಕ್ಕೆ ತೆರಳಿ ಅಲ್ಲಿ ತಲೆ ಮರೆಸಿಕೊಂಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳು ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಲ್ನಾಡು ಕೋರ್ದಬ್ಬು ದೈವಸ್ಥಾನ ಬಳಿ ಮುಲ್ಕಿ ಸುಂದರರಾಮ ಶೆಟ್ಟಿ ಸಭಾಭವನದ ಬಳಿ ಇರುವುದನ್ನು ಖಚಿತ ಪಡಿಸಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

    ಇದನ್ನೂ ಓದಿ : ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು

    ಈಗಾಗಲೇ ಮುಲ್ಕಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುಧವಾರ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂದಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 5ಕ್ಕೇರಿದೆ.

    Continue Reading

    DAKSHINA KANNADA

    ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು

    Published

    on

    ಕಿನ್ನಿಗೋಳಿ: ಕಿನ್ನಿಗೋಳಿ ಪಟ್ಟಣ ಪಂಚಾಯತಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಮತ್ತು ಜೂನಿಯರ್ ಎಂಜಿನಿಯರ್ ನಾಗರಾಜ್‌ ಎಂಬುವವರನ್ನು ಕಿನ್ನಿಗೋಳಿ ಲೋಕಾಯುಕ್ತ ಪೊಲೀಸರು ಸೆರೆ ಹಿಡಿದಿದ್ದಾರೆ.
    ಗುತ್ತಿಗೆದಾರರಿಂದ ಲಂಚ ಸ್ವೀಕಾರ:
    ಪಿಡಬ್ಲ್ಯೂಡಿ ಕ್ಲಾಸ್‌ ವನ್‌ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿಯ ಗುತ್ತಿಗೆ ವಹಿಸಿ ಕೆಲಸ ನಿರ್ವಹಿಸುತ್ತಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯವರು ದೂರು ನೀಡಿದ್ದಾರೆ. ಕಾಮಗಾರಿಯ ಮೊತ್ತ 9,77,154 ರೂಪಾಯಿಗಳ ಬಿಲ್ಲು ಮಂಜೂರಾತಿಯಾಗಿದ್ದು, ಜೂನಿಯ‌ರ್ ಎಂಜಿನಿಯರ್ ನಾಗರಾಜು ಅವರು 37,000 ರೂಪಾಯಿ ಹಾಗೂ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿ ಅವರು 15,000 ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಪ್ರಕರಣ ದಾಖಲಾಗಿದ್ದು, ಜೂನಿಯರ್ ಎಂಜಿನಿಯರ್ ನಾಗರಾಜು ಅವರು ಮುಂಗಡವಾಗಿ 7000 ರೂ. ಹಣವನ್ನು ಗುತ್ತಿಗೆದಾರರಿಂದ ಪಡೆದುಕೊಂಡಿದ್ದರು.
    ಈ ದೂರಿನ ಹಿನ್ನೆಲೆಯಿಂದ ಕಿನ್ನಿಗೋಳಿ ಲೋಕಾಯುಕ್ತ ಪೊಲೀಸರು ಪಟ್ಟಣ ಪಂಚಾಯಿತಿ ದಾಳಿಗೆ ವ್ಯವಸ್ಥೆ ಮಾಡಿ ಆರೋಪಿಗಳಾದ ಜೂನಿಯರ್ ಎಂಜಿನಿಯರ್ ನಾಗರಾಜುರಿಂದ 30 ಸಾವಿರ ರೂಪಾಯಿ ಹಾಗೂ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿಯವರಿಂದ 15 ಸಾವಿರ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಅವರನ್ನು ಸೆರೆ ಹಿಡಿಯಲಾಗಿದೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ.ನಟರಾಜ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಡಾ. ಉಪಾಧೀಕ್ಷಕರಾದ ಗಾನಾ ಪಿ. ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್ ಪಿ, ಚಂದ್ರಶೇಖರ್ ಕೆ.ಎನ್, ಚಂದ್ರಶೇಖರ್ ಸಿ.ಎಲ್ ಮತ್ತು ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.

    ವಿಡಿಯೋ ನೋಡಿ:

    Continue Reading

    DAKSHINA KANNADA

    ಕೋಟಿ ಗಾಯತ್ರಿ ಯಾಗ: ಸೆ. 29ರಂದು ಚಿತ್ರಾಪುರ ಮಠದಲ್ಲಿ ಸಂಕಲ್ಪ ದಿನ

    Published

    on

    ಮಂಗಳೂರು : ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ನಡೆಯಲಿರುವ ಕೋಟಿ ಗಾಯತ್ರಿ ಯಾಗದ ಪೂರ್ವಭಾವಿಯಾಗಿ ಸೆ. 29ರ ಭಾನುವಾರ ಮುಂಜಾನೆ ಸಂಕಲ್ಪ ದಿನವನ್ನು ಮಂಗಳೂರಿನ ಚಿತ್ರಾಪುರ ಮಠದಲ್ಲಿ ನಡೆಲು ಉದ್ದೇಶಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಹೇಳಿದರು. ಚಿತ್ರಾಪುರ ಮಠದಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಮಸ್ತರ ಸಭೆಯಲ್ಲಿ ಕೋಟಿ ಗಾಯತ್ರಿ ಯಾಗದ ಯಶಸ್ವಿಗಾಗಿ ನಾನಾ ಸಮಿತಿಗಳನ್ನು ರಚನೆಯ ಬಗ್ಗೆ ಚರ್ಚಿಸಿ ನಿರ್ಣಯಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.

    ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮುದಾಯವು ಈಗಾಗಲೇ ಗಾಯತ್ರಿ ಯಜ್ಞದ ಪೂರ್ವಭಾವಿಯಾಗಿ ಜಪದ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹೊರಭಾಗದಲ್ಲಿರುವ ಜಿಲ್ಲೆಯ ಬ್ರಾಹ್ಮಣರು ಕೂಡಾ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಮಂದಿ ಹೆಸರು ನೋಂದಾಯಿಸುವ ನಿಟ್ಟಿನಲ್ಲಿ ಪ್ರೇರೇಪಿಸುವ ಕೆಲಸವಾಗಬೇಕು ಎಂದರು. ಬ್ರಾಹ್ಮಣ ಸಮಾಜದ ಎಲ್ಲಾ ಬಾಂಧವರು ಒಂದೇ ಸೂರಿನಡಿ ಸೇರಿಸಿ, ಹೊರ ಜಗತ್ತಿಗೆ ಬ್ರಾಹ್ಮಣ ಎಂಬ ಸಂದೇಶ ಮುಟ್ಟಿಸುವಂತಾಗಬೇಕು. ಇದೊಂದು ವಿಶೇಷ ಕಾರ್ಯಕ್ರಮ ಈ ಕಾರ್ಯಕ್ರಮವು ಗಾಯತ್ರಿ ಸಂಗಮವಾಗಿದೆ. ’ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೇಜದ ಬೆಳಕಲಿ’ ಶೀರ್ಷಿಕೆಯಡಿ ಜರಗಲಿದೆ. ಆದುದರಿಂದ ರಚನೆಯಾದ ಸಮಿತಿಯ ಸದಸ್ಯರು ಎಲ್ಲರೂ ಒಂದಾಗಿ ತಮ್ಮ ಮನೆ ಕಾರ್ಯಕ್ರಮ ಎಂಬ ರೀತಿಯಲ್ಲಿ ದುಡಿಯಬೇಕು. ಆ ಮೂಲಕ ಸಮಾಜಕ್ಕೆ ನಮ್ಮ ಒಗ್ಗಟ್ಟನ್ನು ತೋರಿಸಿಕೊಡಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಶ್ರೀ ಮಹೇಶ್ ಕಜೆ ಹೇಳಿದರು.

    ನಾನಾ ಸಮಿತಿಗಳ ಜವಾಬ್ದಾರಿ, ಹೋಮದ ರೂಪು ರೇಶೆ, ಹೋಮದ ಉದ್ದೇಶ, ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದ ವಿದ್ವಾನ್ ಕಶೆಕೋಡಿ ಸೂರ್ಯನಾರಾಯಣ ಭಟ್ ಸಾಂದರ್ಭಿಕವಾಗಿ ಮಾತನಾಡಿದರು. ಅ. 26ರಂದು ಮಹಿಳೆಯರಿಗಾಗಿ ಮಾತೃ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಮಾತೆಯರು ಈ ಸಂಗಮದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಈ ವೇದಿಕೆಯೇ ಇಡೀ ಸಮಾಜದ ಮುಖವಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಹಿಂದೆ ಗಾಯತ್ರಿ ಯಾಗ ಮಾಡಿ ಅನುಭವ ಇರುವ ವಿದ್ವಾನ್ ಬಂದಗದ್ದೆ ನಾಗರಾಜ್ ಮಾತನಾಡಿ, ಗಾಯತ್ರಿ ಮಂತ್ರ ಅನುಷ್ಠಾನ ಮಾಡುವುದರಿಂದ ಸಿಗುವ ಲಾಭ, ಮಾನಸಿಕ ವಿಕಸನದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

    ವಿದ್ವಾನ್ ಕಟೀಲಿನ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಮಾತನಾಡಿ, ಎಲ್ಲಾ ವಿಪ್ರ ಸಮಾಜ ಬಾಂಧವರು ಒಟ್ಟು ಸೇರಿ ಈ ಯಜ್ಞ ಕಾರ್ಯದಲ್ಲಿ ಭಾಗಿಗಳಾಗೋಣ, ಪ್ರತಿಯೊಬ್ಬ ಬ್ರಾಹ್ಮಣನು ಸಹ ಕುಟುಂಬ ಸಹಿತ ಪಾಲ್ಗೊಳ್ಳಬೇಕು ಹಾಗೂ ಸೆ.೨೯ರ ಸಂಕಲ್ಪ ಕಾರ್ಯದಲ್ಲಿ ಕನಿಷ್ಠ ೫೦೦ ಜನ ಬಾಂಧವರು ಸೇರಬೇಕು ಎಂದರು. ಬ್ರಾಹ್ಮಣ ಮಹಾಸಭಾ ಸುರತ್ಕಲ್‌ನ ಗೌರವಾಧ್ಯಕ್ಷ ಪಿ. ಪುರುಷೋತ್ತಮ ರಾವ್ ಇದು ನಮ್ಮೆಲ್ಲರ ಕಾರ್ಯಕ್ರಮ ಪ್ರತಿಯೊಬ್ಬರು ತಾನು ಮನ ಧನಗಳಿಂದ ಸಾಹಕರಿಸೋಣ ಎಂದರು.

    ವಿವಿಧ ಬ್ರಾಹ್ಮಣ ಸಮಾಜದ ಪ್ರಮುಖರಾದ ಕರ್ಗಿ ಶ್ರೀನಿವಾಸ ಅಚಾರ್, ಶ್ರೀನಿವಾಸ್ ಚಿತ್ರಾಪುರ, ಸುರೇಶ್ ರಾವ್ ಚಿತ್ರಾಪುರ, ಶ್ರೀಕರ ದಾಮ್ಲೆ, ಎಂ.ಟಿ. ಭಟ್, ಉದಯ ಕುಮಾರ್, ಉದಯ ಕುಮಾರ್ ಸುರತ್ಕಲ್, ಕಾತ್ಯಾಯಿನಿ ರಾವ್, ಶೋಭಾ ಚಿತ್ರಾಪುರ, ಸಾವಿತ್ರಿ ಹೆಚ್ ಭಟ್, ಹೊಸಬೆಟ್ಟು, ರಮಾ.ವಿ ರಾವ್, ಯಮುನಾ ಪಿ ರಾವ್, ಎಂ ಸದಾಶಿವ ಕುಳಾಯಿ, ಪ್ರಕಾಶ್ ಕೋಟೆಕಾರ್, ಜಯಪ್ರಕಾಶ್ ಹೆಬ್ಬಾರ್, ಜಯರಾಮ್ ಭಟ್, ಸುಬ್ರಹ್ಮಣ್ಯ ವಿ ಭಟ್, ಗೋಪಾಲಕೃಷ್ಣ ಮಯ್ಯ, ಜ್ಯೋತಿಷಿ ರಂಗ ಐತಾಳ್ ಕದ್ರಿ, ವಿದ್ವಾನ್ ಸತ್ಯಕೃಷ್ಣ ಭಟ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

    Continue Reading

    LATEST NEWS

    Trending