Connect with us

MANGALORE

ಶೈಕ್ಷಣಿಕ ವಲಯದ ಮಾನವೀಯ ಸೇವೆಗೆ ಡಾ.ಉಷಾಪ್ರಭಾ ಎನ್‌. ನಾಯಕ್‌ ರಿಗೆ ‘ಸೇವಾರತ್ನ ಪ್ರಶಸ್ತಿ’

Published

on

ಮಂಗಳೂರು: ಮ್ಯಾಕ್ಸ್‌ ಲೈಫ್‌ ಇನ್ಸುರೆನ್ಸ್‌ ವತಿಯಿಂದ ಎಕ್ಸ್‌ಪರ್ಟ್ ಸಮೂಹ ಸಂಸ್ಥೆಯ ಸಹ-ಸಂಸ್ಥಾಪಕಿ ಹಾಗೂ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್‌. ನಾಯಕ್‌ ಅವರಿಗೆ ‘ಸೇವಾರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.

ಮ್ಯಾಕ್ಸ್‌ ಲೈಫ್‌ ಇನ್ಸೂರೆನ್ಸ್‌ ವತಿಯಿಂದ ಶೈಕ್ಷಣಿಕ ವಲಯದ ಮಾನವೀಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕಾರ್ಯಕ್ರಮದಲ್ಲಿ ಸತೀಶ್ ಮೆನನ್‌, ಗಣೇಶ್‌ ಆಚಾರ್ಯ, ಅರುಣ್‌ ಶೆರ್ವೆಗರ್‌, ಮೆಟಿಲ್ಡಾ, ಸಾಯಿ ಗೀತಾ, ವಿಷ್ಣು ಚೌಧರಿ, ಮ್ಯಾಕ್ಸ್‌ ಇನ್ನೂರೆನ್ಸ್‌ ನ ಕರ್ನಾಟಕ ವಲಯದ ರೀಜನಲ್‌ ಮ್ಯಾನೇಜರ್‌ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

https://youtu.be/tZxsvq2rXXI

DAKSHINA KANNADA

ಕಡಬ: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Published

on

ಕಡಬ: ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ(ಮೇ.11) ಸಂಜೆ ನಡೆದಿದೆ.

rail dikki

ಮುಂದೆ ಓದಿ..; ಬಯಲಾಯ್ತು ಅಕ್ರಮ ಸಂಬಂಧ; ನೇಣಿಗೆ ಶರಣಾದ ವಿವಾಹಿತ!

ಮೃತ ವ್ಯಕ್ತಿಯನ್ನು ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಮಹಾಲಿಂಗ ನಾಯ್ಕ್(60) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ವೇಳೆಗೆ ರೈಲ್ವೇ ಹಳಿಯಲ್ಲಿ ಮಹಾಲಿಂಗ ನಾಯ್ಕರು ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ.  ಈ ಬಗ್ಗೆ ಕಡಬ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

BANTWAL

ಬಯಲಾಯ್ತು ಅಕ್ರಮ ಸಂಬಂಧ; ನೇಣಿಗೆ ಶರಣಾದ ವಿವಾಹಿತ!

Published

on

ಪುತ್ತೂರು : ವ್ಯಕ್ತಿಗಳು ಸಾಲಬಾಧೆಯಿಂದಲೋ, ಅನಾರೋಗ್ಯದಿಂದಲೋ ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿಯೋ ಜೀವಾಂತ್ಯಗೊಳಿಸುವುದನ್ನು ಕಾಣುತ್ತೇವೆ. ಆದರೆ, ಇಲ್ಲೊಬ್ಬ,
ಅಕ್ರಮ ಪ್ರೇಮ ಸಂಬಂಧದ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪ ಶನಿವಾರ ಘಟನೆ ಸಂಭವಿಸಿದೆ.

ಈಶ್ವರಮಂಗಲ ಸಮೀಪದ ಕತ್ರಿಬೈಲುವಿನ ಪ್ರಶಾಂತ್ ಮುಖಾರಿ (೩೮) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ತನ್ನ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ಅಂತರದಲ್ಲಿರುವ ಚಿಮುಣಿಗುಡ್ಡೆ ಎಂಬಲ್ಲಿನ ಗುಡ್ಡದ ರಸ್ತೆ ಬದಿಯಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 

ಇದನ್ನು ಓದಿ: ಈ ವೀಡಿಯೋವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ ? ವೀಡಿಯೋವೊಂದನ್ನು ಹಂಚಿಕೊಂಡು ಸವಾಲೆಸೆದ ನಟಿ ಜ್ಯೋತಿ ರೈ

ಅಕ್ರಮ ಸಂಬಂಧ ಬಯಲು – ನೇಣಿಗೆ ಶರಣು :

ಪ್ರಶಾoತ್ ಮುಖಾರಿ ಅವರಿಗೆ ಪತ್ನಿ ಮತ್ತು ಎಳೆಯ ವಯಸ್ಸಿನ ಪುತ್ರನಿದ್ದಾನೆ. ಈ ನಡುವೆ ಇನ್ನೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರ ಬಹಿರಂಗಗೊಂಡಿದ್ದ ಹಿನ್ನೆಲೆಯಲ್ಲಿ ಅವರು ಅಪಮಾನಗೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.
ಮೃತರ ಪತ್ನಿ ನೀಡಿರುವ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಕಡಬ : ಸಿಡಿಲು ಬಡಿದು ಓರ್ವ ಸಾವು; ಇಬ್ಬರಿಗೆ ಗಾಯ

Published

on

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವರುಣ ಕೃಪೆ ತೋರಿದ್ದಾನೆ. ಇನ್ನೊಂದೆಡೆ ಸಿಡಿಲಾರ್ಭಟಕ್ಕೆ ವ್ಯಕ್ತಿ ಬಲಿಯಾಗಿದ್ದಾರೆ.. ಕಡಬ ತಾಲೂಕಿನಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶ,ಚೈನ್‌ಪುರ್ ಮೂಲದ ಶ್ರೀಕಿಶುನ್ ಮೃತ ವ್ಯಕ್ತಿ.

ಇದನ್ನು ಓದಿ:ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ! 

ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನದಿ ಬದಿಯ ಶೆಡ್ ನಲ್ಲಿದ್ದ ವೇಳೆ ಶೆಡ್ ಗೇ ಸಿಡಿಲು ಬಡಿದಿದೆ. ಪರಿಣಾಮ ಮರಳು ತೆಗೆಯುವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

Continue Reading

LATEST NEWS

Trending