Connect with us

    FILM

    ಶೀಘ್ರದಲ್ಲಿ ತೆರೆಗೆ ಬರಲಿದೆ ‘ದೃಶ್ಯಂ-3’..! ಕ್ಲೂ ಕೊಟ್ಟ ಚಿತ್ರ ತಂಡ..!

    Published

    on

    ಮಂಗಳೂರು : ಮುಂದೇನಾಗುತ್ತದೆ ಎಂದು ಚಿತ್ರ ಪ್ರೇಮಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಸಿನೆಮಾ ತನ್ನ ಮೂರನೇ ಅಧ್ಯಾಯದಲ್ಲಿ ಉತ್ತರ ನೀಡಲು ಮುಂದಾಗಿದೆ. ಸಿನಿಮಾ ಇಂಡಸ್ಟ್ರೀಯಲ್ಲಿ ಸಾಕಷ್ಟು ಸದ್ದು ಮಾಡಿದ್ದ ‘ದೃಶ್ಯಂ’ ಸಿನೆಮಾ ಈಗಾಗಲೇ ‘ದೃಶ್ಯಂ2’ ಮೂಲಕ ಕಥಾನಾಯಕನ ಕ್ರಿಮಿನಲ್‌ ಮೈಂಡ್‌ ಬಗ್ಗೆ ಚರ್ಚೆ ಹುಟ್ಟು ಹಾಕಿತ್ತು. ಇದೀಗ ‘ದೃಶ್ಯಂ3’ ಮೂಲಕ ಈ ಕಥೆಗೆ ಅಂತ್ಯ ಹಾಡಲು ಚಿತ್ರ ತಂಡ ಸಿದ್ಧವಾಗಿದೆ.

    ಕೇವಲ ಮಲೆಯಾಳಂ ಮಾತ್ರವಲ್ಲದೆ ಇಡೀ ಸಿನೆಮಾ ಇಂಡಸ್ಟ್ರೀಯಲ್ಲೇ ಸಂಚಲನ ಮೂಡಿಸಿದ ಸಿನೆಮಾ ‘ದೃಶ್ಯಂ’. ಸಸ್ಪೆನ್ಸ್‌ ಥ್ರಿಲರ್ ಸಿನೆಮಾವಾಗಿ ಜನರಿಗೆ ಇಷ್ಟವಾಗಿದ್ದ ಈ ಸಿನೆಮಾ ‘ದೃಶ್ಯಂ2’ ಮೂಲಕ ಇಡೀ ಸಿನೆಮಾ ಇಂಡಸ್ಟ್ರೀಯನ್ನೇ ಅಲ್ಲಾಡಿಸಿತ್ತು. ಕಥೆಯನ್ನೂ ಹೀಗೂ ಬರೆಯಬಹುದು ಅನ್ನೋದನ್ನ ‘ದೃಶ್ಯಂ’ ಮತ್ತು ‘ದೃಶ್ಯಂ2’ ಮೂಲಕ ಜೀತು ಜೋಸೆಫ್‌ ತೋರಿಸಿಕೊಟ್ಟಿದ್ದರು.

    ತನ್ನ ಕುಟುಂಬದ ರಕ್ಷಣೆಗಾಗಿ ಕಥಾನಾಯಕ ಯಾವ ರೀತಿ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯಶಸ್ವಿಯಾಗಿದ್ದ ಮತ್ತು ಮೃತ ದೇಹವನ್ನು ಹೇಗೆ ಅಡಗಿಸಿ ಇಟ್ಟಿದ್ದ ಅನ್ನೋದು ‘ದೃಶ್ಯಂ’ ಸಿನೆಮಾದ ಕಥಾವಸ್ತು. ಇನ್ನು ‘ದೃಶ್ಯಂ2’ ನಲ್ಲಿ ಕಥಾ ನಾಯಕನ ಪ್ಲ್ಯಾನ್‌ ಬಿ ಪ್ರಕಾರ ಮೆಡಿಕಲ್ ಕಾಲೇಜಿನಲ್ಲಿ ಮೃತದೇಹದ ಅಸ್ತಿಗಳನ್ನು ಬದಲಾಯಿಸಿ ತನ್ನ ಕುಟುಂಬವನ್ನು ಕಾಪಾಡುವುದು ಕಥಾವಸ್ತುವಾಗಿತ್ತು.

    ಇದನ್ನೂ ಓದಿ : ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೆಂಗಳೂರಿನಲ್ಲಿ ಡ್ರ*ಗ್‌ ಮಾಫಿಯಾ ಕಿಂಗ್‌ ಪಿನ್ ಅರೆಸ್ಟ್

    ಕಥಾನಾಯಕನ ಈ ಕ್ರಿಮಿನಲ್‌ ಬುದ್ದಿಗೆ ಕೊನೆ ಇಲ್ಲವಾ ಎಂದು ‘ದೃಶ್ಯಂ2’ ನೋಡಿದ ಚಿತ್ರ ಅಭಿಮಾನಿಗಳು ಪ್ರಶ್ನೆ ಮಾಡಿದ್ದರು. ಇದೀಗ ‘ದೃಶ್ಯಂ3’ ಮೂಲಕ ಚಿತ್ರತಂಡ ಅಭಿಮಾನಿಗಳಿಗೆ ಮತ್ತೊಂದು ಸಸ್ಪೆನ್ಸ್‌ ಮೂಲಕ ಉತ್ತರ ನೀಡಲು ಮುಂದಾಗಿದೆ.
    2025 ರ ಡಿಸೆಂಬರ್‌ನಲ್ಲಿ ಕ್ರಿಸ್‌ಮಸ್‌ ವೇಳೆ ಚಿತ್ರವನ್ನು ತೆರೆ ಮೇಲೆ ತರಲು ಸಿದ್ಧತೆ ನಡೆಸಿದೆ. ಸಿನೆಮಾದ ಚಿತ್ರೀಕರಣ ಆರಂಭವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹರಡಿದೆ. ಚಿತ್ರದ ಕಥೆ ಸಿದ್ದವಾಗಿದ್ದು, ‘ಕ್ಲಾಸಿಕ್ ಕ್ರಿಮಿನಲ್ ಈಸ್ ಬ್ಯಾಕ್‌’ ಎಂದು ಅಭಿಮಾನಿಗಳು ಪೋಸ್ಟರ್ ಹಂಚಿಕೊಳ್ಳುತ್ತಿದ್ದಾರೆ.

    BIG BOSS

    ಇತಿಹಾಸದಲ್ಲೇ ಮೊದಲು.. ಬಿಗ್​ಬಾಸ್ ಕಂಟೆಸ್ಟಂಟ್ ಆಗಿ​ ಮನೆಗೆ ಎಂಟ್ರಿ ಕೊಟ್ಟ ಕತ್ತೆ; ಏನಿದರ ಗುಟ್ಟು?

    Published

    on

    ಈಗಂತೂ ಎಲ್ಲಾ ಭಾಷೆಯಗಳಲ್ಲಿ ಬಿಗ್​ಬಾಸ್​ನ​ದ್ದೇ ಹವಾ ಸೃಷ್ಟಿಯಾಗಿದೆ. ಭಾರತದಲ್ಲಿ ಹಲವು ಭಾಷೆಗಳಲ್ಲಿ ಬಿಗ್​​ಬಾಸ್ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಕೆಲವೊಂದು ಭಾಷೆಯಲ್ಲಿ ಈಗಾಗಲೇ ಬಿಗ್​ಬಾಸ್​ ಸೀಸನ್​ ಮುಕ್ತಾಯಗೊಂಡಿದೆ. ಹೀಗೆ ಬಿಗ್​ಬಾಸ್​ ಕಾರ್ಯಕ್ರಮ ಅಪಾರ ಪ್ರೇಕ್ಷಕರ ಬಳಗವನ್ನು ಹೊಂದಿಕೊಂಡು ಮುನ್ನುಗ್ಗುತ್ತಿದೆ.

    ಈಗಾಗಲೇ ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 ಶುರುವಾಗಿ ಒಂದು ವಾರ ಕಳೆದಿದೆ. ಇದರ ನಡುವೆ ನಿನ್ನೆ ಅಂದ್ರೆ ಭಾನುವಾರ ಹಿಂದಿ ಬಿಗ್​ಬಾಸ್​ ಸೀಸನ್​ 18 ಶುರುವಾಗಿದೆ. ಹೌದು, ಹಿಂದಿ ಬಿಗ್​ಬಾಸ್​ ಸೀಸನ್​ 18 ಶುರುವಾಗಿದೆ. ಆದರೆ ಬಿಗ್​ಬಾಸ್​ ಇತಿಹಾಸದ ಮೊಟ್ಟ ಮೊದಲ ಬಾರಿಗೆ ಸಾಕು ಪ್ರಾಣಿಯೊಂದನ್ನು ಮನೆಗೆ ಕಳುಹಿಸಲಾಗಿದೆ. ಒಟ್ಟು 19 ಕಂಟೆಸ್ಟೆಂಟ್​ಗಳ ಜೊತೆಗೆ ಒಂದು ಕತ್ತೆ ಕೂಡ ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟಿದೆ.

    ಸಲ್ಮಾನ್ ಖಾನ್ ನಡೆಸಿಕೊಡುತ್ತಿರೋ ಬಿಗ್​ಬಾಸ್​ ಸೀಸನ್​ 18 ಕಾರ್ಯಕ್ರಮದಲ್ಲಿ ಈ ಕತ್ತೆ ಎಂಟ್ರಿ ಕೊಟ್ಟಿದೆ. ವೇದಿಕೆಗೆ 19ನೇ ಸ್ಪರ್ಧಿಯಾಗಿ ಬಂದ ಕತ್ತೆಯನ್ನು ನೋಡಿದ ವೀಕ್ಷಕರು ಫುಲ್ ಶಾಕ್ ಆಗಿದ್ದಾರೆ. ಬಿಗ್​ಬಾಸ್​ ಮನೆಗೆ ಬಂದ ‘ಗಧರಾಜ್’ ಕತ್ತೆಯನ್ನು ಕಂಡು ಮನೆ ಮಂದಿ ಫುಲ್​ ಶಾಕ್​ ಆಗಿದ್ದಾರೆ. ಸದ್ಯ ಹೊಸ ಪ್ರೋಮೋಗಳನ್ನು ನೋಡಿದ ವೀಕ್ಷಕರು ಕುತೂಹಲ ವ್ಯಕ್ತಪಡಿಸುತ್ತಿದ್ದಾರೆ.

    Continue Reading

    BIG BOSS

    BBK 11: ಜಗದೀಶ್​ ಅಲ್ವಂತೆ! ಬಿಗ್​ ಬಾಸ್​ ಮನೆಯಲ್ಲಿ ಈ ವ್ಯಕ್ತಿ ತುಂಬಾ ಡೇಂಜರಸ್ ಎಂದ ನಟಿ ಯಮುನಾ!

    Published

    on

    ಬಿಗ್​ ಬಾಸ್​ ಕನ್ನಡ ಸೀಸನ್ 11 ಮೊದಲ ವಾರ ಪೂರ್ತಿಗೊಂಡು ಮುನ್ನುಗ್ಗುತ್ತಿದೆ. ಮೊದಲ ವಾರ ನಟಿ ಯಮುನಾ ಮನೆಯಿಂದ ಹೊರಬಂದಿದ್ದಾರೆ. ಹೊರ ಬಂದ ಬಳಿಕ ಬಿಗ್‌ಬಾಸ್ ಕುರಿತು ಮಾತನಾಡಿದ್ದಾರೆ. ಹಲವು ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.

    ಬಿಗ್​ ಬಾಸ್​ ಮನೆಯಲ್ಲಿ ತುಂಬಾ ಡೇಂಜರಸ್​ ವ್ಯಕ್ತಿಯ ಬಗ್ಗೆಯೂ ನಟಿ ಯಮುನಾ ಹೇಳಿದ್ದಾರೆ. ಲಾಯರ್​ ಜಗದೀಶ್​ಗಿಂತ ಉಗ್ರಂ ಮಂಜು ತುಂಬಾ ಡೇಂಜರಸ್​ ಎಂದು ಹೇಳಿದ್ದಾರೆ. ಸಿಕ್ಕಪಟ್ಟೆ ಮ್ಯಾನಿಪುಲೇಟ್​, ಎಲ್ಲರನ್ನು ತಮ್ಮತ್ತ ಸೆಳೆಯುವವರು. ಏನು ಹೇಳದೆ ಏನು ಮಾಡದೆ ಟ್ರಿಕ್​ ಮಾಡುವವರು ಎಂದು ಹೇಳಿದ್ದಾರೆ.

    ಸದ್ಯ ಮೊದಲ ವಾರವೇ ನಟಿ ಹೊರಬಂದಿದ್ದು, ಬಿಗ್​ ಮನೆಯ ಆಟಗಾರರ ಬಗ್ಗೆ ಮನಬಿಚ್ಚಿ ಹೇಳಿದ್ದಾರೆ. ಅದರಲ್ಲೂ ಆಟವನ್ನು ಇನ್ನೂ ಪ್ರಾರಂಭಿಸದವರು ಮತ್ತು ಪ್ರಾರಂಭಿಸಿದವರ ಬಗ್ಗೆಯೂ ಹೇಳಿದ್ದಾರೆ. ಲಾಯರ್​ ಜಗದೀಶ್​​ ಮೊದಲ ದಿನದಿಂದಲೇ ಆಟ ಶುರು ಮಾಡಿದ್ದಾರೆಂದು ಹೇಳಿದ್ದಾರೆ. ಒಟ್ಟಿನಲ್ಲಿ ಕಿಚ್ಚ ನಿರೂಪಣೆಗೆ ಬಿಗ್​ ಬಾಸ್​ ಮನೆಯಲ್ಲಿ ಒಂದು ವಾರ ಕಳೆದ ಅನುಭವವನ್ನು ನಟಿ ಯಮುನಾ ಬಿಚ್ಚಿಟ್ಟಿದ್ದಾರೆ.

    Continue Reading

    BIG BOSS

    ಇದೇ ಕಾರಣಕ್ಕೆ ಮೊದಲ ವಾರವೇ ಯಮುನಾ ಶ್ರೀ ನಿಧಿ ಬಿಗ್‌ಬಾಸ್ ಮನೆಯಿಂದ ಔಟ್ ಆದದ್ದು..!

    Published

    on

    ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 ಗ್ರ್ಯಾಂಡ್​ ಆಗಿ ಓಪನಿಂಗ್​ ಪಡೆದುಕೊಂಡು ಒಂದು ವಾರ ಕಳೆದಿದೆ. ಪ್ರತಿ ಸೀಸನ್​ನಂತೆ ಈ ಬಾರಿಯೂ ಕೂಡ ಬಿಗ್​ಬಾಸ್​ ಮನೆಯಿಂದ ಓರ್ವ ಸ್ಪರ್ಧಿ ಆಚೆ ಬಂದಿದ್ದಾರೆ. ಕನ್ನಡದ ಬಿಗ್​ಬಾಸ್​ ಸೀಸನ್​ 11 ಶುರುವಾಗಿ ಒಂದೇ ವಾರಕ್ಕೆ ಕನ್ನಡದ ನಟಿ ಯಮುನಾ ಶ್ರೀನಿಧಿ ಆಚೆ ಬಂದಿದ್ದಾರೆ.

    ಈ ವಾರದಲ್ಲಿ ಬಿಗ್​ಬಾಸ್​ ಮನೆಯಿಂದ ಆಚೆ ಹೋಗಲು ಒಟ್ಟು 9 ಮಂದಿ ನಾಮಿನೇಟ್​ ಆಗಿದ್ದರು. ಲಾಯರ್​ ಜಗದೀಶ್​, ಗೌತಮಿ ಜಾಧವ್​, ಹಂಸ, ಭವ್ಯಾ ಗೌಡ, ಯಮುನಾ, ಶಿಶಿರ್​, ಮಾನಸಾ, ಮೋಕ್ಷಿತಾ ಪೈ ಹಾಗೂ ಚೈತ್ರಾ ಕುಂದಾಪುರ ಬಿಗ್​ಬಾಸ್​ ಮನೆಯಿಂದ ಆಚೆ ಹೋಗಲು ನಾಮಿನೇಟ್​ ಆಗಿದ್ದಾರೆ. ಇವರ ಪೈಕಿ ಶನಿವಾರದ ಎಪಿಸೋಡ್​ನಲ್ಲಿ ಭವ್ಯಾ ಗೌಡ, ಗೌತಮಿ ಜಾಧವ್​ ಹಾಗೂ ಮಾನಸ ಅವರನ್ನು ಸೇಫ್​ ಮಾಡಲಾಗಿತ್ತು. ಇನ್ನೂ ಉಳಿದಂತೆ ಉಗ್ರಂ ಮಂಜು, ಐಶ್ವರ್ಯ, ಧರ್ಮ ಕೀರ್ತಿರಾಜ್​, ಧನರಾಜ್​, ಅನುಷಾ ರೈ, ರಂಜಿತ್​, ಗೋಲ್ಡ್​ ಸುರೇಶ್​, ತ್ರೀವಿಕ್ರಂ ಸೇಫ್​ ಆಗಿದ್ದರು.

    ಇವರ ಪೈಕಿ ಮೊದಲ ವಾರವೇ ಬಿಗ್​ಬಾಸ್​ ಮನೆಯಿಂದ ಯಮುನ ಶ್ರೀ ನಿಧಿ ಔಟ್ ಆಗಿದ್ದಾರೆ. ಇವರು ಸರಿಯಾಗಿ ಟಾಸ್ಕ್‌ ಗಳನ್ನು ಆಡದ ಕಾರಣ ಹಾಗೂ ಇವರ ಅಭಿಮಾನಿಗಳು ಸರಿಯಾಗಿ ಓಟ್ ಹಾಕದ ಕಾರಣ ಬಿಗ್‌ಬಾಸ್ ಮನೆಯಿಂದ ಔಟ್ ಆಗಿದ್ದಾರೆ ಎನ್ನುವ ಸಂಶಯ ಅಭಿಮಾನಿಗಳಲ್ಲಿ ಮೂಡಿದೆ. ಒಟ್ಟು 17 ಸ್ಪರ್ಧಿಗಳಿದ್ದ ದೊಡ್ಮನೆಯಲ್ಲಿ ಈಗ ಓರ್ವ ಸ್ಪರ್ಧಿಯನ್ನು ಆಚೆ ಕಳುಹಿಸಲಾಗಿದೆ. ಹೀಗೆ ಪ್ರತಿ ವಾರವು ಬಿಗ್​ಬಾಸ್​ ಮನೆಯಿಂದ ಒಬ್ಬರಾದ ಮೇಲೆ ಒಬ್ಬರು ಸ್ಪರ್ಧಿಗಳು ಬಿಗ್​ಬಾಸ್​ ಮನೆಯಿಂದ ಆಚೆ ಬರಲಿದ್ದಾರೆ.​

    Continue Reading

    LATEST NEWS

    Trending