Connect with us

FILM

“ಜಗ್ಗೇಶ್ ಅವ್ರು ದೊಡ್ಡೋರು, ಅವ್ರ ಕಾಲಿನ ಚಪ್ಪಲಿಗೂ ನಾವು ಸಮವಲ್ಲ”

Published

on

ಡ್ರೋನ್ ಪ್ರತಾಪ್ ತಂದೆ ಮರಿಮಾದಯ್ಯ ಮಾಧ್ಯಮಗಳ ಮುಂದೆ ಜಗ್ಗೇಶ್ ಅವರ ಬಗ್ಗೆ ಮಾತನಾಡಿದ್ದಾರೆ. 

 

ಬೆಂಗಳೂರು : ಡ್ರೋನ್ ಪ್ರತಾಪ್ ಸದ್ಯ ಬಿಗ್ ಬಾಸ್ ಮನೆಯಲ್ಲಿ ಲಾಕ್ ಆಗಿದ್ದು, ಉತ್ತಮ ಪಟ್ಟವನ್ನು ಪಡೆದುಕೊಂಡು ಆಟವಾಡುತ್ತಿದ್ದಾರೆ.
ಈ ಹಿಂದೆ ಪ್ರತಾಪ್ ಅನೇಕ ಬಾರಿ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಿದ್ದು ಅದನ್ನು ಅನೇಕ ಮಂದಿ ಅಪ್ರಿಷಿಯೇಟ್ ಮಾಡಿದ್ದಾರೆ. ಅವರಲ್ಲಿ ಸ್ಯಾಂಡಲ್ ವುಡ್ ನಟ ಜಗ್ಗೇಶ್ ಕೂಡ ಒಬ್ಬರು.
ಅದಾದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಾಪ್ ವಿರುದ್ಧ ನೆಗೆಟಿವ್ ಕಮೆಂಟ್ಸ್ ಗಳುಬಂದ ಹಿನ್ನೆಲೆ “ನಾನು ಎಂತಹ ತಪ್ಪು ಮಾಡಿಬಿಟ್ಟೆ, ಇನ್ನೆಂದು ಹಿಂದೆ ಮುಂದೆ ನೋಡದೇ ಯಾರನ್ನು ಬೆಂಬಲಿಸುವುದಿಲ್ಲ ಎಂದು ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದರು.

ಪ್ರತಾಪ್ ತಮ್ಮ ತಪ್ಪು ತಿದ್ದಿಕೊಂಡು ಬಿಗ್‌ಬಾಸ್ ಮನೆಯಿಂದ ಒಳ್ಳೆ ವ್ಯಕ್ತಿಯಾಗಿ ಹೊರ ಬರುತ್ತಾರೆ ಎನ್ನುವವರು ಇದ್ದಾರೆ. ಇದೀಗ ಮಗನ ಬಗ್ಗೆ ತಂದೆ ಮರಿಮಾದಯ್ಯ ಮಾತನಾಡಿದ್ದಾರೆ.
“ನಿನ್ನ ಮಗನನ್ನು ಯಾಕೆ ಉಳಿಸಿದ್ದೀಯಾ? ಊಟದಲ್ಲಿ ಏನಾದ್ರೂ ಹಾಕಿ ಸಾಯಿಸಿಬಿಡು ಎಂದು ಸಂಬಂಧಿಕರು ನನ್ನ ತಾಯಿಗೆ ಹೇಳಿದ್ದರು.ಎಲ್ಲರ ಬಳಿ ಹಣ ತೆಗೆದುಕೊಂಡಿದ್ದೀನಿ ಅಂತೆಲ್ಲಾ ಹೇಳಿದ್ದರು” ಎಂದು ಭಾವುಕರಾಗಿದ್ದರು.
“ನನ್ನ ಮಗನ ಜೊತೆ ಮಾತನಾಡಲು ನಾನು ಟ್ರೈ ಮಾಡ್ತಿದ್ದೆ. ಅವ್ನು ಬೇಸರದಿಂದ ಫೋನ್ ತೆಗೆದಿರಲಿಲ್ಲ. ನಮ್ಮ ನಂಬರ್ ಬ್ಲಾಕ್ ಮಾಡಿರುವುದು ಸತ್ಯ.
ಆತನೊಟ್ಟಿಗೆ ಮಾತನಾಡುವ ಅವಕಾಶ ಸಿಕ್ಕರೆ ಮಾತನಾಡುತ್ತೀನಿ. ಮಗನೊಟ್ಟಿಗೆ ಮಾತನಾಡುವ ಆಸೆ ನಮಗೂ ಇದೆ.ಅವನು ನಮಗೇನು ತಪ್ಪು ಮಾಡಲಿಲ್ಲ.

ಅದು ಜನರ ತೀರ್ಪು. ಕರ್ನಾಟಕ, ಭಾರತದ ಜನ ನನ್ನ ಮಗನನ್ನು ಗೆದ್ದು ಕಳುಹಿಸಲಿ ಅಂತ ಮನವಿ ಮಾಡುತ್ತೇನೆ.”
ಜಗ್ಗೇಶ್ ಅವರ ಬಗ್ಗೆ ಕೇಳಿದ ಪ್ರಶ್ನೆಗೆ “ಬಿಡಿ ಬಿಡಿ, ಅವ್ರು ದೊಡ್ಡವ್ರು.. ನಾವು ಕೆಳಗಿನ ಮಟ್ಟದವರು. ಅವ್ರ ಕಾಲಿನ ಚಪ್ಪಲಿಗೂ ಸಮವಲ್ಲ.ಆ ರೀತಿ ಇರುವವರು. ಅವರ ಬಗ್ಗೆ ಮಾತನಾಡುವ ಯೋಗ್ಯತೆಯಿಲ್ಲ. ಅವ್ರು ಏನೇ ಮಾತನಾಡಿದ್ದರು. ಅವರಿಗೆ ಸೇರಿದ್ದು. ಜನ ತಿಳ್ಕೊಬೇಕು ಅಷ್ಟೇ. ಬಿಗ್‌ಬಾಸ್ ಮನೆಯಲ್ಲಿ ಅವಮಾನದ ಮಾತು ಬಿಡಿ. ಅದಕ್ಕೆಲ್ಲ ನಾನು ಬೇಸರ ಮಾಡಿಕೊಳ್ಳಲ್ಲ. ಯಾಕೆಂದರೆ ಅದು ಆಟ “ಅವ್ರು ಆಟ ಆಡುತ್ತಿರುತ್ತಾರೆ. ಏನೋ ಒಂದು ಅಂತಾರೆ. ಅದಕ್ಕೆ ಬೇಸರ ಮಾಡಿಕೊಳ್ಳಬಾರದು. ಅವ್ರು ನಮ್ಮ ಮಕ್ಕಳು ಇದ್ದಂತೆ. ಪ್ರತಾಪ್ ಅತ್ತರೆ ಅಳಲಿ ಬಿಡಿ. ಉಳಿದವ್ರ ಬಗ್ಗೆ ಮಾತನಾಡಬಾರದು. ಅವರಿಗೂ ನಾವು ಮಾಡಿದ್ದು ತಪ್ಪು ಎಂದು ಅರಿವಾಗುತ್ತೆ.ಅವ್ರ ತಂದೆ ತಾಯಿ ನಮ್ಮಂಗೆ ಮಕ್ಕಳನ್ನು ಕಳುಹಿಸಿದ್ದಾರೆ. ಅವ್ರು ನಮ್ಮಂತೆ ಬಡವರೋ ಶ್ರೀಮಂತರೋ ಅದು ನನಗೆ ಗೊತ್ತಿಲ್ಲ. ಅಲ್ಲಿ ತಿಳ್ಕೊಳ್ದೇ ಇದ್ದರೂ ಹೊರಗೆ ಬಂದ್ಮೇಲೆ ಹೀಗೆ ಮಾತಾಡಿದ್ವಿ ಅಲ್ಲಾ? ಅಂತ ಗೊತ್ತಾಗುತ್ತೆ” ಎಂದಿದ್ದಾರೆ.
ಒಟ್ನಲ್ಲಿ ಪ್ರತಾಪ್ ರಂತೆ ತಂದೆ ಕೂಡ ಜೆಂಟಲ್ ಮೆನ್ ಅನ್ನೋದನ್ನ ತೋರಿಸಿಕೊಟ್ಟಿದ್ದಾರೆ.

 

FILM

ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ

Published

on

ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬೃಂದಾವನ ಧಾರವಾಹಿಯ ನಟ ಧಾರವಾಹಿಗೆ ಆಯ್ಕೆಯಾದ ತಮ್ಮ ಅಭಿಪ್ರಾಯವನ್ನು ಕೊನೆಗೂ ಹಂಚಿಕೊಂಡಿದ್ದಾರೆ.
ಎಲ್ಲರಿಗೂ ಗೊತ್ತಿರುವಂತೆ ವರುಣ್ ಸೋಷಿಯಲ್ ಮೀಡಿಯಾದಲ್ಲಿ ಈಗಾಗ್ಲೇ ಜನಪ್ರಿಯತೆ ಪಡೆದುಕೊಂಡವರು. ಅಲ್ಲದೇ ಇತ್ತೀಚೆಗೆ ಗರ್ಲ್ ಫ್ರೆಡ್ ಜೊತೆಗೆ ಬ್ರೇಕಪ್ ಮಾಡಿಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು.

ಇದೀಗ ಸೀರಿಯಲ್ ಗೆ ಆಯ್ಕೆಯಾದ ಬಗ್ಗೆ ಮಾತನಾಡಿರುವ ನಟ ವರುಣ್ ಆರಾಧ್ಯ “ದೀಪಾವಳಿ ಹಬ್ಬದ ಊಟ ಮುಗಿಸಿಕೊಂಡು ಮಲಗಿಕೊಂಡಿದ್ದೆ. ರಾತ್ರಿ 12.30ಗೆ ಕರೆ ಮಾಡಿ ಸೀರಿಯಲ್‌ನಲ್ಲಿ ನಟಿಸುವ ಇಂಟ್ರೆಸ್ಟ್‌ ಇದ್ಯಾ. ಅವಕಾಶ ಇದೆ ಎಂದು ಫೋನ್ ಮಾಡಿದರು. ರಾತ್ರಿ ಆ ಸಮಯದಲ್ಲಿ ಮಾಡಿದಕ್ಕೆ ನಾನು ಗಾಬರಿ ಆಗಿದೆ ಆ ಸಮಯದಲ್ಲಿ ಆಡಿಷನ್‌ಗೆ ಬರೆಲು ಹೇಳಿದರು. ನನ್ನ ಸ್ನೇಹಿತರನ್ನು ಕರೆದುಕೊಂಡು ನಾಗರಭಾವಿಯಲ್ಲಿ ನಿರ್ದೇಶಕರಾದ ರಾಮ್‌ಜೀ ಹೇಳಿದ ಸ್ಥಳಕ್ಕೆ ಹೋದೆ. ಕೈಗೆ ಒಂದು ಸ್ಕ್ರಿಪ್ಟ್‌ ಕೊಟ್ಟರು ಆಡಿಷನ್ ಮಾಡಿದೆ.

ಮಧ್ಯರಾತ್ರಿ 2.30ಕ್ಕೆ ಸೆಲೆಕ್ಟ್‌ ಆಗಿರುವೆ ಎಂದು ಹೇಳಿದರು. ನಾನು ಫುಲ್ ಶಾಕ್ ಆಗಿಬಿಟ್ಟಿ..ಅಲ್ಲದೆ ಬೆಳಗ್ಗೆನಿಂದ ಶೂಟಿಂಗ್ ಎಂದು ಹೇಳಿದರು. ಅಷ್ಟೊತ್ತರಲ್ಲಿ ಮನೆಗೆ ಬಂದು ಅಕ್ಕ ಮತ್ತು ಅಮ್ಮ ಮಲಗಿದ್ದರು, ಅವರನ್ನು ಎಬ್ಬಿಸಿ ಸೆಲೆಕ್ಟ್‌ ಅನ್ನೋ ವಿಚಾರ ಹೇಳಿದೆ. ಬೆಳಗ್ಗೆ ಶೂಟಿಂಗ್ ಇತ್ತು…ಹೇರ್ ಕಟ್ ಮಾಡಿಸಬೇಕು ಮತ್ತು ಗಡ್ಡ ಟ್ರಿಮ್ ಮಾಡಬೇಕು ಎಂದು ಹೇಳಿದರು ಅದೂ ಮಾಡಿಸಿಕೊಂಡು ಬೆಳಗ್ಗೆ ಶೂಟಿಂಗ್ ಸ್ಥಳಕ್ಕೆ ಹೋದೆ ಮರು ದಿನವೇ ಪ್ರಸಾರ ಮಾಡಲು ಶುರು ಮಾಡಿದ್ದರು. ಮೊದಲ ದೃಶ್ಯವೇ ಮದುವೆ ಮನೆ ಸೀನ್ ಅಗಿತ್ತು ಎಂದಿದ್ದಾರೆ.

Continue Reading

bengaluru

ಅನಿಮಲ್ ಸಿನಿಮಾ ನೋಡಿದ್ರಾ..? ನಟಿಯರ ಹಾಟ್ ಸೀನ್ ವೈರಲ್..!

Published

on

Film: ಬಾಲಿವುಡ್ ನ ಅನಿಮಲ್ ಸಿನಿಮಾ ಈಗಾಗಲೆ ಬಿಡುಗಡೆಗೊಂಡು ಒಂದೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರಿದ ಬೆನ್ನಲೆ ಆ ಚಿತ್ರದಲ್ಲಿ ಕಾಣಿಸಿಕೊಂಡ ಹಸಿಬಿಸಿ ಸೀನ್ ಗಳು ವೈರಲ್ ಆಗ್ತಾ ಇದೆ.

ಆ ಸಿನಿಮಾದಲ್ಲಿ ನಟನಾಗಿ ರಣಬೀರ್ ಜೊತೆ ನಟಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಕೆಲವೊಂದು ದೃಶ್ಯಗಲ್ಲಿ ರಣಬೀರ್ ಜೊತೆ ನಟಿ ತೃಪ್ತಿ ದಿಮ್ರಿಗೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ಇವರಿಬ್ಬರ ವಿಡಿಯೋಗಳು ವಿಡಿಯೋ ಸಾಮಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲೇ ತೃಪ್ತಿ ದಿಮ್ರಿಯ ನಟಿಯ ಫಾಲೋವರ್ಸ್ ಸಂಖ್ಯೆಯು 1.5 ಮಿಲಿಯನ್ ಗೆ ತಲುಪಿದೆ.

ಅನಿಮಲ್ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ನಟಿಸಿದ ನಟಿಯ ಪಾತ್ರದಿಂದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗ್ತ ಇದೆ ರಣಬೀರ್ ಜೊತೆ ನಟಿ ತೃಪ್ತಿ ದಿಮ್ರಿಯು ಹಾಟ್ ಸೀನ್ ಗಳು ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗ್ತಾ ಇದೆ.

ಡಿ. 1ರಂದು ತೆರೆಗೆ ಬಂದ ಬೆನ್ನಲೆ ಸಿನಿಮಾದ ಅಬ್ಬರ ಮೇಲಕ್ಕೇರಿದೆ. ಈ ಸಿನಿಮಾ ರಿಲೀಸ್ ಆದ ಬೆನ್ನಲೆ ದಿನಕ್ಕೆ 100 ಕೋಟಿ ಕಲೆಕ್ಷನ್ ಪಡೆದಿದ್ದು, ಮೂರು ದಿನದ ಒಟ್ಟು ಕಲೆಕ್ಷನ್ 300ಕೋಟಿಯಾಗಿದೆ.

Continue Reading

bangalore

Bigboss: ನಾಯಿ ಮರಿಯಾದ ಬಿಗ್ ಬಾಸ್ ಸಂಗೀತಾ

Published

on

Bigboss: ಬಿಗ್ ಬಾಸ್ ನಲ್ಲಿ ಸಂಗೀತಾ ಅವರು ಕೆಲವೊಂದು ಟಾಸ್ಕ್ ನಲ್ಲಿ ತೆಗೆದುಕೊಂಡ ನಿರ್ಧಾರ ಫ್ಯಾನ್ಸ್ ಗಳಿಗೆ ಹಿಡಿಸಲಿಲ್ಲ. ಅಲ್ಲಿಂದ ಅವರ ಫ್ಯಾನ್ ಫಾಲೊವರ್ಸ್ ನ ಸಂಖ್ಯೆ ಸುಮಾರು 11 ಸಾವಿರಕ್ಕೂ ಅಧಿಕ ಇಳಿಕೆಯಾಗಿದೆ.

ಕಾರ್ತಿಕ್ ನ ಗುಂಪಿನಲ್ಲಿದ್ದ ಸಂಗೀತಾ ಬಳಿಕ ವಿನಯ್ ತಂಡಕ್ಕೆ ಸೇರಿದ್ದಳೂ. ಇದೀಗ ವಾಪಸು ಕಾರ್ತಿಕ್ ಗುಂಪಿಗೆ ಸೇರಿಕೊಂಡಿದ್ದಾಳೆ.
ಆದರೂ ಕೂಡ ಸಂಗೀತನ ಫ್ಯಾನ್ಸ್ ಗಳಿಗೆ ಈಗ ಸಂಗೀತನ ನಡೆತೆಗಳು ಇಷ್ಟ ಆಗುತ್ತಿಲ್ಲ.

ಇದೀಗ ಬಿಗ್ ಬಾಸ್ ನಲ್ಲಿ ನೀಡಿರುವ ಟಾಸ್ಕ್ ನಲ್ಲಿ ಎಲ್ಲ ಸ್ಪರ್ಧಿಗಳಿ ಒಂದೊಂದು ಟಾಸ್ಕ್ ಕೊಟ್ಟಿದ್ದಾರೆ. ಅದರಲ್ಲಿ ಸಂಗೀತಾಗೆ ಅಳುವ ನಾಯಿಮರಿಯಂತಹ ಟಾಸ್ಕ್ ಸಿಕ್ಕಿದ್ದು, ನಾಯಿಯಂತೆ ಅದರ ಧ್ವನಿಯಂತೆ ಅನುಕರಣೆ ಮಾಡಿದ್ದಾರೆ.

ಇದಕ್ಕೆ ತುಕಾಲಿ ಸಂತೋಷ್ ಸಾಥ್ ನೀಡಿದ್ದಾರೆ. ಅಲ್ಲದೇ ಬಿಗ್ಗ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್​ ಮತ್ತು ವರ್ತೂರ್​ ಸಂತೋಷ್​​ಗೆ ಬಿಗ್​ ಬಾಸ್​​ ಸಂಗೀತಾ ಮತ್ತು ಕಾರ್ತಿಕ್​ ಅವರನ್ನು ಅನುಕರಿಸುವ ಟಾಸ್ಕ್​ ನೀಡಿದ್ದರು. ಅದರಂತೆ ಇಬ್ಬರೂ ಕೂಡ ಆ ಪಾತ್ರವನ್ನು ಭಿನ್ನವಾಗಿ ಮಾಡಿ ಎಲ್ಲ ಸ್ಪರ್ಧಿಗಳನ್ನು ನಕ್ಕು ನಗಿಸಿದ್ದಾರೆ. ಅಲ್ಲದೆ ಸಂಗೀತಾ ಶೃಂಗೇರಿಗೆ ಕರೆಕ್ಟ್ ಆಗಿ ಟಾಂಗ್ ಕೊಟ್ಟಿದ್ದಾರೆ.

 

Continue Reading

LATEST NEWS

Trending