FILM
ದುನಿಯಾ ವಿಜಯ್ ಡಿವೋರ್ಸ್ ಅರ್ಜಿ ವಜಾ..!
ಬೆಂಗಳೂರು/ಮಂಗಳೂರು: ಕನ್ನಡದ ಖ್ಯಾತ ನಟ ದುನಿಯಾ ವಿಜಯ್ ಹಾಗೂ ನಾಗರತ್ನಿ ದಂಪತಿ ಮಧ್ಯೆ ಬಿರುಕು ಕಂಡಿದ್ದು, ವರ್ಷಗಳ ಹಿಂದೆಯೇ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. 2018ರಲ್ಲಿ ಡಿವೋರ್ಸ್ಗಾಗಿ ಅರ್ಜಿ ಸಲ್ಲಿಸಿದ್ದು ಇದೀಗ ಫ್ಯಾಮಿಲಿ ಕೋರ್ಟ್ ಅರ್ಜಿ ವಜಾಗೊಂಡಿದೆ.
ನಟ ದುನಿಯಾ ವಿಜಯ್ಗೆ ನಾಗರತ್ನರವರೊಂದಿಗೆ ಬಾಳ್ವೆ ಮಾಡಲು ಇಷ್ಟವಿಲ್ಲದೇ ಇದ್ದು ವಿಚ್ಚೇದನಕ್ಕಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪತ್ನಿ ನಾಗರತ್ನ ಮಾತ್ರ ನನಗೆ ಗಂಡ ಬೇಕು ಎಂದು ಪಟ್ಟು ಹಿಡಿದ್ದಿದ್ದರು. ನಾಗರತ್ನ ಮತ್ತು ದುನಿಯಾ ವಿಜಯ್ ಅವರ ಸಂಸಾರದಲ್ಲಿ ಹಲವು ವರ್ಷಗಳ ಹಿಂದೆಯೇ ಬಿರುಕು ಮೂಡಿತ್ತು. ಹಾಗಾಗಿ 2018ರಲ್ಲಿ ವಿಜಯ್ ಅವರು ಡಿವೋರ್ಸ್ ಸಲುವಾಗಿ ಅರ್ಜಿ ಸಲ್ಲಿಸಿದ್ದರು. ಮಕ್ಕಳ ಜವಾಬ್ದಾರಿಯನ್ನು ವಹಿಸುವುದಾಗಿ ಹೇಳಿದ್ದರು. ಅಲ್ಲದೇ ಪತ್ನಿಗೆ ಜೀವನಾಂಶವನ್ನು ನೀಡುವುದಾಗಿಯೂ ಹೇಳಿದ್ದರು. ಆದರೆ ಪತ್ನಿ ನಾಗರತ್ನಿ ಪತಿಯನ್ನು ಬಿಡಲು ಸಿದ್ಧರಿರಲಿಲ್ಲ. ಹಾಗಾಗಿ ಪ್ರಕರಣ ಮುಂದೂಡುತ್ತಾ ಬಂದಿದೆ.
Read More..; ‘ಮಂಜುಮ್ಮೇಲ್ ಬಾಯ್ಸ್’ ಸಿನೆಮಾ ನಿರ್ಮಾಪಕರಿಂದ ಹಗರಣ..! ನೋಟೀಸ್ ಜಾರಿ..!!
ಜೂ.13ರಂದು ದುನಿಯಾ ವಿಜಯ್ ಮತ್ತು ನಾಗರತ್ನ ಅವರು ವಿಚ್ಛೇನದ ಅಂತಿಮ ತೀರ್ಪು ಹೊರಬರಲಿದೆ ಎಂಬ ಕಾರಣಕ್ಕೆ ಎಲ್ಲರಲ್ಲೂ ಕುತೂಹಲ ಮೂಡಿತ್ತು. ಕೌಟುಂಬಿಕ ನ್ಯಾಯಾಲಯವು ವಿಜಯ್ಗೆ ವಿಚ್ಛೇನದ ನೀಡಿಲ್ಲ. ನಟನಾಗಿ, ನಿರ್ದೇಶಕನಾಗಿ ದುನಿಯಾ ವಿಜಯ್ ಅವರು ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಟಾಲಿವುಡ್ನಲ್ಲೂ ಅವರಿಗೆ ಬೇಡಿಕೆ ಇದೆ.
FILM
ಖ್ಯಾತ ನಟ ಜಯಂ ರವಿ – ಆರತಿ ದಾಂಪತ್ಯ ಜೀವನದಲ್ಲಿ ಬಿರುಕು!?
ಸಿನಿಮಾ ಲೋಕದಲ್ಲಿ ವಿಚ್ಛೇದನ ಎಂಬುದು ಸಾಮಾನ್ಯ ಸಂಗತಿಯಾಗಿ ಹೋಗಿದೆ. ಹಿಂದಿ, ತಮಿಳು, ತೆಲುಗು, ಚಂದನವನ ಎಲ್ಲೆಡೆಯೂ ವಿಚ್ಛೇದನದ್ದೇ ಸುದ್ದಿ.
ಕಾಲಿವುಡ್ನಲ್ಲಿ ನಟ ಧನುಷ್ ಹಾಗೂ ಐಶ್ವರ್ಯ ವಿಚ್ಛೇದನದ ಸುದ್ದಿ ಈಗಾಗಲೇ ಸುದ್ದಿಯಾಗಿತ್ತು. ಇತ್ತೀಚೆಗೆ ಸಂಗೀತ ನಿರ್ದೇಶಕ, ನಟ ಜಿ. ವಿ ಪ್ರಕಾಶ್ ವಿಚ್ಛೇದನ ಪಡೆಯುವ ಬಗ್ಗೆ ಘೋಷಿಸಿದ್ದರು. ಇದೀಗ ಮತ್ತೊಬ್ಬ ನಟನ ಬಗ್ಗೆ ವಿಚ್ಛೇದನದ ಗಾಸಿಪ್ ಹರಿದಾಡಿದೆ.
ಹೌದು, ನಟ ಜಯಂ ರವಿ – ಆರತಿ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬುದಾಗಿ ಗುಸುಗುಸು ಶುರುವಾಗಿದೆ.
ಇಬ್ಬರ ನಡುವೆ ಭಿನ್ನಾಭಿಪ್ರಾಯ?
ತಮಿಳು ಸಿನಿಮಾ ಸಂಕಲನಕಾರ ಮೋಹನ್ ಪುತ್ರ ರವಿ ಬಾಲನಟನಾಗಿ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದರು. ಬಳಿಕ ಅವರು 2003ರಲ್ಲಿ ‘ಜಯಂ’ ಚಿತ್ರದ ಮೂಲಕ ನಾಯಕ ನಟನಾಗಿ ಪಾದರ್ಪಣೆ ಮಾಡಿದ್ದರು. ಅಲ್ಲಿಂದ ‘ಜಯಂ ರವಿ’ ಎಂದೇ ಜನಪ್ರಿಯರಾದರು. ಬಳಿಕ ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಇತ್ತೀಚೆಗೆ ಬಂದ ಪೊನ್ನಿಯಿನ್ ಸೆಲ್ವನ್ ಚಿತ್ರದ ಟೈಟಲ್ ರೋಲ್ನಲ್ಲಿ ಮಿಂಚಿ ಮೆಚ್ಚುಗೆ ಗಳಿಸಿದ್ದರು.
ಇದನ್ನೂ ಓದಿ : ಮಕ್ಕಳಿಗೆ ಯಾವ ವಯಸ್ಸಿನಿಂದ ಚಹಾ, ಕಾಫಿ ಕೊಡಬಹುದು?
2009 ರಲ್ಲಿ ಕಿರುತೆರೆ ನಿರ್ಮಾಪಕ ಸುಜಾತಾ ವಿಜಯಕುಮಾರ್ ಮಗಳು ಆರತಿ ಎಂಬುವವರ ಜೊತೆ ಜಯಂ ರವಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇದೀಗ ರವಿ – ಆರತಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಇಬ್ಬರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಗಾಸಿಪ್ ಹರಿದಾಡುತ್ತಿದೆ. ಇದೇ ವೇಳರ ಆರತಿ ಇನ್ಸ್ಟಾಗ್ರಾಮ್ನಿಂದ ಪತಿ ಜೊತೆಗಿನ ಫೋಟೊಗಳನ್ನು ಡಿಲೀಟ್ ಮಾಡಿದ್ದು, ಅನುಮಾನ ಇನ್ನಷ್ಟು ಬಲವಾಗಿದೆ.
FILM
ಬೆಂಗಳೂರಿನಲ್ಲಿ ದರ್ಶನ್ ಅಭಿಮಾನಿಯ ಬಂಧನ
ಬೆಂಗಳೂರು : ರೇಣುಕಾಸ್ವಾಮಿ ಕೊ*ಲೆ ಪ್ರಕರಣ ಆರೋಪ ಹೊತ್ತಿರುವ ದರ್ಶನ್ ಜೈಲು ಪಾಲಾಗಿದ್ದಾರೆ. ಇತ್ತ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬಂಧನದಿಂದ ಆಘಾ*ತಕ್ಕೊಳಗಾಗಿದ್ದಾರೆ. ಅಲ್ಲದೇ, ಕೆಲವರು ಟೀಕಾಪ್ರಹಾರಗಳನ್ನು ಮಾಡುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಬೆಂಗಳೂರಿನಲ್ಲಿ ಓರ್ವ ದರ್ಶನ್ ಅಭಿಮಾನಿಯನ್ನು ಬಂಧಿಸಲಾಗಿದೆ.
ಚೇತನ್ ಬಂಧಿತ ಆರೋಪಿ. ಕನ್ನಡ ಚಿತ್ರರಂಗದ ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.
ಚೇತನ್ ಬಹಿರಂಗವಾಗಿ ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಉಮಾಪತಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋಗಳನ್ನು ನೋಡಿದ ನಿರ್ಮಾಪಕ ಉಮಾಪತಿ ಗೌಡ ಬೆದರಿಕೆ ಹಾಕಿದ್ದ ಯುವಕನ ಬಗ್ಗೆ ದೂರು ನೀಡಿದ್ದರು.
ಇದನ್ನೂ ಓದಿ : ದರ್ಶನ್ ಹಾಕಿ ಚಿತ್ರ ಮಾಡೋರು ಇನ್ಮೇಲೆ ಇದನ್ನ ಗಮನಿಸಲೇಬೇಕು
ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅಭಿಮಾನಿ ಚೇತನ್ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಐಪಿಸಿ ಸೆಕ್ಷನ್ 504,506 ಅಡಿಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು.
FILM
WATCH : ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್; ವೀಡಿಯೋ ವೈರಲ್ ಆಗುತ್ತಿದ್ದಂತೆ ಏನಂದ್ರು ನಟ?
ಮಂಗಳೂರು : ಸಿನಿಮಾ ನಟರು ಅಂದಾಕ್ಷಣ ಅಭಿಮಾನಿಗಳು ಮುಗಿಬೀಳೋದು ಸಹಜ. ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಬೇಕು, ಸೆಲ್ಫಿ ಗಿಟ್ಟಿಸಿಕೋಬೇಕು ಅನ್ನೋ ಹೆಬ್ಬಯಕೆ ಸಹಜ. ಆದ್ರೆ, ಈ ರೀತಿ ಹೋದ ಅಭಿಮಾನಿಯೊಬ್ಬನನ್ನು ತಳ್ಳಿರೋ ಘಟನೆ ನಡೆದಿದೆ. ಘಟನೆಯ ವೀಡಿಯೋ ಸದ್ಯ ವೈರಲ್ ಆಗಿದೆ.
ವೈರಲ್ ಆಗಿರೋ ವೀಡಿಯೋ ನಟ ನಾಗಾರ್ಜುನ ಅವರದು. ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ಅವರ ಜೊತೆ ಫೋಟೋ ತೆಗೆಸಿಕೊಳ್ಳಲು ಅಭಿಮಾನಿಯೊಬ್ಬರು ಓಡೋಡಿ ಬಂದಿದ್ದಾರೆ. ಆದರೆ ಅವರನ್ನು ನಾಗಾರ್ಜುನ ಬಾಡಿಗಾರ್ಡ್ ತಳ್ಳಿ ಬೀಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಗರಂ ಆಗಿದ್ದಾರೆ.
‘ನಿಮ್ಮ ಮಾನವೀಯತೆ ಎಲ್ಲಿ ಹೋಯಿತು ನಾಗಾರ್ಜುನ ಅವರೇ?’ ಎಂಬ ಕ್ಯಾಪ್ಷನ್ನೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ.
ಇನ್ನು ವೀಡಿಯೋ ವೈರಲ್ ಆಗುತ್ತಿದ್ದಂತೆ ಸ್ವತಃ ನಾಗಾರ್ಜುನ ಅವರು ಕ್ಷಮೆ ಕೇಳಿದ್ದಾರೆ. ‘ಇದು ಈಗ ತಾನೇ ನನ್ನ ಗಮನಕ್ಕೆ ಬಂತು. ಈ ರೀತಿ ಆಗಬಾರದಿತ್ತು. ಆ ವ್ಯಕ್ತಿಯಲ್ಲಿ ನಾನು ಕ್ಷಮೆ ಕೇಳುತ್ತೇನೆ. ಇನ್ಮುಂದೆ ಎಚ್ಚರಿಕೆ ವಹಿಸುತ್ತೇನೆ. ಈ ರೀತಿ ಇನ್ನೆಂದೂ ಆಗುವುದಿಲ್ಲ’ ಎಂದಿದ್ದಾರೆ.
ಇದನ್ನೂ ಓದಿ: ದರ್ಶನ್ ಹಾಕಿ ಚಿತ್ರ ಮಾಡೋರು ಇನ್ಮೇಲೆ ಇದನ್ನ ಗಮನಿಸಲೇಬೇಕು
ಅಂದಹಾಗೆ ಈ ಘಟನೆ ನಡೆದಾಗ ನಾಗಾರ್ಜುನ ಜೊತೆ ಕಾಲಿವುಡ್ ನಟ ಧನುಷ್ ಕೂಡ ಇದ್ದರು. ಸಿನಿಮಾ ನಟರನ್ನು ಕಂಡಾಗ ಸಿನಿಪ್ರಿಯರು ಹತ್ತಿರ ಬರೋದು ಸಹಜ. ಈ ವೇಳೆ ಬಾಡಿಗಾರ್ಡ್ ಗಳು ನಟರ ಬಳಿ ಬರಲು ಬಿಡುವುದಿಲ್ಲ. ಇಲ್ಲೂ ಹಾಗೇ ಆಗಿದೆ.
- LATEST NEWS4 days ago
ಮುಂದಿನ ಐದು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
- LATEST NEWS5 days ago
ನಟ ದರ್ಶನ್ ಅಭಿಮಾನಿಯ ವಿರುದ್ಧ ಬಿತ್ತು ಕೇಸ್
- DAKSHINA KANNADA3 days ago
ಕರಾವಳಿಯಲ್ಲಿ ಬಿರುಸು ಪಡೆದುಕೊಂಡ ಮಳೆ; ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ
- DAKSHINA KANNADA7 days ago
ಇನ್ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ