Connect with us

    LATEST NEWS

    ದಸರಾ ಪ್ರಯುಕ್ತ ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

    Published

    on

    ಮಂಗಳೂರು: ದಸರಾ ಹಬ್ಬದ ಸಂದರ್ಭದ ಪ್ರಯಕ್ತ ಬೆಂಗಳೂರಿನಿಂದ ಕರಾವಳಿಗೆ ಬರಲು ವಿಶೇಷ ರೈಲು ವ್ಯವಸ್ಥೆಯನ್ನು ಮಾಡಲಾಗಿದೆ.

    ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಉಪಯೋಗವಾಗುವಂತೆ ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರ ನೆರವಿಗೆ ವಿಶೇಷ ರೈಲು ಓಡಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಯಂತೆ ನೈಋತ್ಯ ರೈಲ್ವೇ ಅ. 10 ಹಾಗೂ ಅ. 12ರಂದು ವಿಶೇಷ ರೈಲುಗಳನ್ನು ಹೊರಡಿಸುವುದಾಗಿ ಪಕಟಿಸಿದೆ.

    ಈ ಮನವಿಯನ್ನು ಸಂಸದರ ಗಮನಕ್ಕೆ ಕುಂದಾಪುರ ರೈಲು ಹಿತರಕ್ಷಣ ಸಮಿತಿಯ ಗಣೇಶ್ ಪುತ್ರನ್ ಅವರು ಬಸ್ ಮತ್ತು ಈಗಿರುವ ರೈಲುಗಳ ಟಿಕೆಟ್ ಸಂಪೂರ್ಣ ಖಾಲಿಯಾದ ಬಗ್ಗೆ ತಿಳಿಸಿದ್ದರು. ಇದಕ್ಕೆ ತತ್‌ಕ್ಷಣವೇ ಸ್ಪಂದಿಸಿದ ಸಂಸದರು ರೈಲ್ವೇ ಇಲಾಖೆಗೆ ನವರಾತ್ರಿ ವಿಶೇಷ ರೈಲುಗಳ ಪ್ರಯಾಣಕ್ಕೆ ಸೂಚನೆ ನೀಡಿದ್ದರು. ಮೈಸೂರಿನಿಂದ ಮೆಜೆಸ್ಟಿಕ್ ಮಾರ್ಗವಾಗಿ ಒಂದು ರೈಲು ಮತ್ತೂಂದು ರೈಲು ಯಶವಂತಪುರದಿಂದ ಹೊರಡಲಿದೆ. ಈ ಬಗ್ಗೆ ಸಂಸದರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದ್ದಾರೆ.

    ರೈಲಿನ ವೇಳಾಪಟ್ಟಿ ಹೀಗಿದೆ:

    ಅ. 10 ಗುರುವಾರ ರಾತ್ರಿ 12.30ಕ್ಕೆ ಯಶವಂತಪುರದಿಂದ ಹೊರಡುವ ರೈಲು (ನಂ. 06569) ಪಡೀಲ್‌ ಬೈಪಾಸ್‌ ಮೂಲಕ ಶುಕ್ರವಾರ ಬೆ. 11.30ಕ್ಕೆ ಉಡುಪಿ ತಲುಪಿ ಸಂಜೆ 4ಕ್ಕೆ ಕಾರವಾರ ತಲುಪಲಿದೆ.

    ಅ. 11ರ ಶುಕ್ರವಾರ ರಾತ್ರಿ 11.30ಕ್ಕೆ ಕಾರವಾರದಿಂದ ಹೊರಡುವ ರೈಲು (06570) ಕುಂದಾಪುರ ಮಧ್ಯ ರಾತ್ರಿ 2ಕ್ಕೆ ಉಡುಪಿ 2.40 ತಲುಪಿ ಮರುದಿನ ಮಧ್ಯಾಹ್ನ 1ಕ್ಕೆ ಯಶವಂತಪುರ ಹಾಗೂ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ.

    06585 ರೈಲು:

    ಅ. 12ರ ಶನಿವಾರ ರಾತ್ರಿ 9.20ಕ್ಕೆ ಮೈಸೂರಿನಿಂದ ಹೊರಟು (06585) ಮೆಜೆಸ್ಟಿಕ್‌ನಿಂದ ರಾತ್ರಿ 12.20 ಹಾಗೂ 12.40ಕ್ಕೆ ಯಶವಂತಪುರದಿಂದ ಹೊರಟು ಪಡೀಲ್‌ ಬೈಪಾಸ್‌ ಮೂಲಕ ರವಿವಾರ ಬೆ. 11.30ಕ್ಕೆ ಉಡುಪಿ ತಲುಪಿ 4ಕ್ಕೆ ಕಾರವಾರ ತಲುಪಲಿದೆ.

    ಅ.13ರ ರವಿವಾರ ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು (06586) ಉಡುಪಿಗೆ ಮಧ್ಯರಾತ್ರಿ 2.40 ತಲುಪಿ ಅ. 14ರ ಸೋಮವಾರ ಮಧ್ಯಾಹ್ನ ಯಶವಂತಪುರ 1ಕ್ಕೆ ಮತ್ತು ಸಂಜೆ 4.40ಕ್ಕೆ ಮೈಸೂರು ಸಂಜೆ 4.40 ಕ್ಕೆ ತಲುಪಲಿದೆ.

    LATEST NEWS

    ಸಾಲು ಸಾಲು ರಜೆ; ನವರಾತ್ರಿಗೆ ಬಸ್ ಟಿಕೆಟ್ ದರ ಬಲು ದುಬಾರಿ..!

    Published

    on

    ಮಂಗಳೂರು: ನವರಾತ್ರಿ ಹಬ್ಬ ಸನ್ನಿಹಿತವಾಗುತ್ತಿರುವಂತೆ ಖಾಸಗಿ ಬಸ್‌ಗಳ ಪ್ರಯಾಣ ದರ ದುಪ್ಪಟ್ಟಾಗಿದೆ. ಹಬ್ಬಕ್ಕಾಗಿ ದೂರದೂರಿನಿಂದ ಮಂಗಳೂರಿಗೆ ಆಗಮಿಸುವ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ. ಅದರಲ್ಲೂ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸು ವವರಿಗೆ ಖಾಸಗಿ ಬಸ್‌ನಲ್ಲಿ ಅತೀ ಹೆಚ್ಚಿನ ದರ 3,500 ರೂ. ಇದೆ.

    ಪ್ರತಿ ಬಾರಿ ಹಬ್ಬದ ಸಮಯದಲ್ಲಿ ಟಿಕೆಟ್‌ ದರ ಏರಿಕೆ ಮಾಮೂಲಿಯಾಗಿದೆ. ಈ ಹಿಂದೆ ಗೌರಿ-ಗಣಪತಿ ಹಬ್ಬದ ಸಮಯದಲ್ಲೂ ಬಸ್‌ ಟಿಕೆಟ್‌ ದರ ಏರಿಕೆ ಮಾಡಲಾಗಿತ್ತು. ಇದೀಗ ನವರಾತ್ರಿ ಹಬ್ಬಕ್ಕೂ ದರ ಏರಿಕೆ ಮುಂದುವರಿದಿದೆ.

    ವಾರಾಂತ್ಯ ದಲ್ಲಿ ಬಂದಿರುವು ದರಿಂದ ಬೆಂಗಳೂರಿನಿಂದ ವಿವಿಧೆಡೆಗೆ ಪ್ರಯಾಣ ಬೆಳೆಸುವವರ ಸಂಖ್ಯೆಯೂ ಅಧಿಕವಾಗಿದೆ. ಇದು ಕೂಡ ಟಿಕೆಟ್‌ ದರ ಹೆಚ್ಚಳಕ್ಕೆ ಕಾರಣವಾಗಿದೆ. ಅ.10ರಿಂದಲೇ ಕೆಲ ಖಾಸಗಿ ಬಸ್‌ಗಳ ಟಿಕೆಟ್‌ ದರಲ್ಲಿ ಏರಿಕೆಯಾಗಿದ್ದು ಹಬ್ಬ ಮುಗಿದು ವಾಪಸ್‌ ಬರುವವರೆಗೂ ದರ ಏರಿಕೆ ಬಿಸಿ ಮುಟ್ಟಲಿದೆ.
    ಮಂಗಳೂರು ದಸರಾ ಕಣ್ತುಂಬಿಕೊಳ್ಳಲು ಸಾಮಾನ್ಯವಾಗಿ ದೂರ ದೂರಿನಿಂದ ಸಾರ್ವಜನಿಕರು ಆಗಮಿಸುತ್ತಾರೆ. ಈ ಬಾರಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅ. 3ರಿಂದ 14ರ ವರೆಗೆ ಮಂಗಳೂರು ದಸರಾ ನಡೆಯಲಿದೆ. ಅ. 13ರಂದು ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಜರಗಲಿದೆ. ಈ ಬಾರಿ ಅ. 12 ಎರಡನೇ ಶನಿವಾರ ಮತ್ತು ಅ.13 ರವಿವಾರ ಇದ್ದ ಕಾರಣ ಅ.11ರಂದೇ ಬೆಂಗಳೂರು, ಮೈಸೂರು ಸಹಿತ ವಿವಿಧ ಕಡೆಗಳಿಂದ ಊರಿಗೆ ಜನ ಹೊರಡುತ್ತಾರೆ. ಇದನ್ನೇ ಬಂಡವಾಳವಾಗಿರಿಸಿದ ಖಾಸಗಿ ಬಸ್‌ಗಳು ಟಿಕೆಟ್‌ ದರ ಮೂರು ಪಟ್ಟು ಹೆಚ್ಚಿಸಿದೆ.

    ಎಲ್ಲಿಗೆ ಎಷ್ಟು ದರ ಏರಿಕೆ?

    ಖಾಸಗಿ ಬಸ್‌ಗಳಲ್ಲಿ ಅ. 11ರಂದು ಬೆಂಗಳೂರಿನಿಂದ ಮಂಗಳೂರಿಗೆ ಅತೀ ಹೆಚ್ಚಿನ ದರ 3,500 ರೂ. ಇದೆ. ಅದೇ ರೀತಿ, ಮಂಗಳೂರಿನಿಂದ ಮೈಸೂರಿಗೆ 1,200 ರೂ., ಬಳ್ಳಾರಿಗೆ 950 ರೂ., ಬಾಗಲಕೋಟೆ 1,500 ರೂ., ಕೊಪ್ಪಳ 2,600 ರೂ., ವಿಜಯಪುರ 1,500 ರೂ. ಇದೆ. ಹಬ್ಬಕ್ಕೆ ಕೆಲ ದಿನ ಬಾಕಿ ಇರುವಾಗಿನಿಂದಲೇ ಏರುಗತಿಯಲ್ಲಿ ಸಾಗಿರುವ ಬಸ್‌ ಪ್ರಯಾಣ ದರ ಮುಂದಿನ ದಿನಗಳಲ್ಲಿ ಇನ್ನಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಆದರೆ ಕೆಎಸ್ಸಾರ್ಟಿಸಿಯಲ್ಲಿ ಪ್ರಯಾಣ ದರ ಸದ್ಯಕ್ಕೆ ಏರಿಕೆಯಾಗಿಲ್ಲ. ಸಾಮಾನ್ಯವಾಗಿ ಹಬ್ಬದ ಸಮಯದಲ್ಲಿ ಕಾರ್ಯಾಚರಿಸುವ ಹೆಚ್ಚುವರಿ ಬಸ್‌ಗಳಿಗೆ ಮಾಮೂಲಿ ದರಕ್ಕಿಂತ ಹೆಚ್ಚಿನ ದರ ಇರುತ್ತದೆ.

    ವಿಮಾನ ಟಿಕೆಟ್‌ ದರದಲ್ಲಿ ತುಸು ಹೆಚ್ಚಳ

    ನವರಾತ್ರಿ ಸಮಯದಲ್ಲಿ ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೆ ಹೋಲಿಕೆ ಮಾಡಿದರೆ, ವಿಮಾನ ಟಿಕೆಟ್‌ ದರದಲ್ಲಿ ಭಾರೀ ಏರಿಕೆ ಕಂಡುಬಂದಿಲ್ಲ. ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ 2,999 ರೂ. ಇದ್ದು ಅ. 11ರಂದು 3,239 ರೂ.ಗೆ ಏರಿಕೆ ಕಂಡಿದೆ. ರೈಲು ಪ್ರಯಾಣದಲ್ಲಿ ಟಿಕೆಟ್‌ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ, ಈಗಾಗಲೇ ಟಿಕೆಟ್‌ ಭರ್ತಿಯಾಗಿದ್ದು, ಅನೇಕ ಮಂದಿ ವೈಟಿಂಗ್‌ ಲಿಸ್ಟ್‌ನಲ್ಲಿ ಇದ್ದಾರೆ.

    Continue Reading

    LATEST NEWS

    ಮದುವೆ ನಿರಾಕರಣೆ; ಕಿರುತೆರೆ ನಟಿ ಮನೆಯಲ್ಲೇ ಯುವಕ ಆತ್ಮ*ಹತ್ಯೆಗೆ ಶರಣು

    Published

    on

    ಮಂಗಳೂರು/ಬೆಂಗಳೂರು: ಮದುವೆಯಾಗಲು ಕಿರುತರೆ ನಟಿಯೊಬ್ಬಳು ನಿರಾಕರಿಸಿದ ಕಾರಣಕ್ಕೆ ಯುವಕನೊಬ್ಬ ಮನನೊಂದು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.


    ಈವೆಂಟ್ ಮ್ಯಾನೇಜ್‌ ಮೆಂಟ್‌ನಲ್ಲಿ ಡೆಕೊರೇಟ್ ಕೆಲಸ ಮಾಡುತ್ತಿದ್ದ ಮದನ್‌ (25) ಮೃ*ತಪಟ್ಟ ಯುವಕ ಎಂದು ಗುರುತಿಸಲಾಗಿದೆ.
    ಕಿರುತೆರೆಯಲ್ಲಿ ಸಹನಟಿಯಾಗಿ ವೀಣಾ ಕೆಲಸ ಮಾಡುತ್ತಿದ್ದು, ಸೀರಿಯಲ್ ಸೆಟ್‌ನಲ್ಲೇ ಇಬ್ಬರ ಪರಿಚಯವಾಗಿತ್ತು. ಅವರ ಸ್ನೇಹ ಮುಂದುವರೆಯುತ್ತಿದ್ದಂತೆ ಸಲುಗೆ ಬೆಳೆಸಿಕೊಂಡು ಇಬ್ಬರು ಲೀವಿಂಗ್ ರಿಲೇಶನ್‌ ಬೆಳೆಸಿಕೊಂಡಿದ್ದರು.


    ಕೆಲ ಸಮಯದ ಬಳಿಕ, ಮದುವೆಯಾಗುವಂತೆ ಮದನ್ ಬಳಿ ಒತ್ತಾಯಿಸಿದ್ದಳು. ಬೇರೆ ಹುಡುಗರ ಜೊತೆಯೂ ಅವಳು ಆತ್ಮೀಯಳಾಗಿದ್ದಳು ಎಂಬ ಕಾರಣಕ್ಕೆ ಅವನು ನಿರಾಕರಿಸಿದ್ದ.
    ಆದರೆ, ನಿನ್ನೆ (ಅ.1) ವೀಣಾ ಮದನ್‌ನ್ನು ಮನೆಗೆ ಬರ ಮಾಡಿಸಿ ಇಬ್ಬರೂ ಚೆನ್ನಾಗಿ ಕುಡಿದು ಪಾರ್ಟಿ ಮಾಡಿದ್ದಾರೆ. ಆ ಮಧ್ಯೆ ಮದುವೆ ಪ್ರಸ್ತಾಪವಾಗಿತ್ತು. ಮದನ್‌ ಸ್ವತಃ ಮದುವೆಯಾಗುವಂತೆ ಕೇಳಿದಾಗ, ವೀಣಾ ‘ಆಗುವುದಿಲ್ಲ’ ಎಂದು ಖಡಕ್ಕಾಗಿ ಹೇಳಿದ್ದಾಳೆ.
    ಇದರಿಂದ ಮನನೊಂದ ಮದನ್ ವಾಶ್ ರೂಮಿಗೆ ಹೋಗಿಬರುವೆ ಎಂದು ಹೇಳಿ , ಅಲ್ಲಿಯೇ ನೇ*ಣು ಬಿಗಿ*ದು ಆತ್ಮ*ಹತ್ಯೆಗೆ ಶರಣಾಗಿದ್ದಾನೆ ಎಂದು ವರದಿಯಾಗಿದೆ.
    ಹುಲಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೀಣಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Continue Reading

    LATEST NEWS

    ಅಪ್ಪನ ಚಿತೆಗೆ ಕೊಳ್ಳಿ ಇಡೋಕೆ ಎರಡೂವರೆ ಲಕ್ಷ ಕೇಳಿದ ಮಗ

    Published

    on

    ಭೋಪಾಲ್: ಮಧ್ಯಪ್ರದೇಶದ ಶಾದೋಲ್ ಎಂಬಲ್ಲಿ ಪುತ್ರನೋರ್ವ ತಂದೆಯ ಚಿತೆಗೆ ಬೆಂಕಿ ಇಡಲು ನಿರಾಕರಿಸಿದ್ದಾನೆ. ತಂದೆಯ ಚಿತೆಗೆ ಕೊಳ್ಳಿ ಇಡಬೇಕಾದರೆ 2.5 ಲಕ್ಷ ರೂಪಾಯಿ ನೀಡಬೇಕೆಂದು ಮಗ ಡಿಮ್ಯಾಂಡ್ ಮಾಡಿದ್ದನು. ಊರಿಗೆ ಬಂದು ತಂದೆಯ ಅಂತಿಮ ವಿಧಿವಿಧಾನಗಳನ್ನು ಪೂರ್ಣಗೊಳಿಸು ಎಂದು ತಾಯಿ ಫೋನ್‌ನಲ್ಲಿ ಗೊಗರೆದು ಕೇಳಿಕೊಂಡರೂ ಮಗ ಕೇಳಿಲ್ಲ. ಎಷ್ಟೇ ಮನವಿ ಮಾಡಿಕೊಂಡರೂ ಮಗ ಬರಲು ಒಪ್ಪದಿದ್ದಾಗ ಪತ್ನಿಯೇ ಚಿತೆಗೆ ಬೆಂಕಿ ಇರಿಸಿದ್ದಾರೆ.

    ಮಧ್ಯಪ್ರದೇಶದ ಬ್ಯೌಹಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಛಿಯಾನಾ ಟೋಲಾ 11ನೇ ವಾರ್ಡ್‌ನಲ್ಲಿ ಘಟನೆ ನಡೆದಿದೆ. 10 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 10 ದಿನದ ಹಿಂದೆ ರಾಮ್ ಸ್ವರೂಪ್ ಬರ್ಮನ್ ಎಂಬವರು ಸಾ*ವನ್ನಪ್ಪಿದ್ದರು. ಮಗನಿಗೆ ಕರೆ ಮಾಡಿದ ತಾಯಿ, ನಿಮ್ಮ ತಂದೆ ಮೃ*ತರಾಗಿದ್ದು, ಬಂದು ಅಂತ್ಯಕ್ರಿಯೆ ನೆರವೇರಿಸು ಎಂದು ಹೇಳಿದ್ದರು. ಇದಕ್ಕೆ ಊರಿನಲ್ಲಿರುವ ಮನೆ ಮಾರಾಟ ಮಾಡಿ, ಎರಡೂವರೆ ಲಕ್ಷ ಹಣ ಖಾತೆಗೆ ಜಮೆ ಮಾಡಿದ ನಂತರವೇ ಅಲ್ಲಿಗೆ ಬರುವೆ ಎಂದು ಹೇಳಿದ್ದಾನೆ. ತಾಯಿ, ಕುಟುಂಬಸ್ಥರು ಮತ್ತು ಗ್ರಾಮದ ಹಿರಿಯರು ಎಷ್ಟೇ ಬುದ್ಧಿವಾದ ಹೇಳಿದರೂ ಮಗ ಯಾರ ಮಾತನ್ನೂ ಕೇಳಿಲ್ಲ.

    ಅಂತ್ಯಕ್ರಿಯೆ ನಡೆಸಲು ಒಪ್ಪದಿದ್ದಾಗ ಮೃ*ತ ವ್ಯಕ್ತಿಯ ಮಡದಿ ಪಾರ್ವತಿ ತಾವೇ ಎಲ್ಲಾ ಅಂತಿಮ ವಿಧಿವಿಧಾನಗಳನ್ನು ಪೂರೈಸಲು ನಿರ್ಧರಿಸಿದರು. ಶವ ಸಾಗುವ ಮಾರ್ಗದಲ್ಲಿ ತಾವೇ ಮುಂದೆ ಕೊಳ್ಳಿ ಹಿಡಿದುಕೊಂಡು ಸ್ಮಶಾನದವರೆಗೆ ಬಂದಿದ್ದಾರೆ. ಸ್ಮಶಾನಕ್ಕೆ ಬಂದ್ಮೇಲೆಯೂ ತುಂಬಾ ಸಮಯದವರೆಗೆ ಮಗನ ಆಗಮನಕ್ಕಾಗಿ ಇಡೀ ಊರು ಕಾದಿತ್ತು. ಕೊನೆಗೆ ತಾವೇ ಎಲ್ಲಾ ವಿಧಿವಿಧಾನ ಪೂರೈಸಿ ಗಂಡನ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ. ಇಡೀ ಗ್ರಾಮ ಪಾರ್ವತಿ ಅವರಿಗೆ ಸಾಥ್ ನೀಡಿತ್ತು.

    ಅಂತ್ಯಕ್ರಿಯೆ ಮುಗಿಸಿದ ಬಳಿಕ 10ನೇ ದಿನದ ಕಾರ್ಯವರೆಗೂ ಮಗ ಆಗಮಿಸುವ ನಿರೀಕ್ಷೆಯುಲ್ಲಿ ಮಹಿಳೆ ಇದ್ದರು. 10ನೇ ದಿನದ ಕಾರ್ಯಕ್ರಮ ಮುಗಿಸಿದ ನಂತರ ಹೆಣ್ಣು ಮಕ್ಕಳೊಂದಿಗೆ ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ ಪಾರ್ವತಿ ಅವರು, ಮಗನ ವಿರುದ್ಧ ದೂರು ದಾಖಲಿಸಿ ಆತನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ರಾಮ್ ಸ್ವರೂಪ್ ಬರ್ಮನ್ ಮತ್ತು ಪಾರ್ವತಿ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು, ಓರ್ವ ಮಗನಿದ್ದಾನೆ. ಮದುವೆ ಬಳಿಕ ತಂದೆ-ತಾಯಿ ಜೊತೆ ಹಣಕಾಸಿನ ವಿಚಾರವಾಗಿ ಮಗ ಮನೋಜ್ ಜಗಳ ಮಾಡುತ್ತಿದ್ದನು. ನಂತರ ಪೋಷಕರಿಂದ ದೂರವಾಗಿ ಬ್ಯೌಹಾರಿಯ ಬಾಡಿಗೆ ಮನೆಯಲ್ಲಿ ಪತ್ನಿ ಜೊತೆ ಮನೋಜ್ ವಾಸವಾಗಿದ್ದನು. ಊರಿಗೆ ಬಂದಾಗಲೂ ಹಣದ ವಿಷಯಕ್ಕಾಗಿಯೇ ಪೋಷಕರ ಜೊತೆ ಮನೋಜ್ ಜಗಳ ಮಾಡುತ್ತಿದ್ದನು ಎಂದು ವರದಿಯಾಗಿದೆ.

    Continue Reading

    LATEST NEWS

    Trending