LATEST NEWS
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಸರಾ ವೈಭವ; ಅ. 3ರಿಂದ 12ರ ವರೆಗೆ ವಿವಿಧ ಕಾರ್ಯಕ್ರಮಗಳು
ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಮೂರನೇ ವರ್ಷದ ಉಡುಪಿ ಉಚ್ಚಿಲ ದಸರಾ-2024 ಕಾರ್ಯಕ್ರಮವನ್ನು ಅ. 3ರಿಂದ 12ರ ವರೆಗೆ ಹಮ್ಮಿಕೊಳ್ಳಲಾಗಿದೆ.
ದಸರಾ ಉತ್ಸವವು ಶ್ರೀಮತಿ ಶಾಲಿನಿ ಡಾ| ಜಿ. ಶಂಕರ್ ಸಭಾಂಗಣದಲ್ಲಿ ಜರಗಲಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ| ಜಿ. ಶಂಕರ್ ತಿಳಿಸಿದ್ದಾರೆ.
ಈಗಾಗಲೇ ದಸರಾ ಮಹೋತ್ಸವಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದು, ಆಕರ್ಷಕ ಮಂಟಪದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳನ್ನು ಪ್ರತಿಷ್ಠಾಪಿಸಿ 10 ದಿನಗಳ ಕಾಲ ಶಾಸ್ರೋಕ್ತವಾಗಿ ಪೂಜಿಸಲಾಗುವುದು. ಅ. 12ರಂದು ವೈಭವದ ಶೋಭಾಯಾತ್ರೆಯೊಂದಿಗೆ ಜಲಸ್ತಂಭನ ನಡೆಯಲಿದೆ ಎಂದರು. ಇನ್ನು ಅ.2ರಂದು ಸಂಜೆ 6.30ಕ್ಕೆ ಎಂಆರ್ಜಿ ಗ್ರೂಫ್ ಅಧ್ಯಕ್ಷ ಡಾ| ಕೆ. ಪ್ರಕಾಶ್ ಶೆಟ್ಟಿ ಬಂಜಾರ ಅವರ ಪ್ರಾಯೋಜಕತ್ವದಲ್ಲಿ ಪಡುಬಿದ್ರಿಯಿಂದ ಕಾಪು ಸಮುದ್ರ ತೀರದ ದೀಪಸ್ತಂಭದವರೆಗೆ ನಡೆಸಲಾಗುವ ವಿದುದ್ದೀಪಾಲಂಕಾರವು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ.
ಅ.3ರಂದು ಬೆಳಗ್ಗೆ 9ಕ್ಕೆ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳನ್ನು ಕ್ಷೇತ್ರದ ತಂತ್ರಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಮತ್ತು ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ. 10 ಗಂಟೆಗೆ ಜಿಲ್ಲಾಧಿಕಾರಿ ಸಹಿತ ಗಣ್ಯರು ಮತ್ತು ದಾನಿಗಳ ಉಪಸ್ಥಿತಿಯಲ್ಲಿ ಉಚ್ಚಿಲ ದಸರಾ ಉದ್ಘಾಟಿಸಲಾಗುವುದು. ಬಳಿಕ ಫಲಪುಷ್ಪ ಪದರ್ಶನ, ಗುಡಿ ಕೈಗಾರಿಕೆ ಪ್ರಾತ್ಯಕ್ಷಿಕೆ, ಜೀವಂತ ಮೀನುಗಳ ಪ್ರದರ್ಶನ, ಕೇಂದ್ರ ಮತ್ತು ರಾಜ್ಯ ಸರಕಾರಗಳಲ್ಲಿ ಲಭ್ಯವಿರುವ ಮೀನುಗಾರಿಕೆ ಯೋಜನೆಗಳ ಮಾಹಿತಿ ಮತ್ತು ಮೀನುಗಾರಿಕೆ ಪರಿಕರಗಳ ಪ್ರದರ್ಶನ ಮುಂತಾದವುಗಳ ಪ್ರದರ್ಶನ ಉದ್ಘಾಟನೆ, ದ.ಕ. ಮೊಗವೀರ ಮಹಾಜನ ಸಂಘದ 100ನೇ ವರ್ಷದ ನೆನಪಿಗೆ ನವೀಕರಿಸಲ್ಪಟ್ಟ ನೂತನ ಆಡಳಿತ ಕಛೇರಿಯ ಶುಭಾರಂಭಗೊಳ್ಳಲಿದೆ. ಸಂಜೆ 5ಕ್ಕೆ 10 ದಿನಗಳ ಕಾಲ ನಡೆಯುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಭಜನೆ, ಧಾರ್ಮಿಕ ಸಭಾ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.
ಶ್ರೀ ಶರನ್ನವರಾತ್ರಿ ಮಹೋತ್ಸವ ಮತ್ತು ದಸರಾ ಉತ್ಸವ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಪ್ರತೀ ದಿನ ಬೆಳ್ಳಿಗೆ ಚಂಡಿಕಾಹೋಮ, ಭಜನೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಲಘು ಉಪಾಹಾರ, ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ಧಾರ್ಮಿಕ ಪ್ರಚವನ, ಕಲೋಕ್ತ ಪೂಜೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಉಚ್ಚಿಲ ದಸರಾ ಮಹೋತ್ಸವದ ಮಹತ್ವದ ಬಗ್ಗೆ ವಿಶೇಷ ಲೇಸರ್ ಶೋ ನಡೆಯಲಿದೆ.
ಅ. 12ರಂದು ವಿಜಯ ದಶಮಿಯಂದು ಸಾಮೂಹಿಕ ಮಹಾಚಂಡಿಕಾಯಾಗ ಹಾಗೂ ಪೂರ್ಣಾಹುತಿ ನಡೆಯಲಿದೆ. ಅ. 12ರಂದು ಮಧ್ಯಾಹ್ನ 2.30ಕ್ಕೆ ವಿಸರ್ಜನಾ ಪೂಜೆ, ಮಧ್ಯಾಹ್ನ 3ಕ್ಕೆ ಶೋಭಾಯಾತ್ರೆಗೆ ಚಾಲನೆ, ಸಂಜೆ 5 ಗಂಟೆಗೆ ಶೋಭಾಯಾತ್ರೆ ಹೊರಟು ಕಾಪು ದೀಪಸ್ತಂಭದ ಬಳಿಯಲ್ಲಿ ವಿಸರ್ಜನೆಗೊಳ್ಳಲಿದೆ.
LATEST NEWS
ಪ್ರಜಾಪ್ರಭುತ್ವದ ದೇಗುಲದಲ್ಲೇ ಅ*ತ್ಯಾ*ಚಾರ ಮಾಡಿದ್ರಾ ಮುನಿರತ್ನ..!?
ಬೆಂಗಳೂರು : ಜಾತಿ ನಿಂದನೆ ಹಾಗೂ ಕೊ*ಲೆ ಬೆದರಿಕೆ ಪ್ರಕರಣದಲ್ಲಿ ಸಿಲುಕಿಕೊಂಡು ಜೈಲು ಪಾಲಾಗಿದ್ದ ಶಾಸಕ ಮುನಿರತ್ನ ಸದ್ಯ ಅ*ತ್ಯಾಚಾರ ಪ್ರಕರಣದಲ್ಲಿ ಆ*ರೋಪಿಯಾಗಿ ಎಸ್ಐಟಿ ವಶದಲ್ಲಿದ್ದಾರೆ. ಇದೀಗ ಅ*ತ್ಯಾಚಾರ ಸಂತ್ರಸ್ತೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತನ್ನ ಮೇಲೆ ವಿಧಾನ ಸೌಧ ಹಾಗೂ ವಿಕಾಸ ಸೌಧದಲ್ಲೇ ಮನಿರತ್ನ ಅ*ತ್ಯಾಚಾರ ಮಾಡಿದ್ದಾಗಿ ಹೇಳಿದ್ದಾರೆ. ಸಂತ್ರಸ್ತೆಯ ಈ ಹೇಳಿಕೆಯಿಂದ ಶಾಸಕ ಮುನಿರತ್ನ ವಿರುದ್ಧ ಜನಾಕ್ರೋಶ ತೀವ್ರಗೊಂಡಿದೆ.
ಪ್ರಜಾಪ್ರಭುತ್ವದ ದೇಗುಲ ಎಂದೇ ಕರೆಯುವ ವಿಧಾನ ಸೌಧದ ಮೂರನೇ ಮಹಡಿ ಹಾಗೂ ವಿಕಾಸ ಸೌಧದ ಮುನಿರತ್ನ ಕಚೇರಿಯಲ್ಲಿ ತನ್ನ ಮೇಲೆ ಅ*ತ್ಯಾಚಾರ ನಡೆಸಲಾಗಿದೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಜನರು ಶಾಸಕ ಮುನಿರತ್ನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲ ಕಾರ್ಯಕರ್ತರು ವಿಕಾಸ ಸೌಧದ ಬಳಿ ಅರ್ಚಕರನ್ನು ಕರೆತಂದು ಶುದ್ಧೀಕರಣ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ವೇಳೆ ಅನುಮತಿ ಪಡೆಯದೆ ವಿಕಾಸ ಸೌಧಕ್ಕೆ ತೆರಳಲು ಯತ್ನಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮುನಿರತ್ನ ವಿಚಾರವಾಗಿ ಹಲವು ಸ್ಫೋ*ಟಕ ವಿಚಾರಗಳು ಬಹಿರಂಗವಾಗುತ್ತಿದ್ದು, ತನ್ನ ನೀಚ ಕೃ*ತ್ಯಕ್ಕೆ ಅದೆಂತಾ ಕೀಳು ಮಟ್ಟಕ್ಕೆ ಇಳಿದಿದ್ದ ಅನ್ನೋದು ಗೊತ್ತಾಗಿದೆ. ಇದರ ನಡುವೆ ವಿಕಾಸ ಸೌಧ ಹಾಗೂ ವಿಧಾನ ಸೌಧದಲ್ಲೇ ಇಂತಹ ಹೇಯ ಕೃ*ತ್ಯ ನಡೆಸಿದ್ದು ಘೋರ ಅಪ*ರಾಧ ಅಲ್ಲದೆ ಬೇರೆನೂ ಅಲ್ಲ. ಇದೀಗ ಪೊಲೀಸರು ಸಂತ್ರಸ್ತೆಯ ಹೇಳಿಕೆಯ ವಿಚಾರವಾಗಿ ಮುನಿರತ್ನರನ್ನ ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.
DAKSHINA KANNADA
ಐಶ್ವರ್ಯಾ ರೈಗೆ ಆರೋಗ್ಯ ಸಮಸ್ಯೆ..! ಪೋಸ್ಟ್ ವೈರಲ್..!
ಮಂಗಳೂರು : ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ ವಿಚಾರವಾಗಿ ಇತ್ತೀಚೆಗೆ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಸಾಕಷ್ಟು ಸುದ್ದಿಯಾಗಿದ್ದರು. ಐಶ್ವರ್ಯಾ ರೈ ಹಾಗೂ ಅಭಿಶೇಖ್ ಬಚ್ಚನ್ ಡಿವೋರ್ಸ್ ವಿಚಾರವಾಗಿ ದಿನಕ್ಕೊಂದು ಸುದ್ದಿ ಹರಡುತ್ತಿತ್ತು. ಈ ನಡುವೆ ತನ್ನ ಸೌಂದರ್ಯದ ಕಡೆ ಗಮನ ಕೊಡುತ್ತಿದ್ದ ಐಶ್ವರ್ಯಾ ರೈ ಇದೀಗ ತೂಕ ಏರಿಸಿಕೊಂಡ ವಿಚಾರವಾಗಿ ಸುದ್ದಿಯಾಗಿದ್ದಾರೆ.
ಐಷಾರಾಮಿ ಬ್ರಾಂಡ್ ಲೋರಿಯಲ್ನ ಜಾಗತಿಕ ರಾಯಭಾರಿಯಾಗಿರುವ ಐಶ್ವರ್ಯಾ ಇತ್ತೀಚೆಗೆ 2024 ರ ಫ್ಯಾಶನ್ ವೀಕ್ನಲ್ಲೂ ಕಾಣಿಸಿಕೊಂಡಿದ್ದರು. ಈ ವೇಳೆ ಅವರು ಧರಿಸಿದ್ದ ಕೆಂಪು ಬಣ್ಣದ ಉಡುಗೆ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಸೋಶಿಯಲ್ ಮೀಡಿಯಾದಲ್ಲಿ ಬಾಡಿ ಶೆಮಿಂಗ್ ರೀತಿಯಲ್ಲಿ ನಟಿ ಟ್ರೋಲ್ ಆಗುತ್ತಿದ್ದಾರೆ. ಪೋಸ್ಟ್ ಒಂದರಲ್ಲಿ “ನಾನು ಐಶ್ವರ್ಯ ಅವರನ್ನು ಸಾಕಷ್ಟು ವರ್ಷಗಳಿಂದ ನೋಡುತ್ತಿದ್ದೇನೆ. ಐಶ್ವರ್ಯಾ ಹಲವು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಇದರಿಂದಾಗಿ ಡಯೆಟ್ಗೆ ಮಾಡುತ್ತಿಲ್ಲ, ಜೊತೆಗೆ ತೂಕ ಇಳಿಸಿಕೊಳ್ಳುವ ಯಾವುದೇ ಔಷಧಿಗಳನ್ನು ಆಕೆ ತೆಗೆದುಕೊಳ್ಳುತ್ತಿಲ್ಲ. ಆದರೆ ನಾನು ಅವರ ಆರೋಗ್ಯ ಸಮಸ್ಯೆಯ ಬಗ್ಗೆ ಬಹಿರಂಗಪಡಿಸುವುದಿಲ್ಲ” ಎಂದು ಬರೆಯಲಾಗಿದೆ. ಆದ್ರೆ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಡಿಲೀಟ್ ಕೂಡಾ ಮಾಡಲಾಗಿದೆ.
ಐಶ್ವರ್ಯಾ ರೈ ಕುರಿತಾದ ಇಂತಹ ವಿಚಾರಗಳು ಸುದ್ದಿಯಾಗುತ್ತಿರುವುದು ಇದೇನು ಹೊಸದಲ್ಲವಾದ್ರೂ, ಐಶ್ವರ್ಯ ತೂಕ ಹೆಚ್ಚಿಸಿಕೊಂಡಿದ್ದಾರೆ ಅನ್ನೋದು ಕೂಡಾ ಸುಳ್ಳಲ್ಲ. ಇತ್ತೀಚೆಗೆ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಾಗ ಅವರು ದಪ್ಪವಾಗಿ ಕಾಣಿಸಿಕೊಂಡಿದ್ದು ಈ ಎಲ್ಲಾ ಚರ್ಚೆಗಳಿಗೆ ಕಾರಣವಾಗಿದೆ.
DAKSHINA KANNADA
ಮೊಬೈಲ್ ವಿಚಾರಕ್ಕೆ ಗಲಾಟೆ ಕೊ*ಲೆಯಲ್ಲಿ ಅಂತ್ಯ : ಆ*ರೋಪಿ ಅರೆಸ್ಟ್..!
ಮಂಗಳೂರು : ತೋಟಾಬೆಂಗ್ರೆಯ ಬೊಬ್ಬರ್ಯ ದೈವಸ್ಥಾನದ ಸಮೀಪ ಸೆಪ್ಟಂಬರ್ 21 ರಂದು ನಡೆದಿದ್ದ ಕೊ*ಲೆ ಪ್ರಕರಣವನ್ನು ಭೇದಿಸುವಲ್ಲಿ ಪಣಂಬೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೊಬ್ಬರ್ಯ ದೈವಸ್ಥಾನದ ಹಿಂಬದಿಯ ಸಮುದ್ರ ಕಿನಾರೆಯ ಬಳಿ ಭಾಗಲಕೋಟೆ ಮೂಲಕ 39 ವರ್ಷದ ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ಎಂಬಾತನ ಕೊ*ಲೆ ನಡೆದಿತ್ತು. ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ತೋಟಾ ಬೆಂಗ್ರೆಯ ನಿವಾಸಿಯಾಗಿರುವ ಧರ್ಮರಾಜ್ ಸುವರ್ಣ ಎಂಬಾತನನ್ನು ಬಂಧಿಸಿದ್ದಾರೆ.
ಕೊ*ಲೆ ನಡೆಸಿ ಪರಾರಿಯಾಗಿ ಕೇರಳದ ಕೊಝಿಕೋಡ್ ಜಿಲ್ಲೆಯ ಚೊಂಪಾಳ ಎಂಬಲ್ಲಿ ಆ*ರೋಪಿ ಅಡಗಿಕೊಂಡಿದ್ದ. ಆ*ರೋಪಿಯ ಜಾಡು ಹಿಡಿದು ಹೋದ ಪೊಲೀಸರು ಸೆಪ್ಟಂಬರ್ 26 ನಸುಕಿನ ಜಾವ 3 ಘಂಟೆಗೆ ಆ*ರೋಪಿಯನ್ನು ಬಂಧಿಸಿದ್ದಾರೆ. ಆ*ರೋಪಿ ಹಾಗೂ ಕೊ*ಲೆಯಾದ ಬಸವರಾಜ್ ವಡ್ಡರ್ ಕೆಲ ಸಮಯದಿಂದ ಸ್ನೇಹಿತರಾಗಿದ್ದರು. ಇತ್ತೀಚೆಗೆ ಧರ್ಮರಾಜ್ ಹೊಸ ಮೊಬೈಲ್ ಒಂದನ್ನು ಖರೀದಿ ಮಾಡಿದ್ದು, ಅದನ್ನು ಬಸವರಾಜ್ ವಡ್ಡರ್ ಉಪಯೋಗಕ್ಕೆ ಪಡೆದುಕೊಂಡಿದ್ದ. ಆದ್ರೆ ಮೊಬೈಲ್ ಹಿಂತಿರುಗಿಸದೆ ಸತಾಯಿಸಿದ್ದು, ಮೊಬೈಲ್ ಹಾಳು ಮಾಡಿದ್ದ ಎಂಬುವುದು ಧರ್ಮರಾಜ್ ಕೋಪಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಧರ್ಮರಾಜ್ ಕೋಪದಿಂದ ಮರದ ಸಲಾಕೆಯಿಂದ ಬಸವರಾಜ್ ವಡ್ಡರ್ ಮೇಲೆ ಹ*ಲ್ಲೆ ನಡೆಸಿದ್ದ. ಈ ವೇಳೆ ಗಂಭೀರ ಗಾಯಗೊಂಡಿದ್ದ ಬಸವರಾಜ್ ವಡ್ಡರ್ ರ*ಕ್ತಸ್ರಾವದಿಂದ ಮೃ*ತ ಪಟ್ಟಿದ್ದಾಗಿ ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಇದೀಗ ಧರ್ಮರಾಜ್ನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆಯನ್ನು ಮುಂದುವರೆಸಿದ್ದಾರೆ.