ಲಾಕ್ ಡೌನ್ ನಿಂದ ಕಷ್ಟಪಡುತ್ತಿರುವ ಖಾಸಗಿ ಬಸ್ ನೌಕರರಿಗೆ ನ್ಯಾಯ ಒದಗಿಸಲು ಕೋರಿದ ಡಿ.ವೈ.ಎಫ್.ಐ
ಲಾಕ್ ಡೌನ್ ನಿಂದ ಕಷ್ಟಪಡುತ್ತಿರುವ ಖಾಸಗಿ ಬಸ್ ನೌಕರರಿಗೆ ನ್ಯಾಯ ಒದಗಿಸಲು ಕೋರಿದ ಡಿ.ವೈ.ಎಫ್.ಐ
ಮಂಗಳೂರು: ಲಾಕ್ ಡೌನ್ ನಿಂದ ಬದುಕು ಕಳೆದುಕೊಂಡಿರುವ ಖಾಸಗಿ ಬಸ್ ನೌಕರರಿಗೆ, ನ್ಯಾಯ ಒದಗಿಸುವಂತೆ ಒತ್ತಾಯಿಸಿ,
ಮಂಗಳೂರು ಶಾಸಕ ಯು ಟಿ ಖಾದರ್ ಅವರಿಗೆ ಪೂರ್ವ ವಲಯ ಬಸ್ಸು ನೌಕರರ ಪರವಾಗಿ ಡಿವೈಎಫ್ಐ ಆಶ್ರಯದಲ್ಲಿ ಮನವಿ ನೀಡಲಾಯಿತು.
ಬೇಡಿಕೆಗಳನ್ನು ಆಲಿಸಿದ ಶಾಸಕರು, ನೌಕರರ ಬೇಡಿಕೆಗಳ ಕುರಿತು ಸಹಾನುಭೂತಿ ವ್ಯಕ್ತಪಡಿಸಿದರು.
ಬಸ್ಸು ಮಾಲಕರ ಸಂಘ, ಸರಕಾರ, ನೌಕರರಿಗೆ ಲಾಕ್ ಡೌನ್ ಅವಧಿಯಲ್ಲಿ ಪರಿಹಾರ ನೀಡದಿರುವುದು, ಈಗ ರಸ್ತೆಗಿಳಿದಿರುವ ಬಸ್ಸುಗಳ ನೌಕರರಿಗೆ ಅರ್ಧ ವೇತನ ಮಾತ್ರ ನೀಡುತ್ತಿರುವುದು.
ರಸ್ತೆಗಿಳಿಯದ ಬಸ್ಸುಗಳ ನೌಕರರರಿಗೆ ಅಲ್ಪ ವೇತನವನ್ನೂ ನೀಡದಿರುವ ಕುರಿತು ಅಸಮ್ಮತಿ ವ್ಯಕ್ತಪಡಿಸಿದರು.
ಅಪಾಯಕಾರಿ ಸಂದರ್ಭದಲ್ಲಿ ಕರ್ತವ್ಯಕ್ಕೆ ತೆರಳುವ ಬಸ್ಸು ನೌಕರರಿಗೆ ರಕ್ಷಣೆ ಒದಗಿಸುವ ಕುರಿತು ಸಹಮತ ವ್ಯಕ್ತಪಡಿಸಿದರು.
ಈ ಕುರಿತು ಜಿಲ್ಲಾಡಳಿತ ನಿಯಮಗಳನ್ನು ರೂಪಿಸಬೇಕು, ಇದನ್ನು ಸರಕಾರದ ಮಟ್ಟದಲ್ಲಿ ಗಮನ ಸೆಳೆಯುವುದಾಗಿ ಹೇಳಿದರು.
LATEST NEWS
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸಿ ಸರ್ಕಾರದಿಂದ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದಾಳೆ. ಕೇರಳದ ಜಿಲುಮೋಲ್ ಮರಿಯೆಟ್ ಥಾಮಸ್. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿದ್ದ ಮರಿಯೆಟ್ ಥಾಮಸ್ ಚಿಕ್ಕ ವಯಸ್ಸಿನಲ್ಲೇ ಕಾಲಿನ ಮೂಲಕವೇ ದೈನಂದಿನ ಚಟುವಟಿಕೆಗಳನ್ನು ಅಭ್ಯಾಸ ಮಾಡಿಕೊಂಡಿದ್ದಳು. ಇದೀಗ ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ ದೇಶದ ಗಮನ ಸೆಳೆದಿದ್ದಾಳೆ.
ಇದಲ್ಲದೇ ಎರಡು ಕೈಗಳಿಲ್ಲದೇ ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ.
ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸುವುದರ ಜೊತೆಗೆ ಚಿತ್ರಕಲೆಯಲ್ಲೂ ಸೈ ಎನಿಸಿಕೊಂಡಿರುವ ಈಕೆ ಸಾಕಷ್ಟು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ. ಇದೀಗ ದೇಶದಾದ್ಯಂತ ಖ್ಯಾತಿಯನ್ನು ಪಡೆದಿರುವ ಈಕೆಯನ್ನು ಅನೇಕ ಸೆಲೆಬ್ರಿಟಿಗಳು ಕೂಡ ಭೇಟಿಯಾಗುತ್ತಿದ್ದಾರೆ.
DAKSHINA KANNADA
ವೋಟ್ ಮಾಡಿ, ಊಟ ಮಾಡಿ: ಹೋಟೆಲ್ಗಳಲ್ಲಿ ಸಿಗಲಿದೆ ಫ್ರೀ ದೋಸೆ, ಸಿಹಿ ತಿಂಡಿ!
ಬೆಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಕೆಲವು ಹೋಟೆಲ್ಗಳು ವಿಶಿಷ್ಟ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿವೆ. ಕಳೆದ ವರ್ಷ ವಿಧಾನ ಚುನಾವಣೆಯಲ್ಲಿ ಮಾಡಿದಂತೆಯೇ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತ ಆಹಾರ, ರಿಯಾಯಿತಿ ದರದಲ್ಲಿ ತಿಂಡಿ ನೀಡುವ ಬಗ್ಗೆ ಘೋಷಣೆ ಮಾಡಿವೆ.
ವೋಟ್ ಮಾಡಿ, ಊಟ ಮಾಡಿ:
ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್ ವೋಟ್ ಮಾಡಿ, ಊಟ ಮಾಡಿ’ ಅಭಿಯಾನದಡಿ ಮತದಾನದ ದಿನದಂದು ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡುವುದಾಗಿ ಘೋಷಿಸಿದೆ. 2018 ರ ವಿಧಾನಸಭಾ ಚುನಾವಣೆ ವೇಳೆಯೂ ಹೋಟೆಲ್ ಇಂತಹ ಕೊಡುಗೆ ನೀಡಿತ್ತು.
ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಮ್ಮ ಹಕ್ಕು. ಈ ಕುರಿತು ಜಾಗೃತಿ ಮೂಡಿಸುವ ನಮ್ಮ ನಿರಂತರ ಪ್ರಯತ್ನದ ಭಾಗವಾಗಿ ಕೆಲವು ಹೋಟೆಲ್ಗಳು ಕೆಲವು ತಿನಿಸುಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ಮತದಾನದ ದಿನದಂದು ನೀಡುತ್ತವೆ. ಸಿಹಿತಿಂಡಿಗಳು ಮತ್ತು ಕೇಕ್ಗಳಂತಹ ಕೆಲವು ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿವೆ.
SawaariZimmedariKi ಅಭಿಯಾನದಡಿ ಶುಕ್ರವಾರ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರಿಗೆ ಉಚಿತ ಆಟೋರಿಕ್ಷಾ ಮತ್ತು ಕ್ಯಾಬ್ ಸೇವೆ ದೊರೆಯಲಿದೆ.
ಈ ವಿಶೇಷ ಸೇವೆಯನ್ನು ಪಡೆಯಲು ಮತದಾರರು ‘VOTENOW’ ಕೋಡ್ ಅನ್ನು ಬಳಸಬಹುದು ಎಂದು Rapido ತಿಳಿಸಿದೆ.
ಬಿಡದಿ ಬಳಿಯ ಜನಪ್ರಿಯ ಅಮ್ಯೂಸ್ಮೆಂಟ್ ಪಾರ್ಕ್ ವಂಡರ್ಲಾ, ಮತದಾನದ ಗುರುತು ಪ್ರದರ್ಶಿಸುವವರಿಗೆ ಏಪ್ರಿಲ್ 26, 27 ಮತ್ತು 28 ರಂದು ಟಿಕೆಟ್ ಮೇಲೆ ಶೇಕಡಾ 15 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.
LATEST NEWS
ಇಂದಿನಿಂದ 5 ದಿನ ರಾಜ್ಯದಲ್ಲಿ ಬಿಸಿಗಾಳಿ; ಕರ್ನಾಟಕಕ್ಕೆ ಆರೆಂಜ್ ಅಲರ್ಟ್
ಬೆಂಗಳೂರು: ಅಬ್ಬಾ.. ಸಾಕಪ್ಪಾ ಸಾಕು ಅನ್ನೋ ಬೇಸಿಗೆಯ ಬಿಸಿ ಮತ್ತೆ ಏರಿಕೆಯಾಗುತ್ತಿದೆ. ಗರಿಷ್ಠ ತಾಪಮಾನ ಸಹಿಸಿಕೊಳ್ಳಲಾಗದೇ ಪರದಾಡುತ್ತಿರುವ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ಇಂದಿನಿಂದ ಅಂದ್ರೆ ಏಪ್ರಿಲ್ 25ರಿಂದ ಮುಂದಿನ 5 ದಿನಗಳವರೆಗೆ ಬಿಸಿಗಾಳಿ ಮತ್ತು ತಾಪಮಾನ ಹೆಚ್ಚಾಗುವ ಸಾಧ್ಯತೆಯಿದೆ.
ನಾಳೆ ದೇಶದ 13 ರಾಜ್ಯಗಳ 89 ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ನಾಳೆ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಬಿಸಿಗಾಳಿಯ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಪಶ್ಚಿಮ ಬಂಗಾಳ ರಾಜ್ಯಕ್ಕೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕ ರಾಜ್ಯಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.
ನಾಳೆ ಕೇರಳ, ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಿನ ಉಷ್ಣಾಂಶ ಇರುವ ಮುನ್ಸೂಚನೆ ನೀಡಲಾಗಿದೆ. ಕೇರಳ ರಾಜ್ಯದಲ್ಲಿ 36-40 ಡಿಗ್ರಿ ಉಷ್ಣಾಂಶ ದಾಖಲಾಗುವ ಮುನ್ಸೂಚನೆ ಇದೆ. ಚುನಾವಣಾ ಆಯೋಗವು ಬಿಸಿ ಗಾಳಿ ಸಮಸ್ಯೆ ಎದುರಿಸಲು ಟಾಸ್ಕ್ ಪೋರ್ಸ್ ರಚಿಸಿದೆ. ಪೋಲಿಂಗ್ ಬೂತ್ಗಳಲ್ಲಿ ಕುಡಿಯುವ ನೀರು, ಫ್ಯಾನ್ಗಳ ವ್ಯವಸ್ಥೆಯನ್ನು ಚುನಾವಣಾ ಆಯೋಗ ಮಾಡಿದೆ.
ಏಪ್ರಿಲ್ 25ರಿಂದ ಏಪ್ರಿಲ್ 29ರವರೆಗೆ ಬಿಸಿಗಾಳಿ, ತೀವ್ರ ಬಿಸಿಗಾಳಿ ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಾಗಿರುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಶುಷ್ಕ ವಾತಾವರಣವು ಹೆಚ್ಚಾಗಿರುವ ಸಾಧ್ಯತೆಯಿದೆ ಎಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
- DAKSHINA KANNADA7 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- FILM3 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!
- FILM3 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು