Connect with us

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯ ಲಾಕ್ ಡೌನ್ ತೆರವುಗೊಳಿಸಲು ಡಿವೈಎಫ್ಐ ಆಗ್ರಹ

Published

on

ಮಂಗಳೂರು : ಕೊರೋನ ಪಾಸಿಟಿವಿಟಿ ದರ 5 % ಕ್ಕೆ ಇಳಿದಿರುವುದರಿಂದ ಬೆಂಗಳೂರು, ಉಡುಪಿ ಸಹಿತ ರಾಜ್ಯದ 22 ಜಿಲ್ಲೆಗಳಲ್ಲಿ ಮಾಡಿರುವಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಲಾಕ್ ಡೌನ್ ತೆರವುಗೊಳಿಸಿ ಪೂರ್ಣಪ್ರಮಾಣದ ವಾಣಿಜ್ಯ ಚಟುವಟಿಕೆ, ದುಡಿಮೆಗೆ ಅವಕಾಶ ಮಾಡಿಕೊಡುವಂತೆ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಪಾಸಿಟಿವಿಟಿ ದರ 5 ಶೇಕಡಾಕ್ಕೆ ಇಳಿದಿರುವ ಮಾನದಂಡದಲ್ಲಿ ಬೆಂಗಳೂರು ನಗರ ಸಹಿತ ಹದಿನಾರು ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವು ಗೊಳಿಸಲಾಗಿತ್ತು. ಇಂದು ಉಡುಪಿ, ಶಿವಮೊಗ್ಗ ಸಹಿತ ಮತ್ತೆ ಆರು ಜಿಲ್ಲೆಗಳ ಜನಪ್ರತಿನಿನಿಧಿಗಳ ಒತ್ತಾಯ, ಪಾಸಿಟಿವಿಟಿ ದರದ ಆಧಾರದಲ್ಲಿ ಲಾಕ್ ಡೌನ್ ತೆರವುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಪಾಸಿಟಿವಿಟಿ ದರ ಐದು ಶೇಕಡಾ ಸಮೀಪಕ್ಕೆ ಇಳಿದಿದೆ.

ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಹೊರತು ಪಡಿಸಿ ಉಳಿದ ವಾಣಿಜ್ಯ ವ್ಯವಹಾರ, ಸಾರ್ವಜನಿಕ ಸಾರಿಗೆಗೆ ನಿರ್ಬಂಧ ಮುಂದುವರಿಸಿರುವುದು, ಅಗತ್ಯ ವಸ್ತುಗಳ ಖರೀದಿ ಮಧ್ಯಾಹ್ನ ಒಂದು ಗಂಟೆಗೆ ಮಿತಿ ಗೊಳಿಸಿರುವುದು ರಾಜ್ಯ ಸರಕಾರದ ತಾರತಮ್ಯ, ಜಿಲ್ಲೆಯ ಜನಪ್ರತಿನಿಧಿಗಳ ವೈಫಲ್ಯ ಹಾಗೂ ಜನರ ಬದುಕಿನ ಸಂಕಷ್ಟಗಳ ಕುರಿತಾದ ಅವರ ಅನಾದಾರವನ್ನು ಎತ್ತಿ ತೋರಿಸುತ್ತದೆ.

ರಾಜ್ಯದ ಉಳಿದ ಜಿಲ್ಲೆಗಳಿಗೆ ಅನ್ವಯಿಸಿರುವ ಮಾನದಂಡ ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ಅನ್ವಯಗೊಳ್ಳದಿರುವುದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜನಪ್ರತಿನಿಧಿನಿಧಿಗಳ ನಡವಳಿಕೆಯನ್ನು ಪ್ರಶ್ನಾರ್ಹಗೊಳಿಸಿದೆ.

ಅರೆಬರೆ ಲಾಕ್ ಡೌನ್ ವಿನಾಯತಿಗಳು ನಿರ್ಮಾಣ ಕಾಮಗಾರಿ ಸಹಿತ ಎಲ್ಲಾ ವಲಯದ ಅಸಂಘಟಿತ ಕಾರ್ಮಿಕರ ದುಡಿಮೆಯ ಅವಕಾಶಗಳಿಗೆ ಯಾವ ರೀತಿಯಲ್ಲಿಯೂ ಅನುಕೂಲಕರವಾಗಿಲ್ಲ. ಜವಳಿ, ಚಪ್ಪಲಿ, ಗಾರ್ಮೆಂಟ್ಸ್, ಶೃಂಗಾರ, ಉಡುಗೊರೆ ಸಾಧನಗಳ ಸಹಿತ ಸಣ್ಣ ಪುಟ್ಟ ವ್ಯಾಪಾರಿ ಮಳಿಗೆ, ಅಂಗಡಿಗಳನ್ನು ನಡೆಸುವ ವ್ಯಾಪಾರಿಗಳು, ಅದರಲ್ಲಿನ ನೌಕರರು ಲಾಕ್ ಡೌನ್ ಮುಂದುವರಿಕೆಯಿಂದ ದಿವಾಳಿ ಸ್ಥಿತಿಗೆ ತಲುಪಿದ್ದಾರೆ.

ಖಾಸಗಿ ಬಸ್ಸು ಸೇರಿದಂತೆ ಪ್ರಯಾಣ ಸಾರಿಗೆಯ ಮಾಲಕರು, ಕಾರ್ಮಿಕರು ಜಿಲ್ಲೆಯಲ್ಲಿ ಹತ್ತಾರು ಸಾವಿರ ಸಂಖ್ಯೆಯಲ್ಲಿದ್ದು ಅವರ ಬದುಕು ಬೀದಿಗೆ ಬಂದಿದೆ. ಒಟ್ಟು ವಾಣಿಜ್ಯ, ಸಾರಿಗೆ ರಂಗ ತಿಂಗಳುಗಟ್ಟಲೆ ಮುಚ್ಚಲ್ಪಟ್ಟಿರುವುದರಿಂದ ಜಿಲ್ಲೆಯ ಆರ್ಥಿಕತೆ ಸ್ಥಗಿತಗೊಂಡಿದ್ದು ಎಲ್ಲಾ ವಿಭಾಗದ ಜನ ತತ್ತರಿಸಿಹೋಗಿದ್ದಾರೆ.

ಹೀಗಿರುತ್ತಾ, ಪಾಸಿಟಿವಿಟಿ ದರ ಐದಕ್ಕೆ ಇಳಿದಿದ್ದರೂ ಬೆಂಗಳೂರು, ಉಡುಪಿ, ಶಿವಮೊಗ್ಗ ಸಹಿತ ಉಳಿದ ಜಿಲ್ಲೆಗಳಿಗೆ ನೀಡಿದ ಲಾಕ್ ಡೌನ್ ತೆರವು ಅದೇ ಮಾನದಂಡದ ಅಡಿ ದಕ್ಷಿಣ ಕನ್ನಡ ಜಿಲ್ಲೆಗೆ ದೊರಕದಿರುವುದನ್ನು ಒಪ್ಪಲು ಸಾಧ್ಯವಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಈಗಲಾದರು ತಮ್ಮ ಸೋಮಾರಿತನ, ಜನರ ಸಂಕಷ್ಟಗಳ ಕುರಿತಾದ ನಿರ್ಲಕ್ಷ್ಯ ಧೋರಣೆಯನ್ನು ಬದಲಾಯಿಸಿ ರಾಜ್ಯ ಸರಕಾರಕ್ಕೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು ತಕ್ಷಣದಿಂದಲೇ ದಕ್ಷಿಣ ಕನ್ನಡ ಜಿಲ್ಲೆಯ ಲಾಕ್ ಡೌನ್ ತೆರವುಗೊಳಿಸಲು ಮುಂದಾಗಬೇಕು ಎಂದು ಡಿವೈಎಫ್ಐ ದ ಕ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಇಲ್ಲದಿದ್ದಲ್ಲಿ ಈಗಾಗಲೆ ಹತಾಷೆಯಿಂದ ಆಕ್ರೋಶಿತರಾಗಿರುವ ಜನರ ತಾಳ್ಮೆಯ ಕಟ್ಟೆ ಒಡೆಯಲಿದೆ ಎಂದು ಡಿವೈಎಫ್ಐ ಎಚ್ಚರಿಸಿದೆ‌.

bangalore

“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್

Published

on

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಸಮೂಹ ಶಿಕ್ಷಣ ಸಂಸ್ಥೆಗಳ ಅಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಭ್ರಮರ ಇಂಚರ ನುಡಿಹಬ್ಬ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಿದ ಸ್ಯಾಂಡಲ್ ವುಡ್  ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಭಾಗವಹಿಸಿ ಮಕ್ಕಳ ಜೊತೆಗೆ ಮಕ್ಕಳಂತೆ ಬೆರೆತು ಮಕ್ಕಳನ್ನು ಕೊಂಡಾಡಿದರು.

ಈ ವೇದಿಕೆಯಲ್ಲಿ ವಿದ್ಯಾಥಿಗಳು ನಟಿ ರಚಿತಾ ರಾಮ್ ಅವರ ಡ್ರಾಯಿಂಗ್ ಮಾಡಿ ಕೊಡುಗೆಯಾಗಿ ನೀಡಿದಾಗ ಖುಷಿ ಪಟ್ಟ ನಟಿ ಆ ವಿದ್ಯಾರ್ಥಿಗಳನ್ನು ವೇದಿಕೆಗೆ ತಾವೇ ಕರೆಸಿ ಅಭಿನಂದಿಸದರು.

ಹಾಗೂ ಕೆಲವು ವಿದ್ಯಾರ್ಥಿಗಳ ಜೊತೆ ವೇದಿಕೆಗೆ ಕರೆಸಿ ಹಾಡಿಸಿದರು. ಅದರಲ್ಲಿ ತಾನೇ ಬಂದು ವೇದಿಕೆಯಲ್ಲಿ ಒಂದು ಪುಟಾಣಿ ‘ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು’ ಎಂದು ಹಾಡಿದಾಗ ನಟಿ ಬಹಳ ಖುಷಿ ಪಟ್ಟರು.

ಈ ಸಂದರ್ಭ ರಚಿತರಾಮ್ ಜೊತೆ ಹಾಡಲು ಹೇಳಿದಾಗ ಅವರು ಕೂಡ “ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು” ಎಂದು ನಗ್ತಾ ನಗ್ತಾ ಹಾಡಿದರು.


ಬಳಿಕ ಮಾತನಾಡಿದ ನಟಿ ವಿದ್ಯಾರ್ಥಿಗಳು ಇಂತಹ ವೇದಿಕೆ ಸಿಕ್ಕಾಗ ಬಳಸಿಕೊಳ್ಳಬೇಕು. ಮತ್ತೇ ಇಂತಹ ವೇದಿಕೆ ಸಿಗುವುದಿಲ್ಲ. ನಮ್ಮ ಪ್ರತಿಭೆಯನ್ನು ನಾವೇ ಪ್ರದರ್ಶನ ಮಾಡಬೇಕು. ಬೇರೆ ಯಾರೂ ಕೂಡ ನಮಗೆ ಹೇಳಲು ಬರುವುದಿಲ್ಲ.

ಯಾರೂ ಕೂಡ ಸಪೋರ್ಟ್ ಮಾಡುವುದಿಲ್ಲ. ಸ್ವಾಯತ್ತತೆಯಿಂದ ನಾವು ಗೆಲ್ಲಬೇಕು. ಒಳ್ಳೆ ಒಳ್ಳೆ ವೇದಿಕೆ ಸಿಕ್ಕಾಗ ಬಿಡಬಾರದು. ಅದರ ಜೊತೆಗೆ ನಮ್ಮ ಗುರುಗುಳಿಗೆ ಹಾಗೂ ತಮ್ಮ ಪೋಷಕರಿಗೆ ಗೌರವ ಕೊಡಿ, ಮರ್ಯಾದೆ ಕೊಡಿ ಜೊತೆಗೆ ಅವರನ್ನು ಪ್ರೀತಿಸಿ ಎಂದರು.

ಈ ವೇಳೆ ರಚಿತರಾಮ್ ಕನ್ನಡದಲ್ಲಿ ಮಾತನಾಡಿದಾಗ ವಿದ್ಯಾರ್ಥಿಗಳು ತುಳುವಿನಲ್ಲಿ ಮಾತನಾಡಿ ಎಂದು ಕೂಗಾಡಿದರು. ಆಗ ಅವರು ಎಂಚ ವುಲ್ಲರ್ ಮರ್ರೆ…ಹುಷಾರ್ ವುಲ್ಲರಾ…ಎಂದು ತುಳುವಿನಲ್ಲಿ ಮಾತನಾಡಿದರು.

Continue Reading

BELTHANGADY

Belthangady: ರಸ್ತೆ ಪಕ್ಕದ ಗೂಡಂಗಡಿಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು..!

Published

on

ಬೆಳ್ತಂಗಡಿ: ಬೆಳ್ತಂಗಡಿ ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿಗಳು ರಾತ್ರಿಯ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಅಝೀಝ್ ಎಂಬವರು ತಮ್ಮ ಜೀವನೋಪಾಯಕ್ಕಾಗಿ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದರು.

ಕಳೆದ ಮೂರು ವರ್ಷಗಳಿಂದ ಈ ಗೂಡಂಗಡಿ ಕಾರ್ಯ‌ ನಿರ್ವಹಿಸುತ್ತಿತ್ತು. ರಸ್ತೆ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಗೂಡಂಗಡಿಯನ್ನು ನಿರ್ಮಿಸಲಾಗಿತ್ತು. ಎಂದಿನಂತೆ ಶುಕ್ರವಾರ ರಾತ್ರಿಯ ವೇಳೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್ ಅಝೀಝ್ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರುವುದು ಕಂಡು ಬಂದಿದೆ. ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಅಂಗಡಿಯನ್ನು ಬಹುತೇಕ ಧ್ವಂಸಗೊಳಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

Continue Reading

DAKSHINA KANNADA

Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!

Published

on

ಮಂಗಳೂರು:  ತನ್ನ ಪುಟ್ಟ ಕಂದಮ್ಮನನ್ನು ನೀರಿನ ಟಬ್‌ ಒಳಗೆ ಮುಳುಗಿಸಿ ತಾನೂ ನೇಣು ಬಿಗಿದುಕೊಂಡು ಹೆತ್ತಬ್ಬೆಯೊಬ್ಬಾಕೆಯ ಕೃತ್ಯ ಮನಕಲಕಿದ ಘಟನೆ ಮಂಗಳೂರಿನ ಗುಜ್ಜರಕರೆ ಬಳಿ ನಡೆದಿದೆ.

ಅಪಾರ್ಟ್‌ಮೆಂಟ್‌ ಒಂದರಲ್ಲಿ ವಾಸ ಮಾಡುವ ಫಾತಿಮಾ ರುಕಿಯಾ(23) ಎಂಬಾಕೆ ತನ್ನ ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್‌ ಎಂಬಾತನನ್ನು ನೀರಿನ ಟಬ್‌ನೊಳಗೆ ಮುಳುಗಿಸಿ ಉಸಿರುಕಟ್ಟಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಫಾತಿಮಾಗೆ ಸುಮಾರು ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬವರ ಜೊತೆ ಮದುವೆಯಾಗಿತ್ತು. 2023 ಜು. 7 ರಂದು ಹೆರಿಗೆಯಾಗಿತ್ತು. ಅಬ್ದುಲ್ಲಾ ಹೂದ್ ಎಂಬ ಸುಮಾರು 4ವರೆ ತಿಂಗಳ ಗಂಡು ಮಗು ಇತ್ತು. ಹೆರಿಗೆಯಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಫಾತಿಮಾಗೆ ಚಿಕಿತ್ಸೆಯನ್ನು ಕೂಡಾ ನೀಡಲಾಗುತ್ತಿತ್ತು. ಈ ನಡುವೆ ಫಾತಿಮಾ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಹೇಳುತ್ತಿದ್ದರು ಎನ್ನಲಾಗಿದೆ. ನಿನ್ನೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1-30 ಗಂಟೆಯ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ಸಮಯ ಫಾತಿಮಾ ರುಕಿಯಾ ತಾನು ವಾಸವಾಗಿದ್ದ ಮಂಗಳೂರು ನಗರದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್​ನ ಬೆಡ್ ರೂಮ್​ನ ಗ್ಯಾಲರಿಯಲ್ಲಿ ಪ್ಲಾಸ್ಟಿಕ್ ಟಬ್​ನಲ್ಲಿ ನೀರು ತುಂಬಿಸಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ಬಳಿಕ ತಾನೂ ಕೂಡ ರೂಮಿನ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯಿಂದ ಕಟ್ಟಿ ಮತ್ತೊಂದು ತುದಿಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Continue Reading

LATEST NEWS

Trending