ಕೊರೊನಾ ರೋಗಿಗಳಿಗೆ ಉಚಿತ ಚಿಕಿತ್ಸೆಗೆ ಆಗ್ರಹಿಸಿ, ಮನವಿ ಸಲ್ಲಿಸಿದ ಡಿವೈಎಫ್ಐ ಮಂಗಳೂರು…
ಕೊರೊನಾ ರೋಗಿಗಳಿಗೆ ಉಚಿತ ಚಿಕಿತ್ಸೆಗೆ ಆಗ್ರಹಿಸಿ, ಮನವಿ ಸಲ್ಲಿಸಿದ ಡಿವೈಎಫ್ಐ ಮಂಗಳೂರು…
ಮಂಗಳೂರು: ಕೊರೊನಾ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿ ಪಡಿಸಿರುವುದನ್ನು ರದ್ದುಗೊಳಿಸಿ, ಕಡ್ಡಾಯ ಉಚಿತ ಚಿಕಿತ್ಸೆಗೆ ಒತ್ತಾಯಿಸಿ,
ಡಿವೈಎಫ್ಐ ಮಂಗಳೂರು ನಗರ ಸಮಿತಿಯು, ರಾಜ್ಯ ಸರಕಾರವನ್ನು ಒತ್ತಾಯಿಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
ರಾಜ್ಯದಲ್ಲಿರುವ ಸಾರ್ವಜನಿಕ ಆಸ್ಪತ್ರೆಗಳು ಆಳುವ ಸರಕಾರಗಳ ನಿರ್ಲಕ್ಷ್ಯದಿಂದಾಗಿ ಅಗತ್ಯ ಡಾಕ್ಟರ್ – ಸಿಬ್ಬಂದಿ ಹಾಗೂ ಔಷಧ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿವೆ.
ಇದರಿಂದಾಗಿ ಸಾಮಾನ್ಯ ಜನತೆಗೆ ಉತ್ತಮ ಆರೋಗ್ಯ ಲಭಿಸದೇ ಖಾಸಗೀ ಆಸ್ಪತ್ರೆಗಳ ಧನದಾಹಿಕೋರತನಕ್ಕೆ ಬಲಿಯಾಗುತ್ತಿರುವ ಈ ಸ್ಥಿತಿಯಲ್ಲಿ ಕೋವಿಡ್-19 ರೋಗ ಸಾಮಾನ್ಯ ಜನರ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ.
ಸಾಮಾನ್ಯ ರೋಗಿಗಳು ಈಗ ಆಸ್ಪತ್ರೆಗಳಿಗೆ ಹೋಗಲಾರದ ಸ್ಥಿತಿ ಬಂದೊದಗಿದೆ.ರಾಜ್ಯ ಸರಕಾರ ಇಂತಹ ಗಂಭಿರ ಸ್ಥಿತಿಯಲ್ಲಿ, ಕೋವಿಡ್ -19 ಸೋಂಕಿತ ರೋಗಿಗಳಿಗೆ,
ಸರಿಯಾದ ಚಿಕಿತ್ಸೆ ನೀಡಲು ಸಾರ್ವಜನಿಕ ಆಸ್ಪತ್ರೆ ಗಳನ್ನು ಡಾಕ್ಟರ್, ಸಿಬ್ಬಂದಿ, ಔಷಧ ಸೇರಿದಂತೆ ಎಲ್ಲ ರೀತಿಯಲ್ಲಿಯೂ ಸಜ್ಜುಗೊಳಿಸಬೇಕು.
ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳನ್ನು ವಶಕ್ಕೆ ಪಡೆದು ಎಲ್ಲರಿಗೂ ಉಚಿತ ಚಿಕಿತ್ಸೆ ಕೊಡಬೇಕು.
ಆದರೆ ಕರ್ನಾಟಕ ರಾಜ್ಯ ಸರಕಾರದ ಉಪ ಮುಖ್ಯಮಂತ್ರಿ, ಗೃಹ ಸಚಿವ, ಆರೋಗ್ಯ ಸಚಿವರನ್ನೊಳಗೊಂಡ ಕಾರ್ಯಪಡೆಯು,
ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದರ ನಿಗದಿಗೊಳಿಸಿ ಸರಕಾರಕ್ಕೆ ವರದಿ ಸಲ್ಲಿಸಿದೆ.
ಈ ವರದಿಗೆ ಸಚಿವ ಸಂಪುಟದ ಒಪ್ಪಿಗೆಯೂ ಸಿಕ್ಕಾಗಿದೆ. ಆದ್ರೆ ಈ ಕಾರ್ಯಪಡೆಯು ಸಿದ್ಧಪಡಿಸಿದ ವರದಿ ಪ್ರಕಾರ,
ಸಾಮಾನ್ಯ ರೋಗಿಗೆ ಸಾಮಾನ್ಯ ವಾರ್ಡ್ ನಲ್ಲಿ ರೂ.10,000/-
ಆಮ್ಲ ಜನಕ ಸಹಿತ ವಾರ್ಡ್ ನಲ್ಲಿ ರೂ.12,000/-
ಐಸಿಯು ಹಾಸಿಗೆ- ರೂ.15,000/-
ವೆಂಟಿಲೇಟರ್ ಸಹಿತ ಐಸಿಯು ಗೆ ರೂ.25,000/- ದರ ನಿಗದಿಗೊಳಿಸಿದೆ.
ಇದಕ್ಕೆ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್ ಕುಟುಂಬದ ರೋಗಿಗಳಿಗೆ ಕ್ರಮವಾಗಿ,
ಸಾಮಾನ್ಯ ವಾರ್ಡ್ ಗೆ ರೂ.5,200
ಆಮ್ಲಜನಕ ಸಹಿತ ವಾರ್ಡ್ ಗೆ ರೂ.7000
ತೀವ್ರ ನಿಗಾ ಘಟಕಕ್ಕೆ ರೂ.8500
ಹಾಗೂ ವೆಂಟಿಲೇಟರ್ ಸಹಿತ ಐಸಿಯು ಗೆ 10,000 ರೂ. ನಿಗದಿಗೊಳಿಸಿ ವರದಿ ಸಿದ್ದಪಡಿಸಿದೆ.
ಆದರೆ ಗ್ರಾಮೀಣ, ನಗರ ಪ್ರದೇಶದ ಬಹುತೇಕರು ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯ ವ್ಯಾಪ್ತಿಗೊಳಪಟ್ಟಿಲ್ಲವೆಂಬುದು ವಾಸ್ತವ.
ಈ ಹಂತದಲ್ಲಿ ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿರುವ ಈ ವರದಿಯು ಜನ ಸಾಮಾನ್ಯರಿಗೆ ಗಂಭೀರ ಹೊರೆಯಾಗಿ ಪರಿಣಮಿಸುವುದು.
ಈಗಾಗಲೇ ಕೊರೊನಾ ಲಾಕ್ ಡೌನ್ ನಿಂದಾಗಿ ಉದ್ಯೋಗವಿಲ್ಲದೆ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಈ ಚಿಕಿತ್ಸೆಯ ದರ ನಿಗದಿಯು ಗಾಯದ ಮೇಲೆ ಬರೆ ಎಳೆದಂತಾಗುವುದು.
ಇದನ್ನು ಸಹಿಸಲಾಗದು.ಕೊರೊನಾ ಸೋಂಕಿತ ರೋಗಿ ಉದಾಹರಣೆಗೆ ಚಿಕಿತ್ಸೆಗಾಗಿ ಕನಿಷ್ಠ ಹತ್ತು ದಿನಗಳವರೆಗೆ ಸಾಮಾನ್ಯ ವಾರ್ಡ್ ನಲ್ಲಿ ಚಿಕಿತ್ಸೆ ಪಡೆದರೂ, ದಿನಕ್ಕೆ 10,000 ದಂತೆ ಹತ್ತು ದಿನಕ್ಕೆ ಒಂದು ಲಕ್ಷ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಮತ್ತೆ ಕೋವಿಡ್ ಸಾಂಕ್ರಾಮಿಕ ಅಂಟುರೋಗವಾದ್ದರಿಂದ ಮನೆಯಲ್ಲಿ ಎರಡ್ಮೂರು ಜನಕ್ಕೇನಾದರೂ ಸೋಂಕು ತಗಲಿದರೆ, ಎರಡರಿಂದ ಮೂರು ಲಕ್ಷ ಹಣ ಭರಿಸಬೇಕಾಗುತ್ತದೆ.
ಸರಕಾರವೇ ಮುಂದೆ ನಿಂತು ಖಾಸಗಿಯವರಿಗೆ ಸುಲಿಗೆಗೆ ಅವಕಾಶ ಮಾಡಿಕೊಡುವ ರೀತಿಯ ಈ ನಡೆ ನ್ಯಾಯಯುತವಾದುದಲ್ಲ.
ಈ ವರದಿಯನ್ನು ಕೂಡಲೇ ರದ್ದುಗೊಳಿಸಿ ಕೊರೊನಾ ಸೋಂಕಿತರೆಲ್ಲರಿಗೂ ಸರಕಾರಿ ಆಸ್ಪತ್ರೆಗಳಲ್ಲಿ,
ಉಚಿತ ಚಿಕಿತ್ಸೆ ನೀಡಲು ಬೇಕಾದ ಸಕಲ ವ್ಯವಸ್ಥೆ ಮಾಡಿಕೊಳ್ಳುವುದು ಹಾಗೂ ಅಗತ್ಯಬಿದ್ದರೆ ಖಾಸಗಿ ಆಸ್ಪತ್ರೆಗಳನ್ನು ಸರಕಾರದ ವಶಕ್ಕೆ ಪಡೆದು,
ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರಕಾರ ಮುಂದಾಗಬೇಕೆಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್,
(ಡಿವೈಎಫ್ಐ) ಮಂಗಳೂರು ನಗರ ಸಮಿತಿಯ ಅಧ್ಯಕ್ಷ ನವೀನ್ ಕೊಂಚಾಡಿ ತಮ್ಮ ತಂಡದೊಂದಿಗೆ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
DAKSHINA KANNADA
ಹಳ್ಳ ಹಿಡಿದ ಸ್ಮಾರ್ಟ್ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್
ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್ ಪಾಸ್ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.
ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.
ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ; ಓರ್ವ ಬಂಧನ
ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.
LATEST NEWS
11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ
ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.
ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
FILM
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.
ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.
ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!
ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್ಮೆಂಟ್ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್ಮೆಂಟ್ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.