LATEST NEWS
ಹಾಸನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾ*ತ; ಮಗು ಸೇರಿ 6 ಜನ ಸಾ*ವು
ಹಾಸನ : ಭಾನುವಾರ(ಮೇ26) ಬೆಳ್ಳಂಬೆಳಗ್ಗೆ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾ*ತ ಸಂಭವಿಸಿ ಮಗು ಸೇರಿ ಆರು ಮಂದಿ ಸಾ*ವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.
ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ ರಾಕೇಶ್ ಮೃ*ತ ದುರ್ದೈವಿಗಳು.
ನಿದ್ದೆಯ ಮಂಪರಲ್ಲಿ ನಡೆದ ದುರಂತ :
ಮೃ*ತರೆಲ್ಲರೂ ಚಿಕ್ಕಬಳ್ಳಾಪುರ ಮೂಲದವರು ಎಂದು ತಿಳಿದು ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಕಾರಳ್ಳಿ ಗ್ರಾಮದ ನಾರಾಯಣಪ್ಪ, ಸುನಂದಾ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂದರಹಳ್ಳಿ ಗ್ರಾಮದ ನೇತ್ರಾ ಹಾಗೂ ರವಿಕುಮಾರ್ ದಂಪತಿ ಹಾಗೂ ಪುತ್ರ ಚೇತನ್ ಒಂದೇ ಕುಟುಂಬದವರು. ಕುಟುಂಬಸ್ಥರು, ಪಾಶ್ವವಾಯುಗೆ ತುತ್ತಾಗಿದ್ದ ನಾರಾಯಣಪ್ಪ ಅವರಿಗೆ ಚಿಕಿತ್ಸೆ ಕೊಡಿಸಲೆಂದು ಕಾರು ಮನೋಜ್ ಕುಮಾರ್ ಎಂಬುವರಿಗೆ ಸೇರಿದ ಇಟಿಯೋಸ್ ಕಾರು ಬಾಡಿಗೆ ಮಾಡಿಕೊಂಡು ಮಂಗಳೂರಿಗೆ ಆಗಮಿಸಿದ್ದರು.
ಕಾರು ಹಾಸನ ಜಿಲ್ಲೆಯ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿ ಬರುತ್ತಿದ್ದಂತೆ ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದು ಪಕ್ಕದ ಲೇನ್ಗೆ ಹಾರಿ ಕಂಟೇನರ್ಗೆ ಡಿ*ಕ್ಕಿ ಹೊಡೆದಿದೆ.
ಇದನ್ನೂ ಓದಿ : ಬೆಳ್ತಂಗಡಿ : ಕೆರೆಗೆ ಬಿದ್ದು ನವವಿವಾಹಿತ ಸಾ*ವು
ಅಪಘಾ*ತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪೊಲೀಸರು ಹರಸಾಹಸ ಪಟ್ಟು ಮೃ*ತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಭೀ*ಕರ ಅಪ*ಘಾತ ನಡೆದಿದ್ದು, ಘಟನಾ ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
FILM
ದರ್ಶನ್ ಪ್ರಕರಣ: ನಟ ಚಿಕ್ಕಣ್ಣನಿಗೂ ನೋಟಿಸ್..!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಸ್ಟಾರ್ ನಟ ದರ್ಶನ್ ಸೇರಿದಂತೆ 19 ಮಂದಿ ಪೊಲೀಸರ ವಶದಲ್ಲಿದ್ದಾರೆ. ಪೊಲೀಸರ ತೀವ್ರ ತನಿಖೆ ನಡೆಯುತ್ತಿದ್ದು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಮುಂದುವರಿಯುತ್ತಿದೆ. ಹೈ ಪ್ರೊಫೈಲ್ ಗ್ಯಾಂಗ್ ಈ ಕೊಲೆ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದು ಈ ಕೇಸ್ ಹೆಚ್ಚು ಚರ್ಚೆಗೂ ಕಾರಣವಾಗಿದೆ. ಇನ್ನು ತನಿಖೆ ಬಳಿಕ ಬೇರೆ ಬೇರೆ ಹೆಸರುಗಳು ಕೇಳಿಬರುತ್ತಿದೆ.
ಇದೀಗ ಕನ್ನಡ ಚಿತ್ರರಂಗದ ಹಾಸ್ಯನಟ ಚಿಕ್ಕಣ್ಣರವರಿಗೆ ನೋಟೀಸ್ ನೀಡಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ದರ್ಶನ್ ಪಟ್ಟಣಗೆರೆ ಶೆಡ್ಗೆ ಹೋಗುವ ಮೊದಲು ರೆಸ್ಟೋರೆಂಟ್ನಲ್ಲಿ ನಡೆದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ಪಾರ್ಟಿಯಲ್ಲಿ ನಿರ್ಮಾಪಕರು ಸೇರಿದಂತೆ ಚಿಕ್ಕಣ್ಣ ಕೂಡಾ ಭಾಗಿಯಾಗಿದ್ದರು. ದರ್ಶನ್ ಪಾರ್ಟಿ ಮುಗಿಸಿ ನೇರವಾಗಿ ಶೆಡ್ ಬಳಿ ತೆರಳಿದ್ದಾರೆ. ಬಳಿಕ ರೇಣುಕಾಸ್ವಾಮಿಗೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ಧಾರೆ ಎನ್ನಲಾಗಿದೆ.
ಚಿಕ್ಕಣ್ಣ ಹಾಗೂ ದರ್ಶನ್ ಮಧ್ಯೆ ಉತ್ತಮವಾದ ಬಾಂಧವ್ಯವಿತ್ತು. ದರ್ಶನ್ರವರ ಸಿನೆಮಾದಲ್ಲಿ ಚಿಕ್ಕಣ್ಣ ನಟನೆ ಮಾಡಿದ್ದಾರೆ. ಉಪಾಧ್ಯಕ್ಷ ಸಿನೆಮಾದ ಬಗ್ಗೆ ದರ್ಶನ್ ಕೂಡಾ ಮೆಚ್ಚುಗೆಯ ಮಾತನ್ನಾಡಿದ್ದರು.
Read More..; ದರ್ಶನ್ – ರೇಣುಕಾಸ್ವಾಮಿ – ಪಾರದರ್ಶಕ ವಿಚಾರಣೆ …..ಎಂದ ನಟ ಉಪೇಂದ್ರ
ಇದೀಗ ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಅನ್ನಪೂರ್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು (ಜೂ. 17) ಸಂಜೆಯೇ ನೋಟಿಸ್ ನೀಡಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.
DAKSHINA KANNADA
ಸುಳ್ಯ : ಸರಕಾರಿ ಶಾಲೆಯಲ್ಲಿ ಅಪರಿಚಿತ ಮೃ*ತದೇಹ ಪತ್ತೆ
ಸುಳ್ಯ : ಸರಕಾರಿ ಶಾಲೆಯಲ್ಲಿ ಅಪರಿಚಿತ ಮೃತದೇ*ಹ ಪತ್ತೆಯಾಗಿದೆ. ಸುಳ್ಯದ ಕಾಂತಮಂಗಲ ಸರಕಾರಿ ಶಾಲೆಯ ಬಳಿ ಶವ ಪತ್ತೆಯಾಗಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊ*ಲೆಗೈದಿರುವ ಸಾಧ್ಯತೆ ಕಂಡು ಬಂದಿದೆ.
ಸಾ*ವನ್ನಪ್ಪಿದ ವ್ಯಕ್ತಿಯ ಬಗ್ಗೆ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ತಲೆ ಮತ್ತು ಕೈ ಭಾಗದಲ್ಲಿ ರ*ಕ್ತದ ಕಲೆಗಳು ಕಂಡು ಬಂದಿದ್ದು, ಮೇಲ್ನೋಟಕ್ಕೆ ಕೊ*ಲೆಗೈದಿರುವಂತೆ ಕಂಡು ಬರುತ್ತಿದೆ.
ಇದನ್ನೂ ಓದಿ : ದರ್ಶನ್ – ರೇಣುಕಾಸ್ವಾಮಿ – ಪಾರದರ್ಶಕ ವಿಚಾರಣೆ …..ಎಂದ ನಟ ಉಪೇಂದ್ರ
FILM
ದರ್ಶನ್ – ರೇಣುಕಾಸ್ವಾಮಿ – ಪಾರದರ್ಶಕ ವಿಚಾರಣೆ …..ಎಂದ ನಟ ಉಪೇಂದ್ರ
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬಗ್ಗೆ ಇದೀಗ ಸೆಲೆಬ್ರಿಟಿಗಳು ಮೌನ ಮುರಿದಿದ್ದಾರೆ. ಅನೇಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಸರದಿ.
ದರ್ಶನ್ ಅವರನ್ನು ಬಂಧಿಸಿ ಒಂದು ವಾರ ಕಳೆದ ಮೇಲೆ ಉಪ್ಪಿ ತಮ್ಮ ಅಭಿಪ್ರಾಯ ಹೊರಹಾಕಿದ್ದಅರೆ. ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
ಪೋಸ್ಟ್ ನಲ್ಲಿ ಏನಿದೆ?
ದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ …..
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಷ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ ಎಂದು ಉಪ್ಪಿ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ……
ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೊಲೀಸರು ಸಂಬಂಧಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು ) (ಕಾನೂನು ಸುಧಾರಣೆಗಳು #CriminalJustice Reforms )
ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು.
ಇದನ್ನೂ ಓದಿ :ಪುತ್ತೂರಿನಲ್ಲಿ ಭೀಕರ ಅಪಘಾತ; ಇಬ್ಬರು ಸಾ*ವು
ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಆಗ ರೇಣುಕಾಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೇ ಪೊಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ಬರೆದುಕೊಂಡಿದ್ದಾರೆ.
- LATEST NEWS4 days ago
ಅಡುಗೆ ಮನೆಯಿಂದ ಹಲ್ಲಿಗಳನ್ನು ಓಡಿಸಲು ಈ ಟಿಪ್ಸ್ ಅನುಸರಿಸಿ
- LATEST NEWS5 days ago
ಅಡುಗೆಯಲ್ಲಿ ಉಪ್ಪು ಜಾಸ್ತಿ ಆಯ್ತಾ? ಯೋಚನೆ ಬೇಡ, ಈ ಟಿಪ್ಸ್ ಫಾಲೋ ಮಾಡಿ
- FILM4 days ago
ಡ್ರೋನ್ ಪ್ರತಾಪ್ ಹುಟ್ಟು ಹಬ್ಬಕ್ಕೆ ಸಿಕ್ತು ಬ್ಯೂಟಿಫುಲ್ ಗಿಫ್ಟ್
- LATEST NEWS5 days ago
ನಿಲ್ಲಿಸಿದ್ದ ಕಂಟೈನರ್ ಗೆ ಎಕ್ಸ್ ಪ್ರೆಸ್ ಬಸ್ ಡಿಕ್ಕಿ..; ಚಾಲಕ ಸಹಿತ 20ಕ್ಕೂ ಅಧಿಕ ಮಂದಿಗೆ ಗಾಯ
Pingback: ಗೇಮ್ ಝೋನ್ ಹೊತ್ತಿ ಉರಿದು 27 ಮಂದಿ ಸಜೀವ ದಹ*ನ..! ಗೇಮ್ ಝೋನ್ ಮಾಲಕನ ಬಂಧನ - NAMMAKUDLA NEWS - ನಮ್ಮಕುಡ್ಲ ನ್ಯೂಸ್