Connect with us

LATEST NEWS

ತಿರುಪತಿಯಲ್ಲಿ ಪ್ರಬಲ ಭೂಕಂಪ: 3.6 ತೀವ್ರತೆ ದಾಖಲು

Published

on

ತಿರುಪತಿ: ಆಂಧ್ರಪ್ರದೇಶದ ತಿರುಪತಿಯಲ್ಲಿ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ ಮಾಹಿತಿ ನೀಡಿದೆ.

ಬೆಳಗ್ಗಿನ ಜಾವಾ 1.10 ರ ಸುಮಾರಿಗೆ ತಿರುಪತಿ ನಗರದಲ್ಲಿ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ. ತಿರುಪತಿಯ ಈಶಾನ್ಯಕ್ಕೆ 85 ಕಿಮೀ ದೂರದಲ್ಲಿ ಭೂಕಂಪನ ಸಂಭವಿಸಿದ್ದು,

ಭೂಕಂಪನ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.6 ರಷ್ಟು ದಾಖಲಾಗಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರದಿಂದ ಟ್ವೀಟ್ ಮಾಡಿದೆ.

ಜಮ್ಮು-ಕಾಶ್ಮೀರದ ಲಡಾಖ್​​ನಲ್ಲಿರುವ ಅಲ್ಚಿ ಪ್ರದೇಶದ ಉತ್ತರದಲ್ಲಿ ಇಂದು ಮುಂಜಾನೆ ಭೂಕಂಪವಾಗಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪದ ತೀವ್ರತೆ 4.3ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಇಂದು ಮುಂಜಾನೆ 7.29ರ ಹೊತ್ತಿಗೆ ಲಡಾಖ್​ನ ಲೇಹ್​​ ಜಿಲ್ಲೆಯ ಆಲ್ಚಿ ಗ್ರಾಮದ ಉತ್ತರಕ್ಕೆ 186 ಕಿಮೀ ದೂರದಲ್ಲಿ ಭೂ ಮೇಲ್ಮೈನಿಂದ 186 ಕಿಮೀ ಆಳದಲ್ಲಿ ಭೂಮಿ ನಡುಗಿದ್ದಾಗಿ ಟ್ವೀಟ್ ಮಾಡಿದೆ.

LATEST NEWS

ಅತ್ತೆ – ಅಳಿಯ ಲವ್; ಹೆಂಡತಿಯನ್ನೇ ತ್ಯಾಗ ಮಾಡಿದ ಪತಿ! ಏನಿದು ಕಥೆ?

Published

on

ಮಂಗಳೂರು / ಬಿಹಾರ : ಯುವತಿ – ಯುವಕರು ಪ್ರೀತಿಯಲ್ಲಿ ಬೀಳುವುದು ಸಾಮಾನ್ಯ. ಅವರ ಪ್ರೀತಿಗೆ ಮನೆಯವರು ಒಪ್ಪಿ ಮದುವೆ ಮಾಡಿಸುವುದಿದೆ. ಕೆಲವೊಮ್ಮೆ ಒಪ್ಪಿಗೆ ಸಿಗದೇ ಹೋಗಬಹುದು. ಆದ್ರೆ, ಇಲ್ಲಿ ಎಲ್ಲವೂ ವಿಭಿನ್ನ. ಯಾಕೆಂದ್ರೆ ಇಲ್ಲಿ ಪ್ರೀತಿಗೆ ಬಿದ್ದಿದ್ದು ಬೇರೆ ಯಾರೂ ಅಲ್ಲ ಅತ್ತೆ ಹಾಗೂ ಅಳಿಯ. ಈ ಮದುವೆ ಮಾಡಿಸಿದ್ದು ಮಾವ! ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೆಂಡತಿಯನ್ನು ತ್ಯಾಗ ಮಾಡಿದ ಗಂಡ :

ಈ ಘಟನೆ ನಡೆದಿರುವುದು ಬಿಹಾರದ ಬಂಕಾದಲ್ಲಿ. ತನ್ನ ಹೆಂಡತಿಯ ತಾಯಿಯೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಅಳಿಯನನ್ನು ಮಾವ ಮತ್ತು ಗ್ರಾಮಸ್ಥರು ಸೇರಿ ಮದುವೆ ಮಾಡಿಸಿದ್ದಾರೆ. 55 ವರ್ಷದ ದಿಲೇಶ್ವರ್ ದರ್ವೆ ಅವರ ಪತ್ನಿ ಅವರ ಅಳಿಯ ಸಿಕಂದರ್ ಯಾದವ್​​ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು.

ಇತ್ತೀಚಿಗಷ್ಟೇ ಇವರಿಬ್ಬರ ಏಕಾಂತದ ಸಮಯದಲ್ಲಿ ರೆಡ್​​ ಹ್ಯಾಂಡ್​​ ಆಗಿ ಸಿಕ್ಕಿ ಬಿದ್ದಿದ್ದಾರೆ. ಇವರಿಬ್ಬರ ಪ್ರೇಮ ಕಥೆ ಊರೆಲ್ಲಾ ಸುದ್ದಿಯಾಗುತ್ತಿದ್ದಂತೆ ಗ್ರಾಮಸ್ಥರು ಒಟ್ಟಾಗಿ ಸೇರಿ ಅಳಿಯನೊಂದಿಗೆ ಅತ್ತೆಗೆ ಮದುವೆ ಮಾಡಿಸಿದ್ದಾರೆ.

ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದ ಅತ್ತೆ – ಅಳಿಯ :

ಸಿಕಂದರ್ ಯಾದವ್ ಪತ್ನಿಯನ್ನು ಕಳೆದುಕೊಂಡಿದ್ದ.​​ ಕೆಲ ತಿಂಗಳುಗಳಿಂದ ಅತ್ತೆಯ ಮನೆಯಲ್ಲಿ ವಾಸಿಸಲು ಆರಂಭಿಸಿದ್ದ. ಈ ಅವಧಿಯಲ್ಲಿ ಅತ್ತೆ ಮತ್ತು ಅಳಿಯ ಪರಸ್ಪರ ಹತ್ತಿರವಾಗಿದ್ದಾರೆ. ಈ ವೇಳೆ ಅತ್ತೆಯ ಪತಿಗೆ ಅನುಮಾನ ಬಂದಿದೆ. ಈ ಬಗ್ಗೆ ಆತ ತನಿಖೆ ನಡೆಸಿದ್ದು, ಇವರಿಬ್ಬರ ಅಕ್ರಮ ಸಂಬಂಧ ಬಯಲಾಗಿದೆ. ಇಬ್ಬರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಈ ಬಗ್ಗೆ ದಿಲೇಶ್ವರ್ ಪಂಚಾಯಿತಿಗೆ ಮಾಹಿತಿ ನೀಡಿದ್ದರು. ಇದಲ್ಲದೇ, ಸಿಕಂದರ್ ಯಾದವ್ ತನ್ನ ಅತ್ತೆಯ ಮೇಲಿನ ಪ್ರೀತಿಯನ್ನು ಪಂಚಾಯತ್ ಮತ್ತು ಗ್ರಾಮಸ್ಥರ ಮುಂದೆ ಬಹಿರಂಗವಾಗಿ ಹೇಳಿಕೊಂಡಿದ್ದಾನೆ.

ಇದನ್ನೂ ಓದಿ : 70 ರ ವೃದ್ಧನಿಗೆ ಸಂಗಾತಿ ಬೇಕಾಗಿದ್ದಾಳೆ; ಆತ ಜಾಹೀರಾತಿಗಾಗಿ ಮಾಡುತ್ತಿರೋ ಖರ್ಚೆಷ್ಟು ಗೊತ್ತಾ!?

ದಿಲೇಶ್ವರ್ ಮತ್ತು ಗ್ರಾಮಸ್ಥರ ಒಪ್ಪಿಗೆಯೊಂದಿಗೆ, ಸಿಕಂದರ್ ಮತ್ತು ಅತ್ತೆಯ ವಿವಾಹ ಮಾಡಿಸಲಾಗಿದೆ. ಸದ್ಯ ಇವರಿಬ್ಬರ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Continue Reading

DAKSHINA KANNADA

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!

Published

on

ಕಡಬ: ವ್ಯಕ್ತಿಯೊಬ್ಬರು  ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ.  ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.

ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!

marriage

ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.  ಮಾರ್ಚ್‌1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್‌ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Continue Reading

FILM

ಬೆಳ್ಳಿತೆರೆಯಲ್ಲಿ ಮತ್ತೊಮ್ಮೆ ಅಬ್ಬರಿಸಲಿದೆ ‘ಪುನೀತ್’ ಸಿನೆಮಾ..! ಯಾವ ಸಿನೆಮಾ?

Published

on

ಬೆಂಗಳೂರು: ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಭಿನಯದ ಫ್ಯಾಮಿಲಿ ಪ್ಯಾಕೇಜ್, ಹಿಟ್ ಮೂವಿಯೊಂದು ರಿ ರಿಲೀಸ್‌ಗೆ ರೆಡಿಯಾಗಿದೆ. ಮಾರ್ಚ್‌ ನಲ್ಲಿ ಅಪ್ಪು ಅಭಿನಯದ ಜಾಕಿ ಚಿತ್ರ ರಿ ರಲೀಸ್‌ ಆಗಿದ್ದು ಹಿಟ್‌ ಲಿಸ್ಟ್‌ಅಲ್ಲಿ ಸೇರಿಕೊಂಡಿದೆ. ಇದೀಗ ಅವರ ಅಭಿನಯದ ಮತ್ತೊಂದು ಸಿನೆಮಾ ‘ಅಂಜನಿಪುತ್ರ’ ರಿ ರಲೀಸ್‌ಗೆ ತಯಾರಾಗಿದೆ.

anjani

ರಿ ರಿಲೀಸ್ ಯಾವಾಗ?

ಪುನೀತ್‌ ರಾಜ್‌ಕುಮಾರ್, ರಶ್ಮಿಕಾ ಮಂದಣ್ಣ, ರಮ್ಯಾ ಕೃಷ್ಣನ್‌ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಅಂಜನಿ ಪುತ್ರ ಸಿನಿಮಾ ಇದೀಗ ಮರು ಬಿಡುಗಡೆ ಆಗುತ್ತಿದೆ. ಹರ್ಷ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ, ಎನ್‌ಎಮ್‌ಕೆ ಮೂವೀಸ್ ಲಾಂಛನದಲ್ಲಿ ಬಿಡುಗಡೆಗೊಂಡಿತ್ತು.  2017ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಆರು ವರ್ಷಗಳ ಬಳಿಕ ಮತ್ತೆ ಚಿತ್ರಮಂದಿರಕ್ಕೆ ಬರುತ್ತಿದೆ.  ರಾಜ್ಯದ  ಹಲವು ಚಿತ್ರಮಂದಿರಗಳಲ್ಲಿ ಮೇ.10ರಂದು ಸಿನೆಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಎಮ್‌ಎನ್ ಕುಮಾರ್ ತಿಳಿಸಿದ್ದಾರೆ.

 

ಮುಂದೆ ಓದಿ..; ನೇ*ಣಿಗೆ ಶರಣಾದ ಯುವ ನಟಿ..! ಸಾ*ವಿಗೂ ಮುನ್ನ ವ್ಯಾಟ್ಸಾಪ್ ಸ್ಟೇಟಸ್‌ನಲ್ಲಿ ಬರೆದಿದ್ದೇನು..!

ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ಹಿಟ್‌ ಸಾಂಗ್‌ಗಳನ್ನು ಒಳಗೊಂಡಿದೆ. ಅದರಲ್ಲೂ’ಭಾರಿ ಖುಷಿ ಮರ್ರೆ ನನ್ನ ಹೆಂಡ್ತಿ ಕಂಡ್ರೆ’ ಸಾಂಗ್ ಎಲ್ಲರ ತುಟಿಯಂಚಿನಲ್ಲಿ ಈಗಲೂ ಗುಣುಗುಟ್ಟುವಂತಿದೆ. ಮುಂದಿನ ದಿನಗಳಲ್ಲಿ ಪುನೀತ್ ಹಲವು ಸಿನೆಮಾಗಳು ರಿ ರಿಲೀಸ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.

Continue Reading

LATEST NEWS

Trending