DAKSHINA KANNADA
ಮಂಗಳೂರಿನ ಈದ್ಗಾ ಮಸೀದಿಯಲ್ಲಿ ಪರಸ್ಪರ ಶುಭಾಶಯ ಕೋರಿದ ಮುಸ್ಲಿಂ ಬಾಂಧವರು
ಮಂಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಕರಾವಳಿಯಾದ್ಯಂತ ಅಚರಿಸಲಾಗುತ್ತಿದೆ.
ಅದರಂತೆ ಮಂಗಳೂರಿನ ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ಸರಳ ರೀತಿಯ ಪ್ರಾರ್ಥನೆಯನ್ನ ಸಲ್ಲಿಸಲಾಯಿತು. ಸರಕಾರದ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಆಯಾ ಮಸೀದಿಗಳಲ್ಲಿ ಸೇರುವ ಜನರ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ. 50ನ್ನು ಮೀರದಂತೆ ಹಂತ ಹಂತವಾಗಿ ಸಾಮೂಹಿಕ ನಮಾಝ್ ನೆರವೇರಿಸಲಾಯಿತು. ಇನ್ನೂ ಮಾಸ್ಕ್ ಧಾರಣೆ ಕಡ್ಡಾಯ, 65 ವರ್ಷ ಪ್ರಾಯ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕೆಳಗಿನ ಮಕ್ಕಳು ಸಾಮೂಹಿಕ ನಮಾಝ್ ನಲ್ಲಿ ಭಾಗವಹಿಸುವಂತಿಲ್ಲ ಸೇರಿದಂತೆ ಕೊರೋನಾ ಮಾರ್ಗಸೂಚಿ ಪಾಲಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿತ್ತು.
DAKSHINA KANNADA
ಕಾರ್ಕಳ: ಅಜೆಕಾರು ಬಳಿ ರಸ್ತೆ ಅಪ*ಘಾತ – ಐವರಿಗೆ ಗಾ*ಯ
ಕಾರ್ಕಳ: ಅಜೆಕಾರು ಸಮೀಪದ ಕೈಕಂಬ ಮಥುರಾ ಪಟ್ಲ ಎಂಬಲ್ಲಿ ಸಂಭವಿಸಿದ ರಸ್ತೆ ಅಪ*ಘಾತದಲ್ಲಿ ಐವರು ಗಾ*ಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಜೀಪು ಹಾಗೂ ರಿಕ್ಷಾ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾದಲ್ಲಿದ್ದ ಹರೀಶ್(35) ಲಲಿತಾ(62) ಪ್ರೇಮಾ(58) ಶಾರದಾ(52) ಗೀತಾ(39) ಎಂಬವರಿಗೆ ಗಾಯವಾಗಿದೆ.
ಅಜೆಕಾರು ವಿಭಾಗದ 108 ಅಂಬುಲೆನ್ಸ್ ಘಟನಾ ಸ್ಥಳಕ್ಕೆ ಅಗಮಿಸಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
108 ಅಂಬುಲೆನ್ಸ್ ನ ಪೈಲೆಟ್ ಕಿಶೋರ್ ಹಾಗೂ ಇಎಂಟಿ ದೇವಿಕಾ ಕಾರ್ಯಚರಣೆಯಲ್ಲಿ ಪಾಲ್ಗೊಂಡರು.
DAKSHINA KANNADA
ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಹೃದಯಾಘಾ*ತದಿಂದ ನಿ*ಧನ
ಮಂಗಳೂರು : ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಇಂದು(ಜುಲೈ 5) ಹೃದಯಘಾ*ತದಿಂದ ಇಹಲೋಕ ತ್ಯಜಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ನಾಯ್ಕಾಪು ಕುಂಬಳೆ ಶ್ರೀಧರ ರಾಯರ ಹುಟ್ಟೂರು. 1948ನೇ ಜುಲೈ 23 ರಂದು ಮಾಲಿಂಗ ಮುಕಾರಿ ಮತ್ತು ಕಾವೇರಿ ಅಮ್ಮ ದಂಪತಿ ಮಗನಾಗಿ ಜನಿಸಿದರು.
ತೆ೦ಕುತಿಟ್ಟಿನ ಅಪ್ರತಿಮ ಸ್ತ್ರೀವೇಷಧಾರಿಯಾಗಿ ಜನಪ್ರಿಯರಾಗಿದ್ದ ಕುಂಬಳೆ ಶ್ರೀಧರ್ ರಾವ್ ಅವರು ದಮಯಂತಿ, ದಾಕ್ಷಾಯಿಣಿ, ಅಮ್ಮು ಬಲ್ಲಾಳ್ತಿ, ಲಕ್ಷ್ಮಿ, ಸುಭದ್ರೆ, ಸತ್ಯಭಾಮೆ ಅಲ್ಲದೆ ಪ್ರಮೀಳೆ, ಶಶಿಪ್ರಭೆ ಮೊದಲಾದ ಪಾತ್ರಗಳ ಮೂಲಕ ಜನಮನಸೂರೆಗೊಂಡಿದ್ದರು. ಪುರುಷ ವೇಷಧಾರಿಯಾಗಿಯೂ ಪ್ರಸಿದ್ಧರಾಗಿದ್ದರು. ಇರಾ, ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳದಲ್ಲಿ ಶ್ರೀಧರ್ ರಾವ್ ಸೇವೆ ಸಲ್ಲಿಸಿದ್ದು, ಧರ್ಮಸ್ಥಳ ಮೇಳದಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ತಿರುಗಾಟ ಮಾಡಿದ್ದರು.
ಇದನ್ನೂ ಓದಿ : ಸೀಲ್ಡ್ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!
ಮೃ*ತರು ಪತ್ನಿ, ನಿವೃತ್ತ ಶಿಕ್ಷಕಿ ಸುಲೋಚನಾ, ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
DAKSHINA KANNADA
‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ
ಬೆಂಗಳೂರು: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆಪ್ಟೆಂಬರ್ 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ಮಾಹಿತಿ ತಿಳಿಸಿದರು.
ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು.
ಎಚ್ಎಸ್ಆರ್ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.
- FILM3 days ago
‘ಪೆಂಡ್ರೈವ್’ನಲ್ಲಿ ಬಿಗ್ಬಾಸ್ ತನಿಷಾ ಕುಪ್ಪಂಡ..!
- DAKSHINA KANNADA7 days ago
ಶಿರಾಡಿಘಾಟ್ ನಲ್ಲಿ ಸರಣಿ ಅಪಘಾ*ತ; ರಾಜಹಂಸ, ಐರಾವತ ಬಸ್ ಮುಖಾಮುಖಿ ಡಿ*ಕ್ಕಿ
- DAKSHINA KANNADA4 days ago
ಉಳ್ಳಾಲ : ಟಿಪ್ಪರ್ – ಸ್ಕೂಟರ್ ಅಪಘಾ*ತ; ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾ*ವು
- DAKSHINA KANNADA7 days ago
ಜೀವ ಉಳಿಸಿದ ನಾಯಿಯ ನಿಯತ್ತು ಹಾಗೂ ಯುವಕನ ಸಮಯ ಪ್ರಜ್ಞೆ!