LATEST NEWS
ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆ : ಇಂದು ಸಂಜೆ 7.30 ಪ್ರಮಾಣವಚನ..!
ಮುಂಬೈ : ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ದೇವೇಂದ್ರ ಫಡ್ನವೀಸ್ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿದ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ ಶಿಂಧೆ ಸಿಎಂ ಆಗುವ ಅಚ್ಚರಿಯ ವಿಚಾರ ಪ್ರಕಟಿಸಿದ್ದಾರೆ.
ಇಂದು ರಾತ್ರಿ 7:30ಕ್ಕೆ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸುವರು ಎಂದು ಅವರು ತಿಳಿಸಿದರು.
ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಾತನಾಡಿ, “ಬಾಳಾಸಾಹೇಬ್ ಅವರ ಹಿಂದುತ್ವವನ್ನು ಮುಂದೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ನಾವು ಈ ನಿರ್ಧಾರ ಕೈಗೊಂಡಿದ್ದೇವೆ.
ರಾಜ್ಯದಲ್ಲಿ ಅಭಿವೃದ್ಧಿ ಪರ ಕಾರ್ಯಗಳು ಮುಂದುವರೆಯಲಿದ್ದು, ನಮ್ಮ ಪರವಾಗಿ 50 ಶಾಸಕರಿದ್ದಾರೆ” ಎಂದರು ಇನ್ನು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ “2019ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮಾಡಿಕೊಂಡಿದ್ದವು.
ಜನರು ನಮಗೆ ಸರ್ಕಾರ ರಚಿಸಲು ಬೇಕಾದಷ್ಟು ಶಾಸಕರನ್ನು ಗೆಲ್ಲಿಸಿಕೊಟ್ಟಿದ್ದರು. ಆದರೆ, ಶಿವಸೇನೆಯು ಕಾಂಗ್ರೆಸ್, ಎನ್ಸಿಪಿ ಜೊತೆ ಮೈತ್ರಿ ಮಾಡಿಕೊಂಡಿತು.
ಬಾಳಾಸಾಹೇಬ್ ತಮ್ಮ ಜೀವನದುದ್ದಕ್ಕೂ ಯಾರ ವಿರುದ್ಧ ಪ್ರತಿಭಟನೆ ಮಾಡುತ್ತಾ ಬಂದರೂ ಅವರೊಂದಿಗೆ ಶಿವಸೇನೆ ಕೈಜೋಡಿಸಿತು. ಹಿಂದುತ್ವವಾದಿ ಮತ್ತು ಸಾವರ್ಕರ್ ಅವರ ವಿರುದ್ಧ ಇರುವವರೊಂದಿಗೆ ಸೇನೆ ಸೇರಿಕೊಂಡು, ಜನರ ಆದೇಶವನ್ನು ಅವಮಾನಿಸಿದರು” ಎಂದು ಫಡ್ನವೀಸ್ ಹೇಳಿದ್ದಾರೆ.
ಇದೇ ವೇಳೆ, ಹೊಸ ಸರ್ಕಾರದಲ್ಲಿ ತಾವು ಭಾಗಿಯಾಗುವುದಿಲ್ಲ ಎಂದು ಫಡ್ನವೀಸ್ ಸ್ಪಷ್ಟಪಡಿಸಿದರು.
“ಒಂದೆಡೆ ದಾವೂದ್ ಇಬ್ರಾಹಿಂನನ್ನು ವಿರೋಧಿಸಿದ ಶಿವಸೇನೆ, ಮತ್ತೊಂದೆಡೆ ದಾವೂದ್ಗೆ ಸಹಾಯ ಮಾಡಿದ ಆರೋಪದಲ್ಲಿ ಜೈಲಿಗೆ ಹೋಗಿ ಬಂದ ವ್ಯಕ್ತಿಯನ್ನೇ ಸಂಪುಟದಲ್ಲಿ ಇಟ್ಟುಕೊಂಡಿತ್ತು. ಇದರಿಂದ ಜನರು ಬೇಸತ್ತು ಹೋಗಿದ್ದರು” ಎಂದು ಅವರು ಹೇಳಿದ್ದಾರೆ.
DAKSHINA KANNADA
‘ನಾಟು ನಾಟು’ ರೀತಿಯ ಸಾಂಗ್..! ಕುತೂಹಲ ಮೂಡಿಸಿದ ‘ವಾರ್ 2’
2019 ರಲ್ಲಿ ಸೂಪರ್ ಹಿಟ್ ಆಗಿದ್ದ ‘ವಾರ್’ ಸಿನೆಮಾದ ಸೆಕಂಡ್ ವರ್ಷನ್ ‘ವಾರ್ 2’ ತೆರೆ ಮೇಲೆ ಬರಲು ಭರದ ಸಿದ್ಧತೆ ನಡೆಸಿದೆ. ‘ವಾರ್’ ಸಿನೆಮಾದಲ್ಲಿ ‘ ಜೈ ಜೈ ಶಿವಶಂಕರ್’ ಹಾಡು ಸುಪರ್ ಹಿಟ್ ಆಗಿದ್ದು ಫ್ಯಾನ್ಸ್ಗಳು ಹಾಡಿಗೆ ಫಿದಾ ಆಗಿದ್ರು. ಟೈಗರ್ ಶ್ರಾಫ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್’ ಸಿನೆಮಾ ಬಳಿಕ ಈಗ ‘ವಾರ್ 2’ ರೆಡಿ ಆಗ್ತಾ ಇದೆ. ಇದರಲ್ಲಿ ಹೃತಿಕ್ ರೋಷನ್ ಹಾಗೂ ಜ್ಯೂನಿಯರ್ ಎನ್ಟಿಆರ್ ಜೊತೆಯಾಗಿದ್ದಾರೆ.
ಅದ್ಧೂರಿಯಾಗಿ ನಿರ್ಮಾಣ ಆಗ್ತಾ ಇರೋ ‘ವಾರ್ 2’ ಸಿನೆಮಾಗೆ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲಾಗ್ತಾ ಇದೆ. ಯಶ್ ರಾಜ್ ಫಿಲಂಸ್ ಸಂಸ್ಥೆ ಈ ‘ವಾರ್ 2’ ಸಿನೆಮಾಗೆ ಬಂಡವಾಳ ಹಾಕುತ್ತಿದೆ. ‘ವಾರ್’ ಸಿನೆಮಾದಂತೆ ಈ ಸಿನೆಮಾದಲ್ಲೂ ವಿಶೇಷ ಹಾಡನ್ನ ಸಿನೆಮಾ ತಂಡ ಪ್ಲ್ಯಾನ್ ಮಾಡಿದೆ. ಜೂನಿಯರ್ ಎನ್ಟಿಆರ್ ಅವರ ಆಸ್ಕರ್ ಅವಾರ್ಡ್ ವಿನ್ ಆಗಿದ್ದ ‘ನಾಟು ನಾಟು” ಹಾಡಿನಂತೆ ಇರೋ ಹಾಡಿಗೆ ಹೃತಿಕ್ ಹಾಗೂ ಜ್ಯೂನಿಯರ್ ಎನ್ಟಿಆರ್ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ. ‘ನಾಟು ನಾಟು’ ರೀತಿಯ ಹಾಡು ಹಾಗೂ ಡ್ಯಾನ್ಸ್ ‘ವಾರ್ 2’ ಸಿಎನಮಾದ ಹೈಲೈಟ್ ಆಗಲಿದೆ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ.
ಈಗಾಗಲೇ ‘ವಾರ್ 2’ ಚಿತ್ರದ ಶೂಟಿಂಗ್ ಆರಂಭವಾಗಿದೆ. ಚಿತ್ರದ ಸೆಟ್ ಫೋಟೋಗಳು ಕೂಡಾ ಲೀಕ್ ಆಗಿವೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆದಿತ್ಯ ಚೋಪ್ರಾ ಅವರು ದೊಡ್ಡ ಬಜೆಟ್ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ಆಗಸ್ಟ್ 14ರಂದು ರಿಲೀಸ್ ಆಗಲಿದೆ.
LATEST NEWS
ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.
ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.