LATEST NEWS
ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕ ಇಂದು ಪ್ರಕಟ
ದೆಹಲಿ: ಇಂದು ಮಂಗಳವಾರ ಮಧ್ಯಾಹ್ನ 3.30 ಕ್ಕೆ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಿಂದ ಕೂಡಿದ ಆಡಳಿತಾರೂಢ ಮಹಾಯುತಿ ಒಕ್ಕೂಟವು ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್ಸಿಪಿ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ವಿರುದ್ಧ ಸ್ಪರ್ಧಿಸಲಿದೆ.
ಜಾರ್ಖಂಡ್ನಲ್ಲಿ, ಇಂಡಿಯಾ ಬ್ಲಾಕ್ನ ಭಾಗವಾಗಿರುವ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ (ಎಜೆಎಸ್ಯು), ಜನತಾ ದಳ (ಯುನೈಟೆಡ್) ಮತ್ತು ಬಿಜೆಪಿಯನ್ನು ಒಳಗೊಂಡಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ವಿರುದ್ಧ ಸ್ಪರ್ಧಿಸಲಿದೆ.
ಬಿಜೆಪಿ ತನ್ನ ಕೇಂದ್ರ ಚುನಾವಣಾ ಸಮಿತಿಯಿಂದ ಅನುಮತಿ ಪಡೆದ ನಂತರ ಮುಂದಿನ ಎರಡು ದಿನಗಳಲ್ಲಿ 60 ಕ್ಕೂ ಹೆಚ್ಚು ಹೆಸರುಗಳೊಂದಿಗೆ ಮಹಾರಾಷ್ಟ್ರ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನವದೆಹಲಿಯಲ್ಲಿ ಪಕ್ಷದ ಮಹಾರಾಷ್ಟ್ರ ಘಟಕದ ಪ್ರಮುಖ ನಾಯಕರು ಮತ್ತು ಎರಡು ರಾಜ್ಯ ಚುನಾವಣಾ ಉಸ್ತುವಾರಿಗಳಾದ ಭೂಪೇಂದರ್ ಯಾದವ್ ಮತ್ತು ಅಶ್ವಿನಿ ವೈಷ್ಣವ್ ಅವರೊಂದಿಗೆ ಮ್ಯಾರಥಾನ್ ಸಭೆ ನಡೆಸಿದ್ದಾರೆ.
ಪಕ್ಷದ ಮಹಾರಾಷ್ಟ್ರ ಘಟಕವು ಸಿಇಸಿಗೆ ಆಯ್ಕೆ ಮಾಡಲು ಹಾಲಿ ಶಾಸಕರು ಸೇರಿದಂತೆ ಸುಮಾರು 100 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಏತನ್ಮಧ್ಯೆ, ಕಾಂಗ್ರೆಸ್ ಪಕ್ಷವು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಸಭೆಯನ್ನು ಕರೆದಿದೆ. ಮಹಾ ವಿಕಾಸ್ ಅಘಾಡಿ (ಎಂವಿಎ) ಮತ್ತು ಚುನಾವಣಾ ಖಾತರಿಗಳಲ್ಲಿ ಮಿತ್ರಪಕ್ಷಗಳೊಂದಿಗೆ ಸೀಟು ಹಂಚಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದೆ.
LATEST NEWS
ಹೃದಯಾಘಾತದಿಂದ 5 ವರ್ಷದ ಬಾಲಕಿ ಸಾ*ವು
ಇಂದಿನ ದಿನಮಾನಗಳಲ್ಲಿ ವಯಸ್ಸಿನ ಬೇಧವಿಲ್ಲದೆ ಕಾಯಿಲೆಗಳು ಕಾಡುತ್ತಿವೆ. ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಹೃದಯಾಘಾ*ತವಾಗುತ್ತಿತ್ತು ಆದರೆ ಈಗ ಮಕ್ಕಳಿಗೂ ಹದಿಹರೆಯದವರಿಗೂ ಹೃದಯಾಘಾ*ತವಾಗುತ್ತಿದೆ.
ಈ ನಡುವೆ ತೆಲಂಗಾಣದಲ್ಲಿ 5 ವರ್ಷದ ಬಾಲಕಿ ಹೃದಯಾಘಾ*ತದಿಂದ ಸಾವನ್ನಪ್ಪಿದ್ದಾಳೆ. ಜಂಟಿ ಕರೀಂನಗರ ಜಿಲ್ಲೆಯ ಜಮ್ಮಿಕುಂಟಾದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯ ವರದಿಗಳ ಪ್ರಕಾರ, ರಾಜು-ಜಮುನಾ ಅವರ ಪುತ್ರಿ ಉಕ್ಕುಲು (5) ಮಂಗಳವಾರ ಬೆಳಿಗ್ಗೆ ತೀವ್ರ ಅಸ್ವಸ್ಥಳಾಗಿದ್ದಳು, ಆಕೆಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಗು ಹೃದಯಾಘಾತದಿಂದ ಸಾವನ್ನಪ್ಪಿದೆ ಎಂದು ತಿಳಿದು ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಆಕೆಗೆ ಹೃದಯ ಸಂಬಂಧಿ ಕಾಯಿಲೆ ಇರಬಹುದೆಂದು ಶಂಕಿಸಿದ್ದರು. ಒಬ್ಬಳೇ ಮಗಳು ತೀರಿ ಹೋಗುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
LATEST NEWS
ಚಲಿಸುತ್ತಿದ್ದ ರೈಲು ಕಿಟಕಿಯಿಂದ ಜಾರಿ ಬಿದ್ದ ಮಗು; ರಕ್ಷಿಸಿದ ತಂದೆ
ಮಂಗಳೂರು/ಉತ್ತರ ಪ್ರದೇಶ: ವೇಗವಾಗಿ ಚಲಿಸುತ್ತಿದ್ದ ರೈಲಿನ ಎಮರ್ಜೆನ್ಸಿ ಕಿಟಕಿಯಿಂದ ಪುಟ್ಟ ಮಗಳು ಹೊರಗೆ ಜಾರಿಬಿದ್ದ ಕೂಡಲೇ ಅಪ್ಪ ರೈಲು ನಿಲ್ಲಿಸಿ 16 ಕಿಲೋಮೀಟರ್ ಹಿಂದಕ್ಕೆ ಓಡಿಹೋಗಿ ಆಕೆಯನ್ನು ಪತ್ತೆಹಚ್ಚಿ ಉಳಿಸಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಮಗಳ ಪಾಲಿಗೆ ತಂದೆಯೇ ಮೊದಲ ರಿಯಲ್ ಹೀರೊ ಆಗಿರ್ತಾನೆ ಅನ್ನೋದಕ್ಕೆ ಈ ಘಟನೆ ಪ್ರತ್ಯಕ್ಷ ಸಾಕ್ಷಿಯಾಗಿದೆ.
ಮಥುರಾದ ಅರವಿಂದ ತನ್ನ ಮಗಳು ಗೌರಿಯೊಂದಿಗೆ ಕುರುಕ್ಷೇತ್ರದಿಂದ ಮಥುರಕ್ಕೆ ವಾಪಾಸ್ ಆಗುತ್ತಿದ್ದರು. ಶುಕ್ರವಾರ ರಾತ್ರಿ ರೈಲಿನಲ್ಲಿ ಎಮರ್ಜೆನ್ಸಿ ವಿಂಡೋ ಬಳಿ ಮಗಳನ್ನು ಮಲಗಿಸಿದ್ದು, ಅಷ್ಟರಲ್ಲಿ ಮುಂದಿನ ನಿಲ್ದಾಣದಲ್ಲಿ ಹತ್ತಿಕೊಂಡ ಪ್ರಯಾಣಿಕರು ಗಾಳಿ ಬರಲಿ ಎಂದು ತುರ್ತು ಕಿಟಕಿಯನ್ನು ತೆರೆದಾಗ ಆಕೆ ಜಾರಿ ಹೊರಗೆ ಬಿದ್ದಿದ್ದಳು.
ಮಗಳು ಜಾರಿ ಬಿದ್ದ ಕೂಡಲೇ ಅಪ್ಪ ರೈಲಿನ ಚೈನ್ ಹಿಡಿದು ಎಳೆದಿದ್ದಾನೆ. ನಂತರ 112ಕ್ಕೆ ಕರೆ ಮಾಡಿ ಪೊಲೀಸರ ಸಹಾಯ ಕೋರಿದ್ದ. ಅಷ್ಟರಲ್ಲಿ ರೈಲು 15 ಕಿಲೋಮೀಟರ್ ಮುಂದಕ್ಕೆ ಚಲಿಸಿ ನಿಂತಿದೆ.
ಕೂಡಲೇ ಪೊಲೀಸರು ಮೂರು ಟೀಂಗಳಾಗಿ ಕಂದಮ್ಮನನ್ನು ರಕ್ಷಿಸುವ ಕಾರ್ಯಾಚರಣೆ ಆರಂಭಿಸಿದರು. ಎರಡು ಟೀಮ್ ವಾಹನಗಳಲ್ಲಿ ಹುಡುಕಾಟ ನಡೆಸಿತು. ಮತ್ತೊಂದು ಟೀಮ್ ಟ್ರ್ಯಾಕ್ ಮೇಲೆ ಹುಡುಕಲು ಮುಂದಾಗಿತ್ತು. ಆದರೆ ತಂದೆ ಅರವಿಂದ್ ಗಾಡಿ ಹತ್ತದೇ ಮಗಳನ್ನು ಹಳಿಯ ಮೇಲೆ ಹುಡುಕುತ್ತಾ ಒಂದೇ ಸಮನೇ ಓಡಿದ್ದರು.
ಆತ ಪೊಲೀಸರಿಗಿಂತಲೂ ಮೊದಲೇ ವಿರಾರಿ ಸ್ಟೇಷನ್ ಬಳಿಗೆ ಧಾವಿಸಿದ್ದರು. ಬೆಳಕೇ ಇಲ್ಲದ ನಿರ್ಮಾನುಷ ಪ್ರದೇಶದಲ್ಲಿ ಪೊದೆಯಲ್ಲಿ ಮಗಳು ಬಿದ್ದಿದ್ದುದು ಆತನಿಗೇ ಕಂಡಿತ್ತು. ಪೊದೆಯೊಂದರಲ್ಲಿ ಗಾಯಗೊಂಡು ಬಿದ್ದಿದ್ದ ಕಂದಮ್ಮನನ್ನು ಅರವಿಂದ್ ಪತ್ತೆಹಚ್ಚಿ ಬಿಗಿದಪ್ಪಿಕೊಂಡಿದ್ದಾನೆ.
ರೈಲಿನಿಂದ ಬಿದ್ದ ಕಾರಣ ಗೌರಿಗೆ ಪ್ರಜ್ಞೆ ತಪ್ಪಿ ಹೋಗಿತ್ತು. ಅರವಿಂದ್ ಹಿಂದೆಯೇ ಓಡೋಡಿ ಬಂದ ಪೊಲೀಸರು ಕೂಡಲೇ ಮಗುವನ್ನು ಲಲಿತ್ಪುರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗು ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ.
LATEST NEWS
ಅಕ್ಟೋಬರ್ 30 ರಂದು ಕುದ್ರೋಳಿಯಲ್ಲಿ 25ನೇ ವರ್ಷದ ‘ನಮ್ಮಕುಡ್ಲ’ ಗೂಡುದೀಪ ಸ್ಪರ್ಧೆ
ಮಂಗಳೂರು: ಆಧುನಿಕತೆಯೊಂದಿಗೆ ಬದಲಾಗುತ್ತಿರುವ ಸಮಾಜದಲ್ಲಿ ನಮ್ಮ ಹಿರಿಯರು ಆಚರಿಸಿಕೊಂಡು ಬಂದಿದ್ದ ಹಲವು ಹಳೆಯ ಸಂಪ್ರದಾಯ ಮರೆಯಾಗುತ್ತಿದ್ದು, ಅದರಲ್ಲಿ ದೀಪಾವಳಿಯ ಹಬ್ಬದ ಆಚರಣೆಯೂ ಒಂದಾಗಿದೆ. ದೀಪಾವಳಿಯ ಸಂದರ್ಭದಲ್ಲಿ ಮನೆಯವರೆಲ್ಲರೂ ಸೇರಿ ತಯಾರಿಸುತ್ತಿದ್ದ ಗೂಡುದೀಪದ ಜಾಗವನ್ನು ಅಂಗಡಿಯಲ್ಲಿ ಸಿಗುವ ಗೂಡು ದೀಪಗಳು ಆವರಿಸಿಕೊಂಡಿವೆ. ಹೀಗಾಗಿ ಗೂಡುದೀಪ ರಚಿಸುವ ಕಲೆಯನ್ನು ಉಳಿಸುವ ಜೊತೆ ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 25 ವರ್ಷಗಳ ಹಿಂದೆ ‘ನಮ್ಮ ಕುಡ್ಲ’ ವಾಹಿನಿ ಗೂಡುದೀಪ ಸ್ಪರ್ಧೆಯನ್ನು ಆಯೋಜನೆ ಮಾಡಲು ಆರಂಭಿಸಿತ್ತು. ಇದೀಗ 25ನೇ ವರ್ಷದ ಗೂಡುದೀಪದ ಸ್ಪರ್ಧೆಯು ದಿನಾಂಕ 30-10-2024,ಬುಧವಾರ ರಂದು ಕುದ್ರೋಳಿ ಶ್ರೀಕ್ಷೇತ್ರ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.
ಸಾಂಪ್ರದಾಯಿಕ, ಆಧುನಿಕ ಮತ್ತು ಪ್ರತಿಕೃತಿ ಎಂಬ ಮೂರು ವಿಭಾಗದಲ್ಲಿ ಗೂಡುದೀಪ ಸ್ಪರ್ಧೆ ನಡೆಸಲಾಗುತ್ತಿದೆ. ಈ ಮೂರು ವಿಭಾಗದಲ್ಲಿ ನಡೆಯುವ ಗೂಡುದೀಪ ಸ್ಪರ್ಧೆಯಲ್ಲಿ ಸ್ಪರ್ಧಿಗಳು ಉತ್ತಮ ರೀತಿಯಲ್ಲಿ ಭಾಗವಹಿಸಿದ್ದಾರೆ. ಈ ಬಾರಿಯೂ ಈ ಮೂರೂ ವಿಭಾಗದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಗೂಡುದೀಪ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಕೆಲವೊಂದು ನಿಯಮಗಳಿದ್ದು, ಅವುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕಾಗುತ್ತದೆ. ಮೂರು ವಿಭಾಗದಲ್ಲೂ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ಚಿನ್ನದ ಪದಕ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಬೆಳ್ಳಿಯ ಪದಕ ನೀಡಲಾಗುತ್ತದೆ.
‘ನಮ್ಮಕುಡ್ಲ’ ಗೂಡುದೀಪ ಸ್ಪರ್ಧೆಯ ನಿಯಮಗಳು ಇಂತಿವೆ :
ಸಾಂಪ್ರದಾಯಿಕ ವಿಭಾಗ : ಬಣ್ಣದ ಕಾಗದ, ಗ್ಲಾಸ್ ಪೇಪರ್ ಅಥವಾ ಬಟ್ಟೆಯಿಂದ ಗೂಡುದೀಪ ತಯಾರು ಮಾಡಿರಬೇಕು. ಗೂಡುದೀಪಕ್ಕೆ ಬಾಲ ಇರಬೇಕು ಹಾಗೂ ಅದು ನೇತು ಹಾಕುವಂತಿರಬೇಕು. ಗೂಡುದೀಪದ ಒಳಗಿನ ಬೆಳಕು ಹೊರಗೆ ಕಾಣುವಂತೆ ತಯಾರಿಸಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಅಥವಾ ಯಾವುದೇ ಆಧುನಿಕ ಪರಿಕರಗಳನ್ನು ಬಳಸುವಂತಿಲ್ಲ. ಬೇಗಡೆಯನ್ನು ಉಪಯೋಗಿಸಲು ಅವಕಾಶ ಇದೆ. ಗೂಡುದೀಪ ಶುದ್ಧವಾಗಿ ಸಾಂಪ್ರದಾಯಿಕವಾಗಿಯೇ ಇರಬೇಕು.
ಆಧುನಿಕ ವಿಭಾಗ : ಆಧುನಿಕ ಗೂಡುದೀಪದಲ್ಲಿ ಯಾವುದೇ ಆಧುನಿಕ ಪರಿಕರಗಳನ್ನು ಬಳಸಬಹುದಾಗಿದೆ. ಆದರೆ, ಸಾಂಪ್ರದಾಯಿಕ ಗೂಡುದೀಪದಂತೆ ಇದೂ ಕೂಡ ನೇತು ಹಾಕುವಂತೆ ಇರಬೇಕು. ಗೂಡುದೀಪದಲ್ಲಿ ಗೂಡು ಇರುವುದು ಕಡ್ಡಾಯವಾಗಿದ್ದು, ಪ್ರತಿಕೃತಿಯ ಹೋಲಿಕೆ ಇರಬಾರದು.
ಪ್ರತಿಕೃತಿ ವಿಭಾಗ : ಇದರಲ್ಲಿ ಯಾವುದೇ ಕಲಾತ್ಮಕ ರಚನೆಗೆ ಅವಕಾಶವಿದೆ. ಯಾವುದೇ ಆಧುನಿಕ ಪರಿಕರಗಳನ್ನು ಇದರಲ್ಲಿ ಬಳಕೆ ಮಾಡಬಹುದಾಗಿದೆ. ಆದಷ್ಟು ಹೊಸತನವನ್ನು ಅಳವಡಿಸಿಕೊಂಡು ಪ್ರತಿಕೃತಿಯ ರಚನೆ ಇರಬೇಕು.
- FILM4 days ago
ಮಾಲ್ಡೀವ್ಸ್ ದ್ವೀಪದಲ್ಲಿ ಹನಿಮೂನ್..! ಜಾಲಿ ಮೂಡ್ನಲ್ಲಿ ತರುಣ್ ಸುಧೀರ್ ದಂಪತಿ
- FILM5 days ago
ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ
- DAKSHINA KANNADA5 days ago
ಮುಂದಿನ ಐದು ದಿನ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
- BIG BOSS3 days ago
ಯಾರೂ ಊಹಿಸದ ವ್ಯಕ್ತಿಗೆ ಈ ವಾರ ಕಿಚ್ಚನ ಚಪ್ಪಾಳೆ, ಬಿಗ್ಬಾಸ್ ಮನೆಯಲ್ಲಿ ಇದೇ ಮೊದಲು