Connect with us

    BELTHANGADY

    ಬೆಳ್ತಂಗಡಿ: ಕಾಡು ಪ್ರಾಣಿಗೆ ವಿದ್ಯುತ್ ತಂತಿ ಇಟ್ಟು ಸಾವು ಪ್ರಕರಣ- ಮೂವರ ಬಂಧನ

    Published

    on

    ಬೆಳ್ತಂಗಡಿ: ಕಾಡು ಪ್ರಾಣಿ ಹಿಡಿಯಲೆಂದು ವಿದ್ಯುತ್ ತಂತಿ ಇಟ್ಟು ಓರ್ವನ ಸಾವಿಗೆ ಕಾರಣವಾದ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.


    ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನಿಲ ನಿವಾಸಿ ಹರೀಶ್ ಗೌಡ(59), ಕರಿಯನಿಲ ನಿವಾಸಿ ಸುಮಂತ್ (21), ಕರಿಯನಿಲ ನಿವಾಸಿ ಪ್ರಶಾಂತ್ (30) ಎಂದು ಗುರುತಿಸಲಾಗಿದೆ.

    ಆರೋಪಿಗಳನ್ನು ಇಂದು ಸಂಜೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಎಂಜಿರ ಪ್ರದೇಶದಲ್ಲಿ ಧರ್ಮಸ್ಥಳ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಬಂಧಿಸಿದ್ದಾರೆ.
    ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡ ಎಂಬವರ ಪುತ್ರ ಉದಯ ಗೌಡ(43) ಅವರು ತೋಟಕ್ಕೆ ಹೋಗುವ ದಾರಿ ಮಧ್ಯೆ ಶಿವಪ್ಪ ಗೌಡ ಎಂಬವರ ಪಾಳುಬಿದ್ದ ಗದ್ದೆಯಲ್ಲಿ ಅಸಹಜವಾಗಿ ಮೃತಪಟ್ಟಿದ್ದರು. ಈ ಬಗ್ಗೆ ಸಹೋದರ ಯೋಗೀಶ ಕೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು.

    ಘಟನೆ ವಿವರ: ಮೃತ ಉದಯ ಗೌಡ ಅವರ ಸಹೋದರ ಯೋಗೀಶ ಅವರು ನೀಡಿದ ದೂರಿನ ಸಾರಾಂಶದಲ್ಲಿ ಅ.29 ರಂದು ರಾತ್ರಿ 9.30 ಕ್ಕೆ ರಬ್ಬರ್ ಟ್ಯಾಪಿಂಗ್ ಗೆಂದು ಮನೆಯಿಂದ ಹೊರ ಹೋಗಿದ್ದ ನಾನು, 2 ಗಂಟೆಗೆ ಮರಳಿ ಬಂದಿದ್ದೆ.

    ಬೆಳಿಗ್ಗೆ 7 ಗಂಟೆಗೆ ಮತ್ತೆ ರಬ್ಬರ್ ಹಾಲು ಸಂಗ್ರಹಕ್ಕೆಂದು ಮನೆಯಿಂದ ತೆರಳುವ ವೇಳೆ ಅಣ್ಣ ಉದಯ ಗೌಡ ಮನೆಯಲ್ಲಿರಲಿಲ್ಲ. ಅವರು ಎಂದಿನಂತೆ ತೋಟದ ಕಡೆಗೆ ಹೋಗಿರಬಹುದು ಎಂದುಕೊಂಡಿದ್ದೆವು. ತೋಟದಲ್ಲಿದ್ದ ವೇಳೆ ನನಗೆ ನನ್ನ ಪತ್ನಿ ಕರೆಮಾಡಿ, ಅಣ್ಣ ಉದಯ ಗೌಡ ಇನ್ನೂ ಮನೆಗೆ ಬಂದಿಲ್ಲ ಎಂದು ತಿಳಿಸಿದ್ದರು.
    ಆದ್ದರಿಂದ ನಾನು ಮಧ್ಯಾಹ್ನ 12 ಗಂಟೆಗೆ ಮನೆಗೆ ವಾಪಾಸು ಬಂದು ಮನೆಯ ಆಸುಪಾಸಿನ ಸಂಬಂಧಿಗಳ ಮನೆಗೆ ಕರೆ ಮಾಡಿ ವಿಚಾರ ತಿಳಿಸಿದ್ದೆ. ಇದಾಗಿ ಹುಡುಕುವ ಯತ್ನದಲ್ಲಿರುವಂತೆ ಸಂಬಂಧಿ ಅಶೋಕ ಎಂಬವರು ಕರೆ ಮಾಡಿ, ಉದಯ ಗೌಡ ಅವರ ದೇಹ ಶಿವಪ್ಪ ಗೌಡ ಅವರ ಪಾಳುಬಿದ್ದ ಗದ್ದೆಯಲ್ಲಿ ಕವುಚಿ ಮಲಗಿದ ಸ್ಥಿತಿಯಲ್ಲಿರುವುದಾಗಿ ಮಾಹಿತಿ ನೀಡಿದರು.

    ನಾವೆಲ್ಲ ಅಲ್ಲಿಗೆ ಓಡಿಹೋಗಿ ನೋಡಿ ಉಪಚರಿಸಲಾಗಿ ಎರಡೂ ಕಾಲುಗಳಲ್ಲಿ ವಿದ್ಯುತ್ ಅವಘಡದಂತಹ ಕುರುಹು ಕಂಡು ಬಂದಿತ್ತು. ಇದು ವಿದ್ಯುತ್ ವಯರ್ ತಾಗಿಯೇ ಘಟನೆ ನಡೆದಿದೆ ಎಂದು ತಿಳಿಸಿದ್ದರು.

    ಧರ್ಮಸ್ಥಳ ಎಸ್.ಐ ಅನಿಲ್ ಕುಮಾರ್ ತಂಡ ತನಿಖೆ ನಡೆಸಿದಾಗ ಕೃಷಿ ರಕ್ಷಣೆ ಅಥವಾ ಕಾಡುಪ್ರಾಣಿ ಭೇಟೆಗಾಗಿ ಹರೀಶ ಗೌಡ ಅವರ ಪಂಪು ಶೆಡ್‌ನಿಂದ ಅಕ್ರಮವಾಗಿ ವಿದ್ಯುತ್ ಬಳಸಿ ಅದನ್ನು ವಯರ್ ಗೆ ಜೋಡಿಸಿಟ್ಟಿದ್ದು, ಅದನ್ನು ತೋಟಕ್ಕೆ ಹೋಗುವ ದಾರಿಮಧ್ಯೆ ಉದಯ ಗೌಡನು ಸ್ಪರ್ಶಿಸಿದ ಪರಿಣಾಮ ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending