BELTHANGADY
ಬೆಳ್ತಂಗಡಿ: ಕಾಡು ಪ್ರಾಣಿಗೆ ವಿದ್ಯುತ್ ತಂತಿ ಇಟ್ಟು ಸಾವು ಪ್ರಕರಣ- ಮೂವರ ಬಂಧನ
ಬೆಳ್ತಂಗಡಿ: ಕಾಡು ಪ್ರಾಣಿ ಹಿಡಿಯಲೆಂದು ವಿದ್ಯುತ್ ತಂತಿ ಇಟ್ಟು ಓರ್ವನ ಸಾವಿಗೆ ಕಾರಣವಾದ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನಿಲ ನಿವಾಸಿ ಹರೀಶ್ ಗೌಡ(59), ಕರಿಯನಿಲ ನಿವಾಸಿ ಸುಮಂತ್ (21), ಕರಿಯನಿಲ ನಿವಾಸಿ ಪ್ರಶಾಂತ್ (30) ಎಂದು ಗುರುತಿಸಲಾಗಿದೆ.
ಆರೋಪಿಗಳನ್ನು ಇಂದು ಸಂಜೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಎಂಜಿರ ಪ್ರದೇಶದಲ್ಲಿ ಧರ್ಮಸ್ಥಳ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡ ಎಂಬವರ ಪುತ್ರ ಉದಯ ಗೌಡ(43) ಅವರು ತೋಟಕ್ಕೆ ಹೋಗುವ ದಾರಿ ಮಧ್ಯೆ ಶಿವಪ್ಪ ಗೌಡ ಎಂಬವರ ಪಾಳುಬಿದ್ದ ಗದ್ದೆಯಲ್ಲಿ ಅಸಹಜವಾಗಿ ಮೃತಪಟ್ಟಿದ್ದರು. ಈ ಬಗ್ಗೆ ಸಹೋದರ ಯೋಗೀಶ ಕೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ವಿವರ: ಮೃತ ಉದಯ ಗೌಡ ಅವರ ಸಹೋದರ ಯೋಗೀಶ ಅವರು ನೀಡಿದ ದೂರಿನ ಸಾರಾಂಶದಲ್ಲಿ ಅ.29 ರಂದು ರಾತ್ರಿ 9.30 ಕ್ಕೆ ರಬ್ಬರ್ ಟ್ಯಾಪಿಂಗ್ ಗೆಂದು ಮನೆಯಿಂದ ಹೊರ ಹೋಗಿದ್ದ ನಾನು, 2 ಗಂಟೆಗೆ ಮರಳಿ ಬಂದಿದ್ದೆ.
ಬೆಳಿಗ್ಗೆ 7 ಗಂಟೆಗೆ ಮತ್ತೆ ರಬ್ಬರ್ ಹಾಲು ಸಂಗ್ರಹಕ್ಕೆಂದು ಮನೆಯಿಂದ ತೆರಳುವ ವೇಳೆ ಅಣ್ಣ ಉದಯ ಗೌಡ ಮನೆಯಲ್ಲಿರಲಿಲ್ಲ. ಅವರು ಎಂದಿನಂತೆ ತೋಟದ ಕಡೆಗೆ ಹೋಗಿರಬಹುದು ಎಂದುಕೊಂಡಿದ್ದೆವು. ತೋಟದಲ್ಲಿದ್ದ ವೇಳೆ ನನಗೆ ನನ್ನ ಪತ್ನಿ ಕರೆಮಾಡಿ, ಅಣ್ಣ ಉದಯ ಗೌಡ ಇನ್ನೂ ಮನೆಗೆ ಬಂದಿಲ್ಲ ಎಂದು ತಿಳಿಸಿದ್ದರು.
ಆದ್ದರಿಂದ ನಾನು ಮಧ್ಯಾಹ್ನ 12 ಗಂಟೆಗೆ ಮನೆಗೆ ವಾಪಾಸು ಬಂದು ಮನೆಯ ಆಸುಪಾಸಿನ ಸಂಬಂಧಿಗಳ ಮನೆಗೆ ಕರೆ ಮಾಡಿ ವಿಚಾರ ತಿಳಿಸಿದ್ದೆ. ಇದಾಗಿ ಹುಡುಕುವ ಯತ್ನದಲ್ಲಿರುವಂತೆ ಸಂಬಂಧಿ ಅಶೋಕ ಎಂಬವರು ಕರೆ ಮಾಡಿ, ಉದಯ ಗೌಡ ಅವರ ದೇಹ ಶಿವಪ್ಪ ಗೌಡ ಅವರ ಪಾಳುಬಿದ್ದ ಗದ್ದೆಯಲ್ಲಿ ಕವುಚಿ ಮಲಗಿದ ಸ್ಥಿತಿಯಲ್ಲಿರುವುದಾಗಿ ಮಾಹಿತಿ ನೀಡಿದರು.
ನಾವೆಲ್ಲ ಅಲ್ಲಿಗೆ ಓಡಿಹೋಗಿ ನೋಡಿ ಉಪಚರಿಸಲಾಗಿ ಎರಡೂ ಕಾಲುಗಳಲ್ಲಿ ವಿದ್ಯುತ್ ಅವಘಡದಂತಹ ಕುರುಹು ಕಂಡು ಬಂದಿತ್ತು. ಇದು ವಿದ್ಯುತ್ ವಯರ್ ತಾಗಿಯೇ ಘಟನೆ ನಡೆದಿದೆ ಎಂದು ತಿಳಿಸಿದ್ದರು.
ಧರ್ಮಸ್ಥಳ ಎಸ್.ಐ ಅನಿಲ್ ಕುಮಾರ್ ತಂಡ ತನಿಖೆ ನಡೆಸಿದಾಗ ಕೃಷಿ ರಕ್ಷಣೆ ಅಥವಾ ಕಾಡುಪ್ರಾಣಿ ಭೇಟೆಗಾಗಿ ಹರೀಶ ಗೌಡ ಅವರ ಪಂಪು ಶೆಡ್ನಿಂದ ಅಕ್ರಮವಾಗಿ ವಿದ್ಯುತ್ ಬಳಸಿ ಅದನ್ನು ವಯರ್ ಗೆ ಜೋಡಿಸಿಟ್ಟಿದ್ದು, ಅದನ್ನು ತೋಟಕ್ಕೆ ಹೋಗುವ ದಾರಿಮಧ್ಯೆ ಉದಯ ಗೌಡನು ಸ್ಪರ್ಶಿಸಿದ ಪರಿಣಾಮ ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BELTHANGADY
ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ
ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.
ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!
ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM7 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM5 days ago
ಶೋಬಿತಾ ಜೊತೆ ಕಾಡಿನಲ್ಲಿ ಕಾಣಿಸಿಕೊಂಡ್ರ ನಾಗಚೈತನ್ಯ..! ಫ್ಯಾನ್ಸ್ ಏನಂದ್ರು..?