LATEST NEWS
ಮುಂಬೈ ಟು ದುಬೈಗೆ ಓರ್ವನ ಪ್ರಯಾಣಕ್ಕಾಗಿ 17 ಟನ್ ಇಂಧನ ವ್ಯಯಿಸಿದ ಎಮಿರೇಟ್ಸ್ ಏರ್ ಲೈನ್ಸ್..!
ಮುಂಬೈ: ಕೇವಲ ಓರ್ವ ವ್ಯಕ್ತಿಗಾಗಿ ಮುಂಬೈಯಿಂದ ದುಬೈಗೆ ವಿಮಾನ ಹಾರಾಟ ನಡೆಸಿದ ವಿದ್ಯಾಮಾನ ವರದಿಯಾಗಿದೆ. ಪ್ರತಿಷ್ಟಿತ ಎಮಿರೇಟ್ಸ್ ವಿಮಾನ ಯಾನ ಸಂಸ್ಥೆ ಈ ಕಾರ್ಯವನ್ನು ಮಾಡಿದ್ದು, ಮುಂಬೈ ಮೂಲದ ಉದ್ಯಮಿ ಅನಿವಾಸಿ ಭಾರತೀಯ 40 ವರ್ಷದ ಭವೇಶ್ ಜವೇರಿ ಏಕ ವ್ಯಕ್ತಿಯಾಗಿ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಎಮಿರೇಟ್ಸ್ ಫ್ಲೈಟ್ ಟಿಕೆಟ್ ಅನ್ನು ರೂ 18,000 ತೆತ್ತು ಖರೀದಿಸಿದ್ದ 40 ವರ್ಷದ ಭವೇಶ್ ಜವೇರಿ 360 ಸೀಟಿನ ಬೋಯಿಂಗ್ 777 ವಿಮಾನದಲ್ಲಿ ಮೇ 19ರಂದು ಏಕೈಕ ಪ್ರಯಾಣಿಕನಾಗಿದ್ದರು.
ಮುಂಬೈಯಿಂದ ದುಬೈಗೆ ಇಲ್ಲಿಯ ತನಕ 240ಕ್ಕೂ ಅಧಿಕ ಬಾರಿ ಪ್ರಯಾಣಿಸಿರುವ ಅವರು ಇದೇ ಮೊದಲ ಬಾರಿಗೆ ಇಂತಹ ವಿಶೇಷ ಸವಲತ್ತು ಪಡೆದರು.ಕಳೆದ 20 ವರ್ಷಗಳಿಂದ ಅವರು ದುಬೈ ನಿವಾಸಿಯಾಗಿದ್ದಾರೆ. ಜೀವನದಲ್ಲಿ ಅದೆಷ್ಟೋ ಬಾರಿ ವಿಮಾನದಲ್ಲಿ ಸಂಚರಿಸಿರುವ ಅವರಿಗೆ ಈ ಒಂದು ಪ್ರಯಾಣ ಬಹಳ ರೋಮಾಂಚನ ತಂದಿದ್ದು, ಈ ಪ್ರಯಾಣದ ಸುದ್ದಿ ಭಾರಿ ವೈರಲ್ ಆಗಿದೆ.
ಇದಕ್ಕೆ ಕಾರಣ, ಇವರು ದುಬೈನಿಂದ ಮುಂಬೈಗೆ ವಿಮಾನದಲ್ಲಿ ಒಬ್ಬರೇ ಕುಳಿತು ಬಂದಿದ್ದಾರೆ. ಅದೂ 360 ಸೀಟುಗಳಿರುವ ಬೋಯಿಂಗ್ 777 ಎಮಿರೇಟ್ಸ್ ವಿಮಾನದಲ್ಲಿ ಕೇವಲ 18 ಸಾವಿರ ರೂಪಾಯಿ ಕೊಟ್ಟು!
ಈ ರೋಚಕ ಪ್ರಯಾಣವನ್ನು ಅವರು ಮಾಧ್ಯಮಗಳ ಜತೆ ಹಂಚಿಕೊಂಡಿದ್ದು, ಈ ಎರಡೂವರೆ ಗಂಟೆಗಳ ಪ್ರಯಾಣ ಜೀವನದಲ್ಲಿ ಮರೆಯಲಾರೆ ಎಂದಿದ್ದಾರೆ.
ಯುಎಇಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳ ಪ್ರಕಾರ, ಯುಎಇ ಪ್ರಜೆಗಳು, ಯುಎಇ ಗೋಲ್ಡನ್ ವೀಸಾ ಹೊಂದಿರುವವರು ಮತ್ತು ರಾಜತಾಂತ್ರಿಕ ಯೋಜನೆಯ ಸದಸ್ಯರು ಮಾತ್ರವೇ ಭಾರತದಿಂದ ಯುಎಇಗೆ ತೆರಳಬಹುದಾಗಿದೆ.
ಭವೇಶ್ ಅವರು ತಮ್ಮ ಬಳಿ ಗೋಲ್ಡನ್ ವೀಸಾ ಹೊಂದಿದ್ದ ಕಾರಣ ಇಂಥದ್ದೊಂದು ಅವಕಾಶ ಅವರಿಗೆ ಸಿಕ್ಕಿದೆ. ಅವರು ತಮ್ಮ ಅನುಭವ ಹಂಚಿಕೊಂಡಿದ್ದು ಹೀಗೆ…
”ನಾನು ವಿಮಾನದೊಳಗೆ ಪ್ರವೇಶಿಸುತ್ತಿದ್ದಂತೆಯೇ ಗಗನಸಖಿಯರು ಜೋರಾಗಿ ಚಪ್ಪಾಳೆ ತಟ್ಟಿ ನಗುಮೊಗದಿಂದ ಸ್ವಾಗತಿಸಿದರು. ಇಂಥ ಅನುಭವ ಸಾಮಾನ್ಯ ಆದರೆ ಈ ಪಯಣದಲ್ಲಿನ ಅನುಭವ ವಿಶೇಷವೇ ಆಗಿತ್ತು.
ಇದು ಏಕಾಂಗಿ ಪಯಣ. ಈಗಾಗಲೇ ದುಬೈ ಮತ್ತು ಮುಂಬೈ ನಡುವೆ 240 ಬಾರಿ ಸಂಚರಿಸಿದ್ದೇನೆ. ಆದರೆ ಇಂಥ ಸ್ವಾಗತ ಇದೇ ಮೊದಲು ನೋಡಿದ್ದು’ ಎಂದಿದ್ದಾರೆ.
ವಿಮಾನ ಇಳಿದ ಬಳಿಕ ಬ್ಯಾಗ್ ಸಂಗ್ರಹಿಸಲು ತೆರಳಿದಾಗಲೂ ಕನ್ವೇಯರ್ ಬೆಲ್ಟ್ನಲ್ಲಿ ಇದ್ದಿದ್ದು ನನ್ನ ಬ್ಯಾಗ್ ಮಾತ್ರ ಎಂದಿದ್ದಾರೆ. ಭಾರತದ ಅತ್ಯಂತ ಚಟುವಟಿಕೆಯ ವಿಮಾನ ನಿಲ್ದಾಣಗಳಲ್ಲಿ ಮುಂಬೈ ವಿಮಾನ ನಿಲ್ದಾಣ ಒಂದಾಗಿದೆ.
ಸುಮಾರು 180 ಟನ್ ತೂಕದ ಬೋಯಿಂಗ್ ವಿಮಾನವನ್ನು ಒಬ್ಬರೇ ಒಬ್ಬ ಎಕಾನಮಿ ದರ್ಜೆಯ ಪ್ರಯಾಣಿಕನ ಎರಡೂವರೆ ಗಂಟೆ ಪ್ರಯಾಣಕ್ಕಾಗಿ ಸುಮಾರು ಎಂಟು ಲಕ್ಷ ರೂ ಮೌಲ್ಯದ 17 ಟನ್ ಇಂಧನ ಉರಿಸಿದ್ದು ಅಚ್ಚರಿಯ ಸಂಗತಿ.
ಆದರೆ ಮುಂಬೈನಿಂದ ದುಬೈಗೆ ವಿಮಾನ ಹೋದ ಮೇಲೆ ಅಲ್ಲಿಂದ ವಾಪಸ್ ಬರಲೇಬೇಕಿರುವುದು ಅನಿವಾರ್ಯ. ಆದ್ದರಿಂದ ಪ್ರಯಾಣಿಕರು ಇಲ್ಲದಿದ್ದರೂ ಬರಲೇಬೇಕಿತ್ತು ಎಂದು ವಿಮಾನಯಾನ ಸ್ಪಷ್ಟನೆ ಕೊಟ್ಟಿದೆ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
LATEST NEWS
WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.
ಸೀಟ್ ಗಾಗಿ ಎಡವಟ್ಟು :
ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.
ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್ಗೆ 60 ರೂ., ಹಾಲ್ಫ್ಗೆ 40 ರೂ.
ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.
ರೋಹಿತ್ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ