BANTWAL
ಬಸ್ಸಿನಿಂದ ಪರಿಸರ ಮಾಲಿನ್ಯ; ಸಾರ್ವಜನಿಕರ ಆಕ್ರೋಶ
ಬಂಟ್ವಾಳ: ಮಂಗಳೂರು ವಿಭಾಗಕ್ಕೆ ಸೇರಿದ ಕೆಎಸ್ಆರ್ಟಿಸಿ ಬಸ್ಸೊಂದು ಮಂಗಳೂರು – ಧರ್ಮಸ್ಥಳ ಸಂಚರಿಸುವ ವೇಳೆಯಲ್ಲಿ ಜೀವಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕವಾದ ಕಪ್ಪು ಹೊಗೆಯನ್ನು ಹೊರ ಹಾಕುತ್ತಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಸಂಸ್ಥೆಯು ಸರಿಯಾದ ನಿರ್ವಹಣೆ ಇಲ್ಲದ ಬಸ್ಸುಗಳನ್ನು ರಸ್ತೆಯಲ್ಲಿ ಓಡಿಸುತ್ತಿದ್ದು, ಇದರಿಂದ ಜನರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರವೇ ನಿವಾರಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಕಪ್ಪು ಹೋಗೆ ಹೊರ ಸೂಸುವ ಬಸ್ಸಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ.
BANTWAL
ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಹಾನಿ
ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಅಪಾರ ಹಾನಿಯುಂಟಾದ ಘಟನೆ ಬಂಟ್ವಾಳದ ಉರುವಾಲು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ತಾರಿದಡಿ ನಿವಾಸಿ ಸೇಸಪ್ಪ ಅವರ ಮನೆಗೆ ಸಿಡಿಲು ಬಡಿದಿದ್ದು, ಗೋಡೆ ಬಿರುಕು ಬಿಟ್ಟಿದೆ. ಇದರೊಂದಿಗೆ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಸಿಡಿಲು ಬಡಿದ ಸಂದರ್ಭದಲ್ಲಿ ಸಂದರ್ಭ ಸೇಸಪ್ಪ ಗೌಡರು ಮಕ್ಕಳನ್ನು ಶಾಲೆಯಿಂದ ಕರೆದುಂಡು ಬರಲು ತೆರಳಿದ್ದರು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ. ಇನ್ನು ಸಿಡಿಲು ಬಡಿದ ಪರಿಣಾಮ 9 ವರ್ಷಗಳ ಹಿಂದೆ ಕಟ್ಟಿದ್ದ ಈ ಕಾಂಕ್ರೀಟ್ ಮನೆ ಸಂಪೂರ್ಣ ಹಾನಿಗೀಡಾಗಿದೆ ಎಂದು ಸೇಸಪ್ಪ ಅವರು ಹೇಳಿದ್ದಾರೆ.
BANTWAL
ದೊಡ್ಮನೆಗೆ ಎಂಟ್ರಿ ಕೊಟ್ಟ ಕರಾವಳಿಯ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್ಯ
ಬಂಟ್ವಾಳ : ಖ್ಯಾತ ಯುಟ್ಯೂಬರ್ ಧನರಾಜ್ ಆಚಾರ್ಯ ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್ಯ ತಮ್ಮ ಕಾಮಿಡಿ ಮ್ಯಾನರಿಸಂನಿಂದಲೇ ಫೇಮಸ್. ಹಾಸ್ಯಮಯ ವೀಡಿಯೋಗಳನ್ನು ಮಾಡಿ ಜನಮನಕ್ಕೆ ಹತ್ತಿರವಾಗಿದ್ದಾರೆ. ಜರ್ನಲಿಸಂ ಪದವೀಧರನಾಗಿರುವ ಧನರಾಜ್, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದನಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ ಪಡೆದಿದ್ದಾರೆ.
ಟಿಕ್ ಟಾಕ್ ನಲ್ಲಿ ಕಾಮಿಡಿ ವೀಡಿಯೋ ಮಾಡಿ ಪ್ರಸಿದ್ದಿ ಪಡೆದಿದ್ದ ಧನರಾಜ್ ಬಳಿಕ ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಕಾಮಿಡಿ ವಿಡಿಯೋಗಳನ್ನು ಮಾಡಿ ಖ್ಯಾತಿ ಗಳಿಸಿದ್ದಾರೆ. ಕಲರ್ಸ್ ಕನ್ನಡದಲ್ಲಿ ಬಿತ್ತರವಾಗುವ ಗಿಚ್ಛಿಗಿಲಿಗಿಲಿ ಸೀಸನ್ 2 ರ ಸ್ಪರ್ಧಿಯಾಗಿಯೂ ಗಮನ ಸೆಳೆದಿದ್ದರು.
ವಿವಾಹದ ಬಳಿಕವೂ ಪತ್ನಿ ಪ್ರಜ್ಞಾ ಆಚಾರ್ಯ ಜೊತೆಗೂಡಿ ವೀಡಿಯೋಗಳನ್ನು ಮಾಡುತ್ತಿರುವ ಧನರಾಜ್ ಆಚಾರ್ಯ ಇತ್ತೀಚೆಗಷ್ಟೇ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ.
BANTWAL
ಹಿರಿಯ ಸಾಮಾಜಿಕ ಮುಂದಾಳು ಉದ್ಯಮಿ ರಘು ಸಪಲ್ಯ ನಿ*ಧನ
ಮಂಗಳೂರು: ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯದಲ್ಲಿ ಸಕ್ರೀಯರಾಗಿದ್ದ ಮತ್ತು ಹಲವು ದೇವಸ್ಥಾನಗಳ ಅಧ್ಯಕ್ಷರಾಗಿ, ದೇವಸ್ಥಾನಗಳ ಅಭಿವೃದ್ದಿಗೆ ಕಾರಣೀಕರ್ತರಾಗಿದ್ದ ಉದ್ಯಮಿ ರಘು ಸಪಲ್ಯ ನಿ*ಧನರಾಗಿದ್ದಾರೆ.
ಬಂಟ್ವಾಳ ತಾಲೂಕು ಗಾಣಿಗ ಸಂಘದ ಅಧ್ಯಕ್ಷರಾಗಿ, ಸುಮಂಗಲ ಹಾಲ್ ಹಾಗೂ ಸುಮಂಗಲ ಕೋ ಅಪರೇಟ್ ಬ್ಯಾಂಕ್ ಸ್ಥಾಪನೆಯ ಮೂಲಕ ಸಹಕಾರಿ ಕ್ಷೇತ್ರಕ್ಕೂ ತಮ್ಮ ಕೊಡುಗೆ ನೀಡಿದ್ದಾರೆ. ಜ್ಯೋತಿ ಬೀಡಿ ಎಂಬ ಬೀಡಿ ಉದ್ಯಮದ ಮೂಲಕ ಅನೇಕ ಬಡ ಕುಟುಂಬಗಳಿಗೆ ಬದುಕು ಕಟ್ಟಿಕೊಟ್ಟ ಹೆಗ್ಗಳಿಕೆ ಇವರದ್ದು. ಬಡವರಿಗೆ ಅಶಕ್ತರಿಗೆ ಹಾಗೂ ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಗಳಿಗೆ ಕೊಡುಗೈ ಧಾನಿಯಾಗಿ ಇವರು ಗುರುತಿಸಿಕೊಂಡಿದ್ದರು.
ಅಪಾರ ದೈವ ಭಕ್ತರಾಗಿದ್ದ ರಘು ಸಪಲ್ಯ ಅವರು ಜಿಲ್ಲೆಯಲ್ಲಿ ಮಾತ್ರವಲ್ಲದೆ ಹೊರ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳ ಅಭಿವೃದ್ದಿಗೆ ಸಹಕಾರ ನೀಡಿದ್ದರು. ನೇರ ನಡೆನುಡಿಯವರಾಗಿದ್ದರೂ ಅಜಾತ ಶತ್ರು ಎಂಬ ಹೆಸರು ಗಳಿಸಿದ್ದ ಇವರು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂಘದ ಸ್ವಯಂ ಸೇವಕರಾಗಿ ಹೋರಾಟದಲ್ಲಿ ಭಾಗಿಯಾಗಿದ್ದರು.
ಪಾಣೆ ಮಂಗಳೂರು ಭಯಂಕೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಟ್ರಸ್ಟ್, ಉಳಿಯ ಕ್ಷೇತ್ರ, ಅತ್ತಾವರ ಉಮಾಮಹೇಶ್ವರ ಕ್ಷೇತ್ರ, ಕೀರ್ತಿಶ್ವರ ಕ್ಷೇತ್ರ ಮಂಜೇಶ್ವರ, ಕೋದಂಡ ರಾಮ ಭಜನಾ ಮಂದಿರ ಹೀಗೆ ಹಲವಾರು ಧಾರ್ಮಿಕ ಕ್ಷೇತ್ರದಲ್ಲಿ ಇವರು ಸೇವೆ ಸಲ್ಲಿಸಿದ್ದಾರೆ.
- DAKSHINA KANNADA6 days ago
ಮಂಗಳೂರು : ಪಾನಿಪುರಿ ಸವಿಯುತ್ತಿದ್ದ ವಿದ್ಯಾರ್ಥಿನಿಯ ಮೊಬೈಲ್ ಎಗರಿಸಿದ ಭೂಪ!
- DAKSHINA KANNADA5 days ago
ಕೆಬಿಬಿಯಲ್ಲಿ ಮಿಂಚಿದ ಮಂಗಳೂರು ಬೆಡಗಿ; ಕೊನೆಗೂ ನನಸಾದ ಅಪೂರ್ವ ಶೆಟ್ಟಿ ಕನಸು
- DAKSHINA KANNADA6 days ago
ಮೂಡುಬಿದಿರೆ: ಕಾರು ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾ*ವು
- LATEST NEWS5 days ago
ಪುತ್ತೂರು: ಸಾಲ ವಸೂಲಿಗೆಂದು ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ತಂದೆ ಮಗ